Breaking News

LOCAL NEWS

ಬೆಳಗಾವಿಯಲ್ಲಿ ವೆದರ್ ರಾಡಾರ್ ಅಳವಡಿಸಿಲು ಕೇಂದ್ರಕ್ಕೆ ಲೆಟರ್..

ಬೆಳಗಾವಿ: ದೇಶದಲ್ಲೇ ಅತಿ ಹೆಚ್ಚು ಮಳೆ ಬೀಳುವ ಎರಡನೇ ಪ್ರದೇಶವಾಗಿರುವ ಕರ್ನಾಟಕದಲ್ಲಿ ನಿಖರವಾದ ಹವಾಮಾನ ಮುನ್ಸೂಚನೆ ನೀಡುವ ಡಾಪ್ಲರ್ ವೆದರ್ ರಾಡಾರ್ ಕೇಂದ್ರವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕಾಗಿ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರೀಜಿಜು ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ದೆಹಲಿಯಲ್ಲಿ ಭೇಟಿಯಾಗಿ ಮನವಿ ಪತ್ರ ನೀಡಿ ಒತ್ತಾಯಿಸಿದರು. ನಮ್ಮ ರಾಜ್ಯದ ಗಾತ್ರ ಮತ್ತು ವೈವಿಧ್ಯತೆಯನ್ನು ಪರಿಗಣಿಸಿ, ನಮ್ಮದೇ ಆದ ಡಾಪ್ಲರ್ ವೆದರ್ ರಾಡಾರ್ ಕೇಂದ್ರ ಸ್ಥಾಪನೆ …

Read More »

ಬೆಳಗಾವಿ ಪಾಲಿಕೆಯಲ್ಲಿ ನಡೆದ 138 ಗೋಲ್ ಮಾಲ್ ತನಿಖೆಗೆ ಸಮೀತಿ…

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಡೆದಿರುವ 138 ಪೌರ ಕಾರ್ಮಿಕರ ಹೊರಗುತ್ತಿಗೆ ನೇಮಕಾತಿ ಗೋಲ್ ಮಾಲ್ ಇಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸದ್ದು ಮಾಡಿತು. ಪಾಲಿಕೆ ಸಭೆಯಲ್ಲಿ ನಗರ ಸೇವಕ ರವಿ ಸಾಳುಂಕೆ ಅವರು 138 ಪೌರಕಾರ್ಮಿಕರ ನೇಮಕಾತಿ ಪ್ರಶ್ನಿಸಿ ಮಂಡಿಸಿದ ಗಮನಸೆಳೆಯುವ ಸೂಚನೆಯ ಮೇರೆಗೆ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಯಿತು. 138 ಪೌರ ಕಾರ್ಮಿಕರು ಗುತ್ತಿಗೆದಾರರ ಹತ್ತಿರ ಸ್ವಚ್ಛತಾ ಕಾಮಗಾರಿ ನಡೆಸಿದ್ದಾರೆ. ಇವರ ನೇಮಕಾತಿ …

Read More »

ತೂಕ ವಂಚನೆ ಕಂಡುಬಂದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ.

ಬೆಳಗಾವಿ, – ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ನವೆಂಬರ್ 1 ರ ಬಳಿಕವೇ ಆರಂಭಿಸಬೇಕು; ಕಾರ್ಖಾನೆವಾರು ನ್ಯಾಯ ಮತ್ತು ಲಾಭದಾಯಕ (ಎಫ್.ಆರ್.ಪಿ.) ದರಗಳನ್ನು ಆಯಾ ಕಾರ್ಖಾನೆಯ ನೋಟಿಸ್ ಬೋರ್ಡಿಗೆ ಕಡ್ಡಾಯವಾಗಿ ಅಳವಡಿಸಬೇಕು ಮತ್ತು ತೂಕದಲ್ಲಿ ಮೋಸ ಕಂಡುಬಂದರೆ ಕಾರ್ಖಾನೆಯ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. 2023-24 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಪ್ರಾರಂಭಿಸುವ ಕುರಿತು …

Read More »

ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ..

ಬೆಳಗಾವಿ-ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗ ಮತ್ತು ಬಿಜೆಪಿ ನಾಯಕರುಗಳು ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡುವ ರೀತಿಯಲ್ಲಿ ರಾವಣನಿಗೆ ಹೋಲಿಕೆ ಮಾಡಿ ಪೋಸ್ಟರ್ ಬಿಡುಗಡೆ ಮಾಡಿರುವದನ್ನು ಖಂಡಿಸಿ ಇಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಎಐಸಿಸಿ ಹಾಗೂ ಕೆಪಿಸಿಸಿ ಸೂಚನೆ ಮೇರೆಗೆ *ಬಿಜೆಪಿಯವರ ಈ ನಡೆಯನ್ನು ಖಂಡಿಸಿ ಇಂದು ಶನಿವಾರ ಮದ್ಯಾಹ್ನ 12-00 ಗಂಟೆಗೆ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ …

Read More »

ಕೇಂದ್ರ ತಂಡದ ಎದುರು ವಿಷದ ಬಾಟಲ ಹಿಡಿದು ಬಂದ ರೈತ…

ಬೆಳಗಾವಿ- ಕೇಂದ್ರದಿಂದ ಬೆಳಗಾವಿ ಜಿಲ್ಲೆಗೆ ಬರ ಅಧ್ಯಯನಕ್ಕೆ ಬಂದ ಅಧಿಕಾರಿಯಳ ಮುಂದೆ ವಿಷದ ಬಾಟಲ ಹಿಡಿದು ಬಂದ ರೈತ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರೈತ ಅಪ್ಪಾಸಾಹೇಬ್ ಲಕ್ಕುಂಡಿ ಎಂಬಾತ ಅಧಿಕಾರಿಗಳ ಎದುರು ವಿಷದ ಬಾಟಲ್ ಪ್ರದರ್ಶನ ಮಾಡಿ,ಅಧಿಕಾರಿಗಳ ಸಮ್ಮುಖದಲ್ಲಿಯೇ ವಿಷ ಸೇವನೆಗೆ ಮುಂದಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಕುಲಕುಪ್ಪಿ ಬಳಿ ಗದ್ದೆಗೆ ಬಿಷದ ಬಾಟಲ್ ಹಿಡಿದು ಬಂದ ರೈತ, ೪೦ ಎಕರೆ ಪ್ರದೇಶದಲ್ಲಿ ಬೆಳೆ ಬೆಳದು ಬೆಳೆ …

Read More »

ಇಂದಿರಾ ಕ್ಯಾಂಟೀನ್ ನಲ್ಲಿ ಸಚಿವರ ಊಟ..

ಬೆಳಗಾವಿ-ನಗರಾಭಿವೃದ್ಧಿ ಸಚಿವರಾದ ಬಿ‌.ಎಸ್.ಸುರೇಶ್ ಹಾಗೂ ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ಇಂದು ಶುಕ್ರವಾರ(ಅ.6) ಬೆಳಿಗ್ಗೆ 11 ಗಂಟೆಗೆ ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಜಿಪಂ ಹಳೆಯ ಕಚೇರಿ ಬಳಿಯ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 1.30 ರ ಸುಮಾರಿಗೆ ನಗರದ ಸಿವಿಲ್‌ ಆಸ್ಪತ್ರೆ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟೀನ್ ನಲ್ಲಿ ಸಚಿವರು ಊಟ ಮಾಡಲಿದ್ದಾರೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Read More »

ಮನೆ,ಮನೆಗೆ ಬಿಪಿ ಶುಗರ್ ಮಾತ್ರೆ ಫ್ರೀ….!!

ಬೆಳಗಾವಿ- ಗೃಹಲಕ್ಷ್ಮೀ ಯೋಜನೆಯ ಅನುಷ್ಠಾನದ ಬೆನ್ನಲ್ಲಿಯೇ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮತ್ತೊಂದು ಜನಪ್ರೀಯ ಯೋಜನೆ ಜಾರಿಗೆ ತರಲು ಹೊರಟಿದೆ, ಗೃಹ ಆರೋಗ್ಯ ಯೋಜನೆಯ ಹೆಸರಿನಲ್ಲಿ ಮನೆ,ಮನೆಗೆ ತೆರಳಿ ಎಲ್ಲರ ಆರೋಗ್ಯ ತಪಾಸಣೆ ಮಾಡಿ,ಬಿಪಿ ಶುಗರ್ ಮಾತ್ರೆಗಳು ಸೇರಿದಂತೆ ಇತರ ಮಾತ್ರೆಗಳನ್ನು ಉಚಿತವಾಗಿ ಮನೆ,ಮನೆಗೆ ಹಂಚುವ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬೆಳಗಾವಿಯಲ್ಲಿ ಘೋಷಣೆ ಮಾಡಿದ್ದಾರೆ. ಪ್ರತಿ ತಿಂಗಳು ಬಿಪಿ ಶುಗರ್ ಮಾತ್ರೆ …

Read More »

ನಕಲಿ ಕಾರ್ಮಿಕ ಕಾರ್ಡ್ ರದ್ದತಿಗೆ ಸಚಿವ ಸಂತೋಷ್ ಲಾಡ್ ಸೂಚನೆ.

ಬೆಳಗಾವಿ, – ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್ ಗಳನ್ನು ಪಡೆದು ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವದು ಗಮನಕ್ಕೆ ಬಂದಿದ್ದು, ಅಂತಹವರ ನೋಂದಣಿಯನ್ನು ಫ್ರೀಜ್/ರದ್ದುಗೊಳಿಸಬೇಕು. ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ತಡೆಹಿಡಿಯಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಅ.04) ನಡೆದ ಕಾರ್ಮಿಕ ಇಲಾಖೆಯ ಪ್ರಾದೇಶಿಕ ಮಟ್ಟದ ಇಲಾಖೆ …

Read More »

ಇಂದು ಬೆಳಗಾವಿಯಲ್ಲಿ ಸಚಿವರಾದ ಸಂತೋಷ್ ಲಾಡ್ ಮತ್ತು ದಿನೇಶ್ ಗುಂಡೂರಾವ್…

ದಿನೇಶ್ ಗುಂಡೂರಾವ್.. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಬುಧವಾರ ಬೆಳಗಾವಿಗೆ ಆಗಮಿಸಿದ್ದು ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದಾ ಸಂತೋಷ ಎಸ್‌. ಲಾಡ್ ಅವರು ಬುಧವಾರ (ಅ.4) ಬೆಳಗ್ಗೆ 9:30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಶಾಸಕರು, …

Read More »

ಗ್ಯಾಂಗ್ ರೇಪ್ ಮಾಡಿದ ಆರೋಪಿಗಳು ಅರೆಸ್ಟ್…

ಬೆಳಗಾವಿ-ಗೋಕಾಕ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿದ ಘಟನೆಸೆ.5ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದ್ದ ಘಟನೆ.ಶಿಕ್ಷಕ ದಿನಾಚರಣೆಯಂದು ಹಳ್ಳಿಯಿಂದ ನಗರಕ್ಕೆ ಬಂದಿದ್ದ ಮಹಿಳೆ.ಈ ವೇಳೆ ಪರಿಚಯಸ್ಥ ವ್ಯಕ್ತಿಯ ಜತೆಗೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಆರೋಪಿ ಬಸವರಾಜ ಖಿಲಾರಿ ಟೀ ಕುಡಿಯಲು ಬನ್ನಿ ಅಂತಾ ಇಬ್ಬರನ್ನೂ ಮನೆಗೆ ಕರೆದುಕೊಂಡು ಹೋಗಿದ್ದ.ಪುಸಲಾಯಿಸಿ ಆದಿತ್ಯ ನಗರದಲ್ಲಿದ್ದ ಮನೆಗೆ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದ ಬಸವರಾಜ.ಬಳಿಕ …

Read More »

ಚಿರತೆ ದಾಳಿಗೆ ಎರಡು ಮೇಕೆಗಳು ಬಲಿ….

ಅಥಣಿ-ಸಂಕೋನಟ್ಟಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಮೇಕೆಗಳು ಬಲಿಯಾದ ಘಟನೆ,ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ.ಪ್ರದೀಪ್ ನಾಯಿಕ್ ಎಂಬುವರ ತೋಟದಲ್ಲಿದ್ದ ಎರಡು ಮೇಕೆಗಳು ಚಿರತೆ ದಾಳಿಗೆ ಬಲಿಯಾಗಿವೆ. ಚಿರತೆ ದಾಳಿಯಿಂದ ಎರಡು ಮೇಕೆ ಮೃತಪಟ್ಟಿದ್ದಾಗಿ ಸ್ಥಳೀಯರ ಮಾಹಿತಿ ನೀಡಿದ್ದು,ಸಂಕೋನಟ್ಟಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ ಘಟನಾ ಸ್ಥಳಕ್ಕೆ ಅರಣ್ಯಸಿಬ್ಬಂದಿ ದೌಡಾಯಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪಕ್ಕದ ರಡ್ಡೇರಟ್ಟಿ ಗ್ರಾಮದಲ್ಲಿ ಇದೇ ಮಾದರಿಯಲ್ಲಿ ಸಾಕು ನಾಯಿ ಬಲಿಯಾಗಿತ್ತು.ಈ …

Read More »

ಬೆಳಗಾವಿಯಲ್ಲಿ ಹಾರ್ಟ್ ಟಚ್ಚೀಂಗ್…ಜೀವ ರಕ್ಷಕ ತಂತ್ರದ ಮಂತ್ರ ಜಪ…..!!

ಯಾರಾದರೂ ಹೃದಯಾಘಾತವಾಗಿ ಹೃದಯ ಬಡಿತ ಅಥವಾ ಉಸಿರಾಟ ನಿಂತ ತುರ್ತು ಪರಿಸ್ಥಿಯಲ್ಲಿ ಸಿಪಿಆರ್(ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್) ಎನ್ನುವುದು ಜೀವರಕ್ಷಕ ತಂತ್ರವಾಗಿದ್ದು, ಅದನ್ನು ಉಪಯೋಗಿಸಿ ಜೀವವನ್ನು ರಕ್ಷಿಸಬಹುದು. ಪ್ರತಿಯೊಬ್ಬರು ನಿರ್ದಿಷ್ಟವಾಗಿ ಅದರಲ್ಲಿಯೂ ಮುಖ್ಯವಾಗಿ ವಿಜ್ಞಾನ ಶಿಕ್ಷಕರು ತುರ್ತು ಸಂದರ್ಭದಲ್ಲಿ ಜೀವವನ್ನು ಉಳಿಸುವ ಸಿಪಿಆರ್ ತಂತ್ರವನ್ನು ತಿಳಿದಿರಬೇಕು ಎಂದು ಕೆಎಲ್‌ಇ ಸಂಸ್ಥೆ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ರಿಚರ್ಡ ಸಾಲ್ಡಾನಾ ಅವರಿಂದಿಲ್ಲಿ …

Read More »

ಸ್ವಾಮೀಜಿ ಸೇರಿ ರಾಜ್ಯದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ

ಬೆಳಗಾವಿ-ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀ ಸೇರಿ ಮೂವರು ಸಚಿವರಿಗೆ ಅನಾಮಿಕನೊಬ್ಬ ಜೀವ ಬೆದರಿಕೆ ಪತ್ರ ಬರೆದಿದ್ದಾನೆ. ಸಚಿವ ಸತೀಶ ಜಾರಕಿಹೊಳಿ,ದಿನೇಶ ಗುಂಡೂರಾವ್, ಪ್ರೀಯಾಂಕ್ ಖರ್ಗೆಗೂ ಜೀವ ಬೆದರಿಕೆ ಪತ್ರ ಬರೆಯಲಾಗಿದೆ.ಹಲವು ಪ್ರಗತಿಪರರು ವಿಚಾರವಾದಿಗಳಿಗೂ ಜೀವ ಬೆದರಿಕೆ ಹಾಕಲಾಗಿದೆ.ಸಪ್ಟಂಬರ್ 20 ರಂದು ಬೈಲೂರು ನಿಷ್ಕಲ ಮಂಟಪಕ್ಕೆ ಬಂದಿರುವ ಬೆದರಿಕೆ ಪತ್ರ ಈ ಪತ್ರ ದಲ್ಲಿ ಹಲವಾರು ಪ್ರಗತಿಪರ ವಿಚಾರವಾದಿಗಳ ಹೆಸರು ಪ್ರಸ್ತಾಪಿಸಲಾಗಿದೆ.ಕಳೆದ ತಿಂಗಳಷ್ಟೆ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬಂದಿತ್ತು.ಈಗ ಮತ್ತೆ …

Read More »

ವಿದ್ಯುತ್ ತಂತಿ ತಗುಲಿ ಹಾಸ್ಟೆಲ್ ವಿದ್ಯಾರ್ಥಿ ಸಾವು

ಬೆಳಗಾವಿ-ವಿದ್ಯುತ್ ತಂತಿ ತಗುಲಿ ಹಾಸ್ಟೆಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ,ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಗಣೇಶ ಪೂಜೇರ (15) ಮೃತ ದುರ್ದೈವಿಯಾಗಿದ್ದಾನೆತಲ್ಲೂರಿನ ಬಸವೇಶ್ವರ ಯುವಕ ಮಂಡಳ ಪ್ರೌಢ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ,ಆಟ ಆಡುತ್ತಾ ಮೇಲ್ಛಾವಣಿ ಮೇಲೆ ತೆರಳಿದ ವಿದ್ಯಾರ್ಥಿ ವಿದ್ಯುತ್ ತಂತಿ ಹಿಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯರಗಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

ದಾಖಲೆ ನಿರ್ಮಿಸಿದ ಬೆಳಗಾವಿಯ ಗಣೇಶ್ ವಿಸರ್ಜನೆ ಮೆರವಣಿಗೆ….!

ಬೆಳಗಾವಿಯಲ್ಲಿ ಮೇಘಾ ಇವೆಂಟ್ ಸಕ್ಸೆಸ್ ಬೆಳಗಾವಿ- ಬೆಳಗಾವಿಯ ಗಣೇಶ ಹಬ್ನ ಐತಿಹಾಸಿಕ ಮತ್ತು ಅಭೂತಪೂರ್ವ, 350 ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಲಕ್ಷಾಂತರ ಸಮ್ಮುಖದಲ್ಲಿ ಮೆರವಣಿಗೆಯ ಮೂಲಕ ವಿಸರ್ಜನೆ ಮಾಡುವದು ಸುಲಭದ ಮಾತಲ್ಲ,ಇಂತಹ ಕಠಿಣವಾದ ಕೆಲಸವನ್ನು ಬೆಳಗಾವಿ ಜಿಲ್ಲಾಡಳಿತ ಅತ್ಯಂತ ಯಶಸ್ವಿಯಾಗಿ ಶಾಂತಿಯುತವಾಗಿ, ಸುಸಜ್ಜಿತವಾಗಿ ನಡೆಸಿದೆ. ಗುರುವಾರ ಸಂಜೆ ಬೆಳಗಾವಿಯಲ್ಲಿ ಆರಂಭವಾದ ಗಣೇಶ ವಿಸರ್ಜನಾ ಮೆರವಣಿಗೆ ಶುಕ್ರವಾರ ರಾತ್ರಿ 11 ಗಂಟೆಗೆ ಮುಕ್ತಾಯವಾಗಿದ್ದು 30 ಗಂಟೆಗಳ ಕಾಲ ನಡೆದ …

Read More »