LOCAL NEWS

ಬೆಳಗಾವಿಯ ಬೀಗರು ಬರುತ್ತಿದ್ದಾರೆ ದಾರಿ ಬಿಡಿ..!!

ಶೆಟ್ಟರ್ ಚಿತ್ತ ಬೆಳಗಾವಿಯತ್ತ : ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಇಂದು ಮಾಜಿ ಸಿಎಂ ! ಬೆಳಗಾವಿ : ಇಷ್ಟು ವರ್ಷಗಳ ಕಾಲ ಇವರು ಬಿಜೆಪಿ ನಾಯಕರಾಗಿ ಬೆಳಗಾವಿಗೆ ಆಗಮಿಸುತ್ತಿದ್ದರು. ಆದರೆ, ಇದೀಗ ಕಾಂಗ್ರೆಸ್ ನಾಯಕರಾಗಿ ಆಗಮಿಸುತ್ತಿರುವುದು ಚರ್ಚಿತ ವಿಷಯ. ಬಿಜೆಪಿ ಟಿಕೆಟ್ ವಂಚಿತರಾಗಿ ಕೊನೆಗೆ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಇದೇ ಮೊದಲ ಬಾರಿಗೆ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದಾರೆ. ಅದರಲ್ಲೂ …

Read More »

ಪ್ರಸಾದ ನಿಲಯದ ಶ್ರೀಗಳು, ನೆನೆದವರ ಮನದಲ್ಲಿ.

ಬೆಳಗಾವಿ- ಗಡಿಭಾಗದ ಬೆಳಗಾವಿಯಲ್ಲಿ ಪ್ರಸಾದ ನಿಲಯಗಳ ಮೂಲಕ,ಶೈಕ್ಷಣಿಕ ಕ್ರಾಂತಿ ಮಾಡಿ,ಈ ಭಾಗದ ಲಕ್ಷಾಂತರ ಯುವಕರ ಭವಿಷ್ಯ ರೂಪಿಸಿದ,ಬೆಳಗಾವಿಯ ರುದ್ರಾಕ್ಷಿಮಠ ನಾಗನೂರು ಶ್ರೀ ಲಿಂಗೈಕ್ಯ ಡಾ.ಶಿವಬಸವ ಮಹಾಸ್ವಾಮಿಗಳನ್ನು ಆಮ್ ಆದ್ಮಿ ಪಕ್ಷದ ಮುಖಂಡ ರಾಜೀವ ಟೋಪಣ್ಣವರ ಅವರು ಸ್ಮರಿಸಿದ್ದಾರೆ‌ ಬೆಳಗಾವಿಯ ರೇಲ್ವೆ ನಿಲ್ಧಾಣಕ್ಕೆ ಬೆಳಗಾವಿಯ ರುದ್ರಾಕ್ಷಿಮಠ ನಾಗನೂರು, ಲಿಂಗೈಕ್ಯ ಡಾ.ಶಿವಬಸವ ಮಹಾಸ್ವಾಮಿಗಳ ಹೆಸರು ನಾಮಕರಣ ಮಾಡಲು ಜೀವ ಇರೋವರೆಗೂ ಹೋರಾಡುತ್ತೇನೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ, …

Read More »

SSLC ಫಲಿತಾಂಶ ಗುರುವಾರ ಸಾಧ್ಯತೆ.

ಬೆಂಗಳೂರು :ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬಹುನಿರೀಕ್ಷಿತ ಈ ಬಾರಿಯ ಪರೀಕ್ಷಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ನಿರೀಕ್ಷಿಸಿದ್ದ ಫಲಿತಾಂಶ ಸದ್ಯವೇ ಪ್ರಕಟವಾಗುವ ಸಾಧ್ಯತೆ ಇದೆ.ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶಮೇ ತಿಂಗಳ 4 ರಂದು ಪ್ರಕಟವಾಗಲಿದೆ ಎನ್ನಲಾಗಿದೆ. ಶಿಕ್ಷಣ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ಶಿಕ್ಷಣ ಇಲಾಖೆ ನೀಡಿರುವ ಕೆಲವು ಅಂಕಿಅಂಶ ಹಾಗೂ ಮಾಹಿತಿ ಆಧರಿಸಿ …

Read More »

ಬೆಳಗಾವಿ: ಭೀಕರ ಅಪಘಾತಕ್ಕೆ ಇಬ್ಬರು ಬಲಿ.

ಹುಕ್ಕೇರಿ :ಹುಕ್ಕೇರಿ-ಬೆಳಗಾವಿ ರಸ್ತೆಯಲ್ಲಿ ಬಸ್ ಓವರ್ ಟೇಕ್ ಮಾಡುವ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ಘಟನೆ ಇಂದು ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಜಯಪಾಲ್ ಸಕಲಕ್ಕನವರ- ಜಯಶ್ರೀ ಎಂಬುವವರು ಮೃತಪಟ್ಟಿದ್ದಾರೆ.ಹುಕ್ಕೇರಿ-ಬಡಕುಂದ್ರಿ ನಡುವೆ ಈ ದುರ್ಘಟನೆ ಸಂಭವಿಸಿದೆ.ಹುಕ್ಕೇರಿಯಿಂದ ಬೆಳಗಾವಿ ಕಡೆಗೆ ಎಕ್ಸ್ ಯು ವಿ ಕಾರು ವೇಗವಾಗಿ ಸಾಗುತ್ತಿತ್ತು. ಬೆಳಗಾವಿಯಿಂದ ಅಥಣಿಯತ್ತ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ವಿಫ್ಟ್ ಕಾರಲ್ಲಿದ್ದವರು ಕೊನೆಯುಸಿರೆಳೆದಿದ್ದಾರೆ. ಇನ್ನೂ …

Read More »

ಡಿಕೆಶಿ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ : ಭಾರೀ ಅಪಾಯದಿಂದ ಪಾರು

ಬೆಂಗಳೂರು :ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ತುರ್ತು ಭೂಸ್ಪರ್ಶಗೊಂಡಿದೆ. ಇದರಿಂದ ಅವರು ದೊಡ್ಡ ಅಪಘಾತದಿಂದ ಪಾರಾಗಿದ್ದಾರೆ. ರಣಹದ್ದು ಬಡಿದ ಕಾರಣ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ. ಹೆಲಿಕಾಪ್ಟರ್ ವಿಂಡೋ ಗಾಜು ಪುಡಿಪುಡಿ ಗೊಂಡಿದೆ. ಶಿವಕುಮಾರ್ ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ಅವರು ಈಗ ರಸ್ತೆ ಮಾರ್ಗವಾಗಿ ಮುಳಬಾಗಿಲು ಮೂಲಕ ತೆರಳಿದ್ದಾರೆ. ಶಿವಕುಮಾರ್ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. …

Read More »

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಂಪರ್ ಭರವಸೆ…!!

ಬೆಂಗಳೂರು :ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಮಂಗಳವಾರ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಣಾಳಿಕೆಯ ಪ್ರಮುಖ ಅಂಶವನ್ನು ವಿವರಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿಗಳನ್ನು ಈಡೇರಿಸಲಾಗುವುದು. ಮೊದಲ ಸಚಿವ ಸಂಪುಟ ಸಭೆಯಲ್ಲಿ ಅದನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಇತರ ನಾಯಕರ …

Read More »

ಲಕ್ಷ್ಮಣ ಸವದಿ ಪಕ್ಷ ಬಿಟ್ಟ ಬಗ್ಗೆ ಕೊನೆಗೂ ಸತ್ಯ ಬಯಲಿಗೆಳೆದ ಅಮಿತ್ ಶಾ !

ಬೆಂಗಳೂರು :ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪಕ್ಷ ಬಿಟ್ಟ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಘಟನೆಯ ಸಂಪೂರ್ಣ ವಿವರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಗಳಿಗೆ ವಿಶೇಷ ಸಂದರ್ಶನ ನೀಡಿದ ಅವರು, ಶೆಟ್ಟರ್ ಹಾಗೂ ಸವದಿ ಈ ಬಾರಿ ಹೀನಾಯ ಸೋಲು ಅನುಭವಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ …

Read More »

ಬೆಳಗಾವಿಯಲ್ಲಿ ಮಹಿಳೆಯಿಂದ ಯುವಕನ ಮರ್ಡರ್!

ಬೆಳಗಾವಿಯಲ್ಲಿ ಭೀಕರ ಕೊಲೆ ಬೆಳಗಾವಿ : ಬೆಳಗಾವಿಯಲ್ಲಿ ಭಾನುವಾರ ರಾತ್ರಿ ಯುವಕನನ್ನು ಮಹಿಳೆ ಒಬ್ಬಳು ಭೀಕರವಾಗಿ ಚುಚ್ಚಿ ಕೊಲೆಗೈದಿದ್ದಾಳೆ. ಹಳೆ ಪಿ.ಬಿ. ರಸ್ತೆಯ ಕೀರ್ತಿ ಹೋಟೆಲ್ ಬಳಿ ಘಟನೆ ನಡೆದಿದೆ. ತಾರಿಹಾಳ ಗ್ರಾಮದ ನಾಗರಾಜ ಭೀಮಶಿ ಪಾಟೀಲ (28)ಮೃತ ಯುವಕ. ರಾತ್ರಿ 2:00 ರ ಸುಮಾರಿಗೆ ಕೈಯಲ್ಲಿ ಚಾಕು ಹಿಡಿದು ಮದ್ಯಪಾನ ಮಾಡಿ ಹೋಗುತ್ತಿದ್ದ ಮಹಿಳೆಯನ್ನು ಬೈಕ್ ಸವಾರ ಯುವಕ ಪ್ರಶ್ನಿಸಿದ್ದಾನೆ. ಆಗ ಮಹಿಳೆ ಚಾಕುವಿನಿಂದ ಚುಚ್ಚಿದ್ದಾಳೆ ಎನ್ನಲಾಗಿದೆ. ಕೊಲೆಗೈದ …

Read More »

ಸಿಲಿಂಡರ್, ಹಾಲು ಉಚಿತ, ಬಿಜೆಪಿ ಪ್ರಣಾಳಿಕೆ ಬಿಡುಗಡೆ !

ಬೆಂಗಳೂರು :ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಕರ್ನಾಟಕ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ , ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಹಲವು ನಾಯಕರು ಇದ್ದರು. ಬಿಜೆಪಿಯ ಪ್ರಣಾಳಿಕೆ ರಚನೆ ವೇಳೆ ವಿಷಯ ತಜ್ಞರಿಂದ ಸುಮಾರು 900 ಸಲಹೆ ಬಂದಿದ್ದವು. ಜನರಿಂದ …

Read More »

ಕುಡಚಿ, ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಅವರಿಗೆ ಸಂಕಷ್ಟ…!

ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು ಬೆಳಗಾವಿ, ಏ.30(ಕರ್ನಾಟಕ ವಾರ್ತೆ): ಕುಡಚಿ ಮತಕ್ಷೇತ್ರದಲ್ಲಿ ಏ.29 ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪಿ.ರಾಜೀವ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿರುತ್ತದೆ. ಮಾನ್ಯ ಪ್ರಧಾನಮಂತ್ರಿಗಳು ಭಾಗವಹಿಸಿದ್ದ ಬಿಜೆಪಿ ಪಕ್ಷದ ಬಹಿರಂಗ …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಂಬಲಿಸಲು ಹಾಲುಮತ ಸಮಾಜದ ಮುಖಂಡರ ನಿರ್ಧಾರ.

*ದಳವಾಯಿಯನ್ನು ತಿರಸ್ಕರಿಸಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಒಮ್ಮತದ ನಿರ್ಣಯ ಕೈಕೊಂಡ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ* *ಹಾಲುಮತ ಸಮಾಜದ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚ್ಯುತಿ ತಂದಿಲ್ಲ- ಬಾಲಚಂದ್ರ ಜಾರಕಿಹೊಳಿ* ಬಾಲಚಂದ್ರ *ಮೂಡಲಗಿ:* ನನ್ನ ರಾಜಕೀಯ ಏಳ್ಗೆಯಲ್ಲಿ ಹಾಲುಮತ ಸಮಾಜದ ಪಾತ್ರ ಮಹತ್ತರವಿದ್ದು, ೧೯೯೨ರಿಂದ ಈ ಸಮಾಜವು ನಮ್ಮ ಕುಟುಂಬದ ಬೆಳವಣಿಗೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಹಾಲುಮತ ಸಮಾಜದವರು ಈ ಬಾರಿ ಪ್ರತಿಶತ ೯೫ರಷ್ಟು ಮತಗಳನ್ನು ನನಗೆ ನೀಡಿದರೆ …

Read More »

ನಾಳೆ ಬೆಳಗಾವಿಯಲ್ಲಿ ಕಿಚ್ಚ ಸುದೀಪ ರೋಡ್ ಶೋ

ಬೆಳಗಾವಿ :ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಮೇ 1 ರಂದು (ಸೋಮವಾರ) ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಸಂಜೆ 4.30 ಕ್ಕೆ ಶ್ರೀ ನಗರ ಗಾರ್ಡನ್ ನಿಂದ ಸಾಯಿ ಮಂದಿರ, ದತ್ತ ಮಂದಿರ, ಮಹಾಂತೇಶ ನಗರ ಗ್ಲಾಸ್ ಹೌಸ್ ವರೆಗೆ ಬೃಹತ್ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ.

Read More »

ಅಥಣಿಯಲ್ಲಿ ಕಾಂಗ್ರೆಸಿಗೆ ಮತ್ತೊಂದು ಬಿಗ್ ಶಾಕ್ : ಪಕ್ಷಕ್ಕೆ ವಿದಾಯ ಹೇಳಿದ ಕಟ್ಟಾ ಕಾಂಗ್ರೆಸ್ಸಿಗ !

ಅಥಣಿ :ಅಥಣಿಯ ಪಂಚಮಸಾಲಿ ಸಮುದಾಯದ ಪ್ರಮುಖ ನಾಯಕ, ಹಿರಿಯ ನ್ಯಾಯವಾದಿ ಹಾಗೂ ಕಟ್ಟಾ ಕಾಂಗ್ರೆಸ್ಸಿಗ ಸುನಿಲ್ ಸಂಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅವರು ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಮತ್ತು ಚಿಕ್ಕೋಡಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ರಾವ್ ಚಿಂಗಳೆ ಅವರಿಗೆ ಶನಿವಾರ ತಮ್ಮ ರಾಜೀನಾಮೆ ರವಾನಿಸಿದ್ದಾರೆ. ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳುತ್ತಿದ್ದೇನೆ. ಆದ್ದರಿಂದ ಕಾಂಗ್ರೆಸ್ ಪಕ್ಷದ …

Read More »

ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ-ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಈ ಚುನಾವಣೆಯಲ್ಲಿ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ಹೆದರಿಕೆ ಹಾಕುತ್ತಿರುವುದು ನನ್ನ …

Read More »

ಬೆಳಗಾವಿ: ದೊಡ್ಡವಾಡ ಜೋಡಿ ಕೊಲೆ : ಶಿಕ್ಷೆ ಪ್ರಕಟ

ಬೆಳಗಾವಿ :ಜಮೀನು ವಿವಾದದಿಂದ ದಾಯಾದಿಗಳನ್ನೇ ಕೊಲೆ ಮಾಡಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ 2 ಲಕ್ಷ ರೂಪಾಯಿ ದಂಡದ ಜೊತೆಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದ ಮಹಾದೇವ ಹಾಲನ್ನವರ ಶಿಕ್ಷೆಗೊಳಗಾದ ವ್ಯಕ್ತಿ. ಮಹಾದೇವ ಅವರ ತಂದೆ ಯಲ್ಲಪ್ಪ ಮತ್ತು ಸಹೋದರ ನಡುವೆ ಜಮೀನು ವಿವಾದ ಇತ್ತು. ಈ ವಿವಾದ ಕಾರಣಕ್ಕೆ ಯಲ್ಲಪ್ಪ ಅವರ ಸಹೋದರರಾದ ಅರ್ಜುನ ಹಾಲನ್ನವರ ಮತ್ತು ಸಿದ್ದಪ್ಪ ಹಾಲನ್ನವರ …

Read More »