LOCAL NEWS

ಎರಡು ಕಾರ, ಟ್ರಕ್ ಹಾಗೂ 4 ಕ್ಕೂ ಹೆಚ್ಚು ಬೈಕ್ ಗಳ ಸರಣಿ ಅಪಘಾತ…

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಓರ್ವ ವಾಹನ ಚಾಲಕ ಮೃತಪಟ್ಟಿದ್ದಾನೆ. ಎರಡು ಕಾರ, ಟ್ರಕ್ ಹಾಗೂ 4 ಕ್ಕೂ ಹೆಚ್ಚು ಬೈಕ್ ಗಳ ಸರಣಿ ಅಪಘಾತ ಸಂಭವಿಸಿದೆ.ಮೊಲ್ಯಾಸೀಸ್ ತುಂಬಿದ್ದ ಟ್ಯಾಂಕರ್ ನಿಂದ ಮೊಲ್ಯಾಸೀಸ್ ಸೋರಿಕೆ ಹಿನ್ನಲೆ ಸರಣಿ ಅಪಘಾತ ಸಂಭವಿಸಿದ್ದು ಈ ಸರಣಿ ಅಪಘಾತಕ್ಕೆ ಓರ್ವ ಬಲಿಯಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಘಟನೆ ನಡೆದಿದೆ.ಹೆದ್ದಾರಿಯಲ್ಲಿ ಮೊಲ್ಯಾಸೀಸ್ ಸೋರಿಕೆ ಹಿನ್ನಲೆ ವಾಹನಗಳು …

Read More »

ಬ್ರೇಕ್ ಫೇಲ್ ಆಯ್ತು,ಪ್ರಾವೇಟ್ ಬಸ್ಸ್ ಬಿಲ್ಡಿಂಗ್ ಒಳಗೆ ನುಗ್ಗಿತು…!!

ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಆಯುಕ್ತರ ಕಚೇರಿ ಕಡೆಯಿಂದ ಆರ್ ಟಿ ಓ ಸರ್ಕಲ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸು ಬ್ರೇಕ್ ಫೇಲ್ ಆಗಿ ನಿಂಬಾಳ್ಕರ್ ಬಿಲ್ಡಿಂಗ್ ಒಳಗೆ ನುಗ್ಗಿದ ಘಟನೆ ನಡೆದಿದೆ. ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸರ್ಕಲ್ ( RTO circle) ನಲ್ಲಿರುವ ಪೋಲೀಸ್ ಇಲಾಖೆಯ ಹೊಸ ಕಟ್ಟಡದಲ್ಲೇ ಈ ಬಸ್ಸು ನುಗ್ಗಿದ್ದು ಕಂಪೌಂಡು ಒಡೆದು ಒಳಗೆ ನುಗ್ಗಿದೆ.ಬಸ್ಸಿನಲ್ಲಿ ಪ್ಯಾಸೆಂಜರ್ ಇರಲಿಲ್ಲ ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. …

Read More »

ಗೆಳೆಯರ ಜೊತೆ ಈಜಲು ಹೋದ ಬಾಲಕ ಮರಳಿ ಬರಲಿಲ್ಲ….

ಬೆಳಗಾವಿ- ಗೆಳೆಯರ ಜೊತೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಬೆಳಗಾವಿ ಮಹಾನಗರದ ಪಕ್ಕದಲ್ಲೇ ಇರುವ ಕೆ‌.ಕೆ ಕೊಪ್ಪ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳಗಾವಿ ಪಕ್ಕದ ಕೆ.ಕೆ ಕೊಪ್ಪ ಗ್ರಾಮದಲ್ಲಿರುವ ಧರ್ಮಪೂರ ಹದ್ದಿಯಲ್ಲಿರುವ ಕಲ್ಲಿನ ಕ್ವಾರಿಯ ಹೊಂಡದಲ್ಲಿ ಗೆಳೆಯರ ಜೊತೆ ಈಜಲು ಹೋಗಿದ್ದ 14 ವರ್ಷದ ಬಾಲಕ ಈಜಲು ಬಾರದೇ ನೀರು ಪಾಲಾಗಿದ್ದಾನೆ. ಮೂಲತಹ ಉಡಪಿಯ 14 ವರ್ಷದ ವಾಹೀಲ ದಾದಾಪೀರ ದೇಸಾಯಿ ಎಂಬ ಬಾಲಕ ತನ್ನ …

Read More »

ಬೆಳಗಾವಿಯ ಸುವರ್ಣಸೌಧದಲ್ಲಿ ಈ ವರ್ಷವೇ ಚೆನ್ನಮ್ಮ, ರಾಯಣ್ಣನ ಪ್ರತಿಮೆ: ಬೊಮ್ಮಾಯಿ

ಬೆಂಗಳೂರು, ಅಕ್ಟೋಬರ್ 02: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಸಮಾರಂಭ ಆಯೋಜಿಸಲಾಗಿತ್ತು. ಅದರಲ್ಲಿ ‘ಕಿತ್ತೂರು ಚೆನ್ನಮ್ಮಾಜಿ …

Read More »

ಬೆಳಗಾವಿಯ ಹಿಂಡಲಗಾ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಕೈದಿ….

ಬೆಳಗಾವಿ-ಬೆಳಗಾವಿಯ ಹಿಡಲಗಾ ಜೈಲಿನಲ್ಲಿ ವಿಚಾರಣಾದೀನ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ಕೈದಿ ನೇಣಿಗೆ ಶರಣಾಗಿದ್ದಾನೆ.ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆ ಮಾಡಿಕೊಂಡ‌ ಕೈದಿಯಾಗಿದ್ದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದವನಾಗಿದ್ದಾನೆ. 3ತಿಂಗಳ ಹಿಂದೆ ಪೋಕ್ಸೊ ಪ್ರಕರಣದಲ್ಲಿ ಹಿಡಲಗಾ ಜೈಲು ಸೇರಿದ್ದ ಆರೋಪಿ.ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್‌ಶೀಟ್ ನಿಂದ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ವಯಸ್ಸು ಚಿಕ್ಕದು, ಆದ್ರೆ, ಮನಸ್ಸು ದೊಡ್ಡದು…!!!

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಾಮ್ರಾಜ್ಯ ಇರೋದು ಒಂದೇ ಆದ್ರೆ ಈ ಸಾಮ್ರಾಜ್ಯದಲ್ಲಿ ಅನೇಕ ಜನ ಸಾಮ್ರಾಟರಿದ್ದಾರೆ, ಈ ಎಲ್ಲ ಸಾಮ್ರಾಟರನ್ನು, ಜಿಲ್ಲೆಯ ಜನ ಪ್ರೀತಿಯಿಂದ ಸಣ್ಣ ಸಾಹುಕಾರ್ ದೊಡ್ಡ ಸಾಹುಕಾರ್ ಅಂತಾ ಕರೀತಾರೆ,ಈ ಸಾಮ್ರಾಜ್ಯದ ಎರಡನೇಯ ಪೀಳಿಗೆ ಈಗ ಸಮಾಜ ಸೇವಾ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದೆ. ರಾಜಕೀಯ ಕ್ಷೇತ್ರದ ಮಾಸ್ಟರ್ ಮೈಂಡ್ ಎಂದೇ ಕರೆಯಲ್ಪಡುವ ಸತೀಶ್ ಜಾರಕಿಹೊಳಿ ಅವರ ಸುಪುತ್ರ ರಾಹುಲ್ ಜಾರಕಿಹೊಳಿ ಅವರು ಚಿಕ್ಕ ವಯಸ್ಸಿನಲ್ಲಿ ವರ್ಚಸ್ಸು ಗಳಿಸಿಕೊಂಡಿದ್ದಾರೆ.ಅಕ್ಟೋಬರ್ …

Read More »

ಬೆಳಗಾವಿ ಜಿಲ್ಲೆಯಲ್ಲಿ ಮನೆ ಕುಸಿದು,ತಾಯಿ ಮಗು ಸಾವು…..

  ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ.ಮಳೆಯಿಂದ ಮನೆಗೋಡೆ ಕುಸಿದು ತಾಯಿ ಮಗು ಸಾವನ್ನೊಪ್ಪಿದ ಘಟನೆ,ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವಾ ಬಾಗಿಲದ(40), ಮಗ ಪ್ರಜ್ವಲ್ ಬಾಗಿಲದ(5)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು ಯರಗಟ್ಟಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ನಿರಂತರ ಮಳೆಯಿಂದಾಗಿ ಮಣ್ಣಿನ ಗೋಡೆಯಲ್ಲಿ ನೀರಿಳಿದು ಗೋಡೆ ಕುಸಿದು ಈ ಘಟನೆ ನಡೆದಿದೆ.ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಡ್ ಸಮೇತ ಅಜ್ಜಿಯನ್ನು ರಜಿಸ್ಟರ್ ಕಚೇರಿಗೆ ತಂದ್ರು…!!

ಬೆಳಗಾವಿ-ಮಾನವೀಯತೆ ಅನ್ನೋದು ಸತ್ತು ಹೋಗಿದೆ.ಅಧಿಕಾರಿಗಳಿಗೆ ದುಡ್ಡು ಕೊಡದಿದ್ರೆ ಯಾವದಕ್ಕೂ ಅನಕೂಲ ಮಾಡಿ ಕೊಡುವುದಿಲ್ಲ ಅನ್ನೋದು ಬೆಳಗಾವಿಯ ದಕ್ಷಿಣ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಸಾಭೀತಾಗಿದೆ. ದಕ್ಷಿಣ ಸಬ್ ರಿಜಿಸ್ಟರ್ ಕಚೇರಿಯ ನೋಂದಣಿ ಅಧಿಕಾರಿ,ಪದ್ಮನಾಭನ್ ಗುಡಿ ಅವರ ಕಚೇರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 80 ವರ್ಷದ ಅಜ್ಜಿಯನ್ನು ಬೆಡ್ ಸಮೇತ ಕರೆತಂದು ಆಸ್ತಿ ಹಂಚಿಕೆ ಹಕ್ಕುಪತ್ರಕ್ಕೆ ಹೆಬ್ಬಟ್ಟು ಒತ್ತಿಸಿದ ಅಮಾನವೀಯ ಘಟನೆ ನಡೆದಿದೆ. 80 ವರ್ಷದ ಅಜ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,ನಾವು ವೈದ್ಯರ …

Read More »

ಕಿತ್ತೂರು ಉತ್ಸವಕ್ಕೆ ಎರಡು ಕೋಟಿ,ಬೆಂಗಳೂರಿಗೆ ಜ್ಯೋತಿ….!!

ಬೆಳಗಾವಿ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಈ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುತ್ತಿದ್ದು, ಸರಕಾರ ಎರಡು ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿರುತ್ತದೆ. ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ವೀರಜ್ಯೋತಿಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.2 ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ತಿಳಿಸಿದರು. ಚೆನ್ನಮ್ಮನ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣಮಂಟಪದಲ್ಲಿ ಶುಕ್ರವಾರ (ಸೆ.30) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ …

Read More »

ಇದು ದರ್ಬಾರ್ ಹಾಲ್..ಅದು ದ್ರುವ ನಕ್ಷತ್ರ…!!!

ಕಿತ್ತೂರು ಸಂಸ್ಥಾನದ ಕೋಟೆ ಹಾಗೂ ಸದ್ಯಕ್ಕಿರುವ ಅರಮನೆಯ ಯಥಾಸ್ಥಿತಿ ರಕ್ಷಣೆಯ ಜತೆಗೆ ಪ್ರವಾಸಿಗರಿಗೆ ಸಮರ್ಪಕ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಯೋಜನೆಯನ್ನು ರೂಪಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಚನ್ನಮ್ಮನ ಕಿತ್ತೂರಿನಲ್ಲಿರುವ ಕೋಟೆ ಹಾಗೂ ಅರಮನೆಯನ್ನು ಶುಕ್ರವಾರ (ಸೆ.30) ವೀಕ್ಷಿಸಿದ ಬಳಿಕ ಅಧಿಕಾರಿಗಳ ಜತೆ ಅವರು ಚರ್ಚೆ ನಡೆಸಿದರು. ಕೋಟೆಯ ಒಳಗಿರುವ ಕಿತ್ತೂರು ಸಂಸ್ಥಾನದ ಅರಮನೆಯ ಕುರಿತು ಅಲ್ಲಲ್ಲಿ ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಇದರಿಂದ ಪ್ರವಾಸಿಗರಿಗೆ ಕೋಟೆ ಮತ್ತು …

Read More »

ಹದಿನೈದು ತೊಲೆ ಬಂಗಾರ,ಎರಡು ಲಕ್ಷ ರೂ ಸ್ವಾಹಾ…!!!

ಸವದತ್ತಿ-ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ,ಬೆಳಗಾವಿ ಜಿಲ್ಲೆ ಸವದತ್ತಿಯ ಶಾಂತಿನಗರ ಬಡಾವಣೆಯಲ್ಲಿ ನಡೆದಿದೆ. ಮನೆಯಲ್ಲಿ ‌ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡಲಾಗಿದೆ.ಬಾಬು ಮಹಾದೇವಪ್ಪ ಪಾಸಲಕರ್ ಎಂಬುವವರ ಮನೆ ಕಳುವಾಗುದೆ.150 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ಸೇರಿ ಬೆಲೆಬಾಳುವ ವಸ್ತುಗಳನ್ನು ದೋಚಲಾಗಿದೆ. ಕುಟುಂಬ ಸದಸ್ಯರ ಜೊತೆಗೆ ಸಂಬಂಧಿಕರ ಮನೆಗೆ ಹೋಗಿದ್ದ ಬಾಬು ಪಾಸಲಕರ ಅವರ ಮನೆಗೆ ನುಗ್ಗಿ ತಡರಾತ್ರಿ ಚಿನ್ನ, …

Read More »

ಬೆಳಗಾವಿ ಜಿಲ್ಲೆಯ, RTO ಚೆಕ್ ಪೋಸ್ಟ್ ಮೇಲೆ‌ ಲೋಕಾಯುಕ್ತ ದಾಳಿ…!!

ಬೆಳಗಾವಿ-ಎಸಿಬಿ ರದ್ದಾಗಿ ಮತ್ತೆ ಲೋಕಾಯುಕ್ತ ಸಂಸ್ಥೆ ಅಸ್ತಿತ್ವಕ್ಕೆ ಬಂದ ಮೇಲೆ,ಬೆಳಗಾವಿ ಜಿಲ್ಲೆಯಲ್ಲೂ ಆರ್‌ಟಿಒ ಚೆಕ್ ಪೋಸ್ಟ್ ಮೇಲೆ‌ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಹಾಗು RTO ಚೆಕ್ ಪೋಸ್ಟ್ ಮೇಲೆ ದಾಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು-ಮುಂಬೈ ರಸ್ತೆ ಮೇಲಿರುವ ಚೆಕ್ ಪೋಸ್ಟ್ ದಾಳಿ ನಡೆದಿದ್ದು,ವಾಹನ ಸವಾರರಿಂದ ಹಣ ವಸೂಲಿ ಆರೋಪ‌ ಹಿನ್ನೆಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.ದಾಳಿ …

Read More »

ಚೇಂಜ್ ಮಾಡುವದಿಲ್ಲ ಚೇಂಜ್ ಯ್ಯಾಕ್ ಮಾಡ್ತೀರ್ರೀ…..!!

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಈಗಿನಿಂದಲೇ ಚುನಾವಣೆ ಶುರುವಾಗಿದೆ ಎನ್ನುವ ವಾತಾವರಣ ಬಿಜೆಪಿ,ಮತ್ತು ಕಾಂಗ್ರೆಸ್ ಎರಡರಲ್ಲೂ ಇತ್ತು, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು ಅವರು ನಿನ್ನೆ ಬೆಳಗಾವಿ ಉತ್ತರದ ಬಿಜೆಪಿ ಆಕಾಂಕ್ಷಿಗಳಿಗೆ ಸ್ಪಷ್ಟವಾದ ನಿಖರವಾದ ಉತ್ತರ ಕೊಡುವ ಮೂಲಕ ಶಾಸಕ ಅನೀಲ ಬೆನಕೆ ಅವರ ಹಾದಿ ಸುಗಮಗೊಳಿಸಿದ್ದಾರೆ. ಬೆಳಗಾವಿ ಉತ್ತರದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಅಲ್ಲ ಎಂದು ಮಾದ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಳೀನ ಕುಮಾರ್ , ಆಕಾಂಕ್ಷಿಗಳು …

Read More »

ರೈತರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ..!!

ಬೆಳಗಾವಿ:ಜಿಲ್ಲೆಯಲ್ಲಿ ದನ ಕರುಗಳಿಗೆ ಚರ್ಮ ಗಂಟು ರೋಗ ಉಲ್ಬಣವಾಗಿ ಪ್ರಾಣಿಗಳು ಪ್ರಾಣವನ್ನು ಕಳೆದುಕೊಂಡ ರೈತರಿಗೆ ಉಂಟಾಗುತ್ತಿದ್ದ ನಷ್ಟ ತಪ್ಪಿಸಲು ರಾಜ್ಯ ಸರ್ಕಾರ 20ಸಾವಿರ ರೂಪಾಯಿ ಘೋಷಿಸಿರುವದು ರೈತರಿಗೆ ಅತ್ಮಸ್ಥೈರ್ಯ ತುಂಬಿದಂತಾಗಿದೆ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲೆ ಬಿಜೆಪಿ ಅಧಕ್ಷ ಸಂಜಯ ಪಾಟೀಲ ಹೇಳಿದ್ದಾರೆ. ಗುರುವಾರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು, ಮುಖ್ಯ ಮಂತ್ರಿಗಳು ಹಾವೇರಿಯಲ್ಲಿ ಮಾತನಾಡಿ ಉತ್ತರ ಕರ್ನಾಟಕದಲ್ಲಿ ಅದರಲ್ಲಿಯು ಬೆಳಗಾವಿ ಜಿಲ್ಲೆಯಲ್ಲಿಯ ರೈತರು ಸಾಕುವ ಆಕಳು, ಎತ್ತು …

Read More »

ವಿದ್ಯಾಶಂಕರ ಬೆಳಗಾವಿ ವಿಟಿಯು ನೂತನ ಕುಲಪತಿ…!!

ಬೆಳಗಾವಿ: ಬೆಳಗಾವಿ ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯದ ನೂತನ ಕುಲಪತಿಯನ್ನಾಗಿ ಡಾ. ವಿದ್ಯಾಶಂರ ಅವರನ್ನು ನೇಮಕ ಮಾಡಿ ವಿವಿ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. ಹಿಂದಿನ ಕುಲಪತಿಯಾಗಿದ್ದ ಪ್ರೊ.ಕರಿಸಿದ್ದಪ್ಪ ಅವರ ಅಧಿಕಾರವಧಿ ಪೂರ್ಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ವಿಟಿಯು ಕುಲಪತಿ ಹುದ್ದೆ ತೆರವುಗೊಂಡಿತ್ತು. ಹಾಗಾಗಿ, ನೂತನ ಕುಲಪತಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಶಿವಕುಮಾರ ಅವರು ರಾಜ್ಯಪಾಲರ ಹೆಸರಿನಲ್ಲಿ ಆದೇಶ ಹೊರಡಿಸಿದ್ದಾರೆ. ವಿದ್ಯಾಶಂಕರಅವರು ಮೈಸೂರಿನ ಕರ್ನಾಟಕ …

Read More »