Breaking News

LOCAL NEWS

ಡಾ.ಸೋನಾಲಿ ಸರ್ನೋಬತ್ ಪಕ್ಷ ನಿಷ್ಠೆ, ಬಿಜೆಪಿ ಕಾರ್ಯಕರ್ತರಿಂದ ಅಪಾರ ಮೆಚ್ಚುಗೆ..!!

ಡಾ.ಸೋನಾಲಿ ಸರ್ನೋಬತ್ ಅವರು ಕಳೆದ ಐದು ವರ್ಷಗಳಿಂದ ಖಾನಾಪೂರ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆಯ ಬಲವರ್ದನೆಗೆ ಶ್ರಮಿಸುವ ಜೊತೆಗೆ,ವಯಕ್ತಿಕವಾಗಿ ಖಾನಾಪೂರ ಕ್ಷೇತ್ರದ ಜನರಿಗೆ ಸಹಾಯ ಮಾಡಿ,ಈ ಕ್ಷೇತ್ರದಲ್ಲಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ,ಕ್ಷೇತ್ರದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಹಲವಾರು ಯೋಜನೆಗಳನ್ನು ಮಂಜೂರು ಮಾಡಿಸಿ ಕ್ಷೇತ್ರದಲ್ಲಿ ಅಪಾರ ಜನಮೆಚ್ವುಗೆ ಗಳಿಸಿದ್ದ ಡಾ.ಸೋನಾಲಿ, ಖಾನಾಪೂರ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪಕ್ಷ ವಿಠ್ಠಲ ಹಲಗೇಕರ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದ …

Read More »

ರಾಜಕೀಯ ಕಡು ವೈರಿಗಳಾದ್ರೂ, ಮುಖಾ ಮುಖಿ ಆದಾಗ ಕೈಮುಗಿದ್ರು!!

ಬೆಳಗಾವಿ- ಬಾಲಚಂದ್ರ ಜಾರಕಿಹೊಳಿ ಅವರ ರಾಜಕಾರಣ ಬಿಟ್ಟು ಅವರ ಸದ್ಗುಣಗಳ ಬಗ್ಗೆ ಬರೆಯುತ್ತಾ ಹೋದಲ್ಲಿ ಒಂದು ದೊಡ್ಡ ಕಾದಂಬರಿ ಆಗುತ್ತೆ, ಅದರ ಹೆಸರು ಸದ್ಗುಣಿ ಎಂದೇ ಇಡಬೇಕಾಗುತ್ತದೆ. ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಅರಭಾವಿ ಕ್ಷೇತ್ರದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಬಲ ಎದುರಾಳಿ,ರಾಜಕೀಯ ಕಡುವೈರಿ ಆದ್ರೆ ನಿನ್ನೆ ಬುಧವಾರ ಬಾಲಚಂದ್ರ ಜಾರಕಿಹೊಳಿ ಮತ್ತು ಭೀಮಪ್ಪಾ ಗಡಾದ್ ಇಬ್ಬರೂ ಏಕಕಾಲಕ್ಕೆ ಮೂಡಲಗಿ ತಹಶಿಲ್ದಾರ ಕಚೇರಿಗೆ ನಾಮಪತ್ರ ಸಲ್ಲಿಸಲು ಬಂದಾಗ,ಆಕಸ್ಮಿಕವಾಗಿ ಇಬ್ಬರೂ ನಾಯಕರು …

Read More »

ಇವತ್ತು ಘಟಾನುಘಟಿ ನಾಯಕರಿಂದ ನಾಮಿನೇಶನ್!!

ಬೆಳಗಾವಿ- ನಾಮಪತ್ರ ಸಲ್ಲಿಸಲು ಇವತ್ತು ಕೊನೆಯ ದಿನವಾಗಿದ್ದು ಕೊನೆಯ ದಿನ ಅಮವಾಸ್ಯೆ ಮತ್ತು ಗ್ರಹಣ ಇದ್ದರೂ ಸಹ ಈ ದಿನ ಬೆಳಗಾವಿ ಜಿಲ್ಲೆಯಲ್ಲಿ ಅನೇಕ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಯಮನಕರ್ಡಿ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ತಹಶೀಲ್ದಾರ ಕಚೇರಿಯಲ್ಲಿ ,ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಬೆಳಗಾವಿ ಮಹಾನಗರ ಪಾಲಿಕೆ ಕಚೇರಿಯಲ್ಲಿ,ಬೆಳಗಾವಿ ಉತ್ತರದ ಕಾಂಗ್ರೆಸ್ ಅಭ್ಯರ್ಥಿ ರಾಜು ಸೇಠ, ಅವರು ಇಂದು …

Read More »

ನಾಳೆ ಬೆಳಗಾವಿಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.

ಬೆಳಗಾವಿ-ನಾಳೆ ಗುರುವಾರ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಹಾಗೂ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಅವರು ನಾಮಪತ್ರ ಸಲ್ಲಿಸುತ್ತಿದ್ದು, ಈ ಸಂಧರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಲಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ತಮ್ಮ ಮತಕ್ಷೇತ್ರದ ಶಿವಚರಿತ್ರೆ ಹತ್ತಿರದಿಂದ ನಾಮಪತ್ರ ಸಲ್ಲಿಸುವ ಮೆರವಣಿಗೆ ಬೆಳಗ್ಗೆ 10-00 ಗಂಟೆಗೆ ಆರಂಭಿಸಲಿದ್ದಾರೆ. ಬೆಳಗಾವಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ …

Read More »

ಬಿಜೆಪಿಯಲ್ಲಿ ಸಂಚಲನ..ಬೆಳಗಾವಿಗಿಂದು ದಿಢೀರ್ ಸಂತೋಷ್ ಜಿ ಆಗಮನ !

ಬೆಳಗಾವಿ : ಬಿಜೆಪಿಯ ಮಾಸ್ಟರ್ ಮೈಂಡ್ ಎಂದೇ ಖ್ಯಾತರಾಗಿರುವ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಇಂದು ದಿಢೀರ್ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡೆದ್ದಿರುವ ನಾಯಕರ ಜೊತೆ ಮುಖಾಮುಖಿ ಹಾಗೂ ದೂರವಾಣಿ ಮೂಲಕ ಸಂಪರ್ಕ ಮಾಡಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಈ ಮೂಲಕ ಈಗಾಗಲೇ ಆಗಿರುವ ಹಾನಿಯನ್ನು ಸರಿಪಡಿಸಲು ಸ್ವತಹ ಅವರೇ ಮುಂದಾಗುತ್ತಿರುವುದು ವಿಶೇಷವಾಗಿದೆ. ಈ ಸಭೆ ಮುಕ್ತಾಯದ ನಂತರ …

Read More »

ಚುನಾವಣಾ ಅಖಾಡಕ್ಕಿಳಿದ ಬೆಳಗಾವಿಯ ಹೋರಾಟಗಾರ!!

ಬೆಳಗಾವಿ- ಟೋಪಣ್ಣವರ ಎಂದಾಕ್ಷಣ ಬೆಳಗಾವಿ ಕನ್ನಡ ಹೋರಾಟದ ಇತಿಹಾಸ ಕಣ್ಮುಂದೆ ಬರುತ್ತದೆ.ಯಾಕಂದ್ರೆ ಮಹಾದೇವ ಟೋಪಣ್ಣವರ ಅವರ ಸೇವೆಯನ್ನು ಬೆಳಗಾವಿಯ ಕನ್ನಡಿಗರು ಎಂದೆಂದಿಗೂ ಮರೆಯಲು ಸಾಧ್ಯವೇ ಇಲ್ಲ. ಎಂಬತ್ತರ ದಶಕದಲ್ಲಿ ಕನ್ನಡಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ಮಹಾದೇವ ಟೋಪಣ್ಣವರ ಅವರ ಸುಪುತ್ರ ರಾಜೀವ ಟೋಪಣ್ಣವರ ಅವರು ತಂದೆಯಂತೆ ಒಂದು ದಶಕದವರೆಗೆ ಕನ್ನಡ ಹೋರಾಟ ಮಾಡಿ, ಈಗ ಆಮ್ ಆದ್ಮಿ ಪಕ್ಷದಲ್ಲಿರುವ ಅವರು ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ …

Read More »

ಬೆಳಗಾವಿ ಉತ್ತರಕ್ಕೆ ರಾಜು ಸೇಠ,ದಕ್ಷಿಣಕ್ಕೆ ಪ್ರಭಾವತಿ ಫೈನಲ್!!

ಬೆಳಗಾವಿ-ಕಾಂಗ್ರೆಸ್ ಪಕ್ಷ ಕೊನೆಗೂ ಮೂರನೇಯ ಕಂತಿನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು ಬೆಳಗಾವಿ ಉತ್ತರಕ್ಕೆ ರಾಜು ಸೇಠ, ಬೆಳಗಾವಿ ದಕ್ಷಿಣ ಮತಕ್ಷೇತ್ರಕ್ಕೆ ಪ್ರಭಾವತಿ ಚಾವಡಿ ಅವರನ್ನು ಫೈನಲ್ ಮಾಡಲಾಗಿದೆ. ಬೆಳಗಾವಿ ಉತ್ತರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕುರಿತು ಅನೇಕ ವದಂತಿಗಳು ಹರಡಿದ್ದವು,ಅನೀಲ ಬೆನಕೆ ಕಾಂಗ್ರೆಸ್ ಸೇರ್ತಾರೆ,ಎನ್ನುವ ವದಂತಿ ದಟ್ಟವಾಗಿ ಹರಡಿದ ಬೆನ್ನಲ್ಲಿಯೇ ಕಾಂಗ್ರೆಸ್ ಎಲ್ಲ ಉಹಾಪೋಹಗಳಿಗೆ ಬ್ರೇಕ್ ಹಾಕಿದ್ದು ಬೆಳಗಾವಿ ಉತ್ತರಕ್ಕೆ ರಾಜು ಸೇಠ ಅವರ ಹೆಸರನ್ನೇ ಫೈನಲ್ ಮಾಡಿದೆ. …

Read More »

ಲಕ್ಷ್ಮಣ ಸವದಿ,ರಮೇಶ್ ಜಾರಕಿಹೊಳಿ ನಡುವೆ ಟಾಕ್ ವಾರ್ ಶುರು!!

ಬೆಳಗಾವಿ-ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ,ಇಂದು ಬೆಳಗ್ಗೆ ಬೆಳಗಾವಿಗೆ ಆಗಮಿಸಿರುವ ಲಕ್ಷ್ಮಣ ಸವದಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟೊದ್ದಾರೆ.ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಸವದಿ ಕುರಿತು ಪೀಡೆ ತೊಳಗಿತು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರ,ಅವರ ದೃಷ್ಟಿಯಲ್ಲಿ ಪೀಡೆ ಅಂತಾ ಇರಬಹುದುಆ ಬೆಳವು ಹೊಕ್ಕ ಮನೆ ಅಳಿವಾಗುತ್ತಿದೆ(ಹಾಳಾಗುತ್ತಿದೆ),ಪಕ್ಷದಲ್ಲಿ ಬೆಳವು ಹೊಕ್ಕಿದೆ ಅಂತಾನೇ ನಾನು ಆ ಮನೆಯಿಂದ ಹೊರ ಬಂದಿದ್ದೇನೆ,ರಮೇಶ್ ಜಾರಕಿಹೊಳಿಗೆ ಬೆಳವು ಎಂದು ಸಂಬೋಧಿಸಿ ನೇರಾನೇರ ಟಕ್ಕರ್ …

Read More »

ಬೆಳಗಾವಿ:ಸಾಂಬ್ರಾ ಏರ್ ಪೋರ್ಟಿನಲ್ಲಿ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಮುಖಾಮುಖಿ

ಬೆಳಗಾವಿ-ಬೆಳಗಾವಿ ಸಾಂಬ್ರಾ ‌ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಮುಖಾಮುಖಿಯಾದ್ರು.ಕೆಲ ಹೊತ್ತು ಮಾತುಕತೆ ನಡೆಸಿದಮಾಜಿ ಸಿಎಂ ಸಿದ್ದರಾಮಯ್ಯ- ಲಕ್ಷ್ಮಣ ಸವದಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾಗಿದ್ದು ವಿಶೇಷ. ಸಾಂಬ್ರಾ ‌ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹಳಿಯಾಳಕ್ಕೆ ತೆರಳುತ್ತಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಸೇರ್ಪಡೆ ಬಳಿಕ ಬೆಂಗಳೂರಿನಿಂದ ‌ಬೆಳಗಾವಿಗೆ ಆಗಮಿಸಿದ್ದ ಲಕ್ಷ್ಮಣ ಸವದಿ ಇಬ್ಬರೂ ಏರ್ ಪೋರ್ಟಿನಲ್ಲಿ ಭೇಟಿಯಾದ್ರು. ಈ ವೇಳೆ ಕೆಲಹೊತ್ತು ‌ಉಭಯ ನಾಯಕರ ಮಧ್ಯೆ ಚುನಾವಣೆ ‌ತಂತ್ರಗಳ …

Read More »

ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಎಷ್ಟು ಕೋಟಿ ಹಣ ಸೀಜ್ ಆಗಿದೆ ಗೊತ್ತಾ??

ವಿಧಾನಸಭೆ ಚುನಾವಣಾ ವೆಚ್ಚ ವೀಕ್ಷಕರ ಸಭೆ ———————————————————- ಚುನಾವಣಾ ಅಕ್ರಮಗಳ ಮೇಲೆ ಹದ್ದಿನಕಣ್ಣು; “ನ್ಯಾಯಸಮ್ಮತ ಚುನಾವಣೆ-ನಮ್ಮ ಜವಾಬ್ದಾರಿ” ಬೆಳಗಾವಿ, ಏ.15(ಕರ್ನಾಟಕ ವಾರ್ತೆ): ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಗೆ ನಿಯೋಜಿತಗೊಂಡಿರುವ ಎಲ್ಲ 18 ಮತಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸುವರ್ಣ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶನಿವಾರ (ಏ.15) ಸಭೆ ನಡೆಯಿತು. ಬೆಳಗಾವಿ ಗ್ರಾಮೀಣ …

Read More »

ಸಾಹುಕಾರ್ ಆಟ,ಇಂದಿನಿಂದ ಬಿಜೆಪಿಗೆ ಸವದಿ ಕಾಟ! ಮತದಾರರು ಯಾರಿಗೆ ಕಲೀಸ್ತಾರೆ ಪಾಠ!!

ಸವದಿ ಕಾಂಗ್ರೆಸ್ಸಿಗೆ ಹೋದ್ಮೇಲೆ, ಬಿಜೆಪಿಯಲ್ಲಿ ಹೆಚ್ಚಿದ ಸಾಹುಕಾರ್ ಜವಾಬ್ದಾರಿ!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಹಿರಿಯ ನಾಯಕರಾದ ಉಮೇಶ್ ಕತ್ತಿ,ಸುರೇಶ್ ಅಂಗಡಿ ಅವರು ಅಗಲಿದ ಬಳಿಕ ಲಕ್ಷ್ಮಣ ಸವದಿ ಹಾಗೂ ರಮೇಶ್ ಜಾರಕಿಹೊಳಿ ಮತ್ತು ಈರಣ್ಣಾ ಕಡಾಡಿ ಅವರು ಬೆಳಗಾವಿ ಜಿಲ್ಲೆಯ ಬಿಜೆಪಿಯ ಜವಾಬ್ದಾರಿ ನಿಭಾಯಿಸುತ್ತ ಬಂದಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗ ಲಕ್ಷ್ಮಣ ಸವದಿ ಕಾಂಗ್ರೆಸ್ ಗರಡಿ ಸೇರಿಕೊಂಡಿದ್ದಾರೆ.ಇವತ್ತು ಅಥಣಿ ಕ್ಷೇತ್ರದ ಕಾಂಗ್ರೆದ್ ಬಿ ಫಾರ್ಮ್ ಸಮೇತ ಅವರು ಬೆಂಗಳೂರಿನಿಂದ …

Read More »

ಅಥಣಿಯಿಂದ ಲಕ್ಷ್ಮಣ. ಸವದಿಗೆ ಕಾಂಗ್ರೆಸ್ ಟಿಕೆಟ್- ಸಿದ್ರಾಮಯ್ಯ

ಬೆಳಗಾವಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಿರಿಯ ನಾಯಕರಾಗಿದ್ದು, ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸವದಿ ಅವರು ಯಾವುದೇ ಷರತ್ತಿಲ್ಲದೇ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ, ಅಥಣಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಹೇಳಿದ್ದಾರೆ. ಸವದಿ ಬಳಿ ನಾವು ಬೇರೆ ಯಾರ …

Read More »

ಬೆಳಗಾವಿ: ಧೂಪದಾಳ ಜಲಾಶಯದಲ್ಲಿ ನಾಲ್ವರು ಯುವಕರ ಜಲಸಮಾಧಿ!

ಬೆಳಗಾವಿ ಪ್ರವಾಸಕ್ಕೆಂದು ಬಂದಿದ್ದ ಉತ್ತರ ಕನ್ನಡ ಜಿಲ್ಲೆಯ ಸಿರಿಗೇರೆ ಗ್ರಾಮದ ಯುವಕರು ಗೋಕಾಕ ತಾಲೂಕಿನ ಘಟಪ್ರಭಾ ಸಮೀಪದ ಧುಪದಾಳ ಜಲಾಶಯದಲ್ಲಿ ಈಜುತ್ತಿದ್ದಾಗ ಕೆಸರಿನಲ್ಲಿ ಸಿಲುಕಿ ನಾಲ್ವರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಿರಸಿ ತಾಲೂಕಿನ ಮುಂಡಗೋಡ ಸಮೀಪದ ಹಳ್ಳಿಯಿಂದ ಬಂದಿದ್ದ 12 ಜನ ಯುವಕರ ಗುಂಪಿನಲ್ಲಿ ಆರೇಳು ಜನ ಈಜಾಡಲು ಹೋಗಿದ್ದರು. ಈ ವೇಳೆ ಈಜುವಾಗ ಜಲಾಶಯದ ಮಣ್ಣಿ ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ.‌ ಒಬ್ಬನನ್ನು ರಕ್ಷಿಸಲು ಹೋಗಿ ಇನ್ನೊಬ್ಬ …

Read More »

ಯಾರ ಹೆಗಲಿಗೆ ಯಾರು “ಕೈ” ಹಾಕಿದ್ರು ! ಇದು ಇವತ್ತಿನ ಪಾಲಿಟೀಕ್ಸ್ ಸೀನ್!!

ಬೆಳಗಾವಿ-ಸಮಾನತೆಯ ಸಂದೇಶ ಸಾರಿ, ವಿಶ್ವರತ್ನ ಎಂದೇ ಖ್ಯಾತಿ ಪಡೆದಿರುವ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ದಿನ ಬೆಳಗಾವಿಯಲ್ಲಿ ಸಮಾನತೆಯ ಸಂದೇಶ ಸಾರುವ ಅಪರೂಪದ ಪ್ರಸಂಗ ನಡೆಯಿತು. ಬೆಳಗಾವಿಯ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಇವತ್ತು ಬೆಳಗ್ಗೆ ಯಿಂದ ಗಣ್ಯಾತಿ ಗಣ್ಯರು ಆಗಮಿಸಿ ಬಾಬಾಸಾಹೇಬರಿಗೆ ಗೌರವ ಸಮರ್ಪಿಸುವ ಕಾರ್ಯ ನಡೆದಿತ್ತು.ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನೀಲ ಬೆನಕೆ ಅವರೂ ಸಹ ಇಲ್ಲಿಗೆ ಆಗಮಿಸಿದ್ದರು. ಅನೀಲ ಬೆನಕೆ ಬಾಬಾಸಾಹೇಬರಿಗೆ ಗೌರವ …

Read More »

ಬೆಂಗಳೂರಿಗೆ ಹಾರುವ ಮೊದಲು ಲಕ್ಷ್ಮಣ ಸವದಿ ಹೇಳಿದ್ದೇನು ಗೊತ್ತಾ??

ಬೆಳಗಾವಿ-ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಪರಾಭವಗೊಂಡು ರಾತ್ರಿ ಗಾಢ ನಿದ್ರೆಯಲ್ಲಿರುವಾಗ ಮದ್ಯರಾತ್ರಿ ಅವರನ್ಬು ಎಬ್ಬಿಸಿ ಬೆಂಗಳೂರಿಗೆ ಕರೆಯಿಸಿಕೊಂಡು ಅವರನ್ನು ಡಿಸಿಎಂ ಮಾಡಿದ ಬಿಜೆಪಿ ಪಕ್ಷಕ್ಕೆ ವಿದಾಯ ಹೇಳಲು ಇದೇ ಲಕ್ಷ್ಮಣ ಸವದಿ ಅವರು ಇವತ್ತು ಬೆಳ್ಳಂ ಬೆಳಗ್ಗೆ,ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಕಳುಹಿಸಿದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಹಾರಿದ್ರು. ಬೆಂಗಳೂರಿಗೆ ಹಾರುವ ಮುನ್ನ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ …

Read More »