LOCAL NEWS

ನಮ್ಮ ನಡೆ…ನಿಮ್ಮ ಕಡೆ….ತಾಲ್ಲೂಕಾ ಕೇಂದ್ರಗಳಲ್ಲಿ ಡಿಸಿ,ಎಸ್ಪಿ ಸಿಇಓ ಲಭ್ಯ…!!

ಸಾರ್ವಜನಿಕ ಭೇಟಿಗೆ ಡಿಸಿ, ಎಸ್.ಪಿ. ಸಿಇಓ ಲಭ್ಯ ———————————————————– ಅ.14 ರಂದು ಬೈಲಹೊಂಗಲ, ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಭೇಟಿಗೆ ಅವಕಾಶ ಬೆಳಗಾವಿ, -ಜಿಲ್ಲಾಧಿಕಾರಿ ನಿತೇಶ್ ಪಾಟೀಲ, , ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು ಶುಕ್ರವಾರ(ಅ.14) ಬೈಲಹೊಂಗಲ ಮತ್ತು ಸವದತ್ತಿ ತಹಶೀಲ್ದಾರ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ. ಬೈಲಹೊಂಗಲ ತಹಶೀಲ್ದಾರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆ ಮತ್ತು ಸವದತ್ತಿ ತಹಶೀಲ್ದಾರ …

Read More »

ಬೆಳಗಾವಿಗೆ ಮಂಜೂರಾದ, ಸೆಂಟರ್ ಧಾರವಾಡಕ್ಕೆ ಶಿಪ್ಟ್ ಮಾಡಲು ಹುನ್ನಾರ…!!!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ, ಅಭಿವೃದ್ಧಿಯ ಸರ್ದಾರ,ಅಭಯ ಪಾಟೀಲ್ ಅವರು ಸಿಎಂ ಬೊಮ್ಮಾಯಿ ಅವರ ಗಂಟು ಬಿದ್ದು ಬೆಳಗಾವಿಗೆ ಮಂಜೂರು ಮಾಡಿಸಿದ್ದ 150 ಕೋಟಿ ರೂ ವೆಚ್ಚದ,ನೂರಾರು ಯುಕರಿಗೆ ಉದ್ಯೋಗ ಕೊಡಿಸುವ ಗ್ಲೋಬಲ್ ಎಮರ್ಜಿಂಗ್ ಟೆಕ್ನಲಾಜಿ ಡಿಸೈನ್ ಸೆಂಟರ್,ಬೆಳಗಾವಿಯಿಂದ ಹುಬ್ಬಳ್ಳಿ- ಧಾರವಾಡ ಅವಳಿ ನಗರಕ್ಕೆ ಶಿಪ್ಟ್ ಮಾಡುವ ಹುನ್ನಾರ ನಡೆದಿದೆ. ಬೆಳಗಾವಿಯಲ್ಲಿ ಗ್ಲೋಬಲ್ ಎಮರ್ಜಿಂಗ್ ಟೆಕ್ನಲಾಜಿ ಡಿಸೈನ್ ಸೆಂಟರ್ ಮಂಜೂರು ಮಾಡಿ,150 ಕೋಟಿ ರೂ ಅನುದಾನವನ್ನು ಸಿಎಂ ಬೊಮ್ಮಾಯಿ …

Read More »

ಬೆಳಗಾವಿಯಲ್ಲಿ 19 ವರ್ಷದ ಯುವತಿ ಅನುಮಾನಾಸ್ಪದ ಸಾವು..

ಬೆಳಗಾವಿ-ಬೆಳಗಾವಿಯಲ್ಲಿ 19 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನೊಪ್ಪಿದ್ದು.ಅತ್ಯಾಚಾರ ಮಾಡಿ ಬಳಿಕ ಯುವತಿ ಕೊಲೆ ಮಾಡಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ತಬಸ್ಸುಮ್ ಸವದತ್ತಿ (19)ಎಂಬ ಯುವತಿ ಇಂದು ಬೆಳಗ್ಗೆ ಸಾವನ್ನೊಪ್ಪಿದ್ದಾಳೆ. ಬೆಂಗಳೂರಿನಲ್ಲಿ ಕಾಲ್‌ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ತಬಸ್ಸುಮ್,ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿಯಾಗಿದ್ದಾಳೆ.ಆಟೋ ಚಾಲಕರಾಗಿರುವ ಮೃತ ತಬಸ್ಸುಮ್ ತಂದೆ ಇರ್ಷಾದ್‌ಅಹ್ಮದ್ ಸವದತ್ತಿ ಬೆಳಗಾವಿಯ ಖಾಸಗಿ ಆಸ್ಪತ್ರೆ ಎದುರು ಮಾದ್ಯಮಗಳಿಗೆ ಮಗಳು ತಬಸ್ಸುಮ್ ಸಾವಿನ ಕುರಿತು …

Read More »

ತಾಯಿಯ ಜೊತೆ ಮೂವರು ಮಕ್ಕಳ ಆತ್ಮಹತ್ಯೆ

ಚಿಕ್ಕೋಡಿ: ಪಕ್ಕದ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ತಾಯಿ ಜೊತೆ ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುನೀತಾ ತುಕಾರಾಮ ಮಾಳಿ (27) ಅಮೃತಾ ತುಕಾರಾಮ ಮಾಳಿ (13)ಅಂಕಿತಾ ತುಕಾರಾಮ ಮಾಳಿ (10) ಐಶ್ವರ್ಯ ತುಕಾರಾಮ ಮಾಳಿ (7) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನದ ಹಿಂದೆ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಜತ್ತ್ ಪೊಲೀಸ್ ಠಾಣೆಯಲ್ಲಿ …

Read More »

ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದವನಿಗೆ ನಶೆ ಮಾಡಿಸಿ ಕೊಲೆ…!

ಬೆಳಗಾವಿ-ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದವನ ಹೆಂಡಕುಡಿಸಿ ಕೊಲೆ ಮಾಡಿದ ಘಟನೆಅಕ್ಟೋಬರ್ ೭ ರಂದು ನಡೆದಿತ್ತು ಈ ಪ್ರಕರಣ ಭೇದಿಸಿದ ಪೊಲೀಸರು,ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ನಡೆದಿದ್ದ ಕೊಲೆ ಪ್ರಕರಣ ವನ್ನು ಪೋಲೀಸರು ತ್ವರಿತವಾಗಿ ಭೇದಿಸಿದ್ದಾರೆ.ಸುನೀಲ್ ಸಾಳುಂಕೆ(೩೪) ಕೊಲೆಯಾಗಿದ್ದ ದುರ್ದೈವಿ,ಕೊಲೆ ಆರೋಪಿ ಮಹಾಂತೇಶ ಹೆಂಡತಿಯ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ಸುನೀಲ್,ಇದೇ ಕಾರಣಕ್ಕೆ ಸುನೀಲ್ ನನ್ನು ಬೈಕ್ ಮೇಲೆ ಕರೆದೊಯ್ದು ಕೊಲೆ ಮಾಡಿದ್ದ ಮಹಾಂತೇಶ,ಎನ್ನುವ ಅಂಶ ಬೆಳಕಿಗೆ ಬಂದಿದೆ. ಪ್ರಕರಣದ …

Read More »

ರೈತರ ಹೆಲ್ತ್ ಚೆಕಪ್ ಮಾಡಲು,ಡಿಸಿ ಕಚೇರಿ ಎದುರು, ಡಾಕ್ಟರ್ ಬಂದ್ರು….!!

ಬೆಳಗಾವಿ- ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಯ ಮಾಲೀಕರು 3500 ದರ ಕೊಡಬೇಕು.ಸರ್ಕಾರ 2000 ಎರಡು ಸಾವಿರ ಸೇರಿಸಿ ರೈತರಿಗೆ ಒಟ್ಟು 5500 ಕಬ್ಬಿನ ಬೆಲೆ ಕೊಡಬೇಕು ಎಂದು ರಾಜ್ಯ ರೈತ ಸಂಘ,ಮತ್ತು ಹಸೀರು ಸೇನೆಯ ರೈತರು ನಡೆಸುತ್ತಿರುವ ಹೋರಾಟ ಎರಡನೇಯ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ಸೋಮವಾರ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಹೋರಾಟ ಆರಂಭಿಸಿದ ರೈತರು,ನಂತರ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ,ಡಿಸಿ ಕಚೇರಿ ಎದುರೇ …

Read More »

ಬೆಳಗಾವಿ ಡಿಸಿ ಕಚೇರಿ ಎದುರು ರೈತರಿಂದ ಅಹೋರಾತ್ರಿ ಧರಣಿ…

ಬೆಳಗಾವಿ ಪ್ರಸ್ತಕ ವರ್ಷದಿಂದ ಪ್ರತಿ ಟನ್ ಕಬ್ಬಿಗೆ 5500 ರೂ. ನೀಡುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಬೆಳಗ್ಗೆಯಿಂದ ಶುರುವಾಗಿರುವ ಹೋರಾಟ ಅಹೋರಾತ್ರಿಯೂ ಮುಂದುವರೆದಿದೆ. ಬೆಳಗ್ಗೆ ಏನಾಯ್ತು… ನಗರದ ಅಶೋಕ ವೃತ್ತದಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ‌ ನಡೆಸಿದ ರೈತರು, ಮಳೆಯ ನಡುವೆಯೇ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಅರೆಬೆತ್ತಲೆಯಾಗಿ ಪ್ರತಿಭಟಿಸಿದರು. ಕೆಲ ಕಾಲ ಚನ್ನಮ್ಮ ವೃತ್ತದಲ್ಲಿಯೇ ಪ್ರತಿಭಟಿಸುತ್ತಿದ್ದ ಬಳಿಕ …

Read More »

ಈ ಬಾರಿಯ ರಾಜ್ಯೋತ್ಸವದಲ್ಲಿ ಹೊಸದೇನಿದೆ ಗೊತ್ತಾ..??

ಬೆಳಗಾವಿ,-: ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳ ಕಾಲ ಸರಳವಾಗಿ ರಾಜ್ಯೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ವ್ಯವಸ್ಥಿತವಾಗಿ, ಅದ್ಧೂರಿಯಾಗಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ (ಅ.10) ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವ್ಯವಸ್ಥಿತ ಪರೇಡ್ ಆಯೋಜನೆ: ರಾಜ್ಯೋತ್ಸವ ಹಿನ್ನೆಲೆಯಲ್ಲಿ ನವೆಂಬರ್ …

Read More »

ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ.

ಬೆಳಗಾವಿ, ಅ.9( ಕರ್ನಾಟಕ ವಾರ್ತೆ ) : ವಾಲ್ಮೀಕಿ ಮಹರ್ಷಿ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಇಡೀ ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದು ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಕುಮಾರ …

Read More »

ಬೆಳಗಾವಿಯಲ್ಲಿ, ಬಾವಿಗೆ ಬಿದ್ದು ಹನ್ನೊಂದು ವರ್ಷದ ಬಾಲಕನ ಸಾವು..

ಬೆಳಗಾವಿ- ಈದ್ ಮಿಲಾದ್ ಹಬ್ಬದ ಮೆರವಣಿಗೆ ಹೊರಟಾಗ ಮಕ್ಕಳ ಜೊತೆ ಆಟವಾಡುತ್ತ ಹೋಗಿದ್ದ ಹನ್ನೊಂದು ವರ್ಷದ ಬಾಲಕ ಬಾವಿಗೆ ಬಿದ್ದು ಸಾವನ್ನೊಪ್ಪಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿಯ ಅನಿಗೋಳದ ರಾಜಹಂಸ ಗಲ್ಲಿಯಲ್ಲಿ ಈ ದುರ್ಘಟನೆ ನಡೆದಿದೆ‌ ಮೃತಪಟ್ಟ ಬಾಲಕ ಸದೀದ್ ಮುಜಮ್ಮಿಲ್ ಮುಲ್ಲಾ 11 ವರ್ಷ ಎಂದು ಗುರುತಿಸಲಾಗಿದೆ.Sadhid Mujamil Mulla (11) unexpected fell in to the well at Rajahansagalli Angol ಸದೀದ ಮುಜಮ್ಮಿಲ್ …

Read More »

ಖಾಕಿ ಪಡೆಯಿಂದ ಭರ್ಜರಿ ಬೇಟೆ,ನಾಲ್ಕು ಜನ ಡಕಾಯತರು ಅರೆಸ್ಟ್…

ಬೆಳಗಾವಿ- ನಿಪ್ಪಾಣಿ ಬಳಿಯ ಭಿವಶಿ ಗ್ರಾಮದ ಹದ್ದಿಯಲ್ಲಿ ಚಿನ್ನದ ವ್ಯಾಪಾರಿಯೊಬ್ಬರನ್ನು ತಡೆದು ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದ ನಾಲ್ಕು ಜನ ಡಕಾಯಿತರನ್ನು ನಿಪ್ಪಾಣಿ ಪೋಲೀಸರು ಬಂಧಿಸಿದ್ದಾರೆ. ಚಿನ್ನದ ವ್ಯಾಪಾರಿ, ದೊಂಡಿರಾಮ ವಿಷ್ಣು ಕುಸಾಳೆ ಅವರು ತಮ್ಮ ಅಂಗಡಿ ಬಂದ್ ಮಾಡಿಕೊಂಡು, ನಿಪ್ಪಾಣಿ ಹತ್ತಿರದ ಮಾಂಗೂರ ರಸ್ತೆಯಲ್ಲಿ ಹೋಗುತ್ತಿರುವಾಗ ಇವರನ್ನು ತಡೆದು ಚಿನ್ನಾಭರಣ ಬೆಳ್ಳಿ ಮತ್ತು ನಗದು ಹಣ ದೋಚಿ ಪರಾರಿಯಾಗಿದ್ದ ನಾಲ್ಕು ಜನ ದರೋಡೆಕೋರರನ್ನು ನಿಪ್ಪಾಣಿ ಸಿಪಿಐ ಸಂಗಮೇಶ್ ಶಿವಯೋಗಿ ನೇತ್ರತ್ವದ …

Read More »

ಹಸುಗಳನ್ನು ನೆನೆದು ಭಾವುಕರಾದ VK ಬಾಸ್…!!

ಬೆಳಗಾವಿ-ಬೆಳಗಾವಿಯ ಪ್ರವಾಸಿಮಂದಿರದಲ್ಲಿ ತಮ್ಮ ಫಾರ್ಮಹೌಸ್ ನಲ್ಲಿರುವ ಹಸುಗಳನ್ನು ನೆನೆದು ಮಾಜಿ ಸಚಿವ ವಿನಯ ಕುಲಕರ್ಣಿ ಭಾವುಕರಾದರು. ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣ ಸಂಬಂಧ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಭಂದ ಇರುವಹಿನ್ನೆಲೆಯಲ್ಲಿ ಭಾವುಕರಾಗಿ ಪ್ರತಿಕ್ರಿಯಿಸಿದ ಮಾಜಿ ಸಚಿವ ವಿನಯ ಕುಲಕರ್ಣಿ. ನಾನೊಬ್ಬ ರಾಜಕಾರಣಿ ಅಷ್ಟೇ ಅಲ್ಲ, ನಾನೊಬ್ಬ ರೈತ, ನನ್ನ ಪಾರ್ಮ್‌ನಲ್ಲಿ ಐದು ಸಾವಿರ ಜಾನುವಾರುಗಳಿವೆ,ನನ್ನ ಮಕ್ಕಳಿಗಿಂತ ಹೆಚ್ಚು ಕಾಳಜಿಯಿಂದ ನಾನು ಅವುಗಳನ್ನು ಸಾಕಿದ್ದೇನೆ.ಧಾರವಾಡದಲ್ಲಿದ್ದಾಗ ಪ್ರತಿದಿನ ಬೆಳಗ್ಗೆ ಐದು ಗಂಟೆಗೆ …

Read More »

ಡಬಲ್ ಮರ್ಡರ್ ಕೇಸ್ ಆರು ಜನ ಆರೋಪಿಗಳ ಅರೆಸ್ಟ್…!!!

ಬೆಳಗಾವಿ-ಬೆಳಗಾವಿ ತಾಲೂಕಿನ ಸುಳೇಭಾವಿಯಲ್ಲಿ ಜೋಡಿಕೊಲೆ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಸುಳೇಭಾವಿಯ ಶಶಿಕಾಂತ ಭೀಮಪ್ಪ ಮಿಸಾಳೆ(24) ಅಲಿಯಾಸ್ ಸಸ್ಸಾ, ಯಲ್ಲೇಶ್ ಹುಂಕ್ರಿ ಪಾಟೀಲ್(22) ,ಮಂಜುನಾಥ ಶಿವಾಜಿ ಪರೋಜಿ(22), ದೇವಪ್ಪ ರವಿ ಕುಕಡೊಳ್ಳಿ(26),ಖನಗಾಂವ ಬಿ.ಕೆ. ಗ್ರಾಮದ ಸಂತೋಷ ಯಲ್ಲಪ್ಪ‌ ಹಣಬರಟ್ಟಿ(20), ಭರಮಣ್ಣ ನಾಗಪ್ಪ ನಾಯಕ(20) ಬಂಧಿಸಲಾಗಿದೆ ಎಂದುಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ರವೀಂದ್ರ ಗಡಾದಿ ಹೇಳಿದ್ದಾರೆ. ಮಹೇಶ್ ಮುರಾರಿ, ಪ್ರಕಾಶ್ ಹುಂಕರಿ ಪಾಟೀಲ್ ಹತ್ಯೆಯಾಗಿತ್ತು,ಎರಡು ಗ್ಯಾಂಗ್‌ಗಳ ಮಧ್ಯೆ ವೈಷಮ್ಯ …

Read More »

ಬೆಳಗಾವಿ ಡಿಸಿ ಕಚೇರಿ ಆವರಣದಲ್ಲೂ ನಂದಿನಿ ಮಹಿಮೆ….!!

ಬೆಳಗಾವಿ, ಅ.7: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯ ಪಕ್ಕದಲ್ಲಿ ಕೆ.ಎಂ.ಎಫ್. ಸಂಸ್ಥೆಯ‌ ನಂದಿನಿ ಕ್ಷೀರ‌ ಮಳಿಗೆಯನ್ನು ಬೆಳಗಾವಿ ನಗರ ಉಪ ಪೊಲೀಸ್ ಆಯುಕ್ತರಾದ ರವೀಂದ್ರ ಗಡಾದಿ ಅವರು ಶುಕ್ರವಾರ(ಅ.7) ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತೀ ಹೆಚ್ಚು ಜನಸಂದಣಿ ಇರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ನ್ಯಾಯಾಲಯ ಆವರಣದಲ್ಲಿ ನಂದಿನಿ ಕ್ಷೀರ ಮಳಿಗೆಯನ್ನು ಆರಂಭಿಸಿರುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು. ಜಿಲ್ಲಾಧಿಕಾರಿ ಕಚೇರಿಗೆ ಪ್ರತಿದಿನ ಸಾವಿರಾರು ಜನರು …

Read More »

ಬೆಳಗಾವಿ ಜಿಲ್ಲೆಯಲ್ಲಿ ಪಂಚಮಸಾಲಿ ಸಮುದಾಯದ ಪಾವರ್…!!

ಈಗ ಬೆಳಗಾವಿ ಜಿಲ್ಲೆಯಲ್ಲಿ ಪಂಚಮಸಾಲಿ ಸಮಾಜದ ಹವಾ…!!! ಬೆಳಗಾವಿ – ಮಠಾಧೀಶರು ಸಮಾಜದ ಒಳತಿಗಾಗಿ ಸಂಕಲ್ಪ ಮಾಡಿದ್ರೆ ಏನೆಲ್ಲಾ ಮಾಡಬಹುದು ಅನ್ನೋದನ್ನು ಕೂಡಲಸಂಗಮ‌ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಾಭೀತು ಮಾಡಿ ತೋರಿಸಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ದೊರಕಿಸಿ ಕೊಡಲು ಪಂಚಮಸಾಲಿ ಶ್ರೀಗಳು ನಡೆಸಿರುವ ಹೋರಾಟ, ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲಿಕಿಸುವ ಮಟ್ಟಿಗೆ ಪ್ರಭಾವಶಾಲಿಯಾಗುತ್ತಿದೆ.ಯಾಕಂದ್ರೆ ಪಂಚಮಸಾಲಿ ಶ್ರೀಗಳಾದ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಒಂದಾದ ಮೇಲೊಂದು …

Read More »