LOCAL NEWS

ಕಾಕತಿ ಬಳಿ ಭೀಕರ ಅಪಘಾತ ಇಬ್ಬರ ದುರ್ಮರಣ…

ಬೆಳಗಾವಿ- ಬೆಳಗಾವಿಯ ಕಾಕತಿ ಬಳಿಯ ವಂಟಮೂರಿ ಘಾಟ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ‌. ಲಾರಿಯೊಂದು ಡಿವೈಡರ್ ಜಂಪ್ ಮಾಡಿ ರಸ್ತೆಯ ಇನ್ನೊಂದು ಬದಿಯಲ್ಲಿದ್ದ ಎರಡು ಲಾರಿಗಳಿಗೆ ಅಪ್ಪಳಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು ಈ ಅಪಘಾತದಲ್ಲಿ ಒಟ್ಟು ಮೂರು ಲಾರಿಗಳು ಚಿಂದಿಯಾಗಿವೆ. ಉತ್ತರ ಪ್ರದೇಶದ ನೀರಜ್,ಮಹಾರಾಷ್ಟ್ರ ಬೀಡ ಜಿಲ್ಲೆಯ ರಾಜೇಂದ್ರ ದೋಹಿಪಡೆ ಎಂಬಾತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ವಂಟಮೂರಿ ಘಾಟ್ ಇಳಿಜಾರಿನಿಂದ ಜೋರಾಗಿ ಬಂದ …

Read More »

ಕೇವಲ 1500 ರೂ ಹಣದ ವ್ಯೆವಹಾರ, ಧಾಬಾ ಮಾಲೀಕನ ಮರ್ಡರ್…

ಜಗಳ ಬಿಡಿಸಲು ಹೋದ ಧಾಭಾ ಮಾಲೀಕನ ಮೇಲೆ ಹಲ್ಲೆ,ಸಾವು… ಬೆಳಗಾವಿ-ಹಣದ ವ್ಯೆವಹಾರಕ್ಕೆ ಸಮಂಧಿಸಿದಂತೆ ಇಬ್ಬರ ನಡುವೆ ನಡೆದ ಜಗಳ ಬಿಡಿಸಲು ಹೋದ ದಾಭಾ ಮಾಲೀಕನ ಮೇಲೆ ಹಲ್ಲೆ ನಡೆದಿದ್ದು ಆಸ್ಪತ್ರೆಗೆ ಸಾಗಿಸುವ‌ ದಾರಿ ಮಧ್ಯ ಧಾಬಾ ಮಾಲೀಕ ಸಾವನ್ನೊಪ್ಪಿದ ಘಟನೆ ಕಿತ್ತೂರು ತಾಲ್ಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಎಂ ಕೆ ಹುಬ್ಬಳ್ಳಿ ಗ್ರಾಮದ ಪಂಚವಟಿ ಧಾಭಾ ಮಾಲೀಕ,ಪ್ರಕಾಶ ನಾಗನೂರು(38) ಮೃತಪಟ್ಟಿದ್ದು ನಿನ್ನೆ ಸಂಜೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. …

Read More »

ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

ಬೆಳಗಾವಿ- ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಯೋಧನೊಬ್ಬ ವೀರಮರಣ ಹೊಂದಿದ ಘಟನೆ ನಡೆದಿದೆ. ಗೋಕಾಕ ತಾಲ್ಲೂಕಿನ ಶಿವಾಪುರ ,ಕೊಣ್ಣೂರ ಗ್ರಾಮದ *ಮಂಜುನಾಥ ಅಪ್ಪಣ್ಣ ಗೌಡಣ್ಣವರ (38) ಎಂಬುವರು ನಾಗಾಲ್ಯಾಂಡ ಗಡಿಯಲ್ಲಿ ಗಸ್ತು ತಿರುಗುವಾಗ ಅವರ ವಾಹನ ಅಪಘಾತಕ್ಕೀಡಾಗಿ ಮಂಜುನಾಥ ವೀರಮರಣ ಹೊಂದಿದ್ದಾರೆ. 18 ವರ್ಷಗಳಿಂದ ಮದ್ರಾಸ ಎಂಜಿನಿಯರಿಂಗ್ ಗ್ರೂಪದಲ್ಲಿ ನೇಮಕಗೊಂಡು ನಾಗಲ್ಯಾಂಡ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇವರು ಚಾಲಕನಿದ್ದು ತಮ್ಮ ಕರ್ತವ್ಯಕ್ಕೆ ಹೋಗುವಾಗ ಅರಣ್ಯದಲ್ಲಿ ರಸ್ತೆ ಅಪಘಾತದಲ್ಲಿ …

Read More »

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮುಸುಕಿನ ಗುದ್ದಾಟ….!!!!

ಬೆಳಗಾವಿ-ಭೌಗೋಳಿಕವಾಗಿ ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆಯಾಗಿರುವ,ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಜಿಲ್ಲಾದ್ಯಕ್ಷ ಸ್ಥಾನಕ್ಕೆ ಮುಸುಕಿನ ಗುದ್ದಾಟ ಶುರುವಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾಧ್ಯಕ್ಚರ ಬದಲಾವಣೆಯ ವಿಚಾರ ಚರ್ಚೆಯಲ್ಲಿದೆ ಎಂದು ಹೇಳಿಕೆ ನೀಡಿರುವ ಬೆನ್ನಲ್ಲಿಯೇ ಅದ್ಯಕ್ಷ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿರುವ ಮೂವರು ದಿಗ್ಗಜರಲ್ಲಿ ಅದ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ. ಯುವ ಕಾಂಗ್ರೆಸ್ ಘಟಕದಲ್ಲಿ ಹಲವಾರು ವರ್ಷಗಳ ಕಾಲ ಸಂಘಟನೆ ಮಾಡಿರುವ ಬಸವರಾಜ …

Read More »

ಮದುವೆ, ಸಮಾರಂಭಗಳ ಮೇಲೆ ಕ್ಯಾಮೆರಾ ನಿಗಾ:

ಕೋವಿಡ್-೧೯ ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಿಮಿನಲ್ ಪ್ರಕರಣ ಮದುವೆ, ಸಮಾರಂಭಗಳಿಗೆ ಆಯಾ ತಹಶೀಲ್ದಾರರಿಂದ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಬೆಳಗಾವಿ, -: ಕೋವಿಡ್ ನಿಯಂತ್ರಣಕ್ಕಾಗಿ ಸರಕಾರ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮದುವೆ ಮತ್ತಿತರ ನಿಗದಿತ  ಸಮಾರಂಭಗಳಿಗೆ ಮಾತ್ರ ಆಯಾ ತಾಲ್ಲೂಕುಗಳ ತಹಶೀಲ್ದಾರರು ಅನುಮತಿಯನ್ನು ನೀಡಲಿದ್ದಾರೆ. ಅನುಮತಿ ಪಡೆಯದೇ ಅಥವಾ ಅನುಮತಿ ಪಡೆದುಕೊಂಡು ನಿಯಮಾವಳಿ ಉಲ್ಲಂಘಿಸಿ ಸಮಾರಂಭ ನಡೆಸುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಎಚ್ಚರಿಕೆ …

Read More »

ಇವತ್ತು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ 301 ಸೊಂಕಿತರ ಪತ್ತೆ..

ಇವತ್ತಿನ ಬುಲಿಟೀನ್ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 301 ಸೊಂಕಿತರು ಪತ್ತೆಯಾಗಿದ್ದು ಖಾನಾಪೂರ ತಾಲ್ಲೂಕಿನಲ್ಲಿ 144 ಜನರಿಗೆ ಸೊಂಕು ತಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತು ಭೀತಿ ಹುಟ್ಟಿಸುವ ಶಾಕಿಂಗ್ ನ್ಯುಸ್ ಹೊರಬಿದ್ದಿದೆ.

Read More »

ನಿನ್ನ….. ನೋಡಿ ಸುಮ್ನೆಂಗ್ ಇರಲಿ…..!!!

ಬೆಳಗಾವಿ- ಧಾರವಾಡದಲ್ಲಿ ಸಾಹಿತಿಗಳು ಸಿಕ್ಕಂಗೆ,ಬೆಳಗಾವಿಯಲ್ಲಿ ಕಲಾಕಾರರು ಸಿಗ್ತಾರೆ,ಇಲ್ಲಿಯ ಜನ ಬಹಳ ಕ್ರಿಯಾಶೀಲ,ಅನ್ನೋದಕ್ಕೆ ಈ ಪೋಟೋ ನೋಡಿದ್ರೆ ಸಾಕು,ಬೆಳಗಾವಿ ಜನ ಎಷ್ಟು ಕ್ರಿಯೇಟಿವ್ ಅಂತಾ ಗೊತ್ತಾಗಿ ಬಿಡುತ್ತದೆ. ಬೆಳಗಾವಿಯಲ್ಲಿ ಎಲ್ಲರೂ ಮಾಸ್ಕ್ ಹಾಕಿಕೊಳ್ಳುತ್ತಾರೋ ಗೊತ್ತಿಲ್ಲ,ಆದ್ರೆ ಬೆಳಗಾವಿಯ ಜನ ಚನ್ನಮ್ಮ ವೃತ್ರದಲ್ಲಿರುವ ಚನ್ನಮ್ಮಾಜಿಯ ವೀರ ಸೈನಿಕರ ಪ್ರತಿಮೆಗಳಿಗೂ ಮಾಸ್ಕ ಹಾಕಿ,ಎಲ್ಲಾರೂ ಮಾಸ್ಕ್ ಹಾಕೊಳ್ರಿ ಎನ್ನುವ ಸಂದೇಶ ಸಾರಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಕೆ ಹೆಚ್ ಜಗದೀಶ್ ಅವರು ಚೆನ್ನಮ್ಮ ವೃತ್ತದಲ್ಲಿರುವ ಚನ್ನಮ್ಮಾಜಿಯ …

Read More »

ಮತ್ತೊಂದು ಬಾರಿ ಚುನಾವಣೆಗೆ ಸ್ಪರ್ದೆ ಮಾಡಿ ಟೀಕೆಗೆ ಗುರಿಯಾದ “ಮಂಗಲಾ”….!!!!

ಬೆಳಗಾವಿ-ಒಂದು ಬಾರಿ ಚುನಾವಣೆಗೆ ಸ್ಪರ್ದೆ ಮಾಡಿ,ಐದು ವರ್ಷಗಳ ಕಾಲ ಮಾಡ ನ ಸೇವೆ ಮಾಡಿ,ಅಧಿಕಾರ ಅನುಭವಿಸಿ,ಕನ್ಮಡ ಸಮ್ಮೇಳನಗಳನ್ನು ನಡೆಸಿ,ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಅವರನ್ನೇ ಜಿಲ್ಲಾ ಸಮ್ಮೇಳನದ ಅದ್ಯಕ್ಷರನ್ನಾಗಿ ಮಾಡಿ ಹೊಸ ಸಂಪ್ರದಾಯವನ್ನು ಶುರು ಮಾಡಿದ ಮಂಗಲಕ್ಕ ಮತ್ತೊಂದು ಬಾರಿ ಚುನಾವಣೆಗೆ ಸ್ಪರ್ದೆ ಮಾಡಿರುವ ಸಂಗತಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಬೆಳಗಾವಿ ಜಿಲ್ಲೆ ಅತೀ ದೊಡ್ಡ ಜಿಲ್ಲೆ ಈ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ …

Read More »

ಜಿಲ್ಲಾ ಮಂತ್ರಿ ಸ್ಥಾನ ಕೊಟ್ಟರೂ ಕೆಲಸ ಮಾಡ್ತಿನಿ. ಕೊಡದಿದ್ದರೂ ಮಾಡ್ತಿನಿ.

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಬೆಳಗಾವಿ ಡಿಸಿ ಕಚೇರಿಯಲ್ಲಿ ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ಸಭೆ ನಡೆಯಿತು. ಗಡಿಯಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ವಹಿಸಲು ಸಚಿವ ಉಮೇಶ್ ಕತ್ತಿ ಸೂಚನೆ ನೀಡಿದ್ರು.ನಿತ್ಯವೂ 15 ಸಾವಿರ ಜನರಿಗೆ ವಾಕ್ಸಿನ್ ನೀಡಬೇಕು,ಜತೆಗೆ ಜಿಲ್ಲೆಯಲ್ಲಿ ನಿತ್ಯ 5 ಸಾವಿರ ಜನರಿಗೆ ಕೋವಿಡ್ ಟೆಸ್ಟ್ ಮಾಡಬೇಕು, ಮಾಸ್ಕ್ ‌ಹಾಗೂ ಸಾಮಾಜಿಕ ಅಂತರ ಕಾಪಾಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ತಾಲೂಕು …

Read More »

ಬೆಳಗಾವಿ ಜಿಲ್ಲೆಯ ಒಂದೇ ಹಳ್ಳಿಯಲ್ಲಿ 144 ಕೋವೀಡ್ ಕ್ರಮಾಂಕ…!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮತ್ತೆ ಮುಂದುವರೆದಿದೆ ಜಿಲ್ಲೆಯಪುಟ್ಟ ಹಳ್ಳಿಯೊಂದರಲ್ಲೇ ಮಹಾಮಾರಿ ಕೊರೊನಾ ಮಹಾಸ್ಪೋಟ ಆಗಿದೆ. ಒಂದೇ ಗ್ರಾಮದ 144 ಜನರಿಗೆ ಡೆಡ್ಲೀ ಕೊರೋನಾ ವೈರಸ್ ಒಕ್ಕರಿಸಿದೆ.ಅಬನಾಳಿ ಗ್ರಾಮದ 144 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು ಕೊರೋನಾ ವ್ಯಾಪಕವಾಗಿ ಹರಡುತ್ತಿದೆ. ಬೆಳಗಾವಿ ಜಿಲ್ಲೆ ‌ಖಾನಾಪುರ ತಾಲೂಕಿನ ‌ಅಬನಾಳಿ ಗ್ರಾಮವೊಂದರಲ್ಲೇ 144 ಜನರಿಗೆ ಸೊಂಕು ತಗಲಿದ್ದು ಆತಂಕಕಾರಿ ಸಂಗತಿಯಾಗಿದೆ. ಗ್ರಾಮದ ಅಶೋಕ ನಗರ ಪ್ರಾಥಮಿಕ ‌ಆರೋಗ್ಯ ಕೇಂದ್ರದಲ್ಲಿ ರ‌್ಯಾಂಡಮ್ …

Read More »

ಕೋವೀಡ್ ನಿಯಂತ್ರಿಸಲು ಬೆಳಗಾವಿ ಡಿಸಿ ರೌಂಡ್ಸ್….

ಬೆಳಗಾವಿ, : ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯ ಪ್ರತಿ ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಕೋವಿಡ್-೧೯ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ. ಕೋವಿಡ್-೧೯ ಮಾರ್ಗಸೂಚಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೈಲಹೊಂಗಲ, ಕಿತ್ತೂರು ಹಾಗೂ ಖಾನಾಪುರ ತಾಲ್ಲೂಕುಗಳಿಗೆ ಮಂಗಳವಾರ ಭೇಟಿ ನೀಡಿ ಅಧಿಕಾರಿಗಳ ಜತೆ ಅವರು ಸಭೆ ನಡೆಸಿದರು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ …

Read More »

ಕೊರಾನಾ ಕುರಿತು ಸಾಹುಕಾರ್ ಸ್ಪೇಶಲ್ ಕೇರ್…!!!!

ಯಮಕನಮರಡಿ : ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ಭೇಟಿ ನೀಡಿ, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಪರಿಶೀಲಿಸಿದರು. ರಾಜ್ಯ ಹಾಗೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಪ್ರತಿ ದಿನ ಹೆಚ್ಚಳವಾಗುತ್ತಿದೆ. ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದ ಹಲವು ಕಡೆಗಳಲ್ಲಿ …

Read More »

ಯಾರಿಗೆ ಲಾಭ…ಯಾರಿಗೆ ನಷ್ಟ ಅಂತಾ ಹೇಳೋದು ಕಷ್ಟ….!!!!

ಬೆಳಗಾವಿ- ಬೆಳಗಾವಿ ಬೈ ಇಲೆಕ್ಷನ್ ಮತದಾನ ಮಗಿದಿದೆ.ಈಗ ಗೆಲುವಿನ ಲೆಕ್ಕಾಚಾರ ಶುರುವಾಗಿದೆ.ಎಲ್ಲಿ ಯಾರಿಗೆ ಲೀಡ್ ಶಿಕ್ಕಿದೆ,ಯಾವ ಸಮುದಾಯ ಯಾರ ಕೈ ಹಿಡಿದಿದೆ,ಯಾರು,ಯಾರಿಗೆ ಕೈ ಕೊಟ್ಟಿದ್ದಾರೆ,ಯಾರಿಂದ ಯಾರಿಗೆ ಲಾಭ ? ಯಾರಿಗೆ ನಷ್ಟ ಎನ್ನುವ ಗಂಭೀರ ಚರ್ಚೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಈಗ ಸಾಮಾನ್ಯವಾಗಿದೆ. ಗೆಲುವಿನ ಕುರಿತು ಕಾಂಗ್ರೆಸ್ಸಿನ ಬೆಂಬಲಿಗರು,ಹಿತೈಶಿಗಳು,ಮತ್ತು ಕಾರ್ಯಕರ್ತರ ಒಂದು ಸರಳ ಲೆಕ್ಕಾಚಾರ,ಅದೇನಂದ್ರೆ  ಎಂಈಎಸ್ ನ ಶುಭಂ ಶಿಳಕೆ ಒಂದು ಲಕ್ಷ ಕ್ಕೂ ಹೆಚ್ವು ಮತಗಳನ್ನು ಪಡೆಯುತ್ತಾನೆ.ಬಿಜೆಪಿ ಮತಗಳು …

Read More »

45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದುಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮನವಿ

ಬೆಳಗಾವಿ, ಏ.18(ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ನಗರದ ವಂಟಮುರಿ ಕಾಲನಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ (ಏ.18) ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡರು. ಇದಕ್ಕೂ ಎಂಟು ವಾರಗಳ ಮುಂಚೆ  ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಅನ್ನು‌‌ ಅವರು ಪಡೆದುಕೊಂಡಿದ್ದರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು, ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ; ಆದ್ದರಿಂದ ಸರ್ಕಾರದ ಮಾರ್ಗಸೂಚಿ ಪ್ರಕಾರ …

Read More »

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 54.02 ರಷ್ಟು ಮತದಾನ

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಒಟ್ಟು 54.02 ರಷ್ಟು ಮತದಾನವಾಗಿದ್ದು,ಗೋಕಾಕಿನಲ್ಲಿ ಅತೀ ಹೆಚ್ಚು 60.47 ರಷ್ಡು ಮತದಾನವಾಗಿದೆ. ಬೆಳಿಗ್ಗೆಯಿಂದ ಸಂಜೆ 5 ಗಂಟೆಯವರೆಗೆ ನಿಧಾನಗತಿಯಲ್ಲಿ ಮತದಾನವಾಗಿತ್ತು ಸಂಜೆ 5 ರ ನಂತರ ಬಿರುಸಿನ ಮತದಾನವಾಗಿದೆ. ಬೆಳಗಾವಿ ಲೋಕದಭಾ ಮತಕ್ಷೇತ್ರದಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಬರುತ್ತವೆ ಈ ಎಂಟು ವಿಧಾನಸಭಾ ಮತಕ್ಷೇತ್ರದಲ್ಲಿ ಮತದಾನ ಎಷ್ಟಾಗಿದೆ ವಿವರ ಇಲ್ಲಿದೆ ನೋಡಿ ಬೆಳಗಾವಿ ಗ್ರಾಮೀಣ-58.36% ಬೆಳಗಾವಿ ಉತ್ತರ-42/88% ಬೆಳಗಾವಿ ದಕ್ಷಿಣ-44.84 ಬೈಲಹೊಂಗಲ 58 …

Read More »