Breaking News

LOCAL NEWS

ಬೆಳಗಾವಿ ಜಿಲ್ಲೆಗೆ ಮತ್ತೆ ಶಾಕ್, ಇಂದು ಮೊತ್ತೊಂದು ಸೊಂಕಿತ ಪತ್ತೆ

ಬೆಳಗಾವಿ- ಇಂದು ಬೆಳಗಾವಿಗೆ ಶನಿಕಾಟ ಯಾಕಂದ್ರೆ ಇಂದು ಶನಿವಾರದ ಮಿಡ್ ಡೇ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯ 27ವರ್ಷದ ಮಹಿಳೆಗೆ  ಕೊರೋನಾ ಸೊಂಕು ಇರುವದು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ತಾಂಡವ ಮುಂದುವರೆದಿದ್ದು ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಬೆಳಗಾವಿ ಜಿಲ್ಲೆಗೆ,ತಬ್ಲೀಗ್,ಅಜ್ಮೇರ್ ಹಾಗು ಮುಂಬಯಿ ನಂಟಿನಿಂದ ಇವತ್ತಿನವರೆಗೆ ಸೊಂಕಿತರು  ಪತ್ತೆಯಾಗಿದ್ದಾರೆ . ಇವವತ್ತು ಸೊಂಕು ಪತ್ತೆಯಾದ ಮಹಿಳೆ ಮುಂಬಯಿ ರಿಟರ್ನ ಎಂದು ತಿಳಿದು …

Read More »

ಇಂದು ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಬೆಳಗಾವಿ ಮಾರ್ಕೆಟ್ ಬಂದ್

ಬೆಳಗಾವಿ- ಇಂದು ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಬೆಳಗಾವಿಯಲ್ಲಿ ಕರ್ಫ್ಯು ಮಾದರಿಯ ಲಾಕ್ ಡೌನ್ ಇರುತ್ತದೆ ಎಂದು ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಇಂದು ಶನಿವಾರ ಸಂಜೆ 7 ಗಂಟೆಯಿಂದ ಬೆಳಗಾವಿ ಮಾರುಕಟ್ಟೆ ಸಂಪೂರ್ಣವಾಗಿ ಬಂದ್ ಇರುತ್ತದೆ. ರವಿವಾರ ಫುಲ್ ಡೇ ಬೆಳಗಾವಿ ಮಾರುಕಟ್ಟೆ ಬಂದ್ ಇರುತ್ತದೆ.ಸೋಮವಾರ ಬೆಳಿಗ್ಗೆ 7 ಗಂಟೆಗೆ ಬೆಳಗಾವಿ ಮಾರುಕಟ್ಟೆ ಆರಂಭವಾಗುತ್ತದೆ ಮೇಡಿಕಲ್ ಎಮರ್ಜನ್ಸಿ ಬಿಟ್ರೆ ಬೇರೆ ಯಾವ …

Read More »

ಲಾಕ್ ಡೌನ್ ಸಡಲಿಕೆ ನಂತರ ಬೆಂಗಳೂರಿನಿಂದ ಬೆಳಗಾವಿಗೆ ಬಂತು ಸೂಪರ್ ಫಾಸ್ಟ್ ರೈಲು

ಬೆಳಗಾವಿ-ಲಾಕ್ ಡೌನ್ ಮಧ್ಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನವಿ ಮೇರೆಗೆ ,ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿಯವರ ಇಚ್ಛಾಶಕ್ತಿಯ ಪರಿಣಾಮವಾಗಿ ಬೆಂಗಳೂರಿಂದ ವಿಶೇಷ ರೈಲು ಇಂದು ಸಂಜೆ ಬರೊಬ್ಬರಿ 7 ಗಂಟೆಗೆ ಬೆಳಗಾವಿಗೆ ತಲುಪಿತು. ಬೆಂಗಳೂರು ಬೆಳಗಾವಿ ಸೂಪರ್‌ಫಾಸ್ಟ್ ಎಕ್ಸಪ್ರೆಸ್ ರೈಲು ಬೆಳಗಾವಿಗೆ ಆಗಮಿಸಿದ್ದು ಬೆಂಗಳೂರಿಂದ ಬೆಳಗಾವಿಗೆ ಆಗಮಿಸಿದ 171 ಪ್ರಯಾಣಿಕರು ಆಗಮಿಸಿದ್ದಾರೆ. ಲಾಕ್ ಡೌನ್ ಸಡಿಲಿಕೆ ಬಳಿಕ ಸಂಚಾರ ಆರಂಭಿಸಿದ ಮೊದಲ ರೈಲು ಇದಾಗಿದ್ದು …

Read More »

ಬೆಳಗಾವಿ ಜಿಲ್ಲಾಡಳಿತಕ್ಕೆ ಹೌದ್ದೋ ಹುಲಿಯಾ ಎಂದ ಗುಪ್ತ ವಾರ್ತೆ….!!

ಬೆಳಗಾವಿ-ಕೊರೊನಾ ಹಿನ್ನೆಲೆಯಲ್ಲಿ ಅಂತರ್ ರಾಜ್ಯ ಗಡಿಯಲ್ಲಿ ಸುಸಜ್ಜಿತ ಚೆಕ್ ಪೋಸ್ಟ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಪ್ರಯಾಣಿಕರ ನೋಂದಣಿ ಪ್ರಕ್ರಿಯೆಯ ಅತ್ಯುತ್ತಮ ವ್ಯವಸ್ಥೆ ಕಲ್ಪಿಸಿರುವ ಜಿಲ್ಲಾಡಳಿತದ ಬಗ್ಗೆ ಗುಪ್ತವಾರ್ತೆಯ ಹೆಚ್ಚುವರಿ ಆರಕ್ಷಕ ಮಹಾನಿರೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಅಭಿನಂದನಾ ಪತ್ರ ಬರೆದಿದ್ದಾರೆ ವಿಶೇಷವಾಗಿ ನಿಪ್ಪಾಣಿ ಚೆಕ್ ಪೋಸ್ಟ ನಲ್ಲಿ ಮಾಡಿರುವ ಅತ್ಯುತಮ ವ್ಯೆವಸ್ಥೆಯ ಕುರಿತು ಗುಪ್ತ ವಾರ್ತೆ ಮೆಚ್ಚುಗೆ ವ್ಯೆಕ್ತ ಪಡಿಸಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಅಭಿನಂಧನೆ ಸಲ್ಲಿಸಿ ಪತ್ರ …

Read More »

ಬೆಳಗಾವಿಗೆ ಮತ್ತೆ ಶಾಕ್ ಇಂದು ಮತ್ತೊಂದು ಪಾಸಿಟೀವ್ ಕೇಸ್ ಪತ್ತೆ

ಬೆಳಗಾವಿ ಇಂದು ಬೆಳಗಾವಿಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ 126 ಕ್ಕೆ ತಲುಪಿದೆ. ಜಾರ್ಖಂಡ್‌ನಿಂದ ಬೆಳಗಾವಿ ಜಿಲ್ಲೆಗೆ ಮರಳಿದ್ದ ಮತ್ತೋರ್ವ ವೃದ್ಧನಿಗೆ ಕೊರೊನಾ ಪತ್ತೆಯಾಗಿದೆಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 126ಕ್ಕೇರಿಕೆ   ಜಾರ್ಖಂಡ್‌ನಿಂದ ಮರಳಿದ್ದ15 ಜನರ ಪೈಕಿ ನಿನ್ನೆ ಮೂವರಲ್ಲಿ ಕೊರೊನಾ ದೃಢವಾಗಿತ್ತು ಇಂದು ಮತ್ತೆ ಓರ್ವ ವೃದ್ಧನಲ್ಲಿ ಕೊರೊನಾ ಸೋಂಕು ದೃಢ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ …

Read More »

ಆಶಾ ಕಾರ್ಯಕರ್ತೆಯರಿಗೆ ಮಹೇಶ ತಮ್ಮಣ್ಣವರ ನೆರವು…..

ರಾಯಬಾಗ: ಮಹಾಮಾರಿ ಕರೋನಾ ವೈರಸ್ ದೇಶಾದ್ಯಂತ ಹರಡುತ್ತಿರುವ ಹಿನ್ನೆಲೆ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡಿದ ಆಶಾ ಕಾರ್ಯಕರ್ತರನ್ನು ಮೆಚ್ಚಲೆ ಬೇಕು.‌ಅವರಿಗೆ ಧೈರ್ಯ ತುಂಬುವ ಕೆಲಸ‌ ಎಂದು ಯುವ ಧುರೀಣ ಮಹೇಶ ತಮ್ಮಣ್ಣವರ ಹೇಳಿದರು. ಕಲ್ಲೋಳಿಕರ ಪ್ರತಿಷ್ಠಾನದ ವತಿಯಿಂದ ತಾಲೂಕಿನ‌ ನಸಲಾಪುರ, ನಂದಿ‌ಕುರಳಿ ಗ್ರಾಮದ ಆಶಾ ಕಾರ್ಯಕರ್ತರಿಗೆ ಹಾಗೂ ಬಡ ಕುಟುಂಬಗಳಿಗೆ ಸುಮಾರು ೨೦೦೦ ಕ್ಕಿಂತ ಅಧಿಕ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, ದೇಶದಲ್ಲಿ ಶೇ.೪೦ ರಷ್ಟು …

Read More »

ಗೋಕಾಕ್ ಕ್ಷೇತ್ರದ ಹಳ್ಳಿ,ಹಳ್ಳಿ… ಗಲ್ಲಿ ಗಲ್ಲಿ…ಗಳಲ್ಲಿ ಇಂದಿನಿಂದ “ಅಮರನಾಥ” ಯಾತ್ರೆ…..!

ವಿ ಬೆಳಗಾವಿ- ಗೋಕಾಕ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲಿ ಅಮರನಾಥ ಯಾತ್ರೆ ಈ ಯಾತ್ರೆ,ಕ್ಷೇತ್ರದ ಜನರಿಗೆ ಸಹಾಯ ಮಾಡುವ ಯಾತ್ರೆ,ಕ್ಷೇತ್ರದ ಮನೆ,ಮನೆಗೂ ತಲುಪುವ ಯಾತ್ರೆ,ಕ್ಷೇತ್ರದ ಜನರಿಗೆ ಧೈರ್ಯ ತುಂಬುವ ಯಾತ್ರೆ,ಈ ಅರ್ಥಪೂರ್ಣ,ಅಂತಃಕರಣದ ಯಾತ್ರೆ ಗೋಕಾಕ ಪಟ್ಟಣದಿಂದ ಶುಭ ಶುಕ್ರವಾರ ಆರಂಭವಾಗಲಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರ ಅಮರನಾಥ ಅವರು,ಗೋಕಾಕ್ ಕ್ಷೇತ್ರದ ಜನರಿಗೆ ಕಿಟ್ ವಿತರಣೆ ಮಾಡುವ ಜವಾಬ್ದಾರಿ ವಹಿಸಿಕೊಂಡು,ಐವತ್ತು ಸಾವಿರಕ್ಕೂ ಹೆಚ್ಚು ಕಿಟ್ ರೆಡಿ ಮಾಡಿಕೊಂಡು ಇಂದು …

Read More »

PM ಕೇರ್ ಗೆ ಒಂದು ಲಕ್ಷ ₹ ನೀಡಿದ ಬೆಳಗಾವಿಯ ಅಜ್ಜಿ

ಕಳೆದ 20ವರ್ಷಗಳಿಂದ ದೈಹಿಕ ಅಂಗವಿಕಲತೆಯಿಂದ ಬಳಲುತ್ತಿರುವ ಸ್ವಾಧ್ಯಾಯ ವಿದ್ಯಾ ಕೇಂದ್ರದ ವಿಶ್ರಾಂತ ಗ್ರಂಥಪಾಲಕಿಯಾದ ಟಿಳಕವಾಡಿ ನಿವಾಸಿಯಾದ ನಳಿನಿ ಕೆಂಭಾವಿ ಅವರು ಕೊರೋನಾ ಮಹಾಮಾರಿಯಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸಲು PMCare fund ಗೆ ರೂ.1,00,000 ಹಣವನ್ನು ದೇಣಿಗೆ ನೀಡಿ ಆದರ್ಶಪ್ರಾಯರಾಗಿರುವರನ್ನು ಮಾನ್ಯ ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ ಅಂಗಡಿ ಅವರು ಸ್ವತಃ ಅವರ ಮನೆಗೆ ಭೇಟಿ ನೀಡಿ ಅವರ ಕೊಡುಗೆಗೆ ಶಾಘ್ಲೀಸಿ ಧನ್ಯವಾದಗಳನ್ನು ಅರ್ಪಿಸಿದರು. ಸ್ವಾವಲಂಬಿ ಭಾರತಕ್ಕೆ ಇಂತಹ …

Read More »

ಬೆಳಗಾವಿಯಲ್ಲಿ ಇಂದು ಮತ್ತೆ ಒಬ್ಬ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ, -ಕೋವಿಡ್-೧೯ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ವ್ಯಕ್ತಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಹಿರೇಬಾಗೇವಾಡಿ ಪಿ-483 ***

Read More »

ಇಂದು ಪತ್ತೆಯಾದ 9 ಜನ ಸೊಂಕಿತರು ಎಲ್ಲಿಂದ ಬಂದವರು,ಯಾವ ಊರಿನವರು,ವಿವರ ಇಲ್ಲಿದೆ ನೋಡಿ

ಇಂದು ಪತ್ತೆಯಾದ 9 ಜನ ಎಲ್ಲಿಂದ ಬಂದವರು,ಯಾವ ಊರಿನವರು,ವಿವರ ಇಲ್ಲಿದೆ ನೋಡಿ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇಂದು 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಇಂದು ಪತ್ತೆಯಾದ 9 ಜನ ಎಲ್ಲಿಂದ ಬಂದವರು ಯಾವ,ಯಾವ ಊರಿನವರು ಮಾಹಿತಿ ಟ್ರಾವೆಲ್ ಹಿಸ್ಟರಿ ಇಲ್ಲಿದೆ ನೋಡಿ‌ ರಾಮದುರ್ಗ ತಾಲ್ಲೂಕಿನ ಕಲ್ಲೂರ ಗ್ರಾಮದ ಏಳು ತಿಂಗಳ ಹೆಣ್ಣು ಮಗುವಿನಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು P-1496 – 7 ತಿಂಗಳ ಹೆಣ್ಣು ಮಗುವಿಗೆ ಮಗುವಿಗೆ ಸೊಂಕು …

Read More »

ಮಹಾರಾಷ್ಟ್ರ,ಗೋವಾದಿಂದ ಬೆಳಗಾವಿಗೆ ಆಕ್ರಮವಾಗಿ ನುಸುಳಿದ ಮೂವರು ಶಂಕಿತರು ಪೋಲೀಸರ ವಶಕ್ಕೆ

ಬೆಳಗಾವಿ- ಪಕ್ಕದ ಮಹಾರಾಷ್ಟ್ರದಿಂದ ಬೆಳಗಾವಿಗೆ ಮೂವರು ಜನ ಕೊರೋನಾ ಸೊಂಕಿತರು ಬೆಳಗಾವಿಗೆ ಆಕ್ರಮವಾಗಿ ನುಸುಳಿ ಬಂದು ಬೆಳಗಾವಿ ಬಸ್ ನಿಲ್ಧಾಣದಲ್ಲಿ ಪೋಲೀಸರ ಕೈಗೆ ಸಿಕ್ಕಿದ ಘಟನೆ ನಡೆದಿದೆ. ಬೆಳಗಾವಿ ಬಸ್ ನಿಲ್ಧಾಣದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೋಲೀಸ್ ಹವಾಲ್ದಾರ್ ಎಸ್ ಬಿ ಮಡಿವಾಳ ಅವರ ಸಮಯ ಪ್ರಜ್ಞೆಯಿಂದಾಗಿ ಮೂವರು ಜನ ಮಹಾರಾಷ್ಟ್ರದ ಶಂಕಿತರು ಬೆಳಗಾವಿ ಬಸ್ ನಿಲ್ಧಾಣದಲ್ಲಿ ಸಿಕ್ಕಿದ್ದಾರೆ. ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ಮೂವರ ಕೈಗೆ ಕ್ವಾರಂಟೈನ್ ಮುದ್ರೆ ಇರುವದನ್ನು ಗಮನಿಸಿದ …

Read More »

ಬೆಳಗಾವಿ ಜಿಲ್ಲೆಗೆ ಮತ್ತೆ ಕೊರೋನಾ ಶಾಕ್, ಜಿಲ್ಲೆಯ 9 ಜನರಲ್ಲಿ ರಲ್ಲಿ ಮತ್ತೆ ಸೊಂಕು ಪತ್ತೆ

ಬೆಳಗಾವಿ- ಬೆಳಗಾವಿ ಜಿಲ್ಲೆಗೆ ಕೊರೋನಾ ವೈರಸ್ ಮತ್ತೆ ಶಾಕ್ ನೀಡಿದೆ.ಇಂದು ಗುರುವಾರ ಬಿಡುಗಡೆಯಾದ ಮಿಡ್ ಡೇ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ. 9 ಜನರಲ್ಲಿ ಸೊಂಕು ಪತ್ತೆಯಾಗಿದೆ ಇಂದು ಪತ್ತೆಯಾಗಿರುವ ಕೊರೋನಾ ಸಂಕಿತರಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 125  ಕ್ಕೇ ಏರಿದಂತಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ 8 ಜನ ಅಜ್ಮೇರ್ ದರ್ಗಾ ದರ್ಶನ ಮಾಡಿ ಸಂಪಗಾಂವ ಮರಳಿದ್ದರು ಇವರನ್ನು …

Read More »

ಬೆಳಗಾವಿಯಲ್ಲಿ ಅಂದು ಗ್ಯಾಂಗ್ ವಾರ್ , ಇಂದು ಗಾಂಜಾ ವಾರ್…!!!

ಬೆಳಗಾವಿ- ಒಂದು ಕಾಲದಲ್ಲಿ ಬೆಳಗಾವಿ ಗ್ಯಾಂಗ್ ವಾರ್ ಗೆ ಹೆಸರಾಗಿತ್ರು,ಯಾವಾಗ ಎನ್ ಕೌಂಟರ್ ಶುರುವಾಯಿತೋ ಅಂದಿನಿಂದ ಗ್ಯಾಂಗ್ ವಾರ್ ರೌಡಿಗಳ ಕಥೆ ಮುಗಿದು ಹೋಗಿತ್ತು, ಗ್ಯಾಂಗ್ ವಾರ್ ಗಳಿಂದು ನೊಂದು ಬೆಂದು ಹೋಗಿದ್ದ ಬೆಳಗಾವಿಗೆ ಗಾಂಜಾ ನಂಜು ಏರುತ್ತಿರುವದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಬೆಳಗಾವಿಯಲ್ಲಿ ಈಗ ಗಾಂಜಾ ಹೊಗೆ ಬಿಡುತ್ತಿದ್ದೆ,ಈ ವಿಷಕಾರಿ ಹೊಗೆಯ ಸುಳಿಯಲ್ಲಿ ಯುವಕರೇ ಸಿಗುತ್ತಿದ್ದು,ಗಾಂಜಾ ಮಾರಾಟಗಾರರ ಹಾರಾಟ ಬೆಳಗಾವಿಯಲ್ಲಿ ಜೋರಾಗಿಯೇ ನಡೆದಿದೆ ಎನ್ನುವದಕ್ಕೆ ನಿನ್ನೆ ರಾತ್ರಿ ನಡೆದ …

Read More »

ಮೇ 22 ರಿಂದ ಕರ್ನಾಟಕದಲ್ಲಿ ರೈಲು ಸಂಚಾರ ಆರಂಭ- ಸುರೇಶ ಅಂಗಡಿ

ಬೆಳಗಾವಿ- ಮೇ 22 ರಿಂದ ಕರ್ನಾಟಕದ ಒಳಗೆ, ಪ್ರಾಯೋಗಿಕವಾಗಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸುವದಾಗಿ ರೆಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬೆಳಗಾವಿಯಲ್ಲಿ ಘೋಷಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಮೇ 22ರಿಂದ ಬೆಂಗಳೂರಿನಿಂದ ಬೆಳಿಗ್ಗೆ 8 ಗಂಟೆಗೆ ಹೊರಡಿ ಬೆಳಗಾವಿಗೆ ಸಂಜೆ 6-30 ಗಂಟೆಗೆ ತಲುಪಲಿದೆ ಬೆಂಗಳೂರು ಮೈಸೂರ ಟ್ರೈನು ಬೆಳಿಗ್ಗೆ 9-20 ಹೊರಡಿ ಮದ್ಯಾಹ್ನ 12-45 ಕ್ಕೆ ಮೈಸೂರ ತಲುಪಲಿದೆ. ಸಿಎಂ ಬಿ.ಎಸ್‌.ಯಡಿಯೂರಪ್ಪ ಮನವಿ …

Read More »

ಇಂದು ಬೆಳಗಾವಿಯಲ್ಲಿ ಮತ್ತೆ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ,ಕೋವಿಡ್-೧೯ ಸೋಂಕು ತಗುಲಿದ್ದ ಮಹಿಳೆಯು ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಕುಡಚಿ ಪಿ-575 ಪಿ-576 ***

Read More »