Breaking News

LOCAL NEWS

ವಿಶೇಷ ವಿಮಾನದಲ್ಲಿ ಸೋಮವಾರ ಡಿ.ಕೆ.ಶಿವಕುಮಾರ ಬೆಳಗಾವಿಗೆ ಬರ್ತಾರೆ.

ಬೆಳಗಾವಿ: ಬರುವ ಸೋಮವಾರದಿಂದ ಬೆಳಗಾವಿಯಲ್ಲಿ ಲೋಕಸಭಾ ಚುನಾವಣೆ ರಂಗೇರಲಿದೆ.ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನ ಮತ್ತು ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ 11 ಗಂಟೆಗೆ ಮೆರವಣಿಗೆಯಲ್ಲಿ ಆಗಮಿಸಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು. ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಸುವ ವೇಳೆ ಹಾಜರಿರಲಿದ್ದಾರೆ. ಭಾನುವಾರ ರಾತ್ರಿ ಮೈಸೂರಿನಿಂದ …

Read More »

ಶೆಟ್ಟರ್ ಹಂಗ್ ಮಾಡಿದ್ರು..ಹಿಂಗ್ ಮಾಡಿದ್ರು ಎನ್ನುವ ಸುಳ್ಳು ಆರೋಪಗಳಲ್ಲಿ ಸತ್ಯಾಂಶ ಇಲ್ಲ.

ಬೆಳಗಾವಿ- ನನಗೂ ಬೆಳಗಾವಿಗೂ 25 ವರ್ಷಗಳ ನಂಟಿದೆ ನಾನು ಅಧಿಕಾರದಲ್ಲಿ ಇದ್ದಾಗ ನಾನು ಬೆಳಗಾವಿಯ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ.ಶೆಟ್ಟರ್ ಹಂಗ್ ಮಾಡಿದ್ರು,ಹಿಂಗ್ ಮಾಡಿದ್ರು ಎಂದು ಕಾಂಗ್ರೆಸ್ ನಾಯಕರು ಮಾಡುವ ಆರೋಪಗಳಲ್ಲಿ ಸತ್ಯಾಂಶ ಇಲ್ಲ.ನಾನು ಬೆಳಗಾವಿಯ ಜನಪ್ರತಿನಿಧಿಯಾಗಿ ಕೆಲಸ ಮಾಡ್ತೀನಿ, ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬೆಳಗಾವಿ ಜನತೆಗೆ ಭರವಸೆ ನೀಡಿದ್ದಾರೆ. ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಶೆಟ್ಟರ್ ನಾನು  17 ರಂದು ಮೆರವಣಿಗೆ …

Read More »

ಜಗದೀಶ್ ಶೆಟ್ಟರ್ ಕಚೇರಿ ಈಗ C/O “ಲಕ್ಷ್ಮೀ” ಕಾಂಪ್ಲೆಕ್ಸ್….!!!

ಬೆಳಗಾವಿ- ದಿವಂಗತ ಸುರೇಶ್ ಅಂಗಡಿ ಅವರು ತಮ್ಮ ಕಚೇರಿ ಕಟ್ಟಡಕ್ಕೆ ಲಕ್ಷ್ಮೀ ಎಂದು ಹೆಸರಿಟ್ಟಿದ್ದು ಯಾಕೆ ? ಇದೇ ಲಕ್ಷ್ಮೀ ತಮಗೆ ಚುನಾವಣೆಯಲ್ಲಿ ಎದುರಾಳಿ ಆಗಬಹುದೇ ಎನ್ನುವ ಕಲ್ಪನೆ ಅವರಿಗಿತ್ತೋ ಅಥವಾ ಇದೊಂದು ಕಾಕತಾಳೀಯೋ ಗೊತ್ತಿಲ್ಲ.ಆದ್ರೆ ಜಗದೀಶ್ ಶೆಟ್ಟರ್ ಅವರು ಈಗ ದಿವಂಗತ ಸುರೇಶ್ ಅಂಗಡಿಯವರ ಮುಖ್ಯ ಕಾರ್ಯಸ್ಥಾನವಾಗಿದ್ದ ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿಯೇ ತಮ್ಮ ಚುನಾವಣಾ ಕಚೇರಿಯನ್ನು ಇಂದು ಬೆಳಗ್ಗೆ ಕಾರ್ಯಾರಂಭ ಮಾಡಲಿದ್ದಾರೆ. ಇಂದು ಲಕ್ಷ್ಮೀ ವಾರ,ಶುಭ ಶುಕ್ರವಾರದ …

Read More »

ಎಸ್ ಬಿ ಸಿಧ್ನಾಳ ಪುತ್ರ,ಶಿವಕಾಂತ ಸಿಧ್ನಾಳ ಇನ್ನಿಲ್ಲ…

ಬೆಳಗಾವಿ- ಬೆಳಗಾವಿಯ ಪ್ರಸಿದ್ಧ ಉದ್ಯಮಿ, ಎಸ್ ಬಿ ಸಿಧ್ನಾಳ ಅವರ ಸುಪುತ್ರ,VRL ಮಾಲೀಕ ವಿಜಯ ಸಂಕೇಶ್ವರ ಅವರ ಅಳಿಯ ಶಿವಕಾಂತ ಸಿಧ್ನಾಳ ಇಂದು ಶನಿವಾರ ನಿಧನರಾಗಿದ್ದಾರೆ. ಶಿವಕಾಂತ ಸಿಧ್ನಾಳ ಅವರ ಆರೋಗ್ಯ ಹಲವಾರು ದಿನಗಳಿಂದ ಸರಿ ಇರಲಿಲ್ಲ.ಆದ್ರೆ ಇಂದು ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಕ್ಯಾಂಪ್ ಪ್ರದೇಶದಲ್ಲಿ ಇರುವ ಶಿವಕಾಂತ ನಿವಾಸಕ್ಕೆ ಸಂಬಂಧಿಕರು, ಗಣ್ಯರು,ದೌಡಾಯಿಸಿದ್ದಾರೆ.

Read More »

ಇಂದು ಬೆಳಗಾವಿಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟೀಂಗ್…

ಬೆಳಗಾವಿ-ಬೆಳಗಾವಿ ಜಿಲ್ಲೆಯ ಬೆಳಗಾವಿ,ಹಾಗೂ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ತಂತ್ರ ರೂಪಿಸಲು ಇಂದು ಬೆಳಗಾವಿ ನಗರದ ಸಂಕಮ್ ಹೊಟೇಲ್ ನಲ್ಲಿ ಬಿಜೆಪಿ ಕೋರ್ ಕಮೀಟಿ ಸಭೆ ನಡೆಯಲಿದೆ. ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ಕೋರ್ ಕಮೀಟಿಯ ಸದಸ್ಯರು ಹಾಗೂ ಬೆಳಗಾವಿ ಜಿಲ್ಲೆಯ ಬಿಜೆಪಿಯ ಪ್ರಮುಖ ನಾಯಕರು ಮತ್ತು ಚುನಾವಣೆಯ ಬಿಜೆಪಿ ಉಸ್ತುವಾರಿ ಹೊಂದಿರುವ ರಾಜ್ಯದ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. …

Read More »

ಮೃಣಾಲ್ ಒಳ್ಳೆಯ ಸಂಸ್ಕೃತಿ, ಹೊಂದಿರುವ ಯುವ ನಾಯಕ…

ಬೈಲಹೊಂಗಲ ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭಾರೀ ಬೆಂಬಲ ಬೈಲಹೊಂಗಲ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಬೈಲಹೊಂಗಲ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಬುಧವಾರ ಪ್ರಚಾರ ಕೈಗೊಳ್ಳಲಾಗಿದ್ದು, ಎಲ್ಲೆಡೆ ಭಾರೀ ಬೆಂಬಲ ವ್ಯಕ್ತವಾಗಿದೆ. ಬೈಲಹೊಂಗಲ ತಾಲೂಕಿನ ಬೈಲವಾಡ, ದೇವಲಾಪುರ, ಆನಿಗೋಳ ಮತ್ತಿತರ ಕಡೆಗಳಲ್ಲಿ ಮತಯಾಚಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಮಹಾಂತೇಶ ಕೌಜಲಗಿ, ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್, ಪಕ್ಷದ ಮುಖಂಡರಾದ ಈಶ್ವರ …

Read More »

ಎರಡು ಲಕ್ಷ ಮತಗಳಿಂದ ಮೃನಾಲ ಗೆಲುವು ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ…

  ಎರಡು ಲಕ್ಷ ಮತಗಳಿಂದ ಮೃಣಾಲ್ ಹೆಬ್ಬಾಳ್ಕರ್‌ಗೆ ಗೆಲುವು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ *ರಾಮದುರ್ಗ* : ಗಂಡು ಮೆಟ್ಟಿನ ನಾಡು ಬೆಳಗಾವಿ ಜಿಲ್ಲೆಯ ಮಣ್ಣಿನ ಮಗ ಮೃಣಾಲ್ ಹೆಬ್ಬಾಳ್ಕರ್ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು. ರಾಮದುರ್ಗದ ರಾಠಿ ಫಾರ್ಮ್ ಹೌಸ್‌ನಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆಯ ಸಮ್ಮಿಲ ಸ್ವಾಭಿಮಾನಿ ಪ್ರಚಾರ …

Read More »

ಬೆಳಗಾವಿಯಲ್ಲಿ ದರೋಡೆಕೋರರನ್ನು ಥಳಿಸಿದ ಪಬ್ಲಿಕ್….!!

ಬೆಳಗಾವಿ: ನಗರದಲ್ಲಿ ಜನನಿಬಿಡ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಖಾಸಗಿ ಕಂಪನಿಯ ನೌಕರರನ್ನು ತಡೆದು ಲೂಟಿ ಮಾಡುತ್ತಿದ್ದ ಲೂಟಿಕೋರರನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೋಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಮಹಾನಗರದಲ್ಲಿ ನಡೆದಿದೆ. ನಗರದಲ್ಲಿ ಮತ್ತೆ ಬಾಲಬಿಚ್ಚಿರುವ ಕಳ್ಳರನ್ನು ಮಂಗಳವಾರ ರಾತ್ರಿ ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕೇಂದ್ರ ಬಸ್ ನಿಲ್ದಾಣದಿಂದ ಖಾಸಗಿ ಕಂಪನಿಯ ನೌಕರನೊಬ್ಬನು ಬಾಜಿ ಮಾರ್ಕೆಟರ್ ರಸ್ತೆಯ ಮೂಲಕ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ …

Read More »

ಹಾಲು..ಮೊಸರು..ಮಜ್ಜಿಗೆ…ಬೆಣ್ಣೆ….ತುಪ್ಪ….ಸುದ್ದಿ ಓದ್ರಿ ಯಪ್ಪ..!!

*ಬೆಮೂಲ್ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಬಾಸ್* *ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ* *ಬೆಳಗಾವಿಯಲ್ಲಿ ೨೫೦* *ಕೋ.ರೂ. ವೆಚ್ಚದ ಸ್ವಯಂ ಚಾಲಿತ ಮೇಗಾ ಡೇರಿ*ಸ್ಥಾಪನೆಗೆ ಹೆಚ್ಚಿನ* *ಒತ್ತು*- *ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ*- ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಇಲ್ಲಿಯ ಜಿಲ್ಲಾ …

Read More »

ಹಿಂಡಲಗಾ ಜೈಲಿನ ಮೇಲೆ ನೂರಕ್ಕೂ ಹೆಚ್ಚು ಸಿಬ್ಬಂಧಿಗಳ ಜೊತೆ ಪೋಲೀಸರ ದಾಳಿ….

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಕೇಂದ್ರ ‌ಕಾರಾಗೃಹದ ಮೇಲೆ ಬೆಳಗಾವಿ ಪೊಲೀಸರು ಏಕಾಏಕಿ ದಾಳಿ ಮಾಡಿದ್ದು, ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ಜೈಲಿನ ಮೇಲೆ ದಾಳಿ ಮಾಡಲಾಗಿದೆ. ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಮಾರ್ಬಾನ್ಯಾಂಗ್ ಮಾರ್ಗದರ್ಶನದಲ್ಲಿ ಡಿಸಿಪಿ ರೋಹನ್ ಜಗದೀಶ್ ನೇತೃತ್ವದ ತಂಡವು ಜೈಲಿನಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ದಿಢೀರ್ ದಾಳಿ ನಡೆಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ಜೈಲಿನ ಆವರಣದಲ್ಲಿ ‌ಪೊಲೀಸರು ತಪಾಸಣೆ ನಡೆಸಿದ್ದಾರೆ. ಡಿಸಿಪಿಗೆ ನಗರದ ಐದೂ …

Read More »

ಜಗದೀಶ್ ಶೆಟ್ಟರ್ ಮೊದಲು ಬೆಳಗಾವಿಯ ವಿಳಾಸ ಹೇಳಲಿ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ-ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಅವರು ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಟೀಕಾ ಪ್ರಹಾರ ನಡೆಸಿದ ಬೆನ್ನಲ್ಲಿಯೇ ಈಗ ಸಚೆವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಲಾ ಅಂಗಡಿಗೆ ಟಾಂಗ್ ಕೊಟ್ಟಿದ್ದಾರೆ.ಕುಟುಂಬಕ್ಕಿಂತ ಪಕ್ಷ ಮೊದಲು ಎನ್ನುವ ಮಂಗಲಾ ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಸಪೋರ್ಟ್ ಮಾಡಬಹುದಿತ್ತು,ಆದ್ರೆ ಅವರು ಸಪೋರ್ಟ್ ಮಾಡಿದ್ದು ತಮ್ಮ ಬೀಗರಿಗೆ ಪಕ್ಷ ಮೊದಲು ಎಂದು ಮಂಗಲಾ ಅಂಗಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ. ನಾನು ಮಗನ ಪರವಾಗಿ …

Read More »

ಬೆಳ್ಳಂ ಬೆಳಗ್ಗೆ ಕೋರೆ ಮನೆಯಲ್ಲಿ ಮಾಸ್ಟರ್ ಪ್ಲ್ಯಾನ್….!!

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಇಂದು ಬೆಳ್ಳಂ ಬೆಳಗ್ಗೆ ಕೋರೆ ನಿವಾಸದಲ್ಲಿ ಚಹಾ ಪೇ ಚರ್ಚಾ ಮಾಡಿದ್ರು ಮಾಜಿ ಶಾಸಕರ ಅನೀಲ ಬೆನಕೆ ಅವರು ಸಹ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಜಗದೀಶ್ ಶೆಟ್ಟರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಅವರು ಇದೇ ಮೊದಲ ಬಾರಿಗೆ ಪ್ರಭಾಕರ ಕೋರೆ ಅವರನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ರು… ಪ್ರಭಾಕರ ಕೋರೆ ಅವರು ಬಿಜೆಪಿಯ …

Read More »

ಕಾಲು ಬಾಯಿಗೆ, ರೋಗ ಬರಬಹುದು ಬೇಗ,ಬೇಗ ಇಂಜೆಕ್ಷನ್ ಮಾಡಿಸಿ…

ಜಾನುವಾರುಗಳಿಗೆ ಲಸಿಕೆ ಕಡ್ಡಾಯ; ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ನಿತೇಶ ಪಾಟೀಲ ಬೆಳಗಾವಿ, -ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 05ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು ಜಿಲ್ಲೆಯಲ್ಲಿ ಏಪ್ರಿಲ್ 01 ರಿಂದ ಏಪ್ರಿಲ್ 30 ವರೆಗೆ ಹಮ್ಮಿಕೊಳ್ಳಲಾಗಿದ್ದು, ಬ್ಯಾನರ್, ಪೋಸ್ಟರ್ ಮತ್ತು ಕರಪತ್ರಗಳನ್ನು ಮೂಲಕ ವ್ಯಾಪಕ ಪ್ರಚಾರ ಕೈಗೊಂಡು ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ …

Read More »

ಬೆಳಗಾವಿ – ಗೋವಾ ಬಾರ್ಡರ್ ನಲ್ಲಿ 7 ಲಕ್ಷ ಸೀಜ್ ಆಯ್ತು…

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ, ದಾಖಲೆಗಳಿಲ್ಲದ ₹7.98 ಲಕ್ಷ ಹಣವನ್ನು ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರ ತಂಡ ವಶಕ್ಕೆ ಪಡೆದಿದೆ. ನಗರದ ನಿವಾಸಿ ಸಂಜಯ ಬಸವರಾಜ ರೆಡ್ಡಿ ಎನ್ನುವವರು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಹಣ ಇಟ್ಟುಕೊಂಡಿದ್ದರು. ಬಸ್‌ ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುವ ವೇಳೆ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹಣ ಮುಟ್ಟುಗೋಲು ಹಾಕಿಕೊಂಡು ಖಾನಾಪುರದ …

Read More »

ಬೆಳಗಾವಿಯ ಪ್ರಸಿದ್ಧ ,ಯಲ್ಲಮ್ಮನ ದೇವಸ್ಥಾನಕ್ಕೆ ಕೆನಡಾ ದೇಶದಿಂದ ಬಂತು ಕಾಣಿಕೆ….!!

ಕೆನಡಾ ಕಂಟ್ರಿಗೂ…ಯಲ್ಲಮ್ಮನ ಪವಾಡ ಎಂಟ್ರಿ….!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಯಲ್ಲಮ್ಮನ ದೇವಸ್ಥಾನ ಜಗತ್ಪ್ರಸಿದ್ಧ ದೇವಸ್ಥಾನ ಎನ್ನುವದು ಸಾಭೀತಾಗಿದೆ ಯಾಕಂದ್ರೆ ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ ಕೆನಡಾ ದೇಶದ ಕರೆನ್ಸಿ ಸಿಕ್ಕಿದೆ. ಬೆಳಗಾವಿಯ ಪ್ರಸಿದ್ಧ ಯಲ್ಲಮ್ಮನ ದೇವಸ್ಥಾನಕ್ಕೆ ಕೆನಡಾ ದೇಶದ ಭಕ್ತರೂ ಬರ್ತಾರೆ ಎನ್ನುವ ವಿಚಾರವೂ ಖಾತ್ರಿಯಾಗಿ,ಬರಗಾಲದ ಸಮಯದಲ್ಲೂ ಹುಂಡಿಯಲ್ಲಿ ಈ ವರ್ಷ ಪ್ರತಿವರ್ಷಕ್ಕಿಂತ ಎರಡು ಕೋಟಿ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಈ ವರ್ಷ ವಿದೇಶದ ಅಂದ್ರೆ ಕೆನಡಾ ದೇಶದ ಕಾಣಿಕೆಯೂ ಮುಟ್ಟಿರುವದು …

Read More »