LOCAL NEWS

ಬಿಜೆಪಿ ಅಭ್ಯರ್ಥಿ ಇವತ್ತೇ ಫೈನಲ್….!!!

ಬೆಳಗಾವಿ-ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರಾಗ್ತಾರೆ ಎನ್ನುವ ವಿಷಯ ಅತ್ಯಂತ ಕುತೂಹಲ ಕೆರಳಿಸಿದ್ದು ಇವತ್ತೇ ಬಿಜೆಪಿ ಅಭ್ಯರ್ಥಿ ಘೋಷಣೆಯಾಗುವ ಎಲ್ಲ ಸಾಧ್ಯತೆಗಳಿವೆ. ಬಿಜೆಪಿ ಅಭ್ಯರ್ಥಿ ಯಾರಾಗಬಹುದು,? ಬಿಜೆಪಿ ಟಿಕೆಟ್ ಯಾರಿಗೆ ಸಿಗಬಹುದು,ಎನ್ನುವದರ ಬಗ್ಗೆ ಈಗಾಗಲೆ ಅನೇಕ ಆಯಾಮಗಳಲ್ಲಿ ಚರ್ಚೆ,ವಿಶ್ಲೇಷಣೆಗಳು ನಡೆದು ಈ ವಿಚಾರದಲ್ಲಿ ಹಲವಾರು ಜನ ಆಕಾಂಕ್ಷಿಗಳ ಹೆಸರುಗಳು ಪ್ರಸ್ತಾಪ ಆಗಿವೆ.ಈ ಅಭ್ಯರ್ಥಿಯನ್ನು ಘೋಷಣೆ ಮಾಡುವ ಕುರಿತು ಕ್ಷಣಗಣನೆ ಶುರುವಾಗಿದ್ದು ಅಂತಿಮ ಕ್ಷಣಗಳಲ್ಲಿ ಯಾರು ಲಾಟರಿ ಹೊಡೆಯುತ್ತಾರೆ ಅನ್ನೋದನ್ನು …

Read More »

ದೆಹಲಿಗೆ ಹೋಗಿಲ್ಲ,ಬೆಂಗಳೂರಿಗೆ ಹೋಗಿದ್ದೆ- ಶ್ರದ್ಧಾ ಅಂಗಡಿ

ಬೆಳಗಾವಿ-ಸುಮಾರು ಎರಡು ವಾರಗಳ ಕಾಲ ಬೆಂಗಳೂರಲ್ಲೇ ಇದ್ದುಕೊಂಡು ಬಿಜೆಪಿ ಟಿಕೆಟ್ ಗಾಗಿ ನಿರಂತರ ಪ್ರಯತ್ನ ನಡೆಸಿದ ಸುರೇಶ ಅಂಗಡಿ ಅವರ ಪುತ್ರಿ ಶ್ರದ್ದಾ ಅಂಗಡಿ ಇವತ್ತು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಿ,ಬೆಳಗಾವಿಗೆ ಮರಳಿದ್ದಾರೆ. ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಶ್ರದ್ಧಾ ಅಂಗಡಿ, ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ. ಹೈಕಮಾಂಡ್ ಟಿಕೆಟ್ ನೀಡಿದ್ರೇ ಸ್ಪರ್ಧೆ ಮಾಡುತ್ತೇವೆ. ಟಿಕೆಟ್ ವಿಚಾರದ ಕುರಿತು ವರಿಷ್ಠರ ಭೇಟಿಗೆ ಹೋಗಿದ್ದೆ ಎಂದು …

Read More »

ಅಭ್ಯರ್ಥಿ ಯಾರು ಅನ್ನೋದು ಇನ್ನೂ ಡೌಟು..ಶುರು ಆಗಿಲ್ಲ ಬೈ ಇಲೆಕ್ಷನ್ ಫೈಟು…!!

ಬೆಳಗಾವಿ-ಏಪ್ರಿಲ್ 17ಕ್ಕೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ಎರಡು ದಿನ ಕಳೆದರೂ,ಎರಡೂ ರಾಜಕೀಯ ಪಕ್ಷಗಳು ಇನ್ನುವರೆಗೆ ಅಭ್ಯರ್ಥಿಗಳ ಘೋಷಣೆ ಮಾಡದೇ ಇರುವದರಿಂದ ಉಪ ಕದನ ಇನ್ನುವರೆಗೆ ರಂಗೇರಿಲ್ಲ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಗೊಂದಲವೇ ಗೊಂದಲ ಅಭ್ಯರ್ಥಿಗಳ. ಘೋಷಣೆ ವಿಳಂಬವಾಗುತ್ತಿದೆ ಹೀಗಾಗಿ,ಉಪಚುನಾವಣೆ ಕಾವು ಇಲ್ಲ,ರಾಷ್ಟ್ರೀಯ ಪಕ್ಷಗಳಿಗೆ  ಅಭ್ಯರ್ಥಿ ಆಯ್ಕೆ ಸವಾಲ್ ಆಗಿದೆ.ಮೊ ದಲು ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡ್ಲಿ ಅಂತ ಬಿಜೆಪಿ.ಬಿಜೆಪಿ ಅಭ್ಯರ್ಥಿ …

Read More »

ಬೆಳಗಾವಿ ಬೈ ಇಲೆಕ್ಷನ್ ಬಿಜೆಪಿಯಿಂದ ಅಖಾಡಾಕ್ಕಿಳಿದ, ಸ್ವಾಮೀಜಿ…

ಬೆಳಗಾವಿ,- ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಮಂಗಳವಾರ (ಮಾ.23) ಇಬ್ಬರು ಅಭ್ಯರ್ಥಿಗಳು ಒಟ್ಟು ನಾಲ್ಕು ನಾಮಪತ್ರಗಳನ್ನು ಸಲ್ಲಿಸಿದ್ದಾರೆ‌. ವೆಂಕಟೇಶ್ವರ ಮಹಾಸ್ವಾಮೀಜಿ ಅವರು ಒಟ್ಟು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದು, ಅದರಲ್ಲಿ ಎರಡು ಭಾರತೀಯ ಜನತಾ ಪಾರ್ಟಿ ಹಾಗೂ ಒಂದು ಹಿಂದುಸ್ತಾನ ಜನತಾ ಪಾರ್ಟಿಯಿಂದ ಸಲ್ಲಿಸಿರುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಡಸಲಗಿ ಅವರು ನಾಮಪತ್ರವನ್ನು ಸಲ್ಲಿಸಿದರು.ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ನಾಮಪತ್ರಗಳನ್ನು …

Read More »

ಕನ್ನಡದ ಯುವಕನಿಗೆ,ಮರಾಠಿ ಹೃದಯ..ಕೆಲ್ಇ ಆಸ್ಪತ್ರೆಯ ಮಹಾನ್ ಚಿಕಿತ್ಸೆ..

ಬೆಳಗಾವಿ-ಜನರ ಆರೋಗ್ಯ ಕಪಾಡುತ್ತ ಜೀವ ಉಳಿಸುವ ಮಹೊನ್ನತ ಕಾರ್ಯದಲ್ಲಿ ತೊಡಗಿರುವ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವು ಯಶಸ್ಸಿನ ಗುರಿ ಮುಟ್ಟಿ, ದ್ವೀತೀಯ ಬರಿಗೆ ಹೃದಯ ಕಸಿ ಮಾಡುವದರ ಮೂಲಕ ಇನ್ನೊಬ್ಬರ ಬಾಳಿಗೆ ಸಂಜೀವಿನಿಯಾಗಿದೆ. 52 ವರ್ಷದ ವ್ಯಕ್ತಿಯ ಹೃದಯವು 17 ವರ್ಷದ ಯುವಕನ ದೇಹದಲ್ಲಿ ಮರುಜೋಡಣೆಗೊಂಡು ಮಿಡಿಯುತ್ತಿದೆ. ಹೃದಯ ಪಡೆದ ರೋಗಿಯ ಇತಿಹಾಸ : ಅತ್ಯಂತ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದ …

Read More »

ನಮಗ್ಯಾಕೆ ಹಿಡೀತೀರಾ..ಸಿಡಿ ಲೇಡಿ ಹೀಡೀರ್ರೀ..ವಾಟಾಳ್ ಕಾಮಿಡಿ…!!!!

ಬೆಳಗಾವಿ- ಬೆಳಗಾವಿಯಲ್ಲಿ ವಾಟಾಳ್ ನಾಗರಾಜ್ ಅವರ ಹೋರಾಟದಲ್ಲಿ ಬಗೆ,ಬಗೆಯ ಕಾಮಿಡಿ ಪಂಚ್ ಗಳು ಕೇಳಿ ಬಂದವು,ಪೋಲೀಸರು ಅವರನ್ನು ಅರೆಸ್ಟ್ ಮಾಡಲು ಮುಂದೆ ಬಂದಾಗ,ಯಾಕ್ರೀ ನಮ್ಮನ್ನು ಅರೆಸ್ಟ್ ಮಾಡ್ತೀರಾ,ಹೋಗಿ ಮೊದಲು ಆ ಸಿಡಿ ಲೇಡಿಯನ್ನು ಅರೆಸ್ಟ್ ಮಾಡಿ ಎಂದು ಪೋಲೀಸರಿಗೆ ವಾಟಾಳ್ ಅವಾಜ್ ಹಾಕಿದ್ರು…. ಹೋರಾಟದ ಮೊದಲು ಮಾದ್ಯಮಗಳ ಜೊತೆ ಮಾತನಾಡಿದ ಅವರು, ನಾನು ಪದೇಪದೇ  ಬೆಳಗಾವಿಗೆ ಬರ್ತೀನಿ,ನನಗೂ ಬೆಳಗಾವಿಗೂ ಅಗಾಧವಾದ ಸಂಬಂಧವಿದೆ, ಐವತ್ತು ವರ್ಷಗಳ ಹಿಂದೆ ಬೆಳಗಾವಿಯ ಲಿಂಗರಾಜ ಕಾಲೇಜು …

Read More »

ಯಮಕನಮರಡಿ ಬಿಡಬೇಡಿ,ಬೈ ಇಲೆಕ್ಷನ್ ಗೆ ನಿಲ್ಲಬೇಡಿ….!!!

ಬೆಳಗಾವಿ-ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ‌ ಸ್ಪರ್ಧೆಗೆ ಅವರ ಅಭಿಮಾನಿಗಳು ವಿರೋಧ ವ್ಯೆಕ್ತಪಡಿಸಿದ್ದಾರೆ. ಸತೀಶ್ ಜಾರಕಿಹೊಳಿ‌ ಲೋಕಸಭೆಗೆ ಸ್ಪರ್ಧಿಸದಂತೆ ಅಭಿಮಾನಿಗಳ ಒತ್ತಾಯ ಮಾಡುತ್ತಿದ್ದು ,ಯಮಕನಮರಡಿ ಕ್ಷೇತ್ರದಲ್ಲಿ ಈಗ ,ಯಮಕನಮರಡಿ ಬಿಡಬೇಡಿ,ಬೈ ಇಲೆಕ್ಷನ್ ಗೆ ನಿಲ್ಲಬೇಡಿ ಅಂತಾ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಒತ್ತಾಯದ ಮೂಲಕ ಟಿಕೆಟ್ ನೀಡಿ ಕೇಂದ್ರಕ್ಕೆ ಕಳಸಲು ಒಳಸಂಚು ನಡೆದಿದೆ ಎನ್ನುವ  ಆರೋಪ ಸತೀಶ್ ಜಾರಕಿಹೊಳಿ ಅವರದ್ದಾಗಿದೆ.ಸತೀಶ್ ಜಾರಕಿಹೊಳಿ‌ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು …

Read More »

ಇಲೆಕ್ಷನ್ ಬಂದಾಗ ಮಾತ್ರ, ಕುಂಬಕರ್ಣ ನಿದ್ರೆಯಿಂದ ಎಚ್ಚರಗೊಳ್ಳುವ ಸಿದ್ನಾಳ ಪುತ್ರ…!!!

ಬೆಳಗಾವಿ- ಒಂದು ಕಾಲವಿತ್ತು,ಎಸ್ ಬಿ ಸಿಧ್ನಾಳ ಮತ್ತು ಶಂಕರಾನಂದ ಬೆಳಗಾವಿ ಜಿಲ್ಲೆ ಆಳುತ್ತಿದ್ದರು,ಇಬ್ಬರೂ ಹೇಳಿದ್ದೆ ವೇದವಾಕ್ಯ ಆಗಿತ್ತು,ಅವರ ಹಾಗೆ ಅವರ ಮಕ್ಕಳು ರಾಜಕೀಯದಲ್ಲಿ ಬೆಳೆಯಲು ಸಾಧ್ಯವಾಗಲೇ ಇಲ್ಲ,ಇಬ್ಬರು ದಿಗ್ಗಜರ ಮಕ್ಕಳು ರಾಜಕೀಯವಾಗಿ ಬೆಳೆಯಲು ಸಾಧ್ಯವಾಗಲಿಲ್ಲ. ಮಾಜಿ ಸಂಸದ ಎಸ್ ಬಿ ಸಿಧ್ನಾಳ ಅವರು ಇಬ್ಬರು ಮಕ್ಜಳಲ್ಲಿ ಒಬ್ಬನಾದರೂ ರಾಜಕೀಯವಾಗಿ ಬೆಳೆಯಬೇಕೆಂದು ಎಲ್ಲಿಲ್ಲದ ಪ್ರಯತ್ನ ಮಾಡಿದರು ಆದ್ರೆ ಅದು ಸಾಧ್ಯ ಆಗಲೇ ಇಲ್ಲ.. ಆದ್ರೆ ಎಸ್ ಬಿ ಸಿಧ್ನಾಳ ಅವರ ಪುತ್ರ …

Read More »

ಮಾರ್ಚ್ 25 ಅಥವಾ 26 ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಮಾರ್ಚ,25 ಅಥವಾ 26 ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು,ಚುನಾವಣೆಗೆಕಾಂಗ್ರೆಸ್ ಪಕ್ಷ ರೆಡಿ ಇದೆ, ಅಭ್ಯರ್ಥಿ ವಿಚಾರ ಹೈಕಮಾಂಡ  ಅಂತಿಮ ಮಾಡಿಲ್ಲ, ಆ  ಸಭೆಯಲ್ಲಿ ಮೂರು ಹೆಸರುಗಳು ಶಿಫಾರಸು ಆಗವೆ,ಪಕ್ಷ  ಆದೇಶ ಮಾಡಿದರೆ  ನಾನು  ಚುನಾವಣೆಗೆ ನಿಲ್ಲುತ್ತೇನೆ, ಪಕ್ಷದ …

Read More »

ಸುವರ್ಣಸೌಧದ ಮುಂದೆ ನಿಂತ, ಪೂಜಾರಿ….!!!

ಬೆಳಗಾವಿಯ ಸುವರ್ಣಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಮಾಡಬೇಕು ಬೆಳಗಾವಿ ಎರಡನೇ ರಾಜ್ಯಧಾನಿಯಾಗಬೇಕು ಈ ಸೌಧವನ್ನು  ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಶಾಸಕರು ಅಧಿವೇಶನದಲ್ಲಿ ಚರ್ಚೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ಧರಣಿ ನಡೆಸಿದೆ ಉತ್ತರ ಕರ್ನಾಟಕ ವಿಕಾಸ ವೇದಿಕೆ ಸಂಚಾಲಕ ಅಶೋಕ ಪುಜಾರಿ ನೇತೃತ್ವದಲ್ಲಿ ಬೆಳಗಾವಿ ಸುವರ್ಣಸೌಧ ಎದರು ಕಪ್ಪು ಮಾಸ್ಕ ಧರಿಸಿ ಕೈಗೆ ಕಪ್ಪು ಬಟ್ಟೆ …

Read More »

ಸರಾಯಿ ಲೋಡೆಡ್ ಚೋರ್ ಕ್ಯಾಂಟರ್ ಅಬಕಾರಿ ಬಲೆಗೆ….

ಬೆಳಗಾವಿ- ಬೆಳಗಾವಿ ಲೋಕಸಭೆ ಉಪಚುನಾವಣೆ ರಂಗೇರುವ ಮುನ್ನವೇ  ಮದ್ಯದ ಘಾಟು ಬೆಳಗಾವಿಯಲ್ಲಿ ಜೋರಾಗಿದೆ ಗೋವಾ ಬಾರ್ಡರ್ ನಲ್ಲಿ ಮದ್ಯ ತುಂಬಿದ ಕ್ಯಾಂಟರ್ ಬೆಳಗಾವಿಯ ಅಬಕಾರಿ ಬಲೆಗೆ ಬಿದ್ದಿದೆ. ಕ್ಯಾಂಟರ್ ಮೊಡಿಫೈ ಮಾಡಿ ಅಕ್ರಮ ಮದ್ಯ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್ ಮಾಡಲಾಗಿದ್ದು, ಬೆಳಗಾವಿ ತಾಲೂಕಿನ ಬಾಕನೂರು ಗ್ರಾಮದ ಬಳಿ ಅಬಕಾರಿ ಪೊಲೀಸರ ದಾಳಿ ಮಾಡಿ ಅಡ್ಡ ದಾರಿಯಿಂದ ಮಹಾರಾಷ್ಟ್ರಕ್ಕೆ ಮದ್ಯ ಸಾಗಿಸುತ್ತಿದ್ದ ಕ್ಯಾಂಟರ್ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ …

Read More »

ಇವತ್ತು ಬೆಳಗಾವಿಗೆ ಪುನೀತ್ ರಾಜಕುಮಾರ್ ಬರ್ತಾರೆ…

ಬೆಳಗಾವಿ-ಪವರ್ ಸ್ಟಾರ್‌ ಪುನೀತ ರಾಜ್ ಕುಮಾರ್ ಅವರು ಇವತ್ತು ಭಾನುವಾರ ಮದ್ಯಾಹ್ನ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಯುವರತ್ನ ಕನ್ನಡ ಚಲನಚಿತ್ರ ಎಪ್ರಿಲ್ 1 ಕ್ಕೆ ಬೆಳಗಾವಿಯ ಚಂದನ ಚಿತ್ರಮಂದಿರಲ್ಲಿ ಬಿಡುಗಡೆ ಆಗುತ್ತಿದೆ,ಈ ಚಿತ್ರ ದಲ್ಲಿ ನಾಯಕ ನಟನಾಗಿ ಅಭಿನಯಿಸಿರುವ ಪವರ್ ಸ್ಟಾರ್ ಪುನೀತ ರಾಜಕುಮಾರ್ ಚಿತ್ರಪ್ರೇಮಿಗಳ ಅಪ್ಪು ಇವತ್ತು ಯುವರತ್ನ ಚಿತ್ರದ ಪ್ರಚಾರಕ್ಕಾಗಿ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಯುವರತ್ನ ಚಿತ್ರದ ತಂಡ ಬೆಳಗಾವಿಗೆ ಆಗಮಿಸಿ ಚಂದನ ಚಿತ್ರಮಂದಿರದಲ್ಲಿ ಯುವರತ್ನ ಚಿತ್ರದ ಪ್ರಚಾರ ಮಾಡಲಿದೆ. …

Read More »

ಅಭ್ಯರ್ಥಿಗಳ ಘೋಷಣೆ,ನಾ ಮೊದಲೋ,ನೀ..ಮೊದಲೋ….???

ಬೆಳಗಾವಿ-ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿ ಬಿರುಸಿನ ಕಸರತ್ತು ನಡೆದಿದೆ. ಈ ವಿಚಾರದಲ್ಲಿ ಎರಡೂ ಪಕ್ಷಗಳು ಕಾದುನೋಡುವ ತಂತ್ರವನ್ನು ಅನುಸರಿಸುತ್ತಿವೆ.ಬಿಜೆಪಿ ಅಭ್ಯರ್ಥಿ ಘೋಷಣೆಯಾದ ಬಳಿಕ,ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗುವ ಸಾಧ್ಯತೆಗಳೇ ಹೆಚ್ಚಾಗಿವೆ,ಈ ಎರಡೂ ಪಕ್ಷಗಳು ಅಣಬ್ಯರ್ಥಿಗಳ ಆಯ್ಕೆಯ ಕುರಿತು ರಾಜಧಾನಿ ಬೆಂಗಳೂರಿನಲ್ಲಿ ತಂತ್ರ,ಪ್ರತಿತಂತ್ರ ರೂಪಿಸುತ್ತಿವೆ. ಶನಿವಾರ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ದಿನವಿಡೀ ಸರಣಿ ಸಭೆಗಳನ್ನು ನಡೆಸಿ ಬೆಳಗಾವಿ ಜಿಲ್ಲೆಯ …

Read More »

ನೀವೇ ಸ್ಪರ್ದೆ ಮಾಡಿ,ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ನಾಯಕರ ಪಟ್ಟು…!!!

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ  ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆಯುತ್ತಿದೆ. ಇಂದು ಬೆಳಿಗ್ಗೆ 11 ಟೆಯಿಂದ ಕೆಪಿಸಿಸಿ ಕಚೇರಿಯಲ್ಲಿ ಸರಣಿ ಸಭೆಗಳು ನಡೆಯುತ್ತಿವೆ.ಸತೀಶ್ ಜಾರಕಿಹೊಳಿ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಬೇಕು,ಎಂದು ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದು,ಅವರನ್ನು ಮನವೊಲಿಸಲು ಕಾಂಗ್ರೆಸ್ ನಾಯಕರು ಸಭೆಯನ್ನು ಮುಂದುವರೆಸಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಸ್ಪರ್ದೆ ಮಾಡಲು ಒಪ್ಪದಿದ್ದರೆ,ಸತೀಶ್ ಜಾರಕಿಹೊಳಿ,ಮತ್ತು ಬೆಳಗಾವಿ ಗ್ರಾಮೀಣ …

Read More »

ಸುವರ್ಣ ವಿಧಾನಸೌಧ ಅಡಳಿತಾತ್ಮಕ ಕೇಂದ್ರ ಮಾಡಲು,ಅಧಿವೇಶನದಲ್ಲಿ ಚರ್ಚೆ ಮಾಡಲಿ

ಬೆಳಗಾವಿ-ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೆಳಗಾವಿ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರ ಮಾಡಲು ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವಲ್ಲಿ ಕಿಂಚಿತ್ತೂ ಚಿಂತನೆ ಮಾಡುತ್ತಿಲ್ಲ,ಕೊಟ್ಟ ಭರವಸೆಯನ್ನು ಈಡೇರಿಸುತ್ತಿಲ್ಲ,ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಸಂಚಾಲಕ ಅಶೋಕ ಪೂಜಾರಿ ಅಸಮಾಧಾನ ವ್ಯೆಕ್ತಪಡಿಸಿದರು. ಬೆಳಗಾವಿಯಲ್ಲಿ,ಪತ್ರಿಕಾಗೋಷ್ಠಿ ನಡೆಸಿದ ಅವರು ಬೆಂಗಳೂರಿನಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದೆ.ಈ ಅಧಿವೇಶನದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರ,ಮತ್ತು ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸುವ ಕುರಿತು ಉತ್ತರ ಕರ್ನಾಟಕದ …

Read More »