Breaking News

LOCAL NEWS

ಲವ್ ಕ್ರಾಸೀಂಗ್..ಬುದ್ದಿಮಾತು ಹೇಳಿದ ಪಂಚರಿಗೆ ಡ್ಯಾಶೀಂಗ್……!!!

ಬೆಳಗಾವಿ – ಬೆಳಗಾವಿ ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ನಿನ್ನೆ ರಾತ್ರಿ ಲವ್ ಪ್ರಕರಣಕ್ಕೆ ಸಂಭದಿಸಿದಂತೆ ಗಲಾಟೆ ನಡೆದಿದೆ. ಲವ್ ವಿಚಾರಲ್ಲಿ ಬುದ್ದಿಮಾತು ಹೇಳಿದ ಪಂಚರನ್ನೇ ಟಾರ್ಗೆಟ್ ಮಾಡಿ ಅವರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂ ಗೊಳಿಸಿದ ಘಟನೆ ನಡೆದಿದೆ. ಸುಮಾರು ಮೂವತ್ತಕ್ಕೂ ಹೆಚ್ಚು ಜನ ಯುವಕರು ಮುಸುಕು ಹಾಕಿ ತಲ್ವಾರ್ ತ್ತು ರಾಡ್ ಹಿಡಿದುಕೊಂಡು ನಾವಗೆ ಗ್ರಾಮದ ಪಂಚರ ಮನೆಗಳ ಮೇಲೆ ಅಟ್ಯಾಕ್ ಮಾಡಿದ್ದಾರೆ. ಸ್ಥಳಕ್ಕೆ …

Read More »

ಬೆಳಗಾವಿಯಲ್ಲಿ ಶುರುವಾಗಿದೆ, ಓಲ್ಡ್ ಮ್ಯಾನ್ ಮಾರ್ಕೆಟ್….!!

ಬೆಳಗಾವಿ- ಬೆಳಗಾವಿಯ ಕುಂದಾ,ಕರದಂಟು,ಫೇಮಸ್ ಇದೆ.ಇತ್ತೀಚಿನ ದಿನಗಳಲ್ಲಿ ಬೆಳಗಾವಿಯಲ್ಲಿ ಸಿದ್ಧಪಡಿಸಲಾಗುತ್ತಿರುವ ಓಲ್ಡ್ ಮ್ಯಾನ್ ಕೂಡಾ ಫೇಮಸ್ ಆಗುತ್ತಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಓಲ್ಡ್ ಮ್ಯಾನ್ ಮಾರ್ಕೆಟ್ ಶುರುವಾಗಿದೆ. ವರ್ಷದ ಕೊನೆಯ ದಿನ ರಾತ್ರಿ ಹನ್ನೆರಡು ಗಂಟೆಗೆ ಮುಗಿದು ಹೋದ ವರ್ಷದ ಓಲ್ಡ್ ಮ್ಯಾನ್ ದಹನ ಮಾಡಿ ಹೊಸ ವರ್ಷವನ್ನು ಸ್ವಾಗತಿಸುವದು ಸಂಪ್ರದಾಯವೋ ಅಥವಾ ಪಕ್ಕದ ಗೋವಾ ರಾಜ್ಯದಿಂದ ನುಸುಳಿದ ಸಂಸ್ಕೃತಿಯೋ ಗೊತ್ತಿಲ್ಲ.ಆದ್ರೆ ಬೆಳಗಾವಿಯಲ್ಲಿ ಈ ಪದ್ದತಿಯನ್ನು ಅನುಸರಿಸುತ್ತಾರೆ. ಮಕ್ಕಳು ಯುವಕರು ಮದ್ಯರಾತ್ರಿ …

Read More »

ಕಾಡಿನಲ್ಲಿ ವಿದ್ಯಾರ್ಥಿಗಳಿಂದ ಎಡವಟ್ಟು, ನಿನ್ನೆ ರಾತ್ರಿ ಕಣ್ಮರೆ, ಬೆಳಗ್ಗೆ ಪ್ರತ್ಯಕ್ಷ….!!!

ಬೆಳಗಾವಿ-ಚಾರಣಕ್ಕೆ ಹೋಗಿ ಕಾಡಿನಲ್ಲಿ ಕಣ್ಮರೆಯಾಗಿದ್ದ ಬೆಳಗಾವಿಯ ಜಿಎಸ್ಎಸ್ ಕಾಲೇಜಿನ ಒಂಬತ್ತು ಜನ ವಿದ್ಯಾರ್ಥಿಗಳನ್ನು ಅರಣ್ಯ ಇಲಾಖೆಯ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಬೆಳಗಾವಿಯ ಜಿಎಸ್‌ಎಸ್ ಕಾಲೇಜಿನ 9 ವಿದ್ಯಾರ್ಥಿಗಳು ಚಾರಣಕ್ಕೆ ಹೋಗಿ ಶುಕ್ರವಾರ ರಾತ್ರಿ ಕಣ್ಮರೆಯಾಗಿದ್ದರು ಕಾಡಿ ನಲ್ಲಿ ಹಾದಿ ತಪ್ಪಿಸಿಕೊಂಡು ಕಾಡಿನಲ್ಲೇ ಸಿಲುಕಿದ್ದ ಒಂಬತ್ತು ಜನ ವಿಧ್ಯಾರ್ಥಿಗಳು ಶನಿವಾರ ಬೆಳಗ್ಗೆ ಸುರಕ್ಷಿತವಾಗಿ ಪ್ರತ್ಯಕ್ಷರಾಗಿದ್ದಾರೆ. ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಜಾವಾಣಿ ಫಾಲ್ಸ್ ನೋಡಲು ವಿದ್ಯಾರ್ಥಿಗಳು ಹೋಗಿದ್ದರು.ಕಣಕುಂಬಿ ಅರಣ್ಯ ಪ್ರದೇಶದ ಮೂಲಕ ಜಾವಾಣಿ ಫಾಲ್ಸ್ …

Read More »

ಫಲಕದಲ್ಲಿ ಕನ್ನಡದ ತಿಲಕ…ಕರವೇ ಹೋರಾಟಕ್ಕೆ ಕಡ್ಡಾಯದ ಸ್ಪಂದನೆ. ಸಿಎಂ ಗೆ ವಂದನೆ…!!

ನಾಮ ಫಲಕ ಜಾಹಿರಾತು ಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕರವೇ ನಡೆಸಿದ ಹೋರಾಟಕ್ಕೆ ಸರ್ಕಾರ ಸ್ಪಂದಿಸಿದೆ. ಈ ವಿಚಾರದಲ್ಲಿ ಕನ್ನಡದ ಅನುಷ್ಠಾನಕ್ಕೆ ಸಿಎಂ ಸಿದ್ರಾಮಯ್ಯ ಗಡುವು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ರಾಮಯ್ಯ ಕನ್ನಡಿಗರ ಮೆಚ್ವುಗೆಗೆ ಪಾತ್ರರಾಗಿದ್ದಾರೆ. ಸಿದ್ರಾಮಯ್ಯ ಕನ್ನಡದ ಸಿಎಂ ಎನಿಸಿಕೊಂಡಿದ್ದಾರೆ. ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 …

Read More »

ಯುವನಿಧಿ” ಫಲಾನುಭವಿಗಳ ನೋಂದಣಿ ಡಿ.26 ರಿಂದ ಆರಂಭ..

ಬೆಳಗಾವಿ, -ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಿರ್ದೇಶನ ನೀಡಿದರು. ಯುವನಿಧಿ ಅನುಷ್ಠಾನ ಹಿನ್ನೆಲೆಯಲ್ಲಿ ಕೌಶಲ್ಯಾಭಿವೃದ್ದಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದರು. ಬೆಳಗಾವಿ …

Read More »

ಬೆಳಗಾವಿ “ಕೈ” ಟೆಕೆಟ್ ಗಾಗಿ ಪ್ರಬಲ ಪೈಪೋಟಿ…!!

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು,ಕಾಂಗ್ರೆಸ್ ಟಿಕೆಟ್ ಗಾಗಿ ಹನ್ನೊಂದು ಜನ ಆಕಾಂಕ್ಷಿಗಳು ಅರ್ಜಿ ಹಾಕಿದ್ದಾರೆ.ಹತ್ತು ಜನ ಆಕಾಂಕ್ಷಿಗಳು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಅವರಿಗೆ ಅರ್ಜಿ ಸಲ್ಲಿಸಿದ್ದು ಲಕ್ಷ್ಮೀ ಪುತ್ರ ಮೃನಾಲ ಹೆಬ್ಬಾಳಕರ್ ಅವರಿಗೆ ಟೆಕೆಟ್ ನೀಡುವಂತೆ ಅವರ ಬೆಂಬಲಿಗರು ಸಚಿವ ತಂಗಡಿಗೆ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸಹಿತ …

Read More »

ಕೋವೀಡ್ ಸಿಎಂ ಸಿದ್ರಾಮಯ್ಯ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಇಂದು ಕೋವಿಡ್ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗಿದೆ. ಕ್ರಿಸ್ಮಸ್ …

Read More »

ಬಸ್ಸಿಗೆ ಕಲ್ಲು ಪ್ರಯಾಣಿಕನಿಗೆ ಗಾಯ ಸ್ಥಳಕ್ಕೆ SP ದೌಡು…

ಬೆಳಗಾವಿ : ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದ ಹಿನ್ನೆಲೆಯಲ್ಲಿ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೆನಕನಹೊಳಿ ಬಳಿ ಗುರುವಾರ ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಹುಕ್ಕೇರಿ ಅಗ್ನಿಶಾಮಕದಳದ ವಾಹನ ಚಾಲಕ ರಮೇಶ ಚಿವಟೆ (55) ಇವರಿಗೆ ತಲೆಗೆ ಗಾಯವಾಗಿದ್ದು, ಅವರು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹುಕ್ಕೇರಿ ಯಿಂದ ಬೆಳಗಾವಿಗೆ ಹೊರಟಿದ್ದ ಸಾರಿಗೆ ಬಸ್ ಸಂಖ್ಯೆ KA 22 …

Read More »

ರೂಪಾಂತರಿ ಕೋವೀಡ್, ಬೆಳಗಾವಿ ಡಿಸಿ ಖಡಕ್ ವಾರ್ನಿಂಗ್….

ಕೋವಿಡ್ -19 ರೂಪಾಂತರಿ ವೈರಸ್ ಜೆಎನ್-1 ಹೆಚ್ಚಳ ಸಂಭವ: ಮುನ್ನೆಚ್ಚರಿಕಾ ಕ್ರಮ ವಹಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, : ಜೆಎನ್1 ರೂಪಾಂತರಿ (Coronavirus JN1) ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೆಡ್ ಹಾಗೂ ಆಕ್ಸಿಜನ್, ಐಸಿಯು ಬೆಡ್ ಗಳ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಡಿ.21) ನಡೆದ …

Read More »

ಬೆಳಗಾವಿಯಲ್ಲಿ ಕೋವೀಡ್ ಮುಂಜಾಗ್ರತೆಗಾಗಿ ಮೀಟೀಂಗ್…!!

    ಬೆಳಗಾವಿಯಲ್ಲಿ ಕೋವೀಡ್ ಎರಡನೇಯ ಪರ್ವದ, ಮೊದಲ ಮೀಟೀಂಗ್ …!! ಬೆಳಗಾವಿ- ಕೋವೀಡ್ ಮಹಾಮಾರಿ ಹೋಯ್ತಲ್ಲ ಎಂತು ನಿಟ್ಟುಸಿರು ಬಿಟ್ಟ ಜನರಿಗೆ ಮಹಾಮಾರಿಯ ಆತಂಕ ಮತ್ತೆ ಶುರುವಾಗಿದೆ.ಅತ್ತ ರಾಜಧಾನಿಯಲ್ಲಿ ಮುಖ್ಯಮಂತ್ರಿ ಸುದ್ರಾಮಯ್ಯ ಅಧಿಕಾರಿಗಳ ಸಭೆ ಕರೆದು ಕೋವೀಡ್ ಕುರಿತು ಮುಂಜಾಗ್ರತೆ ವಹಿಸುವಂತೆ ಸೂಚನೆ ಕೊಡುತ್ತಿದ್ದಂತೆಯೇ ಇತ್ತ ಬೆಳಗಾವಿಯಲ್ಲೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭೀಮ್ಸ್ ಆಸ್ಪತ್ರೆಯ ಕಚೇರಿಯಲ್ಲಿ ಕೋವೀಡ್ ಮುಂಜಾಗ್ರತಾ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಶಾಸಕ ರಾಜು ಸೇಠ, …

Read More »

ಕಳ್ಳರ ಹಾವಳಿಗೆ ಬೆಚ್ಚಿದ ಕುಂದಾನಗರಿ ಬೆಳಗಾವಿ!

ಬೆಳಗಾವಿ-ಕಳ್ಳರ ಹಾವಳಿಗೆ ಕುಂದಾನಗರಿ ಬೆಳಗಾವಿ ಬೆಚ್ಚಿದೆ.ನಿರಂತರ ಸರಣಿ ಕಳ್ಳತನ ಪ್ರಕರಣಕ್ಕೆ ಹೈರಾಣಾದ ಬೆಳಗಾವಿ ಜನತೆ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ಕಳ್ಳರ ಹಾವಳಿಯಿಂದ ರಕ್ಷಿಸಿಕೊಳ್ಳಲು ಕೈಯಲ್ಲಿ ಕೋಲು,ದೊಣ್ಣೆ ಹಿಡಿದು ಬೆಳಗಾವಿಯ ಜನ ಅಹೋರಾತ್ರಿ ಗಸ್ತು ಶುರು ಮಾಡಿದ್ದಾರೆ.ಸ್ವಯಂ ರಕ್ಷಣೆಗಾಗಿ ದೊಣ್ಣೆ,ಕುಡಗೋಲು, ಕಬ್ಬಿನದ ಸಲಾಕೆ ಹಿಡಿದುಕೊಂಡು ಕಾಲೋನಿಯಲ್ಲಿ ಕಾವಲು ಕಾಯ್ತಿದ್ದಾರೆ.ನಿರಂತರ ಕಳ್ಳತನ ಪ್ರಕರಣಕ್ಕೆ ಬೇಸತ್ತ ಸಾರ್ವಜನಿಕರು ಕೈಯಲ್ಲಿ ಕೋಲು ಹಿಡಿದಿದ್ದಾರೆ. ಕಳೆದ ಮೂರು ದಿನಗಳಲ್ಲಿ 14ಕಳ್ಳತನ ಪ್ರಕರಣ ಬೆಳಕಿಗೆ ಬಂದಿವೆ‌.ಬೆಳಗಾವಿಯ ಪಾರಿಜಾತ ನಗರ, …

Read More »

ಮಹಿಳೆಯ ವಿವಸ್ತ್ರ ಪ್ರಕರಣ, ಆರೋಪಿಗಳು CID ಕಸ್ಟಡಿಗೆ…

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ ನಡೆದಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೂವರು ಆರೋಪಿಗಳಿಗೆ ಪೊಲೀಸ್ ಕಸ್ಟಡಿ ನೀಡಿದ ನ್ಯಾಯಾಲಯ,ಬೆಳಗಾವಿ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ಮೂರು ದಿನಗಳ ಕಾಲ ಆರೋಪಿಗಳು ಸಿಐಡಿ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮಾಡಲಾಗುತ್ತಿದೆ. ಪ್ರಕರಣದ‌ ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ,ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಸಿಐಡಿ ಕಸ್ಟಡಿಯಲ್ಲಿದ್ದು,ಬೆಳಗಾವಿಯ ಅಜ್ಞಾತ ಸ್ಥಳದಲ್ಲಿ …

Read More »

ಟ್ರ್ಯಾಕ್ಟರ್ ಚಾಲಕನ ಹುಚ್ಚಾಟಕ್ಕೆ 14 ತಿಂಗಳ ಮಗು ಬಲಿ….

ಬೆಳಗಾವಿ-ಟ್ರ್ಯಾಕ್ಟರ್ ಚಾಲಕನ ಹುಚ್ಚಾಟಕ್ಕೆ 14 ತಿಂಗಳ ಮಗು ಬಲಿಯಾದ ಘಟನೆ,ಬೆಳಗಾವಿ ಜಿಲ್ಲೆಯ ಖಾನಾಪುರ ‌ತಾಲೂಕಿನ ತೊಲಗಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ಆಟ ಆಡುತ್ತಿದ್ದ ವಿಕ್ರಂ ಚಂದ್ರಶೇಖರ ನಾಯ್ಕರ್ (14) ಟ್ರ್ಯಾಕ್ಟರ ಹರಿದು ಸಾವನ್ನೊಪ್ಪಿದ್ದಾನೆ.ಸೌಂಡ್ ಹಚ್ಚಿಕೊಂಡು ವೇಗವಾಗಿ ಟ್ರ್ಯಾಕ್ಟರ್ ಚಲಾವಣೆ ಮಾಡುವಾಗ,ಮನೆ ಮುಂದೆ ಆಟ ಆಡುತ್ತಿದ್ದ ಮಗು ಮೇಲೆ ಟ್ರ್ಯಾಕ್ಟರ್ ಹಾಯ್ದು ಮಗು ಚಾಲಕನ ಹುಚ್ಚಾಟಕ್ಕೆ ಬಲಿಯಾಗಿದೆ. ಚಾಲಕ ಯುವರಾಜ ರಂಗನ್ನವರ ಹುಚ್ಚಾಟಕ್ಕೆ ಉಸಿರು ಚೆಲ್ಲಿದ 14 ತಿಂಗಳ ಪುಟ್ಟ …

Read More »

ಬೆಳಗಾವಿಯಲ್ಲಿ ಶುರುವಾಯ್ತು ಮತ್ತೊಂದು ಸ್ವೀಮ್ಮೀಂಗ್ ಪೂಲ್….!!

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ರಾಜು ಸೇಠ ಅವರ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತೆ ಚಾಲನೆ ಸಿಕ್ಕಿದೆ. ಬೆಳಗಾವಿಯ ಅಶೋಕ ನಗರದಲ್ಲಿ ಸ್ಪೋರ್ಟ್ ಕಾಂಪ್ಲೆಕ್ಸ್ ನಿರ್ಮಿಸಲಾಗಿತ್ತು ಇದನ್ನು ನಿರ್ವಹಣೆ ಮಾಡುವ ಗುತ್ತಿಗೆ ಪಡೆಯಲು ಯಾರೂ ಮುಂದೆ ಬಂದಿರಲಿಲ್ಲ ಹೀಗಾಗಿ ಇಲ್ಲಿಯ ಈಜು ಕೋಳ ಬ್ಯಾಡ್ಮಿಂಟನ್ ಹಾಲ್ ಸೇರಿದಂತೆ ಜಿಮ್ ಕೂಡಾ ಬಂದ್ ಆಗಿದ್ದವು.ಶಾಸಕ ರಾಜು ಸೇಠ ಅವರು ಎಲ್ಲ …

Read More »

ಪ್ರಸಿದ್ದ ವೈದ್ಯ, ಡಾ.ವೆಂಕಟರಮಣ ಹೆಗಡೆ ಬೆಳಗಾವಿಗೆ

ಬೆಳಗಾವಿ-ಶಿರಸಿ ಮೂಲದ ಪ್ರಸಿದ್ದ ವೇದ ವೆಲ್ನೆಸ್ ಸೆಂಟರ್,ನಿಸರ್ಗ ಮನೆಯ ಮುಖ್ಯಸ್ಥರಾದ ಡಾ.ವೆಂಕಟರಮಣ ಹೆಗಡೆ ಅವರು ಇದೇ ಶನಿವಾರ ಮತ್ತು ಭಾನುವಾರ ಬೆಳಗಾವಿಯಲ್ಲಿ ಲಭ್ಯವಿರುತ್ತಾರೆ. ಆಹಾರ,ಆರೋಗ್ಯ,ಮನೆಯಲ್ಲೇ ಪರಿಹಾರ,ಪವರ್ ಡಯಟ್,ಸೇರಿದಂತೆ ಆರೋಗ್ಯದ ಕುರಿತು ಅನೇಕ ಪುಸ್ತಕಗಳನ್ನು ಬರೆದು,ಅನೇಕ ಪತ್ರಿಕೆಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಅಂಕಣಗಳನ್ನು ಬರೆದು ರಾಷ್ಟ್ರಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವ ಶಿರಸಿಯ ಡಾ.ವೆಂಕಟರಮಣ ಹೆಗಡೆ ಅವರು ಡಿಸೆಂಬರ್ 23 ಶನಿವಾರ ಹಾಗೂ ಡಿಸೆಂಬರ್ 24 ಭಾನುವಾರ. ಎರಡು ದಿನ ಬೆಳಗಾವಿಯ ಸಂಕಮ್ ಹೊಟೇಲ್ ನಲ್ಲಿ …

Read More »