Breaking News

LOCAL NEWS

ಇಂದು ಬೆಳಗಾವಿಯಲ್ಲಿ ಸಚಿವರಾದ ಸಂತೋಷ್ ಲಾಡ್ ಮತ್ತು ದಿನೇಶ್ ಗುಂಡೂರಾವ್…

ದಿನೇಶ್ ಗುಂಡೂರಾವ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಬುಧವಾರ ಬೆಳಗಾವಿಗೆ ಆಗಮಿಸಿದ್ದು ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದಾ ಸಂತೋಷ ಎಸ್‌. ಲಾಡ್ ಅವರು ಬುಧವಾರ (ಅ.4) ಬೆಳಗ್ಗೆ 9:30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಶಾಸಕರು, …

Read More »

ಗ್ಯಾಂಗ್ ರೇಪ್ ಮಾಡಿದ ಆರೋಪಿಗಳು ಅರೆಸ್ಟ್…

ಬೆಳಗಾವಿ-ಗೋಕಾಕ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿದ ಘಟನೆಸೆ.5ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದ್ದ ಘಟನೆ.ಶಿಕ್ಷಕ ದಿನಾಚರಣೆಯಂದು ಹಳ್ಳಿಯಿಂದ ನಗರಕ್ಕೆ ಬಂದಿದ್ದ ಮಹಿಳೆ.ಈ ವೇಳೆ ಪರಿಚಯಸ್ಥ ವ್ಯಕ್ತಿಯ ಜತೆಗೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಆರೋಪಿ ಬಸವರಾಜ ಖಿಲಾರಿ ಟೀ ಕುಡಿಯಲು ಬನ್ನಿ ಅಂತಾ ಇಬ್ಬರನ್ನೂ ಮನೆಗೆ ಕರೆದುಕೊಂಡು ಹೋಗಿದ್ದ.ಪುಸಲಾಯಿಸಿ ಆದಿತ್ಯ ನಗರದಲ್ಲಿದ್ದ ಮನೆಗೆ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದ ಬಸವರಾಜ.ಬಳಿಕ …

Read More »

ಚಿರತೆ ದಾಳಿಗೆ ಎರಡು ಮೇಕೆಗಳು ಬಲಿ….

ಅಥಣಿ-ಸಂಕೋನಟ್ಟಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಮೇಕೆಗಳು ಬಲಿಯಾದ ಘಟನೆ,ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ.ಪ್ರದೀಪ್ ನಾಯಿಕ್ ಎಂಬುವರ ತೋಟದಲ್ಲಿದ್ದ ಎರಡು ಮೇಕೆಗಳು ಚಿರತೆ ದಾಳಿಗೆ ಬಲಿಯಾಗಿವೆ. ಚಿರತೆ ದಾಳಿಯಿಂದ ಎರಡು ಮೇಕೆ ಮೃತಪಟ್ಟಿದ್ದಾಗಿ ಸ್ಥಳೀಯರ ಮಾಹಿತಿ ನೀಡಿದ್ದು,ಸಂಕೋನಟ್ಟಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ ಘಟನಾ ಸ್ಥಳಕ್ಕೆ ಅರಣ್ಯಸಿಬ್ಬಂದಿ ದೌಡಾಯಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪಕ್ಕದ ರಡ್ಡೇರಟ್ಟಿ ಗ್ರಾಮದಲ್ಲಿ ಇದೇ ಮಾದರಿಯಲ್ಲಿ ಸಾಕು ನಾಯಿ ಬಲಿಯಾಗಿತ್ತು.ಈ …

Read More »

ಬೆಳಗಾವಿಯಲ್ಲಿ ಹಾರ್ಟ್ ಟಚ್ಚೀಂಗ್…ಜೀವ ರಕ್ಷಕ ತಂತ್ರದ ಮಂತ್ರ ಜಪ…..!!

ಯಾರಾದರೂ ಹೃದಯಾಘಾತವಾಗಿ ಹೃದಯ ಬಡಿತ ಅಥವಾ ಉಸಿರಾಟ ನಿಂತ ತುರ್ತು ಪರಿಸ್ಥಿಯಲ್ಲಿ ಸಿಪಿಆರ್(ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್) ಎನ್ನುವುದು ಜೀವರಕ್ಷಕ ತಂತ್ರವಾಗಿದ್ದು, ಅದನ್ನು ಉಪಯೋಗಿಸಿ ಜೀವವನ್ನು ರಕ್ಷಿಸಬಹುದು. ಪ್ರತಿಯೊಬ್ಬರು ನಿರ್ದಿಷ್ಟವಾಗಿ ಅದರಲ್ಲಿಯೂ ಮುಖ್ಯವಾಗಿ ವಿಜ್ಞಾನ ಶಿಕ್ಷಕರು ತುರ್ತು ಸಂದರ್ಭದಲ್ಲಿ ಜೀವವನ್ನು ಉಳಿಸುವ ಸಿಪಿಆರ್ ತಂತ್ರವನ್ನು ತಿಳಿದಿರಬೇಕು ಎಂದು ಕೆಎಲ್‌ಇ ಸಂಸ್ಥೆ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ರಿಚರ್ಡ ಸಾಲ್ಡಾನಾ ಅವರಿಂದಿಲ್ಲಿ …

Read More »

ಸ್ವಾಮೀಜಿ ಸೇರಿ ರಾಜ್ಯದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ

ಬೆಳಗಾವಿ-ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀ ಸೇರಿ ಮೂವರು ಸಚಿವರಿಗೆ ಅನಾಮಿಕನೊಬ್ಬ ಜೀವ ಬೆದರಿಕೆ ಪತ್ರ ಬರೆದಿದ್ದಾನೆ. ಸಚಿವ ಸತೀಶ ಜಾರಕಿಹೊಳಿ,ದಿನೇಶ ಗುಂಡೂರಾವ್, ಪ್ರೀಯಾಂಕ್ ಖರ್ಗೆಗೂ ಜೀವ ಬೆದರಿಕೆ ಪತ್ರ ಬರೆಯಲಾಗಿದೆ.ಹಲವು ಪ್ರಗತಿಪರರು ವಿಚಾರವಾದಿಗಳಿಗೂ ಜೀವ ಬೆದರಿಕೆ ಹಾಕಲಾಗಿದೆ.ಸಪ್ಟಂಬರ್ 20 ರಂದು ಬೈಲೂರು ನಿಷ್ಕಲ ಮಂಟಪಕ್ಕೆ ಬಂದಿರುವ ಬೆದರಿಕೆ ಪತ್ರ ಈ ಪತ್ರ ದಲ್ಲಿ ಹಲವಾರು ಪ್ರಗತಿಪರ ವಿಚಾರವಾದಿಗಳ ಹೆಸರು ಪ್ರಸ್ತಾಪಿಸಲಾಗಿದೆ.ಕಳೆದ ತಿಂಗಳಷ್ಟೆ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬಂದಿತ್ತು.ಈಗ ಮತ್ತೆ …

Read More »

ವಿದ್ಯುತ್ ತಂತಿ ತಗುಲಿ ಹಾಸ್ಟೆಲ್ ವಿದ್ಯಾರ್ಥಿ ಸಾವು

ಬೆಳಗಾವಿ-ವಿದ್ಯುತ್ ತಂತಿ ತಗುಲಿ ಹಾಸ್ಟೆಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ,ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಗಣೇಶ ಪೂಜೇರ (15) ಮೃತ ದುರ್ದೈವಿಯಾಗಿದ್ದಾನೆತಲ್ಲೂರಿನ ಬಸವೇಶ್ವರ ಯುವಕ ಮಂಡಳ ಪ್ರೌಢ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ,ಆಟ ಆಡುತ್ತಾ ಮೇಲ್ಛಾವಣಿ ಮೇಲೆ ತೆರಳಿದ ವಿದ್ಯಾರ್ಥಿ ವಿದ್ಯುತ್ ತಂತಿ ಹಿಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯರಗಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

ದಾಖಲೆ ನಿರ್ಮಿಸಿದ ಬೆಳಗಾವಿಯ ಗಣೇಶ್ ವಿಸರ್ಜನೆ ಮೆರವಣಿಗೆ….!

ಬೆಳಗಾವಿಯಲ್ಲಿ ಮೇಘಾ ಇವೆಂಟ್ ಸಕ್ಸೆಸ್ ಬೆಳಗಾವಿ- ಬೆಳಗಾವಿಯ ಗಣೇಶ ಹಬ್ನ ಐತಿಹಾಸಿಕ ಮತ್ತು ಅಭೂತಪೂರ್ವ, 350 ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಲಕ್ಷಾಂತರ ಸಮ್ಮುಖದಲ್ಲಿ ಮೆರವಣಿಗೆಯ ಮೂಲಕ ವಿಸರ್ಜನೆ ಮಾಡುವದು ಸುಲಭದ ಮಾತಲ್ಲ,ಇಂತಹ ಕಠಿಣವಾದ ಕೆಲಸವನ್ನು ಬೆಳಗಾವಿ ಜಿಲ್ಲಾಡಳಿತ ಅತ್ಯಂತ ಯಶಸ್ವಿಯಾಗಿ ಶಾಂತಿಯುತವಾಗಿ, ಸುಸಜ್ಜಿತವಾಗಿ ನಡೆಸಿದೆ. ಗುರುವಾರ ಸಂಜೆ ಬೆಳಗಾವಿಯಲ್ಲಿ ಆರಂಭವಾದ ಗಣೇಶ ವಿಸರ್ಜನಾ ಮೆರವಣಿಗೆ ಶುಕ್ರವಾರ ರಾತ್ರಿ 11 ಗಂಟೆಗೆ ಮುಕ್ತಾಯವಾಗಿದ್ದು 30 ಗಂಟೆಗಳ ಕಾಲ ನಡೆದ …

Read More »

ಬೆಳಗಾವಿಯಲ್ಲಿ ನಿರ್ಮಾಣವಾಗಲಿದೆ ಆರು, ಅಂತಸ್ಥಿನ ಭವ್ಯ ಸರಕಾರಿ ಕಟ್ಟಡ…!!

ಬೆಳಗಾವಿ: 145×71 ಅಳತೆಯ 6 ಅಂತಸ್ಥಿನ ಭವ್ಯ ಸರಕಾರಿ ಕಟ್ಟಡ…ಕಟ್ಟಡದ ಸುತ್ತ ನಾಲ್ಕೂ ಕಡೆ ದ್ವಿಪಥ ರಸ್ತೆ… ಪ್ರವೇಶ ದ್ವಾರದ ಮುಂದೆ ಸುಂದರ ಉದ್ಯಾನವನ…ನೂರಾರು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ…! ಇದು ಯಾವುದೋ ದೆಹಲಿ, ಬೆಂಗಳೂರಿನಲ್ಲಿನ ಸರಕಾರಿ ಕಟ್ಟಡ ವರ್ಣನೆಯಲ್ಲ. ನಮ್ಮ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತಲೆ ಎತ್ತಲಿರುವ ಸರಕಾರಿ ಕಚೇರಿಗಳ ಸಂಕೀರ್ಣ. ಹೌದು, ಹೃದಯಭಾಗದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆರು ಅಂತಸ್ತಿನ ಭವ್ಯ ಹೆಟೆಕ್ ಕಟ್ಟಡ ತಲೆ ಎತ್ತಲಿದೆ. …

Read More »

ಬೆಳಗಾವಿಯಲ್ಲಿ ಮೋಡ ಬಿತ್ತನೆಗೆ ಮಾಡಿಸಿದ ಸತೀಶ್ ಜಾರಕಿಹೊಳಿ

  ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಬರಸ್ಥಿತಿಯ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ಮೋಡ ಬಿತ್ತನೆಗೆ ಮುಂದಾಗಿದ್ದು, ಮೋಡ ಬಿತ್ತನೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ(ಸೆ.29) ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು.ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದೆ. ಸೆ.29 ಹಾಗೂ 30 …

Read More »

ಕರ್ನಾಟಕ ಬಂದ್, ಬೆಳಗಾವಿಯಲ್ಲಿ ಪ್ರತಿಭಟನೆಗೆ ಸೀಮಿತ…

ಬೆಳಗಾವಿ- ಇಂದು ವಿವಿಧ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು ಬೆಳಗಾವಿಯಲ್ಲಿ ಬಂದ್ ಬಿಸಿ ತಟ್ಟಿಲ್ಲ,ಇಲ್ಲಿ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದುಕೊಂಡಿದ್ದು ಬಂದ್ ಪ್ರತಿಭಟನೆಗೆ ಸೀಮಿತವಾಗಿದೆ. ಇಂದು ಬೆಳ್ಳಂ ಬೆಳಗ್ಗೆ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲಿ ಕಾವೇರಿ ನಮ್ಮದು,ಎಂದು ಬಿತ್ತಿಪತ್ರ ಹಿಡಿದು ಪ್ರತಿಭಟನೆ ಮಾಡುವ ಮೂಲಕ ತಮಿಳುನಾಡಿಗೆ ನೀರು ಬಿಟ್ಡಿರುವ ರಾಜ್ಯ ಸರ್ಕಾರದ ರಾಜ್ಯವಿರೋಧಿ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು …

Read More »

ಇಂದು ಬೆಳಗಾವಿಯಲ್ಲಿ ವಿನಾಯಕನಿಗೆ ಅದ್ಧೂರಿ ವಿದಾಯ….!!

ಶಾಂತಿ ಕದಡುವ, ಕಿಡಗೇಡಿಗಳ ಕಿವಿ ಹಿಂಡಲು ಸಜ್ಜಾದ ಖಾಕಿ ಪಡೆ….!! ಬೆಳಗಾವಿ- ಮಹಾರಾಷ್ಟ್ರದ. ಮುಂಬಯಿ ,ಪೂನಾ ಹೊರತು ಪಡೆಸಿದರೆ, ರಾಷ್ಟ್ರದಲ್ಲಿಯೇ ಅತ್ಯಂತ ಅದ್ಧೂರಿಯಾಗಿ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸುವದು ಬೆಳಗಾವಿಯಲ್ಲಿ ,ರಾಜ್ಯದಲ್ಲಿಯೇ ಅತ್ಯಂತ ವಿಭಿನ್ನವಾಗಿ ಗಡಿ ಭಾಗದ ಬೆಳಗಾವಿಯಲ್ಲಿ ಗಣೇಶ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಹಬ್ಬವನ್ನು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ಹೋರಾಟದ ಹಿನ್ನಲೆ ಮತ್ತು ಇತಿಹಾಸ ಹೊಂದಿರುವ ಸಾರ್ವಜನಿಕ ಶ್ರೀಗಣೇಶ ಪ್ರತಿಷ್ಠಾಪನೆ ವಿಚಾರದಲ್ಲಿ ಬೆಳಗಾವಿ ಮಹಾನಗರದ ಜನತೆ ಹೊಸ ಇತಿಹಾಸ …

Read More »

DCM ಮಾಡಲು ಬೆಳಗಾವಿಯಿಂದ ಪತ್ರ ಅಭಿಯಾನ…!!

ಬೆಳಗಾವಿ- ಲೋಕೋಪಯೋಗಿ ಇಲಾಖೆ ಸಚಿವ,ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ,ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಅವರನ್ನು ಉಪ ಮುಖ್ಯಮಂತ್ರಿ ಮಾಡುವಂತೆ ಬೆಳಗಾವಿ ಜಿಲ್ಲೆಯಲ್ಲಿ ಅವರ ಅಭಿಮಾನಿಗಳು ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆಯುವ ಅಭಿಯಾನ ಆರಂಭಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು,ಅಭಿಮಾನಿಗಳು, ಹಾಗೂ ಹಲವಾರು ಜನ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಹಾಗು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ …

Read More »

ಬೆಳಗಾವಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗೋಕಾವಿ

ಬೆಳಗಾವಿ- ಬೆಳಗಾವಿ ಸರ್ಕಾರಿ ನೌಕರರ ಸಂಘದ ಪ್ರಭಾರಿ ಅಧ್ಯಕ್ಷರನ್ನಾಗಿ ಶಂಕರ ಗೋಕಾವಿ ಅವರನ್ನು ನೇಮಕ ಮಾಡಿ,ರಾಜ್ಯ ಅಧ್ಯಕ್ಷ ಷಡಕ್ಷರಿ ಅವರು ಆದೇಶ ಹೊರಡಿಸಿದ್ದಾರೆ‌. ಬೆಳಗಾವಿ ಜಿಲ್ಲಾ ನೌಕರರ ಸಂಘದ ಪ್ರಭಾರಿ ಅಧ್ಯಕ್ಷರಾಗಿದ್ದ ಬಸವರಾಜ್ ರಾಯವ್ವಗೋಳ ಅವರು ರಾಜಿನಾಮೆ ನೀಡಿರುವ ಕಾರಣ ಶಂಕರ ಗೋಕಾವಿ ಅವರನ್ನು ಪ್ರಭಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಶಂಕರ ಗೋಕಾವಿ ಅವರು ಲೆಕ್ಕಪರಿಶೋಧನಾ ಮತ್ತು ಲೆಕ್ಕಪತ್ರ ಶಾಖೆಯ ನೌಕರರ ಸಂಘದ ನಿರ್ದೇಶಕರಾಗಿದ್ದರು ಅವರನ್ನು ಬೆಳಗಾವಿ ಜಿಲ್ಲಾ ನೌಕರರ …

Read More »

ನಾಲ್ವರು ಬಾಲಕರು ಸೇರಿಕೊಂಡು ಓರ್ವ ಬಾಲಕನ ಕೊಲೆ ಮಾಡಿದ್ರು…

ಬೆಳಗಾವಿ- ನಾಲ್ವರು ಬಾಲಕರು ಸೇರಿಕೊಂಡು ಓರ್ವ ಬಾಲಕನನ್ನು ತಲವಾರ್ ನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಕ್ಕದ ಮಲ್ಲಾಪೂರ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಗೆಳೆಯರ ಮದ್ಯೆ ವಾಗ್ವಾದ ಆಗಿದೆ.ಇದು ವಿಕೋಪಕ್ಕೆ ಹೋಗಿ ನಾಲ್ಚರು ಬಾಲಕರು ಸೇರಿಕೊಂಡು ಮಲ್ಲಾಪೂರ ಗ್ರಾಮದ 16 ವರ್ಷದ ಪ್ರಜ್ವಲ್ ಸುಂಕದ ಎಂಬಾತನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಪ್ರಜ್ವಲ್ ನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಆದ್ರೆ ಕೊನೆಗೂ …

Read More »

ಬಸ್ ನಿಲ್ಲಿಸು..ನಿಲ್ಲಿಸು..ಅಂತಾ ಚೀರಾಡಿದ್ರೂ ಆ ಚಾಲಕ ಕೇಳಲೇ ಇಲ್ಲ…!!

ಬೆಳಗಾವಿ- ನಿನ್ನೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ರಸ್ತೆ ಜಲಾವೃತಗೊಂಡು ರಸ್ತೆ ಹಳ್ಳವಾಗಿದೆ,ಶಾಲಾ ಮಕ್ಕಳ ಬಸ್ ಚಾಲಕ ಈ ರಸ್ತೆಯಲ್ಲಿ ಬಸ್ ಚಲಾಯಿಸಿ ಪುಂಡಾಟಿಕೆ ಪ್ರದರ್ಶಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್ ಜಲಾವೃತಗೊಂಡ ರಸ್ತೆ ಸಮೀಪ ಬಂದಾಗ,ಅಲ್ಲಿದ್ದ ಸಾರ್ವಜನಿಕರು ಬಸ್ ನಿಲ್ಲಿಸುವಂತೆ ಚೀರಾಡಿದ್ರೂ ಇದನ್ನು ಲೆಕ್ಕಿಸದೇ ಬಸ್ ಜಲಾವೃತ ರಸ್ತೆಯಲ್ಲೇ ಚಲಾಯಿಸಿದ್ದಾನೆ.ಬಸ್ ನೀರಿನಲ್ಲಿ ಸಿಲುಕಿ ಪಲ್ಟಿಯಾಗುವ ಪರಿಸ್ಥಿತಿಗೆ …

Read More »