Breaking News

LOCAL NEWS

ಬೆಳಗಾವಿ- ಧಾರವಾಡ ನಡುವೆ ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಬೇಡಿಕೆಗೆ ರಕ್ಕೆ….!!!

ಬೆಳಗಾವಿ- ಮುರುಗೇಶ್ ನಿರಾಣಿ ಅವರು ರಾಜ್ಯದ ಕೈಗಾರಿಕಾ ಸಚಿವರಾಗಿದ್ದಾಗ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಕಿತ್ತೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ಧಾಣ ನಿರ್ಮಾಣ ಮಾಡುವ ವಿಚಾರವನ್ನು ಪ್ರಸ್ತಾಪ ಮಾಡಿದ ಸಂಧರ್ಭದಲ್ಲಿ ಇದು ಸಾಧ್ಯವೇ ಎನ್ನುವ ಚರ್ಚೆ ನಡೆದಿತ್ತು ಆದ್ರೆ ಈ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಬೇಡಿಕೆಯನ್ನು ಈಡೇರಿಸುವಂತೆ ಕೇಂದ್ರದ ವಿಮಾನಯಾನ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ …

Read More »

ಶಹಬ್ಬಾಷ್‌….ಬೆಳಗಾವಿ ಮಹಾಪೌರ ಮಂಗೇಶ್ ಪವಾರ್….!!

    ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ಅಂದ್ರೆ ಕನ್ನಡ- ಮರಾಠಿ ಜಗಳ, ಎಂಈಎಸ್ ಕೇಂದ್ರ ಎನ್ಬುವ ಕಾಲ ಇತ್ತು ಆದ್ರೆ ಈಗ ಕಾಲ ಬದಲಾಗಿದೆ ಬೆಳಗಾವಿ ಮಹಾನಗರ ಪಾಲಿಕೆಯ ಚಿತ್ರಣವೇ ಬದಲಾಗಿದ್ದು ಪಾಲಿಕೆಯಲ್ಲಿ ಈಗ ನಾಡಗೀತೆ ನಿರಂತರವಾಗಿ ಕೇಳಿಸುತ್ತಿದೆ. ಮರಾಠಿ ಭಾಷಿಕ, ಮರಾಠಾ ಸಮಾಜದ ಮಂಗೇಶ್ ಪವಾರ್ ಬೆಳಗಾವಿಯ ಮೇಯರ್ ಆಗಿದ್ದು ಅವರ ಸಾರಥ್ಯದಲ್ಲಿ ಇಂದು ನಡೆದ ಪಾಲಿಕೆಯ ಸಾಮಾನ್ಯ ಸಭೆಯನ್ನು ಕನ್ನಡದಲ್ಲೇ ನಡೆಸುವ ಮೂಲಕ ಮೇಯರ್ …

Read More »

ಲೋಕಸಭೆಯಲ್ಲಿ ಬೆಳಗಾವಿ ಗಡಿ ಕುರಿತು ಶಿವಸೇನೆ ಕ್ಯಾತೆ

ಬೆಳಗಾವಿ- ಬೆಳಗಾವಿ ಗಡಿವಿವಾದದ ಕುರಿತು ನಿರಂತರವಾಗಿ ಕಾಲು ಕೆದರಿ ಜಗಳ ತೆಗೆಯುವ ಉದ್ಧವ ಠಾಕ್ರೆ ನೇತ್ರತ್ವದ ಶಿವಸೇನೆ,ಲೋಕಸಭೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಸ್ತಾಪಿಸಿ ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಗೆ ಅನ್ಯಾಯವಾಗುತ್ತಿದೆ ಎಂದು ಸುಳ್ಳು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದೆ. ಬೆಳಗಾವಿ ಸೇರಿ ಗಡಿ ವಿವಾದ ಇರೋ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಆಗಬೇಕು ಎಂದು ಹೇಳಿ,ಲೋಕಸಭೆಯಲ್ಲಿ,ಗಡಿ ವಿವಾದ ಕೆದಕಿದ ಮಹಾರಾಷ್ಟ್ರ ಉದ್ಧವ ಠಾಕ್ರೆ ಬಣದ ಶಿವಸೇನೆ ಸಂಸದ ಪುಂಡಾಟಿಕೆ …

Read More »

ರಸ್ತೆ ಡಿವೈಡರ್ ಗೆ ಅಟೋ ಡಿಕ್ಕಿ, ಚಾಲಕನ ಸಾವು

ಬೆಳಗಾವಿ : ಹಲಗಾ ಗ್ರಾಮದ NH 48 ರಸ್ತೆ ಮೇಲೆ ರಿಕ್ಷಾ ಚಾಲಕನೊರ್ವ ಅತೀವೇಗವಾಗಿ ಚಲಾಯಿಸಿಕೊಂಡು ಹೋಗುವ ವೇಳೆ ಡಿವೈಡರಗೆ ಹಾಯಿಸಿ ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟಿರುವ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ನ್ಯೂ ಗಾಂಧಿನಗರದ 45 ವರ್ಷದ ಮಹ್ಮದಲಿ ಶಬ್ಬಿರಹ್ಮದ ಭಾರಗೀರ ಮೃತ ದುರ್ದೈವಿ. ಧಾಮನೆ ಗ್ರಾಮದಲ್ಲಿರುವ ಅತ್ತೆ ಮನೆಯಲ್ಲಿ ರಾತ್ರಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಹಲಗಾ ಪಬ್ಲಿಕ್ ಶಾಲೆ ಹತ್ತಿರ …

Read More »

ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಷ್ಟೊಂದು ದುಬಾರಿ ಐಪೋನ್ ಯಾಕೆ ಎಂದು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬೆಳಗಾವಿಯ ವೈಭವ ನಗರದಲ್ಲಿ ಈ ಘಟನೆ ನಡೆದಿದೆ.ರಶೀದ್ ಶೇಖ್ 24 ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. 70 ಸಾವಿರ ಬೆಲೆಯ ಐಪೊನ್ ತಂದಿದ್ದ ರಶೀದ್ ಶೇಖ್ ಈ ವಿಚಾರ ತಂದೆಯ ಗಮನಕ್ಕೆ ಬಂದಾಗ,ಇಷ್ಟೊಂದು ದುಬಾರಿ ಪೋನ್ ಬೇಕಿತ್ತಾ ಎಂದು ಪ್ರಶ್ನಿಸಿದ್ದ ತಂದೆ,ಮಗನಿಗೆ …

Read More »

ಕೆಎಲ್ಇ ಡಾಕ್ಟರ್ ಗಳಿಗೆ ಯುದ್ಧ ಗೆದ್ದ ಸಂಭ್ರಮ

ಕೆಮ್ಮು ಮತ್ತು ಕಡಿಮೆ ರಕ್ತದೊತ್ತಡದೊಂದಿಗೆ ತೀವ್ರವಾದ ಉಸಿರಾಟದ ತೊಂದರೆ ಅನುಭವಿಸುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಗೆ ಪೆನುಂಬ್ರಾ ಡಿವೈಸ್ ಮೂಲಕ ಪಲ್ಮನರಿ ಮೆಕ್ಯಾನಿಕಲ್ ಥ್ರೊಂಬೋಕ್ಟಮಿ ಚಿಕಿತ್ಸಾ ಪ್ರಕ್ರಿಯೆ ನಡೆಸಿ ವ್ಯಕ್ತಿಯನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರಥಮಬಾರಿಗೆ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಹೃದಯ ತಜ್ಞವೈದ್ಯರು ಯಶಸ್ವಿಯಾಗಿದ್ದಾರೆ. ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ 31 ವರ್ಷದ ವ್ಯಕ್ತಿಯ ಕಾಲಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿದ್ದ (ಡೀಪ್ ವೇನ್ ಥ್ರಂಬೋಸಿಸ್) …

Read More »

ಬೆಳಗಾವಿ ಮಹಾನಗರಕ್ಕೆ ಬಂತು ಸಿಂಹದ ಮರಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಸಿಂಹಿಣಿಯೊಂದು ಸೇರ್ಪಡೆಯಾಗಿದೆ. ಇನ್ಮುಂದೆ ಮೃಗಾಲಯಕ್ಕೆ ಬರುವ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಬಹುದು. ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಈ ಸಿಂಹಿಣಿಯನ್ನು ಭಾನುವಾರ ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿಲ್ಲಿರುವ ಕಿರು ಮೃಗಾಲಯಕ್ಕೆ ಕರೆತರಲಾಗಿದೆ. 9 ವರ್ಷದ ಈ ಸಿಂಹಿಣಿ ಹೆಸರು ಭೃಂಗಾ. ಫೆಬ್ರುವರಿ 6ರಂದು ಚನ್ನಮ್ಮ ಮೃಗಾಲಯದಲ್ಲಿ ನಿರುಪಮಾ ಎಂಬ ಸಿಂಹಿಣಿ ಅನಾರೋಗ್ಯದಿಂದ ನಿಧನವಾಗಿತ್ತು. ಅದು ಮೃತಪಟ್ಟ ಬಳಿಕ ಇಲ್ಲಿನ ಕೃಷ್ಣಾ ಎಂಬ …

Read More »

ಪೋಲೀಸ್ ಪೇದೆಯ ಪುತ್ರನಿಗೆ ಮುಖ್ಯಮಂತ್ರಿ ಪದಕ

ಬೆಳಗಾವಿ : ವೃತ್ತಿಯಲ್ಲಿ ಪೊಲೀಸ್ ಪೇದೆಯಾಗಿ ಆಗಿ ಕರ್ತವ್ಯ ನಿರ್ವಹಿಸಿ ಅಂದು ಸಿಎಂ ಪದಕ ಪಡೆದಿದ್ದರೆ ಇಂದು ಅವರಿಂದ ಪ್ರೇರಣೆ ಪಡೆದು ಪೊಲೀಸ್ ಇಲಾಖೆಗೆ ಸೇರಿದ್ದ ಇವರು ಸಲ್ಲಿಸಿದ್ದ ಸೇವೆ ಗುರುತಿಸಿರುವ ಸರಕಾರ 2025 ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ ಮಾಡಿದೆ. ಕೆಎಸ್ಆರ್ ಪಿ ಯ ನಿವೃತ್ತ ಹೆಡ್ ಕಾನ್ಸ್‌ಟೇಬಲ್ ದಸ್ತಗಿರಸಾಬ್ ಮುಲ್ಲಾ ತಮ್ಮ ಸುದೀರ್ಘ ಸೇವೆಯನ್ನು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿ 2012 ರಲ್ಲಿ ಮುಖ್ಯಮಂತ್ರಿ ಪದಕ ಪಡೆದಿದ್ದರು. …

Read More »

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿಯಾಗಿ ಬಹು ದಶಕಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಜನದಟ್ಟಣೆ ಕಾರಣಕ್ಕೆ ಎರಡನೇ ವಿಮಾನ ನಿಲ್ದಾಣ …

Read More »

ಆರು ವರ್ಷ ಬಿಜೆಪಿಯಿಂದ ಬಸನಗೌಡ ಯತ್ನಾಳ್ ಉಚ್ಛಾಟನೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ. ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್​ ಬ್ರೇಕ್ …

Read More »

ಗ್ಯಾರಂಟಿ ಬ್ಯಾನರ್ ಹರಿದ ಬಿಜೆಪಿ ನಾಯಕರ ವಿರುದ್ದ ಕೇಸ್ ಬಿತ್ತು…!

  ಬೆಳಗಾವಿ-ಬಿಜೆಪಿ ಪ್ರತಿಭಟನೆ ವೇಳೆ ಸರ್ಕಾರದ ಗೃಹಲಕ್ಷ್ಮಿ ಬ್ಯಾನರ್ ಹರಿದವರ ವಿರುದ್ದ ಪ್ರಕರಣ ದಾಖಲಾಗಿದೆ.ಬಿಜೆಪಿ ಮುಖಂಡರು ಸೇರಿ ಒಟ್ಟು 23 ಜನರ ವಿರುದ್ಧ ಕೇಸ್ ದಾಖಲಾಗಿದೆ. A1 ಮುರಗೇಂದ್ರಗೌಡ ಪಾಟೀಲ್, A2 ಶ್ವೇತಾ ಜಗದಾಳೆ, A3 ಪ್ರಶಾಂತ ಅಮಿನಬಾವಿ, A 4 ಮಹಾಂತೇಶ ವಕ್ಕುಂದ ಸೇರಿ ಮುಖಂಡರು, ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ.ಪ್ರತಿಭಟನೆಯಲ್ಲಿದ್ದ ಮಾಜಿ ಶಾಸಕರ ಹೆಸರನ್ನು ಪೊಲೀಸರು ಕೈಬಿಟ್ಟಿದ್ದಾರೆ.ಯಾಕಂದ್ರೆ ಅವರು ಪ್ರತಿಭಟನೆಯ ಸಂಧರ್ಭದಲ್ಲಿ ಶಾಂತ ರಾಗಿದ್ದರು.ಬೆಳಗಾವಿ ಮಾರ್ಕೆಟ್ ಪೊಲೀಸ್ …

Read More »

ಲವ್ ಬ್ರೇಕಪ್ ಬೆಳಗಾವಿಯಲ್ಲಿ ಐಶ್ವರ್ಯ ಸೂಸೈಡ್ ….!!

ಬೆಳಗಾವಿ- ಬಹುಶ ಲವ್ ಬ್ರೇಕಪ್, ಬೆಳಗಾವಿಯಲ್ಲಿ ಎಂಬಿಎ ಪದವೀಧರೆ ಸೂಸೈಡ್ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆಗೂ ಮುನ್ನ ಗೆಳತಿಯೊಂದಿಗೆ ಮಾತನಾಡಿ ರೂಮ್ ಗೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಸ್ನೇಹಿತ ಪಿಜಿಗೆ ಬಂದು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಬೆಳಗಾವಿಯ ನೆಹರೂ ನಗರದ ಪಿಜಿಯಲ್ಲಿ ನೇಣುಬೀಗಿಕೊಂಡು ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ವಿಜಯಪುರ ಜಿಲ್ಲೆಯ ಐಶ್ವರ್ಯ ಗಲಗಲಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಕೆಲಸಕ್ಕಾಗಿ ಬೆಳಗಾವಿಗೆ ಬಂದಿದ್ದ ಐಶ್ವರ್ಯ,ವಿಜಯಪುರದಲ್ಲಿಯೇ ಎಂಬಿಎ ವ್ಯಾಸಾಂಗ ಮಾಡಿದ್ದಳು.ಕಳೆದ ಮೂರು ತಿಂಗಳಿನಿಂದ …

Read More »

ಎತ್ತಿನಬಂಡಿ ಸ್ಪರ್ದೆ ,ಚಕ್ರದಲ್ಲಿ ಸಿಲುಕಿ ಯುವಕನ ಸಾವು

    ಬೆಳಗಾವಿ-ಎತ್ತಿನಬಂಡಿ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡಿದ್ದ ಯುವಕ ಇಂದು ಸಾವನ್ನೊಪ್ಪಿದ್ದಾನೆ.ಬೆಳಗಾವಿ ತಾಲೂಕಿನ ಬಸವನ ಕುಡಚಿ ಗ್ರಾಮದ ಜಾತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಅಪ್ಪಣ್ಣ ಪಾರೀಶ ಪಾಟೀಲ್ ( 27) ಮೃತ ಯುವಕನಾಗಿದ್ದಾನೆ.ಬಸವನ ಕುಡಚಿ ಗ್ರಾಮದ ಜಾತ್ರೆ ನಿಮಿತ್ತ ಎತ್ತಿನಬಂಡೆ ಸ್ಪರ್ಧೆಯನ್ನು ಗ್ರಾಮಸ್ಥರು ಹಮ್ಮಿಕೊಂಡಿದ್ದರು,ಈ ವೇಳೆ ಓಡುತ್ತಿದ್ದ ಎತ್ತಿನಬಂಡಿ ಚಕ್ರದಡಿ ಸಿಲುಕಿದ್ದ ಅಪ್ಪಣ್ಣ ಗಂಭೀರವಾಗಿ ಗಾಯಗೊಂಡಿದ್ದ,ಗಾಯಗೊಂಡಿದ್ದ ಅಪ್ಪಣ್ಣನನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಚಿಕಿತ್ಸೆ ಫಲಿಸದೇ ಇಂದು ಖಾಸಗಿ …

Read More »

ಬೆಳಗಾವಿಯಲ್ಲಿ 3 ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ

ಮಹಿಳಾ ಸಬಲೀಕರಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ, ಮಾ.24(ಕರ್ನಾಟಕ ವಾರ್ತೆ):ಮಹಿಳೆಯರು ಸಬಲರಾಗಿ ದೇಶವನ್ನು ಮುನ್ನಡೆಸಬೇಕಿದೆ. ಹೆಣ್ಣು-ಗಂಡು ಸಮಾನರು ಎಂಬ ಬಸವಣ್ಣನವರ ತತ್ವದಂತೆ ಸಿದ್ದರಾಮಯ್ಯನವರ ಸರ್ಕಾರ ನಡೆಯುತ್ತಿದೆ. ಸರ್ಕಾರದಿಂದ ರಾಜ್ಯದ ಪ್ರತಿಯೊಂದು ಅಂಗನವಾಡಿಗಳನ್ನು ಉನ್ನತ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, …

Read More »

ಬ್ಯಾಂಕ್ ವಂಚನೆ ದುಡ್ಡು ಸ್ವಾಮೀಜಿ ಖಾತೆಗೆ, ಬಬಲಾದಿ ಮುತ್ಯಾ ಅರೆಸ್ಟ್…!!

ಗೋಕಾಕ ಮಹಾಲಕ್ಷ್ಮಿ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್‌ ಬೆಳಗಾವಿ: ಗೋಕಾಕಿನ ಮಹಾಲಕ್ಷ್ಮಿ ಕೋಆಪರೇಟಿವ್ ಬ್ಯಾಂಕ್‌ನಲ್ಲಿ ನಡೆದಿದ್ದ ಬಹುಕೋಟಿ ವಂಚನೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಜಮಖಂಡಿಯ ಹೊಸ ಬಬಲಾದಿ ಮಠದ ಸ್ವಾಮೀಜಿಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಠ ಬಾಗಲಕೋಟೆಯ ಜಮಖಂಡಿಯಲ್ಲಿದೆ. ಮಠದ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ ಇಡೀ ರಾತ್ರಿ ವಿಚಾರಣೆ ನಡೆಸಿದೆ. ಗೋಕಾಕ ನಗರ ಠಾಣೆಯಲ್ಲಿ ಸಿಐಡಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. …

Read More »