Breaking News

LOCAL NEWS

ಕೃಷ್ಣ ಭಟ್ ಆಗಬಹುದೇ, ಬಿಜೆಪಿಯ ಅಚ್ಚರಿಯ ಅಭ್ಯರ್ಥಿ…..!!!

ಬೆಳಗಾವಿ- ಬೆಳಗಾವಿ ಲೋಕಸಭಾ ಉಪಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಬಿಜೆಪಿ ಟಿಕೆಟ್ ಯಾರಿಗೆ ? ಎನ್ನುವ ಚರ್ಚೆ ಮಾತ್ರ ಜೋರಾಗಿ ನಡೆಯುತ್ತಿದೆ. ದಿನಕ್ಕೊಂದು ಚರ್ಚೆ,ಈ ಚರ್ಚೆಯಲ್ಲಿ ಹೊಸಹೊಸ ಹೆಸರುಗಳು ಪ್ರಸ್ತಾಪವಾಗುತ್ತಿವೆ. ಬಿಜೆಪಿ ಸಿದ್ಧಾಂತವೇ ಬೇರೆ ಪಕ್ಷದ ಹೈಕಮಾಂಡ್ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದೆ ಎನ್ನುವ ಸುದ್ಧಿ,ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಸದ್ದು ಮಾಡಿದೆ.ಆ ಅಚ್ಚರಿಯ ಅಭ್ಯರ್ಥಿ ಯಾರಾಗ್ತಾರೆ ಎನ್ನುವ ಚರ್ಚೆ ಈಗ ಶುರುವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡುವ …

Read More »

ಸೇನಾ ಭರ್ತಿ ನೊಂದಣಿಯಲ್ಲಿ ಬೆಳಗಾವಿ ಜಿಲ್ಲೆಯ ದಾಖಲೆ

ಬೆಳಗಾವಿ, – ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಇಲ್ಲಿನ ವಿಟಿಯು ಕ್ರೀಡಾಂಗಣದಲ್ಲಿ ಗುರುವಾರ (ಫೆ.4) ದಿಂದ ಆರಂಭಗೊಂಡ ಸೇನಾ ಭರ್ತಿ ರ್ಯಾಲಿಗೆ ಹಸಿರುನಿಶಾನೆ ತೋರಿಸಿ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ನೇಮಕಾತಿ ರ್ಯಾಲಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಬೆಳಗಾವಿ …

Read More »

ಬೆಳಗಾವಿ, ನಗರದಲ್ಲಿ ಮೈಸೂರಿನ ಲುಕ್….!!!

ಬೆಳಗಾವಿ-ಮೈಸೂರಿನಲ್ಲಿ ಪಾಲಿಕೆ ಆಯುಕ್ತರಾಗಿ ಸೇವೆ ಮಾಡಿ ಬೆಳಗಾವಿಗೆ ಬಂದಿರುವ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಅವರು ಬೆಳಗಾವಿ ನಗರಕ್ಕೆ ಮೈಸೂರಿನ ಲುಕ್ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ‌‌ . ರಾಜ್ಯೋತ್ಸವದ ಸಂಧರ್ಭದಲ್ಲಿ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿರುವ. ಚನ್ನಮ್ಮಾಜಿಯ ಮೂರ್ತಿಗೆ, ಕಿತ್ತೂರ ರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ ಬಿಂಬಿಸುವ ಅತ್ಯಾಕರ್ಷಕ ಆರ್ಟ್ ಮಾಡಿಸಿ ವೀರಮಾತೆಯ ಮೂರ್ತಿಗೆ ಹೊಸ ಲುಕ್ ಕೊಡಸಿದ್ದೇ ಪಾಲಿಕೆ ಆಯುಕ್ತ ಜಗದೀಶ್ ಅವರು ಬೆಳಗಾವಿ ಮಹಾನಗರ ಪಾಲಿಕೆ …

Read More »

ಶಾಸಕ ಅಭಯ ಪಾಟೀಲರ ಛಲ..ಬೆಳಗಾವಿ ಐಟಿ ಪಾರ್ಕ್ ಗೆ ಭೀಮ ಬಲ…!!!

ಬೆಳಗಾವಿ-ಶಾಸಕ ಅಭಯ ಪಾಟೀಲ ಅಭಿವೃದ್ಧಿಯ ವಿಚಾರದಲ್ಲಿ ತುಂಬಾ ಹಠವಾದಿ,ಛಲಗಾರ,ಮಾಡಿದ ಸಂಕಲ್ಪ ಈಡೇರುವವರೆಗೂ ಸುಮ್ಮನೇ ಕುಳಿತುಕೊಳ್ಳದ ಜಿಗುಟ ಮನಸ್ಥಿತಿಯ ನಾಯಕ ಎನ್ನುವದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು, ಕಳೆದ ಒಂದು ದಶಕದಿಂದ ಬೆಳಗಾವಿಯಲ್ಲಿ ಐಟಿ,ಬಿಟಿ ಪಾರ್ಕ್ ಆಗಲೇಬೆಕೆಂದು ಹಠಕ್ಕೆ ಬಿದ್ದು,ಶಾಸಕರ ಸಹಿ ಸಂಗ್ರಹ ಮೂಲಕ ಹೋರಾಟ ಆರಂಭಿಸಿದ ಅವರು ಅಷ್ಟಕ್ಕೆ ಸುಮ್ಮನಾಗದೇ ವಿಧಾನಸಭೆಯ ಅಧಿವೇಶನದಲ್ಲಿ ಖಾಸಗಿ ನಿರ್ಣಯ ಮಂಡಿಸುವ ಮೂಲಕ ಸರ್ಕಾರದ ಗಮನ …

Read More »

ಕೇಂದ್ರದ ರಕ್ಷಣಾ ಸಚಿವರನ್ನು ಸಾಹುಕಾರ್ ಭೇಟಿಯಾಗಿದ್ದು ಯಾಕೆ ಗೊತ್ತಾ…?

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ* ಬೆಳಗಾವಿ-ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ  ರಾಜನಾಥ ಸಿಂಗ್* ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ  ರಮೇಶ್ ಜಾರಕಿಹೊಳಿ‌ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ *ರಮೇಶ್ ಜಾರಕಿಹೊಳಿ‌*, ಕಿತ್ತೂರು ರಾಣಿ ಚೆನ್ನಮ್ಮ ಅವರ …

Read More »

ಗೋಹತ್ಯೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಡಿಸಿ ಸೂಚನೆ

ಬೆಳಗಾವಿ-ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣೆ ಅಧ್ಯಾದೇಶ 2020’ನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜ.30) ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಅಶೋಕ‌ ಕೊಳ್ಳಾ ಅವರು ಸಭೆಯನ್ನು ನಿರ್ವಹಿಸಿದರು. ಸಭೆಯಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ …

Read More »

ಮಾರಿಹಾಳ ಗ್ರಾಪಂ ಅದ್ಯಕ್ಷರಾಗಿ ತೌಸೀಪ್ ಫನೀಬಂಧ್….

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷರ ಚುನಾವಣೆಗಳು ಇಂದಿನಿಂದ ಆರಂಭವಾಗಿದ್ದು ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ತೌಸೀಫ್ ಅಲ್ಲಾವುದ್ದೀನ್ ಫನೀಬಂಧ್ ಮತ್ತು ಉಪಾಧ್ಯಕ್ಷರಾಗಿ,ಬಸವರಾಜ್ ವೀರಭದ್ರಪ್ಪ ಮಾಧನ್ನವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅದ್ಯಕ್ಷ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿಯ ಸದಸ್ಯರು ಸತ್ಕರಿಸಿ ಗೌರವಿಸಿದರು.ಈ ಸಂಧರ್ಭದಲ್ಲಿ ಮಾರಿಹಾಳ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಗ್ರಾಮದ ಹಿರಿಯರಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದ ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷ …

Read More »

ಇವತ್ತಿನಿಂದ ಥೇಟರ್ ಶೂರು ಆದ್ರೂ ಶೋ ಇಲ್ಲ….

ಬೆಳಗಾವಿ- ಕೇಂದ್ರ ಸರ್ಕಾರದ ಕೋವೀಡ್ ನಿಯಮಾವಳಿ ಯಂತೆ ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಸುಪ್ರಸಿದ್ಧ ಯಲ್ಲಮ್ಮ ದೇವಿಯ ಮಂದಿರ ಸಾರ್ವಜನಿಕರ ದರ್ಶನಕ್ಕೆ ಓಪನ್ ಆಗಿದೆ. ಸವದತ್ತಿ ಯಲಮ್ಮ ದೇವಿಯ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವಿಶೇಷ ಪೂಜೆ ನೆರವೇರಿಸಿ ಭಕ್ತಾದಿಗಳ ದರ್ಶನಕ್ಕೆ ಮಂದಿರವನ್ನು ಓಪನ್ ಮಾಡಲಾಯಿತು, ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರಸಿದ್ಧ ಮಂದಿರ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಿದ್ದು,ಜಿಲ್ಕೆಯಲ್ಲಿ ಪ್ರಥಮ ಪಿಯುಸಿ ತರಗತಿಗಳು ಶುಭಾರಂಭಗೊಂಡವು. ಇಂದಿನಿಂದ ಬೆಳಗಾವಿ ನಗರದ ಚಿತ್ರಮಂದಿರಗಳು ಬಾಗಿಲು ತೆರದಿದ್ದು ಕೆಲವೇ …

Read More »

ಗೋಕಾಕಿನಲ್ಲಿ ಶಿವಲಿಂಗ ಮೂರ್ತಿಯ ಮಹಿಮೆ….!!!

ಬೆಳಗಾವಿ-ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ನೂರಾರು ಸಂಖ್ಯೆಯಲ್ಲಿ ಭಕ್ತವೃಂದ ಸೇರಿ ವಿಶೇಷ ಪೂಜೆ ನೆರವೇರಿಸುವ ಘಟನೆ ಕರದಂಟಿನ ನಗರಿ ಗೋಕಾಕಿನಲ್ಲಿ ನಡೆದಿದೆ. ಗೋಕಾಕ್‌‌ನ ಬಣಗಾರ ಗಲ್ಲಿಯಲ್ಲಿನ ಶಂಕರಲಿಂಗ ದೇವಸ್ಥಾನದಲ್ಲಿ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ಭಕ್ತರು ಸೇರಿದ್ದಾರೆ. ಕಲ್ಲಿನ ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಮೂಡಿದೆ ಎಂದು ಅರ್ಚಕ, ಭಕ್ತರು ಹೇಳುತ್ತಿದ್ದು,ಇದನ್ನ ನೋಡಲು ಶಂಕರಲಿಂಗ ದೇವಸ್ಥಾನಕ್ಕೆ ತಂಡೋಪತಂಡವಾಗಿ ಭಕ್ತರು ಬರುತ್ತಿದ್ದಾರೆ. ಇಂದು ರಾತ್ರಿ ಸಂಕಷ್ಟಿ ಚಂದ್ರೋದಯ ಸಮಯದಲ್ಲಿ ಕಲ್ಲಿನ …

Read More »

ಇದೊಂದು ದಾಖಲೆ ಏಕಕಾಲದಲ್ಲಿ 206 ಕಾಮಗಾರಿಗಳಿಗೆ ಗ್ರೀನ್ ಸಿಗ್ನಲ್….!!!

ಬೆಳಗಾವಿ- ಅಭಿವೃದ್ಧಿಯ ವಿಚಾರದಲ್ಲಿ ಶಾಸಕ ಅಭಯ ಪಾಟೀಲರು ಯಾವಾಗಲೂ ದಾಖಲೆ ಮಾಡುತ್ತಲೇ ಇದ್ದಾರೆ,ಮೊದಲನೇಯ ಹಂತದಲ್ಲಿ 206 ಕಾಮಗಾರಿಗಳನ್ನು,ಎರಡನೇಯ ಹಂತದಲ್ಲಿ 38 ಕಾಮಗಾರಿಗಳಿಗೆ ಏಕಕಾಲದಲ್ಲಿ ಮಂಜೂರಾತಿ ಪಡೆದಿರುವ ಅವರು ಇಂದಿನಿಂದ ಮೊದಲನೇಯ ಹಂತದ 206 ಕಾಮಗಾರಿಗಳಿ ಚಾಲನೆ ನೀಡುವ ಪ್ರಕ್ರಿಯೆ ಆರಂಭಿಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಾವ ಭಾಗದಲ್ಲಿ 206 ಕಾಮಗಾರಿಗಳು ನಡೆಯುತ್ತವೆ,ಎರಡನೇಯ ಹಂತದ 38 ಕಾಮಗಾರಿಗಳು ಎಲ್ಲಿ ನಡೆಯುತ್ತವೆ ಎನ್ನುವದನ್ನು ಪಟ್ಟಿ ಮಾಡಿ ಈ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವರ …

Read More »

ಕುಂದಾನಗರಿ ಬೆಳಗಾವಿಯಲ್ಲಿ , ಸುಗ್ಗಿ ಹುಗ್ಗಿ ಜನಪದ

ಬೆಳಗಾವಿ : “ಮಿತಿ ಮೀರಿದ ಯಾಂತ್ರೀಕರಣದಿಂದಾಗಿ ಪ್ರಸ್ತುತ ದಿನಗಳಲ್ಲಿ ಹಳ್ಳಿ ಸೊಬಗು ಕಾಣುವದು ಅಪರೂಪವಾಗಿದೆ. ಸುಗ್ಗಿ ಹುಗ್ಗಿಯಂತಹ ಜನಪದ ಕಲೆಗಳ ಸಂಭ್ರಮಗಳ ಮೂಲಕ ಗ್ರಾಮೀಣ ಕಲೆ ಮತ್ತು ಸೊಗಡು ಎಲ್ಲೆಡೆ ಪಸರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರವಿವಾರ (ಜ.31)ರಂದು ಕುಮಾರ ಗಂಧರ್ವ ರಂಗಮಂದಿರದ ಹೊರಾಂಗಣದಲ್ಲಿ ಏರ್ಪಡಿಸಲಾಗಿದ್ದ ಸುಗ್ಗಿ ಹುಗ್ಗಿ- 2020 ಜಾನಪದ ಕಲಾ ಸಂಭ್ರಮ ಕಾರ್ಯಕ್ರಮ …

Read More »

ಫೆ. 4 ರಿಂದ ಬೆಳಗಾವಿಯಲ್ಲಿ ಮಿಲಿಟರಿ ಭರ್ತಿ ರ್ಯಾಲಿ…

ಬೆಳಗಾವಿ,- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೈದಾನದಲ್ಲಿ ಫೆಬ್ರವರಿ 04 ರಿಂದ 15 ರವರೆಗೆ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳ ಆರೋಗ್ಯ ತಪಾಸಣೆ, ಭದ್ರತೆ, ವಸತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ(ಜ.30) ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಅವರು ಮಾತಾನಾಡಿದರು. ಸೇನಾ ನೇಮಕಾತಿ ರ್ಯಾಲಿಗೆ ಬೇಕಾದ ಪೂರ್ವ ತಯಾರಿ …

Read More »

ಹುಲಿ,ಚಿರತೆ,ಕರಡಿ ಜಿರಾಫೆ, ಬೆಳಗಾವಿಗೆ ಬರಲು ಕೊರೋನಾ ಅಡ್ಡಿ ಆಯ್ತು….!!!

ಬೆಳಗಾವಿ :ಮೈಸೂರು ಮೃಗಾಲಯ ಮಾದರಿಯಲ್ಲೇ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ರಾಣಿ ಕಿತ್ತೂರು ಚನ್ನಮ್ಮ ಮೃಗಾಲಯವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಭರವಸೆ ನೀಡಿದರು. ಭಾನುವಾರ ನಗರದಲ್ಲಿ ವನ್ಯಜೀವಿ ಮತ್ತು ಪರಿಸರ ಅಭಿವೃದ್ಧಿ ವೇದಿಕೆ ಪದಾಧಿಕಾರಿಗಳು ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯ ಅಭಿವೃದ್ಧಿಗೊಳಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಈಗಾಗಲೇ ಇಲ್ಲಿ ವನ್ಯಜೀವಿಗಳು ಬರಬೇಕಿತ್ತು. ಆದರೆ ಕೊವೀಡ್ …

Read More »

ಮುಂಬಯಿ ತಗೊಂಡು ನಾವೇನ್ ಮಾಡೋಣ-ಸತೀಶ್ ಜಾರಕಿಹೊಳಿ

ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆವಹಿಸಿ ಸಮಸ್ಯೆ ಪರಿಹಾರ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡುವುದಿಲ್ಲ ಎಂದ ಗೋವಾ ಸಿಎಂ ಹೇಳಿಕೆ ವಿಚಾರವಾಗಿ ನಗರದ ತಮ್ಮ ನಿವಾಸದಲ್ಲಿ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಈ ಹಿಂದೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಡಿಸೆಂಬರ್ ನಲ್ಲಿ ಸಿಹಿ ಸುದ್ದಿ ನೀಡುವುದಾಗಿ ಘೋಷಣೆ ಮಾಡಿದ್ದರು ಒಂದು ವರ್ಷ …

Read More »

ಶಿವಾಜಿ ಮೂಲ ಕನ್ನಡ,-ಡಿಸಿಎಂ ಗೋವೀಂದ ಕಾರಜೋಳ

ಬೆಳಗಾವಿ-ಮುಂಬೈ ನಮ್ಮದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಡಿಸಿಎಂ ಗೋವೀಂದ್ ಕಾರಜೋಳ ಅವರು ಶಿವಾಜಿ ಮೂಲ ಕನ್ನಡ ಎಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ, ಮಹಾರಾಷ್ಟ್ರದ ಲ್ಲಿ ಉದ್ಧವ್ ಠಾಕ್ರೆ ನೇತೃತ್ವದ್ದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷದವರು …

Read More »