LOCAL NEWS

ಬೆಳಗಾವಿ ವಿಮಾನ ನಿಲ್ಧಾಣದಲ್ಲಿ ಹೊಸ ಟರ್ಮಿನಲ್…!!

ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 357 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು 16,400 ಚದರ ಮೀಟರ್ ವಿಸ್ತೀರ್ಣದಲ್ಲಿ ನೂತನ ಟರ್ಮಿನಲ್ 2026 ರೊಳಗೆ ನಿರ್ಮಾಣವಾಗಲಿದೆ ಎಂದು ಸಂಸದೆ ಮಂಗಲಾ ಅಂಗಡಿ ಮತ್ತು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಶನಿವಾರ ಡಿ-2 ರಂದು ಬೆಳಗಾವಿ ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ಯೋಜನೆಯ ಕುರಿತು ವಿಮಾನ ನಿಲ್ದಾಣ ಸಲಹಾ ಸಮಿತಿಯ ಜೊತೆ ಸಂಸದೆ ಮಂಗಲಾ ಅಂಗಡಿ ರಾಜ್ಯಸಭಾ ಸಂಸದ …

Read More »

ಸುರಂಗದಲ್ಲಿ ಕಾರ್ಮಿಕರನ್ನು, ಪತ್ತೆ ಹಚ್ಚಿದ್ದೇ ಬೆಳಗಾವಿಯ ಇಂಜಿನಿಯರ್ಸ್….!!

ಬೆಳಗಾವಿ-ದೇಶದ ಗಮನ ಸೆಳೆದಿದ್ದ ಬೃಹತ್ ಕಾರ್ಯಾಚರಣೆಯಲ್ಲಿ 41 ಕಾರ್ಮಿಕರ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು ಬೆಳಗಾವಿಯವರು ಅನ್ನೋದು ಹೆಮ್ಮೆಯ ಸಂಗತಿಯಾಗಿದೆ. ಉತ್ತರಖಾಂಡದ ಉತ್ತರಕಾಶಿಯಲ್ಲಿ ಸುರಂಗ ‌ಮಾರ್ಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣೆ ಕಾರ್ಯಾಚರಣೆಯಲ್ಲಿ,17 ದಿನಗಳ ಕಾಲ ನಿರಂತರವಾಗಿ ನಡೆದ ಕಾರ್ಯಾಚರಣೆಯಲ್ಲಿ 41 ಕಾರ್ಮಿಕರ ರಕ್ಷಣೆ ಮಾಡಲಾಗಿತ್ತು.ರಕ್ಷಣಾ ಕಾರ್ಯಾಚರಣೆಯಲ್ಲಿ ಬೆಳಗಾವಿ ಇಬ್ಬರು ಇಂಜನಿಯರ್ ಭಾಗಿಯಾಗಿದ್ದು ಸಂತಸದ ವಿಚಾರವಾಗಿದೆ. ಚೆನ್ನೈ ಮೂಲದ ಎಲ್‌ ಆ್ಯಂಡ್ ಟಿ ಕಂಪನಿಯ ಇಬ್ಬರು ಇಂಜಿನಿಯರ್‌ಗಳು ರೆಸ್ಕ್ಯೂ ಆಪರೇಶನ್‌ನಲ್ಲಿ ಭಾಗಿಯಾಗಿದ್ದರು.ಎಲ್‌ …

Read More »

ಡಿ 5ರಿಂದ 8ರವರೆಗೆ ಡಾ. ಶಿವಬಸವಸ್ವಾಮೀಜಿ 134ನೇ ಜಯಂತಿ ಮಹೋತ್ಸವ

ಬೆಳಗಾವಿ: ಡಿಸೆಂಬರ್ ತಿಂಗಳ 5 ರಿಂದ 8 ರವರೆಗೆ ನಾಗನೂರು ರುದ್ರಾಕ್ಷಿ ಮಠದಲಿಂಗೈಕ್ಯ ಕಾಯಕಯೋಗಿ, ಮಹಾಪ್ರಸಾದಿ, ಡಾ.ಶಿವಬಸವ ಮಹಾಸ್ವಾಮಿಗಳವರ 134 ನೆಯ ಜಯಂತಿಮಹೋತ್ಸವ ಆಚರಿಸಲಾಗುತ್ತಿದೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ. ಗದುಗಿನ ತೋಂಟದಾರ್ಯ ಸಂಸ್ಥಾನಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಜಿವರ ಸನ್ನಿಧಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ನೇತೃತ್ವವನ್ನು ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿಯವರು ವಹಿಸಲಿದ್ದಾರೆ. ಬೆಳಗಾವಿ ಶಿವಬಸವ ನಗರದಲ್ಲಿರುವ ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ …

Read More »

ಎಸಿಪಿ ನಾರಾಯಣ ಭರಮಣಿ ಅವರಿಗೆ ಪ್ರಮೋಶನ್….

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಸಿಪಿಐ,ಎಸಿಪಿ ಯಾಗಿ ಖಾಕಿ ಖದರ್ ತೋರಿಸಿದ ನಾರಾಯಣ ಭರಮಣಿ ಅವರಿಗೆ ಪ್ರಮೋಶನ್ ಸಿಕ್ಕಿದ್ದು ಅವರು ಅಡಿಶ್ನಲ್ SP ಯಾಗಿ ಬಡ್ತಿ ಹೊಂದಿದ್ದಾರೆ. ಬೆಳಗಾವಿಯ ಮಾರ್ಕೆಟ್ ಎಸಿಪಿ ನಾರಾಯಣ ಭರಮಣಿ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಕರ್ತವ್ಯ ನಿಭಾಯಿಸಿದ ಒಟ್ಟು ಮೂರು ಜನ ಪೋಲೀಸ್ ಅಧಿಕಾರಿಗಳಿಗೆ ಪ್ರಮೋಶನ್ ಸಿಕ್ಕಿದೆ. ನಾರಾಯಣ ಭರಮಣಿ, ರಾಮನಗೌಡ ಹಟ್ಟಿ ಮತ್ತು ಮಹಾಂತೇಶ್ವರ್ ಜಿದ್ದಿ ಅವರು ಅಡಿಶ್ನಲ್ ಎಸ್ಪಿ ಯಾಗಿ ಬಡ್ತಿ ಹೊಂದಿದ್ದಾರೆ. ಎಸಿಪಿ …

Read More »

ಬೈಲಹೊಂಗಲ ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

ಬೆಳಗಾವಿ: 60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ‌ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌ಕೆ ಗ್ರಾಮದ ರವಿ ಅಜ್ಜಿ, ಪಹಣಿ ಪತ್ರ ತಿದ್ದುಪಡಿ ಅರ್ಜಿ ಸಲ್ಲಿಸಿದ್ದರು. ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಬೆಳಗಾವಿ ಲೋಕಾಯುಕ್ತ ಠಾಣೆಗೆ ರವಿ …

Read More »

ಬೆಳಗಾವಿ ಪೋಲೀಸ್ ಕಮಿಷನರ್ ಕಚೇರಿ ಎದುರು ಧರಣಿ…!!

ಬೆಳಗಾವಿ-ಬಿಜೆಪಿ ನಗರ ಸೇವಕ ಅಭಿಜಿತ್ ಬಂಧನ ಖಂಡಿಸಿ ಬೆಳಗಾವಿ ಬಿಜೆಪಿ ಮುಖಂಡರು, ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಧರಣಿ ನಡೆಸಿ,ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಹಾ ನಗರ ಪಾಲಿಕೆ ಮೇಯರ್ ಶೋಭಾ ಸೋಮ‌ನಾಚೆ, ಮಾಜಿ ಶಾಸಕರಾದ ಸಂಜೆಯ್ ಪಾಟೀಲ್, ಅನಿಲ್ ಬೆನಕೆ ,ಧನಂಜಯ ಜಾದವ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ನವೆಂಬರ್ 23 ರಂದು ಭಾಗ್ಯನಗರದಲ್ಲಿ ಮೊಬೈಲ್ ಟವರ್ ಅನುಮತಿ ವಿಚಾರವಾಗಿ ಬಿಜೆಪಿ ನಗರ ಸೇವಕ ಅಭಿಜಿತ್ ಹಾಗೂ …

Read More »

ಬೆಳಗಾವಿಯ ಬಿಜೆಪಿ ನಗರಸೇವಕ ಅಭಿಜಿತ್ ಜವಳಕರ್ ಬಂಧನ..

ಬೆಳಗಾವಿ- ಮೋಬೈಲ್ ಟಾವರ್ ಅಳವಡಿಕೆಗೆ ಸಂಭಂಧಿಸಿದಂತೆ ಇತ್ತೀಚಗೆ ನಗರಸೇವಕ ಅಭಿಜಿತ್ ಜವಳಕರ್ ಮತ್ತು ರಮೇಶ್ ಪಾಟೀಲ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆದಿದೆ ಎಂದು ಹೇಳಲಾಗಿತ್ತು.ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಗರ ಸೇವಕ ಅಭಿಜಿತ್ ಜವಳಕರ್ ನನ್ನು ನಿನ್ನೆ ತಡರಾತ್ರಿ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ನಗರಸೇವಕ ಅಭಿಜಿತ್ ಜವಳಕರ್ ಟಾವರ್ ಅಳವಡಿಕೆ ಕುರಿತು ಪ್ರಶ್ನೆ ಮಾಡಿದ್ದಕ್ಕೆ ನನ್ನ ಮೇಲೆ ರಮೇಶ್ ಪಾಟೀಲ ಎಂಬಾತ ಹಲ್ಲೆ ಮಾಡಿದ್ದಾನೆ ಎಂದು ತಿಲಕವಾಡಿ …

Read More »

ಮನೆಯಲ್ಲಿ ಡೆತ್ ನೋಟ್ ಸಿಕ್ಕಿದೆ ಪರಶೀಲನೆ ಮಾಡ್ತೀವಿ….

ಬೆಳಗಾವಿ-ಬೆಳಗಾವಿದಂಡು ಮಂಡಳಿ ಸಿಇಒ ಕೆ.ಆನಂದ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಶುರುವಾಗಿದೆ.ಕ್ಯಾಂಪ್ ಪ್ರದೇಶದಲ್ಲಿರುವ ಕೆ.ಆನಂದ ನಿವಾಸಕ್ಕೆ ನಗರ ಪೊಲೀಸ್ ಆಯುಕ್ತರ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.ಭೇಟಿ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕೆ.ಆನಂದ ಅವರ ರೂಮ್ ನಲ್ಲಿ ಡೆತ್ ನೋಟ್ ಸಿಕ್ಕಿದೆ,ಅದರಲ್ಲಿ ಯಾವೆಲ್ಲಾ ಅಂಶ ಇದೆ ಅನ್ನೋದನ್ನ ಪರಿಶೀಲನೆ ಮಾಡುತ್ತೇವೆ.ಆದ್ರೇ ಯಾವೊಬ್ಬ ಅಧಿಕಾರಿಗಳ ಕಿರುಕುಳ …

Read More »

ಬೆಳಗಾವಿ ಕಾಂಟೋನ್ಮಟ್ ಬೋರ್ಡಿನ CEO ಆನಂದ್ ಆತ್ಮಹತ್ಯೆ…!!

ಬೆಳಗಾವಿ- ಬೆಳಗಾವಿ ಕಾಂಟೋನ್ಮೆಂಟ್ ಬೋರ್ಡಿನ ಕಚೇರಿಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿ ತನಿಖೆ ನಡೆಸಿದ ಬೆನ್ನಲ್ಲಿಯೇ ಬೋರ್ಡಿನ ಸಿಇಓ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ CEO ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ಬೆಳಗಾವಿ ದಂಡುಮಂಡಳಿ ಸಿಇಒ ಕೆ.ಆನಂದ ನಿಗೂಢ ಸಾವನ್ನೊಪ್ಪಿದ್ದಾರೆ.ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿರುವ ಕೆ. ಆನಂದ ಅವರ ಸರ್ಕಾರಿ ನಿವಾಸದಲ್ಲಿ ಈ ಘಟನೆ ನಡೆದಿದೆ. ಕಳೆದ ಒಂದೂವರೆ ವರ್ಷಗಳಿಂದ …

Read More »

ಬೆಳಗಾವಿ- ಗೋವಾ ಬಾರ್ಡರ್ ನಲ್ಲಿ ಭರ್ಜರಿ ಬೇಟೆ…

ಬೆಳಗಾವಿ- ಗೋವಾದಿಂದ-ಬೆಳಗಾವಿ ಮಾರ್ಗವಾಗಿ ಆಂದ್ರ,ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಗೆ ಮದ್ಯ ಸಾಗಾಣಿಕೆ ಮಾಡುತ್ತಿರುವ ಜಾಲದ ಮೇಲೆ ಬೆಳಗಾವಿಯ ಅಬಕಾರಿ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಅಬಕಾರಿ ‌ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ! ನಡೆಸಿದ್ದು,ಕಂಟೇನರ್ ನಲ್ಲಿ ಕಂಪಾರ್ಟ್ಮೆಂಟ್ ಮಾಡಿ ಮದ್ಯ ಸಾಗಾಟ ಜಾಲ ಪತ್ತೆಯಾಗಿದೆ.ಕಂಟೇನರ್ ನಲ್ಲಿ ಐದು ಅಡಿಯಲ್ಲಿ ಜಾಗದಲ್ಲಿ ಕಂಪಾರ್ಟ್ಮೆಟ್ ಮಾಡಲಾಗಿತ್ತು,ಕಂಪಾರ್ಟ್ಮಮೆಂಟ್ ಬಗ್ಗೆ ಯಾರಿಗೂ ಅನುಮಾನ ಬರದಂತೆ ಶೆಟರ್ ಅಳವಡಿಸಿ ಐಡಿಯಾ ಮಾಡಿದ್ದ ಖದೀಮರು ಕೊನೆಗೂ ಬಲೆಗೆ ಬಿದ್ದಿದ್ದಾರೆ. …

Read More »

ಮಾರಿಹಾಳ ಗ್ರಾಮದ ಉಪಾಧ್ಯಕ್ಷ ತೌಸೀಪ್ ಫನಿಬಂದ್ ಇನ್ನಿಲ್ಲ….

ಬೆಳಗಾವಿ- ಮಾರಿಹಾಳ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹಾಲಿ ಉಪಾಧ್ಯಕ್ಷ ತೌಸೀಪ್ ಫನಿಭಂದ್ ಇಂದು ಸಂಜೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಸಂಜೆ ತೀವ್ರ ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು ಕೆ.ಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ತೌಸೀಪ್ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಶುಕ್ರವಾರ ಬೆಳಗ್ಗೆ 10-00 ಗಂಟೆಗೆ ಮಾರಿಹಾಳ ಗ್ರಾಮದಲ್ಲಿ ನಡೆಯಲಿದೆ.

Read More »

ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ….!!!

ಬೆಳಗಾವಿ- ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಇಂದು ಬಿಜೆಪಿಯ ಪ್ರಭಾವಿ ನಾಯಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಚರ್ಚೆ ನಡೆಸುವದರ ಮೂಲಕ ಎಲ್ಲರ ಗಮನ ಸೆಳೆದರು. ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ ಬಿಜೆಪಿ ಸರ್ಕಾರವನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ಅವರನ್ನು ವಿಜಯೇಂದ್ರ ಅವರು ಸದಾಶಿವ ನಗರದಲ್ಲಿ ಇರುವ …

Read More »

ಕಾಲು ಕೆದರಿ ಜಗಳಕ್ಕೆ ಸಿದ್ಧತೆ ನಡೆಸಿರುವ ಎಂಇಎಸ್….!!

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಭಾಷಾವೈಷಮ್ಯದ ವಿಷಬೀಜ ಬಿತ್ತಿ,ರಾಜಕೀಯ ಮಾಡುತ್ತ ಬಂದಿರುವ ನಾಡದ್ರೋಹಿ ಎಂಇಎಸ್ ಈಗ ಬೆಳಗಾವಿಯಲ್ಲಿ ಡಿಸೆಂಬರ್ 4 ರಿಂದ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಪ್ರತಿಯಾಗಿ ಮರಾಠಿ ಮಹಾ ಮೇಳಾವ್ ನಡೆಸಲು ನಿರ್ಧರಿಸಿದೆ. ಒಂದುಕಡೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ಸಿದ್ಧತೆ ನಡೆಸಿದ್ರೆ ಇನ್ನೊಂದು ಕಡೆ ಎಂಇಎಸ್ ಕಿರಿಕ್ ಶುರುವಾಗಿದೆ.ಅಧಿವೇಶನಕ್ಕೆ ಪ್ರತಿಯಾಗಿ ಮರಾಠಿ ಮಹಾಮೇಳಾವ್ ನಡೆಸಲು ನಿರ್ಧರಿಸಿರುವ ಎಂಇಎಸ್ ನಾಯಕರು ಅದಕ್ಕಾಗಿ ಖಾನಾಪೂರ ಮತ್ತು ಬೆಳಗಾವಿಯಲ್ಲಿ ಸಮೀತಿಗಳನ್ನು ರಚಿಸಿ ಮೇಳಾವ್ ನಡೆಸುವದಾಗಿ …

Read More »

ವಿಕಲಚೇತನರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಬೆಳಗಾವಿ- ನಿನ್ನೆಯ ದಿನ ಮಂಗಳವಾರ ಸಂಜೆಬೆಳಗಾವಿಯ ಜಿಲ್ಲಾಧಿಕಾರಿಗಳ ಆವರಣದಲ್ಲಿ ವಿಕಲಚೇತನರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸಿದರು. ಧರಣಿ ಕುಳಿತಿದ್ದ ನವ ಕರ್ನಾಟಕ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು ಆರ್ ಡಬ್ಲ್ಯೂ ವಿಕಲಚೇತನರ ಗೌರವಧನ ಕಾರ್ಯಕರ್ತರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭೇಟಿ ಮಾಡಿ, ಅವರ ಬೇಡಿಕೆಗಳ ಮಾಹಿತಿಯನ್ನು ಪಡೆದು,ವಿಕಲಚೇತನರ ಅಹಾಲು ಸ್ವೀಕಾರ ಮಾಡಿದ್ರು. ರಾಜ್ಯದ 6860 ಜನ ಎಮ್ ಆರ್ ಡಬ್ಲ್ಯೂ/ವಿ ಆರ್ ಡಬ್ಲ್ಯೂ/ಯು …

Read More »

ಬೆಳಗಾವಿಯಲ್ಲಿ ಪ್ರತಿಭಟನೆಗಳನ್ನು ಕಂಟ್ರೋಲ್ ಮಾಡಲು ಸಲಹೆ…

ಬೆಳಗಾವಿ ಅಧಿವೇಶನ: ಪ್ರತಿಭಟನೆಗಳ ಇಳಿಮುಖಕ್ಕೆ ಮುಖ್ಯಮಂತ್ರಿಗೆ, ಸಭಾಪತಿ ಬಸವರಾಜ ಹೊರಟ್ಟಿ ಸಲಹಾ ಪತ್ರ ಬೆಂಗಳೂರು, – ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023 ರಿಂದ ಡಿಸೆಂಬರ್ 15ರ ವರೆಗೆ 10 ದಿನಗಳ ಕಾಲ ಚಳಿಗಾಲದ ಅಧಿವೇಶನವನ್ನು ರಾಜ್ಯ ಸರ್ಕಾರ ನಡೆಸಲು ನಿರ್ಧರಿಸಿರುವ ಹಿನ್ನೆಲೆ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ …

Read More »