Breaking News

LOCAL NEWS

ಕೋಯ್ನಾ ಜಲಾಶಯದ ಪರಿಸ್ಥಿತಿ ಪರಶೀಲಿಸಿದ ಮಹಾರಾಷ್ಟ್ರ ಜಲಸಂಪನ್ಮೂಲ ಸಚಿವ

ಮಹಾರಾಷ್ಟ್ರದ ಜಲಸಂಪನ್ಮೂಲ ಖಾತೆ ಸಚಿವ ಶ್ರೀ ಜಯಂತ ಪಾಟೀಲ ಹಾಗೂ ಗೃಹ ಸಚಿವ ಶ್ರೀ ಶಂಭುರಾಜ ಪಾಟೀಲ ಅವರು ಮಂಗಳವಾರ ಸಂಜೆ 5 ಗಂಟೆಗೆ ಸಾತಾರಾ ಜಿಲ್ಲೆಯ ಕೊಯ್ನಾ ಡ್ಯಾಂ ಪ್ರದೇಶಕ್ಕೆ ಭೆಟ್ಟಿ ನೀಡಿ ನೀರಿನ ಸಂಗ್ರಹ,ಬಿಡುಗಡೆಯ ಬಗ್ಗೆ ಪರಿಶೀಲನೆ ನಡೆಸಿದರು .105 ಟಿ ಎಮ್ ಸಿ ಸಾಮರ್ಥ್ಯದ ಡ್ಯಾಮ್ ತುಂಬಲು ಇನ್ನು ಕೇವಲ 12 ಟಿ ಎಮ್ ಸಿ ಬಾಕಿಯಿದೆ.ಕೃಷ್ಣಾ ನದಿಗೆ 55 ಸಾವಿರ ಕ್ಯೂಸೆಕ್ಸದಷ್ಟು ನೀರು ಬಿಡುಗಡೆಯಾಗುತ್ತಿದೆ.ಕಳೆದ …

Read More »

ಸಂಸದ ಅನಂತಕುಮಾರ ಹೆಗಡೆ ಕಾರು ಅಡ್ಡಗಟ್ಟಿದ ರೈತರು

ಕಿತ್ತೂರು ಕ್ಷೇತ್ರದಲ್ಲಿ ಸಂಸದ ಅನಂತಕುಮಾರ್ ಹೆಗಡೆಗೆ ತಟ್ಟಿದ ಪ್ರತಿಭಟನೆಯ ಬಿಸಿ.. ಬ ಸಂಸದ ಅನಂತಕುಮಾರ ಹೆಗಡೆ ಹಾಗೂ ಶಾಸಕ ಮಹಾಂತೇಶ ದೊಡಗೌಡರ ಇರುವ ಕಾರನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ ರೈತ ಸಂಘಟನೆ ಕಾರ್ಯಕರ್ತರು ಬೆಳಗಾವಿ- ರೈತರ ಸಮಸ್ಯೆಗಳನ್ನು ಆಲಿಸದೆ ಅಲ್ಲಿಂದ ತೆರಳಲು ಮುಂದಾದ ಸಂಸದ ಅನಂತಕುಮಾರ ಹೆಗಡೆ ಅವರ ವಾಹನಕ್ಕೆ ರೈತರು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಎಂ.ಕೆ.ಹುಬ್ಬಳ್ಳಿಯಲ್ಲಿ ನಡೆದಿದೆ. ಕಿತ್ತೂರು ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನ ಮಂತ್ರಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಜಲ ಕಂಟಕ….!

ಬೆಳಗಾವಿ- ಪಕ್ಕದ ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸಿಕ್ಕಾಪಟ್ಟೆ ಮಳೆ ಸುರಿಯುತ್ತಿದ್ದು ಬೆಳಗಾವಿ ಜಿಲ್ಲೆಯ ಬಹುತೇಕ ಎಲ್ಲ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು ಜಿಲ್ಲೆಯ ಜಲಾಶಯಗಳು ಭರ್ತಿಯಾಗಿ,ಜಲಾಶಯಗಳಿಂದ ಬಿಡುಗಡೆಯಾದ ನೀರು ಬೆಳಗಾವಿ ಜಿಲ್ಲೆಯಲ್ಲಿ ಅವಾಂತರ ಸೃಷ್ಠಿ ಮಾಡಿದೆ. ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಪರಿಣಾಮ ಗೋಕಾಕಿನಲ್ಲಿ ಮತ್ತೆ ಜಲ ಕಂಟಕ ಎದುರಾಗಿದ್ದು ಗೋಕಾಕಿನಲ್ಲಿ ಹಲವಾರು ಬಡಾವಣೆಗಳು ಮುಳುಗಡೆ ಯಾಗಿದ್ದು,ಗೋಕಾಕಿನ ಜನ ಸಾಕಪ್ಪಾ ಸಾಕು ಎನ್ನುವಂತಾಗಿದೆ. ವಿಪರೀತ ಮಳೆಯಿಂದಾಗಿ …

Read More »

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರನ್ನು ಭೇಟಿಯಾದ ಸಾಹುಕಾರ್…

ರಾಷ್ಟ್ರೀಯ ಜಲ ನೀತಿಯನ್ನು ರೂಪಿಸುವುದು ಮತ್ತು ಅತಿವೃಷ್ಟಿಯನ್ನು ತಡೆಯಲು ನದಿಗಳ ಜೋಡಣೆ ಮಾಡುವ ಯೋಜನೆ ರೂಪಿಸುವ ದೃಷ್ಟಿಯಿಂದ ಪಕ್ಷವು ನಿರ್ದಿಷ್ಟ ಕಾರ್ಯಕ್ರಮ ರೂಪಿಸಬೇಕೆಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ *ಶ್ರೀ ಜಗತ್ ಪ್ರಕಾಶ್ ನಡ್ಡಾ* ಅವರಿಗೆ ಮನವಿ ಮಾಡಿದರು. ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಯೋಜನೆಗಳನ್ನು ಜನಸಾಮಾನ್ಯರಿಗೆ …

Read More »

ಪತ್ತೆಯಾದ ಸೊಂಕಿತರಕ್ಕಿಂತ ಡಿಸ್ಚಾರ್ಜ್ ಆದವರ ಸಂಖ್ಯೆ ದುಪ್ಪಟ್ಟು…

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇಂದು ಸೋಮವಾರ ಪತ್ತೆಯಾದ ಸೊಂಕಿತರಕ್ಕಿಂತ ಗುಣಮುಖರಾಗಿ,ಡಿಸ್ಚಾರ್ಜ್ ಆದವರ ಸಂಖ್ಯೆ ದುಪ್ಪಟ್ಟಾಗಿದೆ. ಇಂದು ಸೋಮವಾರದ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಇಂದು 171ಸೊಂಕಿತರು ಪತ್ತೆಯಾಗಿದ್ದು ಇಂದು ಒಂದೇ ದಿನ 279 ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖ ವಾಗುತ್ತಿದೆ.ಜೊತೆಗೆ ಗುಣಮುಖರಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವದು ಸಂತಸದ ಸಂಗತಿಯಾಗಿದೆ. Today discharge-279 Today positive-171 Active …

Read More »

ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಸಿ ಭೇಟಿ,ಪರಿಸ್ಥಿತಿ ಪರಶೀಲನೆ

ವ್ಯಾಪಕ ಮಳೆ: ನದಿತೀರದ ಗ್ರಾಮಗಳು, ಪರಿಹಾರ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ, ಪರಿಶೀಲನೆ ಬೆಳಗಾವಿ, -ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಮೊದಲು‌ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು …

Read More »

विकास पुरुष बनले बेळगावसाठी भगीरथ

विकास पुरुष बनले बेळगावसाठी भगीरथ बेळगाव शहराच्या दृष्टीने महत्त्वाची असलेली 24 तास पाणी योजना बेळगाव दक्षिणचे आमदार अभय पाटील यांनी पूर्ण  प करण्याचा विडा उचलला आहे बेळगाव साठी ही योजना स्वप्नवत असताना त्यांनी पुन्हा एकदा याच्या अंमलबजावणीसाठी प्रयत्न सुरू केले असून, बेळगावकरांच्या हातातून निसटलेली 24 तास पाणी योजना पूर्णत्वाकडे नेण्याचा …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಸಮರ ಸಾರಿದ ಅಭಿಮಾನಿಗಳು

ರಳಗಾವಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪೀರನವಾಡಿ ಗ್ರಾಮದಲ್ಲಿ ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ರಾಯಣ್ಣನ ಸಾವಿರಾರು ಅಭಿಮಾನಿಗಳು ಬೆಳಗಾವಿಯಲ್ಲಿ ಸಮರ ಸಾರಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ರಸ್ತೆಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹೊರಡಿಸಿರುವ ಸಾವಿರಾರು ಅಭಿಮಾನಿಗಳು,ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ. ಪೀರನವಾಡಿಯಲ್ಲಿ,ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು,ಇಲ್ಲವಾದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅಭಿಮಾನಿಗಳಿಗೆ ಅನುಮತಿ ನೀಡಬೇಕೆಂದು ಸಾವಿರಾರು ಅಭಿಮಾನಿಗಳು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲಿದ್ದಾರೆ ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ …

Read More »

ಕೊರೊನಾ ಸಾವುಗಳು: ನಾಗರಿಕ ಸಮಾಜದ ಮಾನವೀಯತೆಗೆ ಎಸೆದ ಸವಾಲು

ಕೋವಿಡ್-19 ಇಡೀ ಮಾನವ ಕುಲದ ಮನುಷ್ಯತ್ವಕ್ಕೆ ಸವಾಲು ಎಸೆದಿದೆ. ಕೋವಿಡ್‍ನಿಂದಾಗಿ ಉಂಟಾಗುತ್ತಿರುವ ಸಾವುಗಳನ್ನು ನಾಗರಿಕ ಸಮಾಜದ ಮಾನವೀಯತೆಯನ್ನು ಪರೀಕ್ಷೆಗೆ ಒಳಪಡೆಸಿವೆ. ಮಾನವೀಯ ಸಾಕ್ಷಿಗಳು ಎದುರಿಗಿರುವಂತೆ ಕನಿಷ್ಟಮಟ್ಟದ ಮಾವೀಯತೆ ತೋರದ ಹಲವಾರು ಸಾಕ್ಷಿಗಳು ನಿತ್ಯ ಎದುರಾಗುತ್ತಿವೆ. ಬೆಳಗಾವಿ ಜಿಲ್ಲೆ ಎಂ.ಕೆ. ಹುಬ್ಬಳ್ಳಿಯಲ್ಲಿ 70 ವರ್ಷ ವಯಸ್ಸಿನ ಹಿರಿಯ ಜೀವಯೊಂದು ಕೋವಿಡ್ ಚಿಕಿತ್ಸೆ ಫಲಿಸದೆ ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ. ಕೊರೊನಾ ಭಯದಿಂದಾಗಿ ಶವ ಸಂಸ್ಕಾರಕ್ಕೆ ಊರಿನ ಯಾರೂ ಸಮೀಪ ಸುಳಿಯಲಿಲ್ಲ. ವಿಷಯ ಪಟ್ಟಣ …

Read More »

ರಾಜ್ಯಮಟ್ಟದ ಗಮನ ಸೆಳೆಯುತ್ತಿರುವ ಫೀರನವಾಡಿಯ ರಾಯಣ್ಣ ಪ್ರತಿಮೆ ವಿವಾದ….

.ಬೆ ಬೆಳಗಾವಿ-ಬೆಳಗಾವಿ ಮಹಾನಗರಕ್ಕೆ ಹೊಂದಿಕೊಂಡಿರುವ ಪೀರನವಾಡಿಯ,ಕ್ರಾಂತಿವೀರ ಸೊಂಗೊಳ್ಳಿ ರಾಯಣ್ಣನ ಮೂರ್ತಿ ವಿವಾದ ಈಗ ರಾಜ್ಯಮಟ್ಟದ ನ ಸೆಳೆದಿದೆ. ಪೀರನವಾಡಿಯ ರಾಯಣ್ಣನ ಮೂರ್ತಿಯ ವಿವಾದವನ್ನು ಸೌಹಾರ್ದಯುತವಾಗಿ ಬಗೆ ಹರಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಟ್ವೀಟ್ ಮಾಡಿದ್ದಾರೆ. ಜೊತೆಗೆ ರಾಜ್ಯದ ಘಟಾನುಘಟಿಗಳು ಈ ವಿವಾದದ ಕುರಿತು ಟ್ವೀಟ್ ಮಾಡಿದ್ದು ಪೀರನವಾಡಿಯ ವಿವಾದ ಈಗ ರಾಜ್ಯಮಟ್ಟದಲ್ಲಿ ಧ್ವನಿ ಎತ್ತಿದೆ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಮಾಡಲು,ಅನುಮತಿ ನೀಡುವಂತೆ ಆಗ್ರಹಿಸಿ ನಾಳೆ …

Read More »

ರದ್ದಾದ ಯೋಜನೆಗೆ ಮತ್ತೇ ಲೀಫ್ಟ್….ಶಾಸಕ ಅಭಯ ಪಾಟೀಲರಿಂದ ಬೆಳಗಾವಿಗೆ ಸ್ಪೇಷಲ್ ಗೀಫ್ಟ್….!

ಬೆಳಗಾವಿ-ಬೆಳಗಾವಿ ಮಹಾನಗರದ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಶಾಸಕ ಅಭಯ ಪಾಟೀಲ ಅವರು ಸದ್ದಿಲ್ಲದೇ ಬೆಳಗಾವಿಯಿಂದ ಕೈಬಿಟ್ಟು ಹೋಗಿದ್ದ ನಿರಂತರ ನೀರು 24/7 ಮಹತ್ವದ ನೀರಿನ ಯೋಜನೆಗೆ ಮಂಜೂರಾತಿ ಪಡೆದು ಈ ಯೋಜನೆಯನ್ನು ಅನುಷ್ಠಾನ ಗೊಳಿಸುವ ಹಂತಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಹಲವಾರು ವರ್ಷಗಳ ಹಿಂದೆಯೇ ಬೆಳಗಾವಿ ಮಹಾನಗರಕ್ಕೆ 24/7 ಕುಡಿಯುವ ನೀರಿನ ಯೋಜನೆ ಮಂಜೂರಾಗಿತ್ತು ಕಾರಣಾಂತರಗಳಿಂದ ಈ ಯೋಜನೆ ರದ್ದಾಗಿ ಅನುದಾನವೂ ವಾಪಸ್ ಹೋಗಿತ್ತು,ಈ ಬೆಳವಣಿಗೆಯನ್ನು ಸಹಿಸದ ಶಾಸಕ ಅಭಯ ಪಾಟೀಲ …

Read More »

ಮಹಾರಾಷ್ಟ್ರದಲ್ಲಿ ಸಿಕ್ಕಾಪಟ್ಟೆ ಮಳೆ,ಕೃಷ್ಣಾ ತೀರದಲ್ಲಿ ಹೆಚ್ಚಿದ ಆತಂಕ…

ಬೆಳಗಾವಿ- ಮಹಾರಾಷ್ಟ್ರದ ಕೋಯ್ನಾ,ವಾರಣಾ ಜಲಾಶಯಗಳ ಪ್ರದೇಶಗಳಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು ಕೋಯ್ನಾ ಜಲಾಶಯ ಭರ್ತಿಯಾಗುವ ಹೊಸ್ತಿಲಲ್ಲಿದ್ದು ಇಂದು ಮದ್ಯಾಹ್ನ ಕೋಯ್ನಾ ಜಲಾಶಯದಿಂದ ಐವತ್ತು ಸಾವಿರ ಕ್ತುಸೆಕ್ಸ ನೀರು ಕೃಷ್ಣಾ ನದಿಗೆ ಹರಿದು ಬರಲಿದೆ. ಮಳೆಯಿಂದಾಗಿ ರಾಜಾಪೂರ ಬ್ಯಾರೇಜ್ ನಲ್ಲಿ ಒಳ ಹರಿವು ಈಗಾಗಲೇ ಒಂದುವರೆ ಲಕ್ಷ ಕ್ಯುಸೆಕ್ಸ್ ತಲುಪಿದಿ ಇಂದು ಮದ್ಯಾಹ್ನ ಕೋಯ್ನಾ ಜಲಾಶಯದಿಂದ 50 ಸಾವಿರ ಕ್ಯುಸೆಕ್ಸ್ ನೀರು ಬಿಡುಗಡೆಯಾಗಲಿದ್ದು ಇಂದು ರಾತ್ರಿ ಅಥವಾ ನಾಳೆ ಕೃಷ್ಣಾ ನದಿಯ …

Read More »

ವಾರಣಾ ಜಲಾಶಯದ ಪರಿಸರದಲ್ಲಿ ಸೌಮ್ಯ ಭೂಕಂಪ,ಕೃಷ್ಣಾ ನದಿ ತೀರದಲ್ಲಿ ಆತಂಕ

ಬೆಳಗಾವಿ- ಮಹಾರಾಷ್ಟ್ರದ ವಾರಣಾ ಜಲಾಶಯದ ಪ್ರದೇಶದಲ್ಲಿ ಸೌಮ್ಯ ಭೂಕಂಪವಾಗಿದ್ದು ಕೃಷ್ಣಾ ನದಿ ತೀರದಲ್ಲಿ ಆತಂಕ ಶುರುವಾಗಿದೆ ವಾರಣಾ ಜಲಾಶಯದಿಂದ ಮೂವತ್ತು ಕಿಮಿ ಅಂತರದಲ್ಲಿರುವ ಚಿಕಲೆ ಗ್ರಾಮದಲ್ಲಿ ,3.1 ರಿಕ್ಟೇರ್ ಸ್ಕೇಲೆ ಭೂಕಂಪನವಾದ ಕುರಿರು ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ವಾರಣಾ ಪ್ರದೇಶದಲ್ಲಿ ಪ್ರತಿ ವರ್ಷ ಸೌಮ್ಯ ಪ್ರಮಾಣದ ಭೂಕಂಪ ಆಗುತ್ತದೆ ಆದ್ರೆ ಇದಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರದ ಜಲತತಜ್ಞರು ಮರಾಠಿ ದೃಶ್ಯ ಮಾದ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಕೋಯ್ನಾ ಮತ್ತು …

Read More »

ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ರಿಪೋರ್ಟ್ ಪಾಸಿಟಿವ್

ಬೆಳಗಾವಿ- ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಕೋವೀಡ್ ಟೆಸ್ಟ್ ಮಾಡಿಸಿಕೊಂಡಿದ್ದು ಅವರ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಸ್ವತಹ ಅವರೇ ಮಾಹಿತಿ ಹಂಚಿಕಡಿದ್ದಾರೆ. ಬೆಳಗಾವಿ ಪೋಲೀಸ್ ಆ್ಯಂಡ್ ಮೀಡಿಯಾ ವ್ಯಾಟ್ಸಪ್ ಗ್ರೂಪ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ನನ್ನ ರಿಪೋರ್ಟ್ ಪಾಸಿಟಿವ್ ಬಂದಿದೆ ನನ್ನ ಸಂಪರ್ಕಕ್ಕೆ ಬಂದವರು ಕೇರ್ ತೆಗೆದುಕೊಳ್ಳಿ ಎಂದು ಎಸ್ ಪಿ ನಿಂಬರಗಿ ಗ್ರೂಪ್ ನಲ್ಲಿ ಪೋಸ್ಟ್ ಮಾಡಿದ್ದಾರೆ. Superintendent …

Read More »

ಬೆಳಗಾವಿಯಲ್ಲಿ 100 ಎಕರೆ ಪ್ರದೇಶದಲ್ಲಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಬಳಿಕ ಮಾದ್ಯಮಗೋಷ್ಠಿ ನಡೆಸಿದ ಅವರು,ಮುಂದಿನ ವರ್ಷ ಬೆಳಗಾವಿ ಜಿಲ್ಲಾ ಕ್ರೀಡಾಂಗಣದ ಲೀಜ್ ಅವಧಿ ಮುಗಿಯುತ್ತದೆ ಮುಂದಿನ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಎಲ್ಲಿ ನಡೆಯುತ್ತದೆ ಎಂದು ಮಾದ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ …

Read More »