LOCAL NEWS

ಸಿಎಂ ಜೊತೆ ರಮೇಶ್ ಜಾರಕಿಹೊಳಿ,ಈಶ್ವರಪ್ಪ ಮೀಟೀಂಗ್..!!

ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿದರು. ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮನದಲ್ಲಿರುವ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. ವರಿಷ್ಠರು ಹಸಿರು ನಿಶಾನೆ ತೋರಿದರೆ ಸಚಿವ ಸಂಪುಟ ವಿಸ್ತರಣೆಗೆ ಜನವರಿಯಲ್ಲಿ ಚಾಲನೆ ಸಿಗಬಹುದು ಎನ್ನಲಾಗಿದೆ. ಸಂಪುಟ …

Read More »

ಬೆಳಗಾವಿಗೆ ವಾಪಸ್ಸಾದ ಜೋಡಿ ಹಕ್ಕಿ, ಈಶ್ವರಪ್ಪ-ಜಾರಕಿಹೊಳಿ ಸಾಥ್ ಸಾಥ್ ಹೈ..!!

ಬೆಳಗಾವಿ- ಬಿಜೆಪಿ ನಾಯಕರ ವಿರುದ್ದ ಬಂಡಾಯದ ಬಾವುಟ ಹಾರಿಸಿ,ಧಿಡೀರ್ ಬೆಂಗಳೂರಿಗೆ ಹಾರಿದ್ದ ಮಾಜಿ ಸಚಿವರಾದ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಇಂದು ಬೆಳಗಾವಿಗೆ ವಾಪಸ್ಸಾಗಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಈಶ್ವರಪ್ಪ, ಸಿಎಂ ಬಸವರಾಜ ಬೊಮ್ಮಾಯಿ‌ ಕರೆದಿದಕ್ಕೆ‌ ನಾನನು ಬಂದಿದ್ದೇನೆ ಅವರನ್ನು ಇಂದು ಭೇಟಿ ಮಾಡುತ್ತೇನೆ ನನಗೆ ಯಾವುದೇ ಮಾಹಿತಿ ಇಲ್ಲ,ಅವರು‌ ಮಾತನಾಡಿದ ನಂತರ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ಜಾತಿ ಮಧ್ಯ …

Read More »

ಬೆಳಗಾವಿಯ ಎಂಇಎಸ್ ಹೋರಾಟ ಮಹಾರಾಷ್ಟ್ರಕ್ಕೆ ಪಲಾಯನ….!!

ಬೆಳಗಾವಿ- ಕರ್ನಾಟಕ ಸರ್ಕಾರ ಮರಾಠಿ ಮಹಾ ಮೇಳಾವ್ ಗೆ ಬ್ರೇಕ್ ಹಾಕುತ್ತಿದ್ದಂತೆಯೇ ಬೆಳಗಾವಿಯ ಎಂಇಎಸ್ ನಾಯಕರು ಈಗ ಮಹಾರಾಷ್ಟ್ರಕ್ಕೆ ಪಲಾಯನ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಬೆಳಗಾವಿಯ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಿದೆ.ಮರಾಠಿಗರ ಮೇಲೆ ಪೋಲೀಸರ ದೌರ್ಜನ್ಯ ಹೆಚ್ಚಾಗಿದೆ ಎಂದು ಮೊಸಳೆ ಕಣ್ಣೀರು ಹಾಕಲು ಬೆಳಗಾವಿಯ ಎಂಇಎಸ್ ನಾಯಕರು ಮಹಾರಾಷ್ಟ್ರಕ್ಕೆ ಪಲಾಯನ ಮಾಡುತ್ತಿದ್ದಾರೆ. ಡಿಸೆಂಬರ್ 26 ರಂದು ಬೆಳಗಾವಿಯ ಎಂಇಎಸ್ ನಾಯಕರು ಕೊಲ್ಹಾಪೂರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಚಲೋ …

Read More »

ವಿಮಾನಗಳು ರದ್ದಾದ ಮೇಲೆ ಎಚ್ಚೆತ್ತುಕೊಂಡ ಬೆಳಗಾವಿಯ ಸಂಸದರು..!!

ಬೆಳಗಾವಿ: ಬೆಳಗಾವಿಯಿಂದ ದೆಹಲಿ ಮತ್ತು ಮುಂಬೈಯ ನಡುವೆ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ವಿಮಾನಗಳು ತಮ್ಮ ಸೇವೆಯನ್ನು ನಿಲ್ಲಿಸಿದ್ದು ಅವುಗಳನ್ನು ಪುನರಾರಂಭಿಸಬೇಕೆಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮನವಿ ನೀಡಿ ಒತ್ತಾಯಿಸಿದರು. ಬುಧವಾರ ಡಿ-21 ರಂದು ನವದೆಹಲಿಯ ಸಂಸತ್ತಿನಲ್ಲಿ ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾಗಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಬೆಳಗಾವಿ ಕರ್ನಾಟಕದ ಅತಿದೊಡ್ಡ ಜಿಲ್ಲೆ ಮತ್ತು ಬೆಳಗಾವಿ ವಿಮಾನ …

Read More »

ನಿರಾಣಿ ಮುಖ್ಯಮಂತ್ರಿ ಆದ್ರೆ,ವಿಧಾನಸೌಧದ ಮರ್ಯಾದೆ ಹೋಗುತ್ತೆ- ಯತ್ನಾಳ

ಬೆಳಗಾವಿ- ಬುಧವಾರ ಸುವರ್ಣ ಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಎಂದಿನ ಶೈಲಿಯಲ್ಲಿ ರಸವತ್ತಾಗಿ ಮಾತನಾಡಿದ್ದಾರೆ.. ಪಂಚಮಸಾಲಿ ಮೀಸಲಾತಿಯ ಬಗ್ಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳ ಮೇಲೆ ಸಂಪೂರ್ಣ ವಿಶ್ವಾಸ ಇದೆ, ನಾಳೆಯೇ ನಮ್ಮ ಸಮುದಾಯದ ಮೀಸಲಾತಿ ಘೋಷಣೆ ಆಗುತ್ತದೆ, ಅದರಲ್ಲಿ ಎರಡನೇ ಮಾತೇ ಇಲ್ಲ ಎಂದರು.. ಇನ್ನು ಮೀಸಲಾತಿಯ ವಿಚಾರವಾಗಿ ತಮ್ಮ ಬಗ್ಗೆ ವ್ಯಂಗ್ಯವಾಡಿದರು ಸಚಿವ ನಿರಾಣಿ ಅವರ ಬಗ್ಗೆ …

Read More »

ಬೆಳಗಾವಿಯಲ್ಲಿ ಕನ್ನಡದ ಸದನ,ಮಹಾರಾಷ್ಟ್ರದಲ್ಲಿ ಪುಂಡಾಟಿಕೆಯ ಕದನ..!!

ಬೆಳಗಾವಿಯಲ್ಲಿ ಸದನ… ಮಹಾರಾಷ್ಟ್ರದಲ್ಲಿ ಕದನ…!! ಬೆಳಗಾವಿ- ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದಲ್ಲಿ ಪಕ್ಷಾತೀತವಾಗಿ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಮಹಾರಾಷ್ಡ್ರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲಿಯೇ ಅತ್ತ ಮಹಾರಾಷ್ಟ್ರದ ನಾಗಪೂರದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹಾರಾಷ್ಟ್ರದ ನಾಯಕರು ಕರ್ನಾಟಕದ ವಿರುದ್ಧ ತಿರುಗಿಬಿದ್ದಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಪುಂಡ ನಾಯಕರ ಮತ್ತೊಂದು ತಗಾದೆ ತೆಗೆದಿದ್ದಾರೆ.ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗಡಿ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಈ …

Read More »

ನಾಳೆ ಬೆಳಗಾವಿಯಲ್ಲಿ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಫೈನಲ್ ಮ್ಯಾಚ್…!!

ಬೆಳಗಾವಿ-ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಕೊನೆಯ ಹಂತ ತಲುಪಿದೆ. ನಾಳೆಯೊಳಗೆ ಮೀಸಲಾತಿ ಘೋಷಿಸಲು ಪಂಚಮಸಾಲಿ ಸಮುದಾಯ ಗಡುವು ನೀಡಿದೆ. ಮೀಸಲಾತಿ ಘೋಷಿಸಿದ್ರೆ ನಾಳೆ ನಡೆಯುವ ವಿರಾಟ ಪಂಚಶಕ್ತಿ ಸಮಾವೇಶದಲ್ಲಿ ಸಿಎಂಗೆ ಸನ್ಮಾನ ಇಲ್ಲವಾದ್ರೆ ಹೋರಾಟ ಮಾಡೋದಾಗಿ ಕೂಡಲಸಂಗಮ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಅಂತಿಮ ಹಂತ ತಲುಪಿದೆ. ನಾಳೆಯೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ …

Read More »

ಜೈಕಾರ ಕೂಗಿ ,ಸತೀಶ್ ಜಾರಕಿಹೊಳಿ ಭಾಷಣಕ್ಕೆ ಅಡ್ಡಿ..!!

ಬೆಳಗಾವಿ: ಕರ್ನಾಟಕ ಮರಾಠಾ ಮಹಾಒಕ್ಕೂಟದಿಂದ ಆಯೋಜಿಸಿದ್ದ ಪ್ರತಿಭಟನೆ ವೇದಿಕೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ಮಂಗಳವಾರ ನಡೆಯಿತು. ಪ್ರವರ್ಗ 2ಎ‌ ಮೀಸಲಾತಿಗಾಗಿ ಆಗ್ರಹಿಸಿ ಕೊಂಡಸಕೊಪ್ಪ ಬಳಿ ಪ್ರತಿಭಟನೆ ನಡೆಯುತ್ತಿದೆ. ಇದಕ್ಕೆ ಬೆಂಬಲ ಸೂಚಿಸಲು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಸತೀಶ್ ಜಾರಕಿಹೊಳಿ ವೇದಿಕೆಗೆ ಬಂದಿದ್ದರು. ಸತೀಶ್ ಜಾರಕಿಹೊಳಿ ಮಾತನಾಡಲು ಬಂದಾಗ, ಮರಾಠಾ ಸಮುದಾಯದ ಬಗ್ಗೆ ಹಿಂದೂ ದರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ, ಹೀಗಾಗಿ ಭಾಷಣ ಬೇಡ …

Read More »

ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಪವರ್ ಫುಲ್ ಲೀಡರ್ ಅಂದ್ರು ಆರ್.ಅಶೋಕ್

ಮೂಡಲಗಿ- ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಹೊಸ ತಾಲೂಕುಗಳ ಪೈಕಿ ಮೂಡಲಗಿ ತಾಲೂಕಿಗೆ ಮಾತ್ರ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಆರಂಭಿಸಲಾಗಿದ್ದು, ಇದಕ್ಕೆ ಇಲ್ಲಿನ ಜನಪ್ರೀಯ …

Read More »

ಗಡಿವಿವಾದ ಸದನದಲ್ಲಿ ಚರ್ಚೆ ಜೋರು,ಸ್ಥಳೀಯ ಶಾಸಕರೇ ಗೈರು….!!

ಬೆಳಗಾವಿ-ಬೆಳಗಾವಿ ಗಡಿವಿವಾದ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು.ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಬೆಳಗಾವಿ ಗಡಿ ವಿಚಾರವನ್ನು ಪ್ರಸ್ತಾಪಿಸಿ ಶೂನ್ಯವೇಳೆಯಲ್ಲಿ ಅವರೇ ಮಾತನಾಡಿ ಸರ್ಕಾರದ ಗಮನ ಸೆಳೆದರು. ಸಿದ್ಧರಾಮಯ್ಯ ನವರು ಮಾತನಾಡಿ,ಗಡಿ ಹೋರಾಟದ ಇತಿಹಾಸವನ್ನು ಕಳೆದ ಆರು ದಶಕಗಳಿಂದ ನಡೆದ ಬೆಳವಣಿಗೆಗಳ ಬಗ್ಗೆ ಮಾತನಾಡಿ ಗಡಿವಿವಾದ ಮುಗಿದ ಅಧ್ಯಾಯ ಮಹಾಜನ ವರದಿಯೇ ಅಂತಿಮ ಎಂದು ಹೇಳಿದ್ರು,ಈ ಚರ್ಚೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್ ಕೆ ಪಾಟೀಲರು ಸಿದ್ಧರಾಮಯ್ಯನವರ ಜೊತೆ ಧ್ವನಿಗೂಡಿಸಿದರು. ಸದನದಲ್ಲಿ ಬೆಳಗಾವಿ …

Read More »

ಸುವರ್ಣವಿಧಾನಸೌಧದಲ್ಲಿ ಫುಡ್ ಕ್ವಾಲೀಟಿ ಚೆಕ್ಕೀಂಗ್….!!

ಊಟೋಪಚಾರ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ- ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ವರದಿಗಾಗಿ ವಿವಿಧೆಡೆಯಿಂದ ಆಗಮಿಸಿದ ಮಾಧ್ಯಮ ಪ್ರತಿನಿಧಿಗಳು, ಮಾರ್ಷಲ್ ಗಳು ಹಾಗೂ ಸಚಿವಾಲಯ ಅಧಿಕಾರಿಗಳಿ ಮಾಡಲಾಗಿರುವ ಊಟೋಪಚಾರದ ವ್ಯವಸ್ಥೆಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪರಿಶೀಲಿಸಿದರು. ಮಂಗಳವಾರ(ಡಿ.20) ಊಟೋಪಚಾರ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಊಟದ ಗುಣಮಟ್ಟದ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು. ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಂದ ಮಾಹಿತಿ …

Read More »

ಬೆಳಗಾವಿಯಲ್ಲಿ ಮೇಳಾವ್ ಗೆ ಬ್ರೇಕ್, ಮಹಾರಾಷ್ಟ್ರಕ್ಕೆ ಶಾಕ್….!!

ಬೆಳಗಾವಿ-ಬೆಳಗಾವಿಯಲ್ಲಿ ನಿನ್ನೆ ನಡೆಯಬೇಕಿದ್ದ ಮರಾಠಿ ಮೇಳಾವ್ ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬ್ರೇಕ್ ಹಾಕಿ ಹೊಸ ಇತಿಹಾಸ ನಿರ್ಮಿಸಿದ್ದು,ಇದರ ಬಿಸಿ ಮಹಾರಾಷ್ಟ್ರದ ನಾಯಕರಿಗೂ ತಟ್ಟಿದೆ. ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಕರ್ನಾಟಕ ಸರ್ಕಾರದ ಕ್ರಮಕ್ಕೆ ಕಿಡಿಕಾರಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಮುಂದಿಟ್ಟುಕೊಂಡು ನಿನ್ನೆ ಎಂಇಎಸ್ ಮಹಾಮೇಳಾವ್‌ಗೆ ಬ್ರೇಕ್ ಹಾಕಿರುವದಕ್ಕೆ ಮಹಾರಾಷ್ಟ್ರಮತ್ತೆ ಕಾಲು ಕೆದರಿ ಜಗಳಕ್ಕೆ ನಿಂತಿದೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ರಿಂದ ಕ್ಯಾತೆ ಶುರುವಾಗಿದೆ. ಗಡಿ ಭಾಗದ …

Read More »

ನೇಕಾರರಿಂದ ಸಮವಸ್ತ್ರ ಖರೀದಿ ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ಭರವಸೆ

*ನೇಕಾರರ ಉತ್ಪನ್ನಗಳಿಗೆ ಅಂತರರಾಷ್ಟ್ರೀಯ ಬ್ರ್ಯಾಂಡಿಂಗ್ ಗೆ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಬೆಳಗಾವಿ, ಡಿಸೆಂಬರ್ 19 :ಇಳಕಲ್ ಸೀರೆ ಸೇರಿದಂತೆ ನೇಕಾರರ ಉತ್ಪನ್ನಗಳಿಗೆ ಅಂತರಾಷ್ಟ್ರೀಯ ಬ್ರ್ಯಾಂಡಿಂಗ್ ದೊರೆತಾಗ ಉತ್ಪಾದನೆ ಹಾಗೂ ಆರ್ಥಿಕತೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸರ್ಕಾರವು ನೇಕಾರರ ಬೇಡಿಕೆಗಳನ್ನು ಈಡೇರಿಸಿರುವ ಸಲುವಾಗಿ ನೇಕಾರ‌ರಿಂದ ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ‌ಬಸವರಾಜ ಬೊಮ್ಮಾಯಿ …

Read More »

ಬೆಳಗಾವಿಯಿಂದಲೇ ಕಾಂಗ್ರೆಸ್ ನಾಯಕರ ಬಸ್ ಯಾತ್ರೆ…!!

ಬೆಳಗಾವಿ-೨೦೨೩ರ ‌ವಿಧಾನಸಭೆ ಚುನಾವಣೆಯಲ್ಲಿ ನಕಾಂಗ್ರೆಸ್ ಅಧಿಕಾರಕ್ಕೆ ತರುವ ಉದ್ದೇಶದಿಂದ ಜನವರಿ ೧೧ ರಿಂದ ಬೆಳಗಾವಿಯಿಂದ ಕಾಂಗ್ರೆಸ್ ನಾಯಕರ ಬಸ್ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಬಸ್ ಯಾತ್ರೆ, ಕೃಷ್ಣಾ, ಮಹದಾಯಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯದ ಬಗ್ಗೆ ಹಮ್ಮಿಕೊಂಡಿರುವ ಸಮಾವೇಶ ಕುರಿತು ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೃಷ್ಣಾ, ಮಹದಾಯಿ ನೀರಾವರಿ ಯೋಜನೆಗೆ ಸಂಬಂಧಿಸಿದೆತ …

Read More »

ಒಳಗಡೆ ವೀರ ಸಾವರ್ಕರ್ ಪೋಟೋ, ಹೊರಗಡೆ ವೀರ ರಾಣಿ ಚನ್ನಮ್ಮನ ಮೂರ್ತಿ….!!!

ಅಧಿವೇಶನದ ಮೊದಲ ದಿನವೇ ವಿಧಾನಸೌಧದ ಒಳಗಡೆ ವೀರ ಸಾವರ್ಕರ್ ಜೊತೆಗೆ ಒಟ್ಡು ಏಳು ಜನ ಮಹಾಪುರುಷರ ಭಾವಚಿತ್ರಗಳ ಅನಾವರಣ ಮಾಡಿರುವ ಸರ್ಕಾರ, ಹೊರಗಡೆ ವೀರರಾಣಿ ಚನ್ನಮ್ಮನ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ ಹಾಗೂ ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗಳ ಅನಾವರಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಸರ್ಕಾರ ಸಿದ್ಧತೆ ನಡೆಸುವ ಮೂಲಕ ಅನಾವರಣಕ್ಕೆ ಭಾವನಾತ್ಮಕ ಸಂಗತಿಗಳಿಗೆ ಇಂಬು ನೀಡಲು ಮುಂದಾಗಿದೆ. ಬೆಳಗಾವಿ-ರಾಜ್ಯ ಸರ್ಕಾರ ಸುವರ್ಣಸೌಧದ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣ ಮಾಡಿದೆ. …

Read More »