Breaking News

LOCAL NEWS

ಕೊಲೆಸ್ಟ್ರಾಲ್ ಕಂಟ್ರೋಲ್ ಮಾಡಲು ಬಂದಿದೆ ಹೊಸ ಇಂಜೆಕ್ಷನ್…

[ಬೆಳಗಾವಿ: ಅತ್ಯಧಿಕ ಕೊಲೆಸ್ಟಾçಲ್, ರಕ್ತದೊತ್ತಡ ಸೇರಿದಂತೆ ದೀರ್ಘಕಾಲದ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಅಳವಡಿಸಿಕೊಂಡಿರುವ ‘ದಿನನಿತ್ಯದ ಮಾತ್ರೆ’ ಸೇವನೆಯ ಚಿಕಿತ್ಸೆಗೆ ಭವಿಷ್ಯದಲ್ಲಿ ಸ್ಥಗಿತಗೊಳ್ಳುವ ಸಂದರ್ಭ ಬಂದೊದಗಲಿದೆ. ಕೊಲೆಸ್ಟಾçಲ, ಅಧಿಕ ರಕ್ತದೊತ್ತಡ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಅಭಿವೃದ್ಧಿಪಡಿಸಲಾಗಿರುವ ಔಷಧವು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಲಬ್ಯವಿದೆ. ಡಿಸಿಜಿಐ, ಯುಎಸ್ ಎಫ್‌ಡಿಎ, ಸಿಇ ಹಾಗೂ ಇಎಂಎ ಅನುಮೋದಿತ ಭಾರತದಲ್ಲಿ ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, …

Read More »

ಡಾ.ಸೋನಾಲಿ ಸರ್ನೋಬತ್ ಅವರಿಗೆ ಮಹತ್ವದ ಜವಾಬ್ದಾರಿ…!!

ಬೆಳಗಾವಿ-ಬಿಜೆಪಿ ಪಕ್ಷದಲ್ಲಿ ಅತ್ಯಂತ ಸಂಘಟನಾತ್ಮಕವಾಗಿ,ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸೇವೆ ಮಾಡುತ್ತಿರುವ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಅವರಿಗೆ ಮರಾಠಾ ಸಮಾಜ ಮಹತ್ವದ ಜವಾಬ್ದಾರಿ ನೀಡಿದೆ.ಕ್ಷತ್ರಿಯ ಮರಾಠಾ ಸಮಾಜದ ಬೆಳಗಾವಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾಗಿರುವ ಸುರೇಶ ಸಾಠೆ ಅವರು ನೇಮಕ ಮಾಡಿದ್ದಾರೆ. ಬೆಂಗಳೂರಿನ ಕ್ಷತ್ರಿಯ ಮರಾಠಾ ಸಮಾಜದ ಕಚೇರಿಯಲ್ಲಿ ಬೆಳಗಾವಿಯ ಡಾ. ಸೋನಾಲಿ ಸರ್ನೋಬತ್ ಅವರಿಗೆ ಸಮಾಜದ ರಾಜ್ಯಮಟ್ಟದ ಪದಾಧಿಕಾರಿಗಳು ಮರಾಠಾ ಸಮಾಜದ ಮುಖಂಡರ …

Read More »

ಸಂಗೊಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…??

ಸಂಗೊಳ್ಳಿ, ನಂದಗಡ ಸಮಗ್ರ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ‌ ಸಿದ್ದರಾಮಯ್ಯ ಭರವಸೆ ಬೆಳಗಾವಿ, – ಕ್ರಾಂತಿವೀರ ರಾಯಣ್ಣನ ಹುಟ್ಟೂರು‌ ಸಂಗೊಳ್ಳಿ ಮತ್ತು ನೇಣುಗಂಬಕ್ಕೇರಿದ ಖಾನಾಪುರ ತಾಲ್ಲೂಕಿನ ನಂದಗಡದ ಸಮಗ್ರ‌ಅಭಿವೃದ್ಧಿಗೆ‌ ಸರಕಾರ‌ ಬದ್ಧವಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಲಾಖೆಯ ಆಶ್ರಯದಲ್ಲಿ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಬುಧವಾರ(ಜ.17) ಏರ್ಪಡಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ …

Read More »

ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ- ರಮೇಶ್ ಜಾರಕಿಹೊಳಿ

ಬೆಳಗಾವಿ-ಅಯೋಧ್ಯಯಲ್ಲಿ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಯಲ್ಲಿ ಈದಿನ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆಯ ನಿಮಿತ್ಯ ಗೋಕಾಕ್ ನಿವಾಸದಲ್ಲಿ ಪೂರ್ವಭಾವಿ ಸಭೆ ನಡೆಸಿದ ಶಾಸಕ ರಮೇಶ ಜಾರಕಿಹೊಳಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ ಮಾಜಿ ಸಚಿವ ಜಾರಕಿಹೊಳಿ.ಉತ್ತರ ಭಾರತದ ರಾಜ್ಯಗಳಲ್ಲಿ …

Read More »

ಇಂದು ಬೆಳಗಾವಿಗೆ ಸಿಎಂ ಸಿದ್ರಾಮಯ್ಯ….

ಬೆಳಗಾವಿ-ಬೈಲಹೊಂಗಲ್‌ ತಾಲ್ಲೂಕಿನಸಂಗೊಳ್ಳಿಯಲ್ಲಿ ಬುಧವಾರ(ಜ.17) ಮಧ್ಯಾಹ್ನ 12 ಗಂಟೆಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ರಾಂತಿವೀರ ಸಂಗೊಳ್ಳಿ ಉತ್ಸವ, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ಶಿಲ್ಪವನ(ರಾಕ್ ಗಾರ್ಡನ್) ಉದ್ಘಾಟಿಸಲಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯ ಸಾಂಭ್ರಾ ವಿಮಾನ ನಿಕ್ಧಾಣಕ್ಕೆ ಆಗಮಿಸುವ ಅವರು ಹೆಲಿಕಾಪ್ಟರ್ ಮೂಲಕ ಸಂಗೊಳ್ಳಿ ಗ್ರಾಮಕ್ಕೆ ತೆರಳಲಿದ್ದಾರೆ.ಕ್ರಾಂತಿವೀರ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ರಾಯಣ್ಣನ ಹುಟ್ಟು,ಹೋರಾಟ,ಸಾವು.ಇಡೀ ಜೀವನ ಚರಿತ್ರೆಯನ್ನು ಕಣ್ತುಂಬಿಸುವ ರಾಯಣ್ಣನ ಹೋರಾಟದ ಇತಿಹಾಸದ ಗತವೈಭವ ಬಿಂಬಿಸುವ ರಾಕ್ ಗಾರ್ಡನ್ ಉದ್ಘಾಟಿಸಿದ ಬಳಿಕ …

Read More »

ಅಯೋಧ್ಯೆಯ ರಾಮಮಂದಿರದ ಮೂರ್ತಿಯ ಶಿಲ್ಪಿ ಯಾರು ಗೊತ್ತಾ..???

ಬೆಳಗಾವಿ- ಅಯೋಧ್ಯೆಯಲ್ಲಿ ನಿರ್ಮಿಸಿದ ರಾಮಮಂದಿರದ ಶ್ರೀರಾಮನ ಮೂರ್ತಿ ಸಿದ್ಧವಾಗಿದ್ದು ಕರ್ನಾಟಕದಲ್ಲಿ ಮೂರ್ತಿಯ ಶಿಲ್ಪಿ ಕೂಡಾ ನಮ್ಮ ನೆಲದವರು,ಮೂರ್ತಿಗೆ ನಮ್ಮ ನೆಲದ ಕಲ್ಲನ್ಬು ಉಪಯೋಗಿಸಲಾಗಿದೆ. ಇದು ಶ್ರೀರಾಮ ಮೂರ್ತಿಯ ವೈಶಿಷ್ಟ್ಯ. ರಾಜ್ಯದ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.ಶ್ರೀರಾಮನ ವಿಗ್ರಹ ಕೆತ್ತನೆಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.ಡಿ.ಕೋಟೆಯದ್ದು ಎಂಬುದು ಕರ್ನಾಟಕಕ್ಕೆ ಮತ್ತೊಂದು ಗರಿ. ಶ್ರೀರಾಮನ ಮೂರ್ತಿ ಕೆತ್ತುವ …

Read More »

ಬೆಳಗಾವಿಯ, ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ನೇಮಕ

ಬೆಖಗಾವಿ- ಬೆಳಗಾವಿಯ ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಗ್ರಾಮಂತರ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಅರಭಾಂವಿ ಕ್ಷೇತ್ರದ ಸುಭಾಷ್ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ. ಬೆಳಗಾವಿ ನಗರ ಜಿಲ್ಲಾಧ್ಯಕ್ಷರಾಗಿ ಗೀತಾ ಸುತಾರ ಅವರು ನೇಮಕ ಗೊಂಡಿದ್ದು ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಅಪ್ಪಾಜಿಗೋಳ್ ಅವರನ್ನು ನೇಮಿಸಲಾಗಿದೆ.

Read More »

ನಿಗಮ ಬೆಳಗಾವಿ ಜಿಲ್ಲೆಯ ಕೈ ಶಾಸಕರಿಗೆ ದಾರಿ ಸುಗಮ….!!

ಬೆಳಗಾವಿ- ಮಕರ ಸಂಕ್ರಾಂತಿಯ ಸಂಭ್ರಮದ ಹೊಸ್ತಿಲಲ್ಲಿ ಬೆಳಗಾವಿ ಜಿಲ್ಲೆಯ ಕೆಲವು ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿಗಳು ದಕ್ಕುವುದು ಖಚಿತವಾಗಿದೆ. ಚಿಕ್ಕೋಡಿ ಸದಲಗಾ ಶಾಸಕ ಗಣೇಶ ಹುಕ್ಕೇರಿ,ಕಾಗವಾಡ ಶಾಸಕ ರಾಜು ಕಾಗೆ ಮತ್ತು ಬೈಲಹೊಂಗಲದ ಶಾಸಕ ಮಹಾಂತೇಶ್ ಕೌಜಲಗಿ ಅವರಿಗೆ ಈ ಬಾರಿ ನಿಗಮಗಳಿಗೆ ದಾರಿ ಸುಗಮವಾಗಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ. ಒಳ್ಳೆಯ ನಿಗಮ ಸಿಕ್ರೆ ಮಾಡ್ತೀನಿ,ಇಲ್ಲಾ ಅಂದ್ರೆ ಶಾಸಕನಾಗಿ ಸೇವೆ ಮಾಡ್ತೀನಿ ಎಂದು ಬೈಲಹೊಂಗಲ ಶಾಸಕ ಮಹಾಂತೇಶ್ …

Read More »

ಬೆಳಗಾವಿಗೆ ಬಂಪರ್ ಕೊಡುಗೆ ನೀಡಿದ ಸಾಹುಕಾರ್…!!

ಬೆಳಗಾವಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂದಿಸಿದಂತೆ ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದ ಕಚೇರಿಯನ್ನು ಬೆಳಗಾವಿಗೂ ವಿಸ್ತರಿಸುವ ಮೂಲಕ ನೂತನ ವಲಯ ವಿಭಾಗದ ಕಚೇರಿ ಇನ್ಮುಂದೆ ಬೆಳಗಾವುಯಲ್ಲಿ‌ ಕಾರ್ಯಾರಂಭ ಮಾಡಲಿದೆ. ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿಗಳಾದ ಸತೀಶ್ ಜಾರಕಿಹೊಳಿ ಅವರ ಪ್ರಯತ್ನದ ಫಲವಾಗಿ ಬೆಳಗಾವಿಗೆ ಮತ್ತೊಂದು ಹಿರಿಮೆ ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದೆ ರಾಜ್ಯದ ಉತ್ತರ ವಲಯ ಕಚೇರಿ ಬೆಳಗಾವಿಯಲ್ಲಿ ಸ್ಥಾಪಿಸಲು ಲೋಕೋಪಯೋಗಿ ಇಲಾಖೆ ಗ್ರೀನ್ …

Read More »

ಬೆಳಗಾವಿಗೆ, ಗಾಂಧೀಜಿ ಭೇಟಿ ಶತಮಾನೋತ್ಸವ- ಹತ್ತು ಕೋಟಿ ರೂಪಾಯಿ ಪ್ರಸ್ತಾವನೆ

ಗಣರಾಜ್ಯೋತ್ಸವ: ಪ್ಲ್ಯಾಸ್ಟಿಕ್ ಧ್ವಜಗಳ ಮಾರಾಟ ನಿಷೇಧ-ಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, -: ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ಲ್ಯಾಸ್ಟಿಕ್ ಧ್ವಜಗಳ ಮಾರಾಟವನ್ನು ನಿಷೇಧಿಸಲಾಗಿರುತ್ತದೆ. ಪ್ಲ್ಯಾಸ್ಟಿಕ್ ಧ್ವಜಗಳ ಮಾರಾಟ ಕಂಡುಬಂದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡು ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಜ.10) ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ಲ್ಯಾಸ್ಟಿಕ್ ಧ್ವಜಗಳ ಮಾರಾಟ …

Read More »

ಯುವಕನ, ಆತ್ಮಹತ್ಯೆಗೆ ಬಂಧನದ ಭೀತಿಯೇ ಕಾರಣ..

ಬೆಳಗಾವಿ- ಊರಲ್ಲಿ ಗಲಾಟೆ ಮಾಡಿ,ಪೋಲೀಸರು ಬಂಧಿಸುತ್ತಾರೆ ಎಂದು ಹೆದರಿ,ಯುವಕನೊಬ್ಬ ಇಂದು ಮಧ್ಯಾಹ್ನ ಬೆಳಗಾವಿ ಡಿಸಿ ಕಚೇರಿಯಲ್ಲಿ ಪಿನೈಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಲಗಮೇಶ್ವರ್ ಗ್ರಾಮದ ಯುವಕ ಕುಮಾರ ಕೊಪ್ಪದ ಎಂಬಾತ ಈ ಹಿಂದೆ ಊರಲ್ಲಿ ಗಲಾಟೆ ಮಾಡಿದ್ದು ಇನ್ನೇನು ಪೋಲೀಸರು ಬಂದಿಸುತ್ತಾರೆ ಎಂದು ಹೆದರಿ ಬೆಳಗಾವಿಗೆ ಬಂದಿದ್ದ, ಬೆಳಗಾವಿಯಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಆದ್ರೆ ಸಂಭಂಧಿಕರಿಗೆ ಈತ ಗಲಾಟೆ ಮಾಡಿ ಬಂದಿರುವ ವಿಷಯ ಗೊತ್ತಾದ …

Read More »

ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ- ಹೆಬ್ಬಾಳಕರ್..

*ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ* *ಬೆಂಗಳೂರು* : ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ನಡೆದ ಜಿಲ್ಲಾ …

Read More »

ಬೆಳಗಾವಿ ಡಿಸಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ…

ಬೆಳಗಾವಿ-ಬೆಳಗಾವಿ ಡಿಸಿ ಆಫೀಸ್ ನಲ್ಲಿ ಫಿನಾಯಿಲ್ ಕುಡಿದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ್ ಕೊಪ್ಪದ (23) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಚಿಂತಾಜನಕವಾಗಿದೆ.ಮಾಹಿತಿ ತಿಳಿದು ಕೂಡಲೇ ಬೆಳಗಾವಿ ಮಾರ್ಕೆಟ್ ಪೊಲೀಸರು ಯುವಕನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ …

Read More »

ಸವದತ್ತಿ ಯಲ್ಲಮ್ಮ ಸುಕ್ಷೇತ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್….

ಸ್ವಚ್ಛತೆ, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಗೆ ಆದ್ಯತೆ: ಸಚಿವ ರಾಮಲಿಂಗಾರೆಡ್ಡಿ ಬೆಳಗಾವಿ, – ಪ್ರತಿವರ್ಷ ಕೋಟ್ಯಂತರ ಜನರು ಭೇಟಿ ನೀಡುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ ರೂಪಿಸಲಾಗುವುದು ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಸೋಮವಾರ(ಜ.9) ಭೇಟಿ ನೀಡಿ ದೇವಿ ದರ್ಶನ ಪಡೆದು ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ …

Read More »

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಕನ್ನಡಿಗರನ್ನು ಕೆರಳಿಸುವ ಹೇಳಿಕೆ…!!!

ಬೆಳಗಾವಿ – ಲಕ್ಷ್ಮೀ ಹೆಬ್ಬಾಳಕರ್ ಅವರು ಈ ರಾಜ್ಯದ ಮಂತ್ರಿಯಾಗಿ ಕನ್ನಡಿಗರು ಯಾವತ್ತಿಗೂ ಸಹಿಸಲಾರದ,ಉಹಿಸಲಾರದ,ಕ್ಷಮಿಸಲಾರದ ಹೇಳಿಕೆ ನೀಡಿದ್ದಾರೆ.ಮಾತಿನ ಭರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಈ ರಾಜ್ಯದ ಕನ್ನಡಿಗರನ್ನು ಕೆರಳಿಸಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು.,ಎಂದುಕಾರದಗಾ ಗ್ರಾಮದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿಕೆ ನೀಡುವ ಮೂಲಕ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮರಾಠಿ ಭಾಷಿಕರನ್ನು ಓಲೈಸುವದಕ್ಕಾಗಿ ಕನ್ನಡಿಗರ ಹಿತವನ್ನು ಕನ್ನಡಿಗರ ಸ್ವಾಭಿಮಾನವನ್ನು ಲಕ್ಷ್ಮೀ ಹೆಬ್ಬಾಳಕರ್ ಕೆಣಕಿದ್ದಾರೆ. …

Read More »