Breaking News

LOCAL NEWS

ಬೆಳಗಾವಿ ಮಹಾನಗರ ಪಾಲಿಕೆಗೆ ಸೂಪರ್ ಸೀಡ್ ತೂಗುಗತ್ತಿ…!!

  ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ ಆಡಳಿತವಿದೆ. ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ನಾವೇಕೆ ಶೇ 70 ರಷ್ಟು ಅನುದಾನ ಕೊಡಬೇಕು ಎಂದು ಸರ್ಕಾರಕ್ಕೆ ಪ್ರಶ್ನಿಸಿ ಲವ್ ಲೆಟರ್ ಕಳಿಸಿದ ಬೆಳಗಾವಿ ಮಹಾನಗರ ಪಾಲಿಕೆಗೆ ಸರ್ಕಾರ ತಿರಗೇಟು ನೀಡಿ ನಿನ್ನೆ ಬೆಳಗಾವಿ ಮಹಾನಗರ ಪಾಲಿಕೆಗೆ ಬಿಗ್ ಶಾಕ್ ಕೊಟ್ಟಿದೆ. ಬೆಳಗಾವಿ ಮಹಾನಗರದಲ್ಲಿ ತೆರಿಗೆ ದರವನ್ನು ಹೆಚ್ಚಿಸದೇ, ಸರ್ಕಾರದ ಆದೇಶವನ್ನು ಪಾಲಿಸದ ಬೆಳಗಾವಿ ಮಹಾನಗರ ಪಾಲಿಕೆಯನ್ನು ನಾವೇಕೆ, ಬರಕಾಸ್ತು ಮಾಡಬಾರ್ದು ಎಂದು …

Read More »

ಎಂಇಎಸ್‌ಗೆ ಬಿಗ್ ಶಾಕ್ ಕೊಟ್ಟ‌ ಬೆಳಗಾವಿ ಡಿಸಿ ಡಾ. ನಿತೇಶ ಪಾಟೀಲ..!

ಬೆಳಗಾವಿ: ಮಹಾತ್ಮಫುಲೆ ಆರೋಗ್ಯ ಯೋಜನೆ ಕರ್ನಾಟಕದಲ್ಲಿ ಜಾರಿಗೊಳಿಸಲು ಮಹಾರಾಷ್ಟ್ರ ಪ್ಲ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದಿಂದ ವಿವಾದಾತ್ಮಕ ನಿರ್ಣಯಕ್ಕೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಜಿಪಂ ಸಭಾಭವನದಲ್ಲಿ ಬೆಳಗಾವಿ ಡಿಸಿ ನಿತೇಶ ಪಾಟೀಲ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕನ್ನಡಪರ ಸಂಘಟನೆಗಳು ಮಹಾರಾಷ್ಟ್ರ ನಿರ್ಣಯ ಖಂಡಿಸಿದರು. ಕರ್ನಾಟಕದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ಯೋಜನೆ ಜಾರಿಗೊಳಿಸುತ್ತಿದೆ.ಮರಾಠಿ ಭಾಷಿಕರನ್ನು ಪ್ರಚೋದಿಸಲು ಚಂದಗಡದಲ್ಲಿ ಕಚೇರಿ ಸ್ಥಾಪಿಸುತ್ತಿದೆ.ಗಡಿ ಉಸ್ತುವಾರಿ ನೋಡಿಕೊಳ್ಳಲು ಇಬ್ಬರು ಸಚಿವರು, ಓರ್ವ …

Read More »

ರೋಹೀತ್..ರೋಹೀತ್….ಸೂಪರ್ ಹಿಟ್…!!

ನವದೆಹಲಿ: ಬುಧವಾರ ನಡೆದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿಅಫಘಾನಿಸ್ತಾನದ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಮುರಿದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್‌ ಮಾಡಿದ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ, 84 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್‌ ಹಾಗೂ 16 ಬೌಂಡರಿಗಳೊಂದಿಗೆ 131 ರನ್‌ ಗಳಿಸಿದರು. ಆ ಮೂಲಕ ವಿಶ್ವಕಪ್ ಇತಿಹಾಸದಲ್ಲಿ7ನೇ ಶತಕವನ್ನು ಪೂರ್ಣಗೊಳಿಸಿದರು. …

Read More »

ವಿಶೇಷತೆಗಳಿಂದ ಕೂಡಿದ ತುಕ್ಕಾನಟ್ಟಿ ಹಸರಬ್ಬ

ಮೂಡಲಗಿ-ತುಕ್ಕಾನಟ್ಟಿ ಲಕ್ಷ್ಮೀ ದೇವಿಯ ಜಾತ್ರೆಯ ನಿಮಿತ್ಯವಾಗಿ ನಡೆಯುವ ಹಸರಬ್ಬವು ತನ್ನದೇಯಾದ ಪ್ರಸಿದ್ಧಿಯನ್ನು ಪಡೆದಿದ್ದು, ಹಲವು ವಿಶೇಷತೆಗಳಿಂದ ಕೂಡಿರುವ ತುಕ್ಕಾನಟ್ಟಿ ಹಸರಬ್ಬ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಗ್ರಾಮದ ಎಲ್ಲ ಸಮಾಜ ಬಾಂಧವರು ದೇವಿಗೆ ವಿಶೇಷವಾದ ನೈವೇದ್ಯಯನ್ನು ಅರ್ಪಿಸುವ ಮೂಲಕ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ ಎಂದು ಹೇಳಿದರು. ಕಳೆದ ತಿಂಗಳು ೨೬ …

Read More »

ನಾಳೆ ಬೆಳಗಾವಿಯಲ್ಲಿ ರಾಜ್ತೋತ್ಸವದ ಪೂರ್ವಭಾವಿ ಸಭೆ

ಬೆಳಗಾವಿ- ಬೆಳಗಾವಿಯಲ್ಲಿ ಈ ಬಾರಿಯ ರಾಜ್ಯೋತ್ಸವವನ್ನು ಅಭೂತಪೂರ್ವ ಗೊಳಿಸುವ ನಿಟ್ಟಿನಲ್ಲಿ ನಾಳೆ ಗುರುವಾರ ಬೆಳಗಾವಿ ಜಿಲ್ಲಾಡಳಿತ ಪೂರ್ವಭಾವಿ ಸಭೆ ನಡೆಸಲಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಾಳೆ ಮಧ್ಯಾಹ್ನ 1-00 ಗಂಟೆಗೆ ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ರಾಜ್ಯೋತ್ಸವದ ಸಭೆ ನಡೆಸಲಿದ್ದು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಾಳೆ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಎಲ್ಲ ಕನ್ನಡಪರ ಹೋರಾಟಗಾರರು, ಮತ್ತು ಕನ್ನಡದ …

Read More »

ಬೆಳಗಾವಿ PWD ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ.

ಬೆಳಗಾವಿ-ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಮುಂದೆ ವ ಗುತ್ತಿಗೆದಾರನೊಬ್ಬ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಎಕ್ಸಿಕ್ಯುಟಿವ್ ಇಂಜಿನಿಯರ್ ಎಸ್.ಎಸ್ ಸೋಬರದ ಅವರ ಎದುರು ಗುತ್ತಿಗೆದಾರ, ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಬೆಳಗಾವಿಯ ಕೋಟೆ ಆವರಣದಲ್ಲಿರುವ PWD ಕಚೇರಿಯ ಎದುರೇ ಈ ಘಟನೆ ನಡೆದಿದೆ.ರಸ್ತೆ ನಿರ್ವಹಣೆ ಬಿಲ್ ಮಂಜೂರು ಮಾಡದ ಹಿನ್ನೆಲೆಯಲ್ಲಿ ವಿಷ ಕುಡಿದು ಅತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಗುತ್ತಿಗೆದಾರ ನಾಗಪ್ಪ ಬಂಗಿಯನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಲೋಕೋಪಯೋಗಿ …

Read More »

ಟ್ರಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು.

ಬೆಳಗಾವಿ-ನಿಂತಿದ್ದ ಟ್ರಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ,ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಪಸಿಕ್ರಾಸ್-ಕಪರಟ್ಟಿ ಕ್ರಾಸ್ ಬಳಿ ನಡೆದಿದೆ. ಗೋಕಾಕ ತಾಲೂಕಿನ ತಳಕಟನಾಳ ಗ್ರಾಮದ ಬಸವರಾಜ ಬಡಿಗೇರ(31) ಮೃತ ದುರ್ದೈವಿಯಾಗಿದ್ದಾನೆಗೋಕಾಕದಿಂದ ತಳಕಟನಾಳ ಗ್ರಾಮಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ.ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ,ತಲೆಗೆ ಗಂಭೀರ ಗಾಯವಾಗಿ ಬಸವರಾಜ ಬಡಿಗೇರ ಸ್ಥಳದಲ್ಲೇ ಸಾವನ್ನೊಪ್ಪಿದ್ದಾನೆ.ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

ಬೆಳಗಾವಿ, ಎಪಿಎಂಸಿ- ಜೈ ಕಿಸಾನ್ ಮಾರುಕಟ್ಟೆಯ ವರ್ತಕರ ಸಭೆ —–

ವಹಿವಾಟು ಸುಗಮಗೊಳಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ಬೆಳಗಾವಿ, ): ನಗರದ ಎ.ಪಿ.ಎಂ.ಸಿ ಹಾಗೂ ಜೈಕಿಸಾನ್ ಎರಡೂ ಸಗಟು ಮಾರುಕಟ್ಟೆಗಳಲ್ಲಿ ವ್ಯಾಪಾರ-ವಹಿವಾಟುಗಳನ್ನು ನಡೆಸಲು ಅವಕಾಶವಿದ್ದು, ವರ್ತಕರ ಸಂಘದವರು ಪರಸ್ಪರ ಚರ್ಚಿಸಿಕೊಂಡು ಸುಗಮವಾಗಿ ವಹಿವಾಟು ನಡೆಸಿಕೊಂಡ ಹೋಗಬೇಕು ಎಂದು ಜಿಲ್ಲಾಧಿಕಾರಿ ನೀತೇಶ್ ಪಾಟೀಲ ಅವರು ಸಲಹೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ (ಅ.10) ಏರ್ಪಡಿಸಲಾಗಿದ್ದ ಎಪಿಎಂಸಿ ಹಾಗೂ ಜೈ ಕಿಸಾನ್ ತರಕಾರಿ ಮಾರುಕಟ್ಟೆಗಳ ವರ್ತಕರ ಸಂಘದ ಸದಸ್ಯರ ಸಭೆಯಲ್ಲಿ ಅವರು …

Read More »

ಬೆಳಗಾವಿಯ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಆರಂಭಕ್ಕೆ ತಯಾರಿ ಜೋರು…!!

ಬಿಮ್ಸ್ ಆಸ್ಪತ್ರೆಗೆ ಉಸ್ತುವಾರಿ ಸಚಿವರ ಭೇಟಿ: ಪ್ರಗತಿ ಪರಿಶೀಲನಾ ಸಭೆ ಬೆಳಗಾವಿ, : ಬೆಳಗಾವಿ ನಗರದ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿಗಳ ನೇಮಕ ಹಾಗೂ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಶೀಘ್ರ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಮ್ಸ್) ಕಚೇರಿಯ ಸಭಾಂಗಣದಲ್ಲಿ ಮಂಗಳವಾರ …

Read More »

ಬೆಳಗಾವಿ ಕರವೇ ಸಂಘಟನೆಯಲ್ಲಿ ಮೇಜರ್ ಸರ್ಜರಿ……!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ್ರ ಬಣ) ಸಂಘಟನೆಯನ್ನು ಜಿಲ್ಲೆಯಲ್ಲಿ ಇನ್ನಷ್ಡು ಬಲಿಷ್ಠ ಗೊಳಿಸಲು ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರು ಮೇಜರ್ ಸರ್ಜರಿ ಮಾಡಿದ್ದು ಹೊಸ ಪದಾಧಿಕಾರಿಗಳನ್ನು ನೇಮಿಸಿ ಸಂಘಟನೆಯನ್ನು ಇನ್ನಷ್ಟು ಕ್ರಿಯಾಶೀಲಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಹಲವು ಕರವೇ ತಾಲ್ಲೂಕು ಅಧ್ಯಕ್ಷರನ್ನು ಬದಲಾಯಿಸಿ ನೂತನ ಅಧ್ಯಕ್ಷರನ್ನು ನೇಮಿಸಿದ್ದು,ತಾಲ್ಲೂಕುಗಳಲ್ಲಿ ಕ್ರಿಯಾಶೀಲ ರಾಗಿರುವ ಕೆಲವು ಜನ ಹೋರಾಟಗಾರರಿಗೆ ಬೆಳಗಾವಿ ಜಿಲ್ಲಾ ಸಮೀತಿಯಲ್ಲಿ ಸ್ಥಾನ ನೀಡುವ ಮೂಲಕ …

Read More »

ಗೋಕಾಕ್ ಲಕ್ಷ್ಮೀ ದೇವಿ ಜಾತ್ರೆಗೆ ಮುಹೂರ್ತ ಫಿಕ್ಸ್….

ಗೋಕಾಕ : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರ ಸಂಜೆ ಇಲ್ಲಿಯ ಮಹಾಲಕ್ಷ್ಮೀ ಸಭಾ ಭವನದಲ್ಲಿ ಆಯೋಜನೆಗೊಂಡಿದ್ದ ಮಹಾಲಕ್ಷ್ಮೀ ಉಭಯ ದೇವಸ್ಥಾನಗಳ ಜೀರ್ಣೋದ್ಧಾರ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …

Read More »

ಬೆಳಗಾವಿಯ ಹಿಂಡಲಗಾ ಜೈಲು ಸ್ಪೋಟಿಸುವ ಬೆದರಿಕೆ….!!

ಬೆಳಗಾವಿ- ಬೆಳಗಾವಿಯ ಐತಿಹಾಸಿಕ ಹಿಂಡಲಗಾ ಜೈಲಿಗೆ ಅನಾಮಧೇಯ ವ್ಯಕ್ತಿಯೊಬ್ಬ ಫೋನ್ ಕರೆ ಮಾಡಿ, ಬೆಂಗಳೂರಿನ ಕಾರಾಗೃಹ ಹಿಂಡಲಗಾ ಕಾರಾಗೃಹ ಸ್ಪೋಟಿಸುವ ಬೆದರಿಕೆ ಹಾಕಿದ ಘಟನೆ ನಡೆದಿದೆ.ಬಂದೀಖಾನೆ ಉತ್ತರ ವಲಯದ ಡಿಐಜಿಪಿ ಟಿ ಪಿ ಶೇಷ ಅವರಿಗೆ ಈ ಫೋನ್ ಕರೆ ಬಂದಿದ್ದು ಅವರು ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. ಬೆಂಗಳೂರು ಕಾರಾಗೃಹ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ ಸ್ಪೋಟಿಸುವ ಬೆದರಿಕೆ ಬಂದಿದೆ.ಬಂದಿಖಾನೆ ಇಲಾಖೆಯ ಉತ್ತರ …

Read More »

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯದ ಕೂಗಿಗೆ ಜಗದ್ಗುರುಗಳ ಸಮರ್ಥನೆ…

ಬೆಳಗಾವಿ- ಲಿಂಗಾಯತ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗ್ತಿದೆ ಎಂಬ ಶಾಮನೂರು ಆರೋಪದ ವಿಚಾರವನ್ಬು ಶ್ರೀಶೈಲ ಪೀಠದ ಜಗದ್ಗುರುಗಳು ಬೆಳಗಾವಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಶ್ರೀಶೈಲಪೀಠದ ಡಾ. ಚನ್ನಸಿದ್ದರಾಮ ಪಂಡಿರಾತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಮಾದ್ಯಮಗಳ ಜೊತೆ ಮಾತನಾಡಿದ್ರು.ಶಾಮನೂರು ಶಿವಶಂಕರಪ್ಪನರು ಹೇಳಿರುವ ಹೇಳಿಕೆ ಸತ್ಯಕ್ಕೆ ದೂರವಾಗಿಲ್ಲ.ಯಾವ ಮಟ್ಟದಲ್ಲಿ ನಮ್ಮ ಸಮಾಜದ ಅಧಿಕಾರಿಗಳಿಗೆ ಉನ್ನತ ಸ್ಥಾನಮಾನಗಳು ಸಿಗಬೇಕಿತ್ತು ಆ ಮಟ್ಟದಲ್ಲಿ ಸಿಗ್ತಿಲ್ಲ.ಹೆಚ್ಚಿನ ಪ್ರಮಾಣದಲ್ಲಿ ವೀರಶೈವ ಅಧಿಕಾರಿಗಳನ್ನು ಪರಿಗಣಿಸಬೇಕು ಎಂದು ಶ್ರೀಗಳು ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷದ, ಸರ್ಕಾರ …

Read More »

ಬೆಳಗಾವಿಯಲ್ಲಿ ವೆದರ್ ರಾಡಾರ್ ಅಳವಡಿಸಿಲು ಕೇಂದ್ರಕ್ಕೆ ಲೆಟರ್..

ಬೆಳಗಾವಿ: ದೇಶದಲ್ಲೇ ಅತಿ ಹೆಚ್ಚು ಮಳೆ ಬೀಳುವ ಎರಡನೇ ಪ್ರದೇಶವಾಗಿರುವ ಕರ್ನಾಟಕದಲ್ಲಿ ನಿಖರವಾದ ಹವಾಮಾನ ಮುನ್ಸೂಚನೆ ನೀಡುವ ಡಾಪ್ಲರ್ ವೆದರ್ ರಾಡಾರ್ ಕೇಂದ್ರವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕಾಗಿ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರೀಜಿಜು ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ದೆಹಲಿಯಲ್ಲಿ ಭೇಟಿಯಾಗಿ ಮನವಿ ಪತ್ರ ನೀಡಿ ಒತ್ತಾಯಿಸಿದರು. ನಮ್ಮ ರಾಜ್ಯದ ಗಾತ್ರ ಮತ್ತು ವೈವಿಧ್ಯತೆಯನ್ನು ಪರಿಗಣಿಸಿ, ನಮ್ಮದೇ ಆದ ಡಾಪ್ಲರ್ ವೆದರ್ ರಾಡಾರ್ ಕೇಂದ್ರ ಸ್ಥಾಪನೆ …

Read More »

ಬೆಳಗಾವಿ ಪಾಲಿಕೆಯಲ್ಲಿ ನಡೆದ 138 ಗೋಲ್ ಮಾಲ್ ತನಿಖೆಗೆ ಸಮೀತಿ…

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದಿರುವ 138 ಪೌರ ಕಾರ್ಮಿಕರ ಹೊರಗುತ್ತಿಗೆ ನೇಮಕಾತಿ ಗೋಲ್ ಮಾಲ್ ಇಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸದ್ದು ಮಾಡಿತು. ಪಾಲಿಕೆ ಸಭೆಯಲ್ಲಿ ನಗರ ಸೇವಕ ರವಿ ಸಾಳುಂಕೆ ಅವರು 138 ಪೌರಕಾರ್ಮಿಕರ ನೇಮಕಾತಿ ಪ್ರಶ್ನಿಸಿ ಮಂಡಿಸಿದ ಗಮನಸೆಳೆಯುವ ಸೂಚನೆಯ ಮೇರೆಗೆ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಯಿತು. 138 ಪೌರ ಕಾರ್ಮಿಕರು ಗುತ್ತಿಗೆದಾರರ ಹತ್ತಿರ ಸ್ವಚ್ಛತಾ ಕಾಮಗಾರಿ ನಡೆಸಿದ್ದಾರೆ. ಇವರ ನೇಮಕಾತಿ …

Read More »