Breaking News

LOCAL NEWS

ಬೆಳಗಾವಿಯಲ್ಲಿ ಡಿಸಿ ಸಂಧಾನ ಸಕ್ಸೆಸ್ ,ಸಾರಿಗೆ ನೌಕರರು ಡ್ಯುಟಿಗೆ ವಾಪಸ್..

ಬೆಳಗಾವಿ-ಕಳೆದ ಮೂರು ದಿನಗಳಿಂದ ಬೆಳಗಾವಿ ಬಸ್ ನಿಲ್ಧಾಣದಲ್ಲಿ ಧರಣಿ ನಡೆಸುತ್ತಿರುವ ಸಾರಿಗೆ ನೌಕರರ ಮುಖಂಡರ ಜೊತೆ,ಮತ್ತು ರೈತ ಮುಖಂಡರ ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ,ಎಸ್ ಪಿ ನಿಂಬರಗಿ,ಮತ್ತು ನಗರ ಪೋಲೀಸ್ ಆಯುಕ್ತರು ಸಭೆ ನಡೆಸಿದರು. ಜಿಲ್ಲಾಡಳಿತ ಸಾರಿಗೆ ನೌಕರರ ಜೊತೆಗಿದೆ,ನೌಕರರಿಗೆ ಯಾವುದೇ ರೀತಿಯ ಸಮಸ್ಯೆ ಇದ್ದರೆ ಜಿಲ್ಲಾಡಳಿತ ಅದಕ್ಕೆ ತಕ್ಷಣ ಸ್ಪಂದಿಸುತ್ತದೆ. ಕೂಡಲೇ ಎಲ್ಲರೂ ಕರ್ತವ್ಯಕ್ಕೆ ಹಾಜರಾಗಿ ,ಎಲ್ಲರೂ ಡ್ಯುಟಿ ರಿಪೋರ್ಟ್ ಮಾಡಿ ಎಂದು ಜಿಲ್ಲಾಧಿಕಾರಿ ಹಿರೇಮಠ ಹೋರಾಟಗಾರರಲ್ಲಿ ಮನವಿ …

Read More »

ಬೆಳಗಾವಿಯಲ್ಲಿ, ಪೋಲೀಸ್ ಎಸ್ಕಾಟ್ ನಲ್ಲಿ ಬಸ್ ಸಂಚಾರ ಆರಂಭ…

ಬೆಳಗಾವಿ- ಬೆಳಗಾವಿ ಬಸ್ ನಿಲ್ಧಾಣಕ್ಕೆ ಬೆಳ್ಳಂ ಬೆಳಿಗ್ಗೆ, ಜಿಲ್ಲಾಧಿಕಾರಿ ಹಿರೇಮಠ, ನಗರ ಪೊಲೀಸ ಆಯುಕ್ತ ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ ಆಗಮಿಸಿದ್ದಾರೆ,ಬಿಗಿ ಪೋಲೀಸ್ ಬಂದೋಬಸ್ತಿಯಲ್ಲಿ ಬಸ್ ಸಂಚಾರ ಆರಂಭವಾಗಿದ್ದು ಪ್ರಯಾಣಿಕರು ನಿಶ್ಚಿಂತವಾಗಿ ಬಸ್ ಹತ್ತಬಹುದು ಯಾಕಂದ್ರೆ,ಪ್ರತಿಯೊಂದು ಬಸ್ ನಲ್ಲೂ ಪೋಲೀಸರು ಇದ್ದಾರೆ ಬೆಳಗಾವಿಯಲ್ಲಿ ರಾತ್ರೋರಾತ್ರಿ ಪ್ರತಿಭಟನಾಕಾರರನ್ನು ಜಾಗ ಖಾಲಿ ಮಾಡಿಸಿದ ಪೋಲಿಸರು ತಡರಾತ್ರಿಯೇ ಪ್ರತಿಭಟನಾ ಸ್ಥಳವನ್ನು ಖಾಲಿ ಮಾಡಿಸಿದ್ದರು ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿ ಪ್ರತಿಭಟನಾ ಸ್ಥಳಕ್ಕೆ …

Read More »

ಬೆನ್ನಾಳಿ ಗ್ರಾಮದಲ್ಲಿ ಇಬ್ಬರ ಆತ್ಮಹತ್ಯೆ

ಬೆಳಗಾವಿ- ಬೆಳಗಾವಿ ಸಮೀಪದ ಬೆನ್ನಾಳಿ ಗ್ರಾಮದಲ್ಲಿ ಇಬ್ಬರು ಏಕಕಾಲದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಬೆನ್ನಾಳಿ ಗ್ರಾಮದ 31 ವರ್ಷದ ಶಿವಾಜಿ ಗಾಡಿವಡ್ಡರ್ ಗ್ರಾಮದ ಮರವೊಂದಕ್ಕೆ ನೇಣು ಹಾಕಿಕೊಂಡಿದ್ದು,35 ವರ್ಷದ ಜಯಶ್ರೀ ಗಾಡಿವಡ್ಡರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಕಾಕತಿ ಠಾಣೆಯ ಪೋಲೀಸರು ದೌಡಾಯಿಸಿದ್ದು ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ..

Read More »

ಹೋರಾಟ..ಹಾರಾಟ..ಮತ್ತೇ ಚೀರಾಟ,ಪ್ರಯಾಣಿಕರ ಗೋಳಾಟ….!

ಬೆಳಗಾವಿ-ಸಂಧಾನ ಸಕ್ಸೆಸ್ ಆಗಿದೆ ಅಂತಾ ಮಾದ್ಯಮಗಳಲ್ಲಿ ಸುದ್ಧಿ ಬಂತು,ಡಿಪೋದಲ್ಲಿ ಇದ್ದ ಬಸ್ ಬೆಳಗಾವಿಯ ಬಸ್ ನಿಲ್ಧಾಣಕ್ಕೆ ಬಂತು,ಬಸ್ಸಿನ ನಿರ್ವಾಹಕ,ಬೆಳಗಾವಿ- ಮುಂಬಯಿ ಬೋರ್ಡ್ ಹಾಕುತ್ತಿದ್ದಂತೆಯೇ ಸಂಧಾನ ಬೋಗಸ್ ಅಂತಾ ಮಾಹಿತಿ ಬಂತು,ನಿಲ್ಧಾಣಕ್ಕೆ ಬಂದಿದ್ದ ಬಸ್ ಮುಂಬಯಿ ಗೆ ಹೋಗುವ ಬದಲು ಮತ್ತೆ ಡಿಪೋಗೆ ಹೋಯ್ತು,ಇದು ಬೆಳಗಾವಿ ಬಸ್ ನಿಲ್ಧಾಣದಲ್ಲಿ ಇಂದು ಸಂಜೆ ನಡೆದ ಕಹಾನಿ.. ಬೆಳಗಾವಿ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆ ಮುಂದುವರೆದಿದೆ.ಡಿಪೋದಿಂದ ನಿಲ್ದಾಣಕ್ಕೆ ಬಂದಿದ್ದ ಬೆಳಗಾವಿ ಮುಂಬೈ ಬಸ್ …

Read More »

ಸವದತ್ತಿಯಲ್ಲಿ ಕಾಂಗ್ರೆಸ್ ನಾಯಕರ ಹಲ್ ಚಲ್…..

ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …

Read More »

ಬೆಳಗಾವಿಯಲ್ಲಿ ಇಟ್ಟಂಗಿ ಚಳವಳಿ….!!!

ಬೆ ಬೆಳಗಾವಿ- ಇಟ್ಟಂಗಿ ಹೊತ್ತು ಮಂಡಿ ಊರಿ ನಡೆದು ನಡೆದು ಬೆಳಗಾವಿ ಬಸ್ ನಿಲ್ಧಾಣದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಬೊಬ್ಬೆ ಹಾಕುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಸಾರಿಗೆ ನೌಕರರಿಗೆ ಅವರ ಮಕ್ಕಳು ಸಹ ತಲೆ ಮೇಲೆ ಇಟ್ಟಂಗಿ ಹೊತ್ತು ಸಾಥ್ ಕೊಡುವ ಮೂಲಕ ಎಲ್ಲರ ಗಮನ ಸೆಳೆದರು. ಬೆಳಗಾವಿಯಲ್ಲಿ ಮೂರನೇ ದಿನದ ಸಾರಿಗೆ ನೌಕರರ ಪ್ರತಿಭಟನೆ ಮುಂದುವರೆದಿದ್ದು ಅರಬೆತ್ತಲೆಯಾಗಿ ತಲೆ ಮೇಲೆ ಕಲ್ಲು ಹೊತ್ತುಕೊಂಡು …

Read More »

ಬೆಳಗಾವಿ ಬಸ್ ನಿಲ್ಧಾಣ ಬಿಕೋ….ಪ್ರಯಾಣಿಕರ ಹೊಯ್ಕೋ…!!!

ಬೆಳಗಾವಿ-ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಮೂರನೆಯ ದಿನಕ್ಕೆ ಕಾಲಿಟ್ಟಿದೆ. ಎರಡು ದಿನಗಳ ಕಾಲ ಅಹೋರಾತ್ರಿ ನಡೆದಿರುವ ಹೋರಾಟ ,ಇವತ್ತು ಮೂರನೇಯ ದಿನವೂ ಯಶಸ್ವಿಯಾಗಿ ಮುಂದುವರೆದಿದೆ,ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ಇವತ್ತೂ ಬಸ್ ಗಳ ಭರಾಟೆ ಇಲ್ಲ,ಪ್ರಯಾಣಿಕರ ಗಲಾಟೆಯ ಸದ್ದು ಇಲ್ಲ. ಇಲ್ಲಿ ಏನಿದ್ದರೂ ಹೋರಾಟದ ಕಿಚ್ಚು ಕೇಳಿಸುತ್ತಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಸಾರಿಗೆ ನೌಕರರ ಕುಟುಂಬಸ್ಥರೂ ಭಾಗಿಯಾಗಿದ್ದು ಇಂದು ಭಾನುವಾರ …

Read More »

ಪಂಚಾಯತಿ ಇಲೆಕ್ಷನ್, ಏನಾದ್ರು ಸಮಸ್ಯೆ ಇದ್ರೆ,ಕಂಪ್ಲೇಂಟ್ ಮಾಡಿ

ಗ್ರಾಮ ಪಂಚಾಯತಿ ಚುನಾವಣೆ: ವೀಕ್ಷಕರಾಗಿ ಇಬ್ರಾಹಿಂ ಮೈಗೂರ ನಿಯೋಜನೆ ಬೆಳಗಾವಿ,-  ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಗೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾ (ಆಡಳಿತ ಮತ್ತು ಮಾನವ ಸಂಪನ್ಮೂಲ) ಇಬ್ರಾಹಿಂ ಮೈಗೂರ ಅವರನ್ನು ಚುನಾವಣಾ ವೀಕ್ಷಕರಾಗಿ ನಿಯೋಜನೆ ಮಾಡಲಾಗಿರುತ್ತದೆ. ವೀಕ್ಷಕರು, ದಿನಾಂಕ:11.12.2020 ರಿಂದ ಬೆಳಗಾವಿಯಲ್ಲಿ ಸರ್ಕಿಟ್ ಹೌಸ್ ಹಳ ಕಟ್ಟಡದ ಕೊಠಡಿ ಸಂಖ್ಯೆ 9 ರಲ್ಲಿ ವಾಸ್ತವ್ಯ ಮಾಡಲಿದ್ದು, ಜಿಲ್ಲಾದ್ಯಂತ ಎಲ್ಲ ತಾಲೂಕುಗಳಿಗೆ ಭೇಟಿ ನೀಡುವವರು. …

Read More »

ಎರಡು ದಿನದಲ್ಲಿ, ಎರಡು ಕೋಟಿ ಲಾಸು,ಜೊತೆಗೆ ಪ್ರಯಾಣಿಕರಿಗೆ ತ್ರಾಸು…!!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಸಾರಿಗೆ ನೌಕರರ ಮುಷ್ಕರ ಎರಡನೇಯ ದಿನವೂ ಅಹೋ ರಾತ್ರಿ ಮುಂದುವರೆದಿದ್ದು,ನಾಳೆ ರವಿವಾರವೂ ಬಸ್ ಗಳ ಓಡಾಟ ಇರುವುದಿಲ್ಲ ನಾಳೆಯೂ ಬಸ್ ಬಂದ್ ಮುಷ್ಕರ ಮುಂದುವರೆಯಲಿದೆ. ಬೆಳಗಾವಿ ಬಸ್ ನಿಲ್ಧಾಣದಲ್ಲಿ ನಿಲ್ಲಿಸಿದ್ದ ನೂರಕ್ಕೂ ಹೆಚ್ಚು ಬಸ್ ಗಳನ್ನು ಬಸ್ ಡಿಪೋಗಳಿಗೆ ರವಾನಿಸಲಾಗಿದ್ದು,ಬೆಳಗಾವಿ ಬಸ್ ನಿಲ್ಧಾಣದಲ್ಲಿ ಈಗ ಸಾರಿಗೆ ನೌಕರರು ಮಾತ್ರ ಧರಣಿ ಮುಂದುವರೆಸಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು,ಬೆಂಗಳೂರಿನಲ್ಲಿ ಮಾತನಾಡಿ,ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು …

Read More »

ಹೋರಾಟದಲ್ಲಿ ಪಾಲ್ಗೊಂಡ ಬೆಳಗಾವಿಯ ಬಸ್ ಚಾಲಕನ ಸಾವು…

ಬೆಳಗಾವಿ- ಬೆಳಗಾವಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ ಮುಂದುರೆದಿದ್ದು ನಿನ್ನೆ ಶುಕ್ರವಾರ ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾತ್ರಿ ಮನೆಗೆ ತೆರಳಿದ್ದ ಬಸ್ ಚಾಲಕನೊಬ್ಬ ಹೃದಯಾಘಾತದಿಂದ ಸಾವನ್ನೊಪ್ಪಿದ ಘಟನೆ ನಡೆದಿದೆ. ಬಸ್ ಚಾಲಕ ಹೃದಯಾಘಾತದಿಂದ ಸಾವನ್ನೊಪ್ಪಿದ್ದು.ಈತ ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ. ಹೃದಯಾಘಾತದಿಂದ ನಿನ್ನೆ ತಡರಾತ್ರಿಯಲ್ಲಿ ಸಾವನ್ನಪ್ಪಿದ್ದಾನೆ. ಪ್ರತಿಭಟನೆಯಲ್ಲಿ ಭಾಗಿಯಾದ ಸಂಧರ್ಭದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನಲೆ ಮನೆ ತೆರಳಿದ್ದ ಚಾಲಕ, ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್ (58) ಮೃತಪಟ್ಟಿದ್ದಾನೆ. ಬೆಳಗಾವಿಯ …

Read More »

ಅಶೋಕ ಪೂಜಾರಿ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಅಂತೆ….!!!

ಬೆಳಗಾವಿ- ಬೆಳಗಾವಿಯ ಮಾಸ್ಟರ್ ಮೈಂಡ್ ಈಗ ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದಂತೆ ಕಾಣುತ್ತಿದೆ.ಲೋಕಸಭಾ ಉಪ ಚುನಾವಣೆಯಲ್ಲಿ ಬೆಳಗಾವಿಯಿಂದ ಅಶೋಕ ಪೂಜಾರಿಯನ್ನು ಕಣಕ್ಕಿಳಿಸುವ ತಯಾರಿ ನಡೆದಿದೆ ಎನ್ನುವ ಸುದ್ಧಿ ಈಗ ಸದ್ದಿಲ್ಲದೇ ಹರಿದಾಡುತ್ತಿದೆ. ಬಿಜೆಪಿಗೆ ಟಕ್ಕರ್ ಕೊಡಲು,ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಗೋಕಾಕಿನ ಅಶೋಕ ಪೂಜಾರಿ ಅವರನ್ನುಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಅಶೋಕ ಪೂಜಾರಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಶೀಘ್ರದಲ್ಲೇ ಕಾಂಗ್ರೆಸ್ …

Read More »

ಬೆಳಗಾವಿಯಲ್ಲಿ ಇವತ್ತೂ ಬಸ್ ಬಂದ್..

ಬೆಳಗಾವಿ,- ಸಾರಿಗೆ ನೌಕರರು ನಡೆಸುತ್ತಿರುವ ಹೋರಾಟ ,ಎರಡನೇ ದಿನವೂ ಮುಂದುವರೆದಿದ್ದು ಇವತ್ತೂ ಸಮಸ್ಯೆ ಬಗೆ ಹರೆಯುವ ಲಕ್ಷ್ಮಣಗಳು ಕಾಣಿಸುತ್ತಿಲ್ಲ,ಹೀಗಾಗಿ ಇವತ್ತೂ ಬಸ್ ಗಳು ಓಡಾಡುವದು ಡೌಟು… ಸಾರಿಗೆ ನೌಕರರ ಧರಣಿ ಎರಡನೇಯ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮುಂದುವರೆದಿದೆ. ಸಾರಿಗೆ ನೌಕರರ ಹೋರಾಟಕ್ಕೆ ರೈತ ಮುಖಂಡರು ಸಾಥ್ ಕೊಟ್ಟಿದ್ದಾರೆ. ಇಂದು ಬೆಳ್ಳಂ ಬೆಳಗ್ಗೆ ತಲೆ ಮೇಲೆ ಚಪ್ಪಲಿ ಹೊತ್ತು ಘೋಷಣೆ ಕೂಗುವದರ ಮೂಲಕ ಇವತ್ತಿನ ಹೋರಾಟ …

Read More »

ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ ಅಸೀಡ್ ದಾಳಿ….

ಬೆಳಗಾವಿ-ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ,ಅಸೀಡ್ ದಾಳಿ ನಡೆದಿದ್ದು,ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ರಾಯಬಾಗ ಪಟ್ಟಣದಲ್ಲಿ ಸಂಜೆ 7 ಗಂಟೆಗೆ ನಡೆದಿದೆ. ರಾಯಬಾಗ ಪಟ್ಟಣದಲ್ಲಿರುವ ಜನದ ಕಟ್ಟೆಯಲ್ಲಿ ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ ಅಸೀಡ್ ದಾಳಿ ನಡೆದ ತಕ್ಷಣ ಪೋಲೀಸರು ಸ್ಥಳಕ್ಕೆ ಧಾವಿಸಿ ಅಸೀಡ್ ದಾಳಿಗೆ ತುತ್ತಾದ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ.ಸ್ಥಳೀಯ ವೈದ್ಯರ ಶಿಫಾರಸಿನ ಮೇರೆಗೆ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸೀಡ್ ದಾಳಿ ನಡೆದ ಒಂದು …

Read More »

ಅಡುಗೆ ಮನೆಯಾದ ಬೆಳಗಾವಿ ಕೇಂದ್ರ ಬಸ್ ನಿಲ್ಧಾಣ….

ಬೆಳಗಾವಿ- ಬೆಳಗಾವಿ ಬಸ್ ನಿಲ್ಧಾಣ ಇವತ್ತು ಅಕ್ಷರಶಃ ಹೋರಾಟದ ಕೇಂದ್ರವಾಗಿದೆ ಇವತ್ತು ಇಡೀ ದಿನ ಈ ನಿಲ್ಧಾಣದಲ್ಲಿ ಕ್ರಾಂತಿಯ ಕಿಡಿಯ ಜೊತೆಗೆ ಒಲೆಯೂ ಹೊತ್ತಿದೆ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ನಡೆಯುತ್ತಿರುವ ಸಾರಿಗೆ ನೌಕರರ ಹೋರಾಟಕ್ಕೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯೆಕ್ತವಾಗಿದೆ. ಧರಣಿ ನಡೆಸುತ್ತಿರುವ ಸಾರಿಗೆ ನೌಕರರು ಮದ್ಯಾಹ್ನದ ಊಟವನ್ನು ನಿಲ್ಧಾಣದಲ್ಲೇ ಮಾಡಿದರು.ಈಗ ರಾತ್ರಿ ಊಟಕ್ಕೆ ಅಡುಗೆ ತಯಾರಿಸುವ ಕಾರ್ಯ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲೇ ನಡೆಯುತ್ತಿದೆ ಮುಷ್ಕರದಲ್ಲಿ …

Read More »

ಬೆಳಗಾವಿಯಲ್ಲೇ ಕಾಂಗ್ರೆಸ್ ಅಭ್ಯರ್ಥಿ ಫೈನಲ್

ಬೆಳಗಾವಿ ಬೆಳಗಾವಿ ಲೋಕಸಭೆಯ ಉಪಚುನಾವಣೆಯಲ್ಲಿ ನನ್ನ ಹೆಸರು ಅಂತಿಮವಾಗಿದೆ ಎಂದು ಸಹಜವಾಗಿಯೂ ಆಗಿದೆ, ಕೆಲವರು ಸುದ್ದಿ ಮಾಡಿಸುವ ಪ್ರಯತ್ನವೂ ಮಾಡಿದ್ದಾರೆ. ಅದು ಕೇವಲ ಊಹಾಪೋಹ ಅಭ್ಯರ್ಥಿ ಆಯ್ಕೆ ಬೆಂಗಳೂರಿನಲ್ಲಿ ಆಗುವುದಿಲ್ಲ. ಅದು ಬೆಳಗಾವಿಯಲ್ಲಿಯೇ ಆಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ಶುಕ್ರವಾರ ನಗರದ ಆರ್‌ಟಿಒ ಬಳಿ ಇರುವ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ …

Read More »