LOCAL NEWS

ಅಥಣಿ ಕಾಂಗ್ರೆಸ್ಸಿಗೆ ಹೊಸ ಶಕ್ತಿ ತುಂಬಿದ ಧರೆಪ್ಪ ಠಕ್ಕಣ್ಣವರ

ಬೆಳಗಾವಿ :ಅಥಣಿ ಮತ ವಿಧಾನಸಭಾ ಮತಕ್ಷೇತ್ರದಲ್ಲಿ ಯುವ ನಾಯಕ ಧರೆಪ್ಪ ಠಕ್ಕಣ್ಣವರ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅವರು ಸಾಮಾಜಿಕ ಸೇವಾ ಕಾರ್ಯಗಳಿಂದ ಹಳ್ಳ-ಹಳ್ಳಿಗೂ ಚಿರಪರಿಚಿತರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದ ಮಹೇಶ ಕುಮಠಳ್ಳಿ ಅವರು ಪಕ್ಷಾಂತರ ನಡೆಸಿದ್ದರಿಂದ ಅಥಣಿಯಲ್ಲಿ ಕಾಂಗ್ರೆಸ್ ಶೂನ್ಯಕ್ಕೆ ತಲುಪಿತ್ತು. ಈ ನಿಟ್ಟಿನಲ್ಲಿ ಅವರು ಪಕ್ಷ ಸಂಘಟನೆ ಜೊತೆ ಮತ್ತೆ ಹಿಂದಿನ ವರ್ಚಸ್ಸು ತರಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇಡೀ ಜಗತ್ತು …

Read More »

ಸುವರ್ಣ ವಿಧಾನಸೌಧ ಆವರಣದಲ್ಲಿ ಸಾವಿರಾರು ಜನರಿಂದ “ಯೋಗ”ಥಾನ್

ಬೆಳಗಾವಿ, : ಸೂರ್ಯದೇವನು ಪಥ ಬದಲಾಯಿಸಿದ ಸಂಕ್ರಮಣದ ಶುಭ ದಿನದಂದು ರಾಜ್ಯವನ್ನು ದೇಶದ ಮೊದಲ “ಯೋಗ ಸಾಕ್ಷರತಾ ರಾಜ್ಯ”ವನ್ನಾಗಿಸುವುದರ ಜತೆಗೆ ಯೋಗ ಪ್ರದರ್ಶನದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸುವ ಭಾಗವಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಭಾನುವಾರ (ಜ.15) ಬೃಹತ್ ಯೋಗಥಾನ್-2023 ಕಾರ್ಯಕ್ರಮ ನಡೆಯಿತು. ಮುಂಜಾನೆಯ ಮಂಜು ಮುಸುಕಿದ ವಾತಾವರಣದಲ್ಲಿ ನೇಸರನ ಹೊಂಗಿರಣಗಳ ಮಧ್ಯೆ ಸುವರ್ಣ ವಿಧಾನಸೌಧದ ಪಶ್ಚಿಮದ್ವಾರದ ಮೆಟ್ಟಿಲುಗಳ ಎದುರು ಸಾವಿರಾರು ಜನರು ಯೋಗ ಪ್ರದರ್ಶಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, …

Read More »

ಬೆಳಗಾವಿಯ ಹಿಂಡಲಗಾ ಜೈಲಿಗೆ ನಾಗಪೂರ ಪೋಲೀಸ್ರು ಬಂದಿದ್ದು ಯಾಕೆ ಗೊತ್ತಾ ??

ಬೆಳಗಾವಿ-ಹಿಂಡಲಗಾ ಜೈಲಿಗೆ ಬಂದಿರುವ ನಾಗ್ಪುರ ಪೊಲೀಸರು ಹಿಂಡಲಗಾ ಜೈಲಿನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.ಬೆಳಗಾವಿಯಿಂದಲೇ ಕೇಂದ್ರ ‌ಹೆದ್ದಾರಿ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಪೂರ ಪೋಲೀಸರು ಹಿಂಡಲಗಾ ಜೈಲಿಗೆ ದೌಡಾಯಿಸಿದ್ದಾರೆ.ಬೆಳಗಾವಿಯ ಹಿಂಡಲಗಾ ಸೆಂಟ್ರಲ್ ಜೈಲಿನ‌ ಕೈದಿಯಿಂದಲೇ ನಿತೀನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.ಶನಿವಾರ ಬೆಳಗ್ಗೆ, ನಿತೀನ್ ಗಡ್ಕರಿ ಮೊಬೈಲ್‌ಗೆ ಫೋನ್ ಮಾಡಿ ಜೀವ ಬೆದರಿಕೆ ಹಾಕಿರುವ ಕೈದಿಯ ವಿಚಾರಣೆಗೆ ನಾಗಪೂರ ಪೋಲೀಸರು ಬೆಳಗಾವಿಗೆ …

Read More »

ಯುವ ಸಮೂಹದ ಬಗ್ಗೆ ಲೇಖನ ಬರೆದ ಶಾಲಿನಿ ರಜನೀಶ್…

26 ನೇ ರಾಷ್ಟ್ರೀಯ ಯುವ ಜನೋತ್ಸವದ ಉಸ್ತುವಾರಿವಹಿಸಿಕೊಂಡಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಯುವ ಸಮೂಹದ ಸ್ಥಿತಿಗತಿಗಳ ಕುರಿತು ಸಮಗ್ರ ಲೇಖನ ಬರೆದಿದ್ದಾರೆ. *ರಾಷ್ಟೀಯ ಯುವಜನೋತ್ಸವದಲ್ಲಿ ಯುವ ಶೃಂಗಸಭೆ: ಯುವ ಸಮೂಹಕ್ಕೆ ಪ್ರೇರಣಾದಾಯಕ* ಡಾ ಶಾಲಿನಿ ರಜನೀಶ್‌ ಐಎಎಸ್‌ ಅಪರ ಮುಖ್ಯ ಕಾರ್ಯದರ್ಶಿಗಳು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಭಾರತವು ವಿಶ್ವದಲ್ಲಿ ಅತಿ ಹೆಚ್ಚು ಯುವ ಜನಸಂಖ್ಯೆಯನ್ನು ಹೊಂದಿರುವ …

Read More »

ಬೆಳಗಾವಿ ಕಾಂಗ್ರೆಸ್ಸಿನಲ್ಲಿ , ಹಮ್ ಸಾಥ್ ಸಾಥ್ ಹೈ….!!

ಬೆಳಗಾವಿ- ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ಸಿನ ಪ್ರಜಾಧ್ವನಿ ಯಾತ್ರೆ, ಕಾರ್ಯಕರ್ತರಿಗೆ ಅನೇಕ ಸಂದೇಶಗಳನ್ನು ನೀಡಿದೆ. ಈ ಸಂಧರ್ಭದಲ್ಲಿ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ರಸ್ತೆಯಲ್ಲಿರುವ ತಿಲಕವಾಡಿಯ ಐತಿಹಾಸಿಕ ವೀರಸೌಧದಲ್ಲಿ ಬಸ್ ಯತ್ರೆಗೆ ಚಾಲನೆ ಕೊಡುವ ಮೊದಲು ಗಾಂಧಿ ಟೋಪಿಧಾರಿಗಳಾಗಿದ್ದ ಮಾಜಿ ಶಾಸಕ ಫಿರೋಜ್ ಸೇಠ,ಹಾಗೂ ವಿಧಾನ ಪರಿಷತ್ ಸದಸ್ಯ ಚನ್ಬರಾಜ್ ಹಟ್ಟಿಹೊಳಿ ಕ್ಯಾಮೆರಾಗೆ ಫೋಜು ಕೊಟ್ಟು ಎಲ್ಲರ ಗಮನ ಸೆಳೆದರು. ಬೆಳಗಾವಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ …

Read More »

ಬೆಳಗಾವಿಯಲ್ಲಿ ನಡೆದ ಎಮ್ಮೆಗಳ ರೇಸ್ ಮಹಾರಾಷ್ಟ್ರದಲ್ಲೂ ಫೇಮಸ್..!!

ಬೆಳಗಾವಿ- ಬೆಳಗಾವಿ ಮಹಾನಗರ,ವಿಭಿನ್ನ, ವಿಶಿಷ್ಟ,ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಹೆಸರುವಾಸಿಯಾಗಿದೆ.ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದ ಎಮ್ಮೆಗಳ ರೇಸ್ ಪಕ್ಕದ ಮಹಾರಾಷ್ಟ್ರದಲ್ಲೂ ಪ್ರಭಾವ ಬೀರಿದೆ. ಅಂತರ್ ರಾಜ್ಯಗಳಲ್ಲಿ ಗಮನ ಸೆಳೆದಿರುವ ಬೆಳಗಾವಿಯಲ್ಲಿ ನಡೆದ ಎಮ್ಮೆಗಳ ಓಟವನ್ನು ಬೆಳಗಾವಿಯ ಕುಲಕರ್ಣಿ ಗಕ್ಲಿಯ ಗವಳಿ ಸಮಾಜದವರು ಆಯೋಜನೆ ಮಾಡಿದ್ಸರು ಈ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡ ಮುರುಘೇಂದ್ರ ಗೌಡ ಪಾಟೀಲ (ಕಣಬರ್ಗಿ) ಅವರು ಪ್ರಾಯೋಜಕತ್ವ ನೀಡಿದ್ದರು. ಎಮ್ಮೆಗಳ ರೇಸ್ ನಲ್ಲಿ ವಿಜೇತರಾದವರಿಗೆ ಮುರುಘೇಂದ್ರಗೌಡ್ರು ನಗದು ಬಹುಮಾನ ನೀಡಿ,ಗವಳಿ ಸಮಾಜ ಆಯೋಜಿಸಿದ …

Read More »

ಕೊನೆಗೂ,ಬೆಳಗಾವಿ ಮೇಯರ್ ಇಲೆಕ್ಷನ್ ಗೆ ಮುಹೂರ್ತ ಫಿಕ್ಸ್…!!

ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಗೆ ಫೆಬ್ರವರಿ 6, 2023 ರಂದು ಚುನಾವಣೆ ನಿಗದಿಪಡಿಸಲಾಗಿದೆ ಎಂದು ಪ್ರಾದೇಶಿಕ ಆಯುಕ್ತರಾದ ಎಂ‌.ಜಿ.ಹಿರೇಮಠ ತಿಳಿಸಿದ್ದಾರೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ, ಉಪ ಮೇಯರ್ ಸ್ಣಾನ ಹಿದುಳಿದ ಬ ವರ್ಗದ ಮಹಿಳೆಗೆ ಮಿಸಲಿಡಲಾಗಿದೆ.ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಇದ್ದು ಬಿಜೆಪಿ ಪಕ್ಷದಿಂದ ಚುನಾಯಿತರಾದ ನಗರಸೇವಕಿಯರು ಮೇಯರ್ ಉಪ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗುವದು ಖಚಿತವಾಗಿದೆ. ಫೆಬ್ರುವರಿ 6 …

Read More »

ಬಿಜೆಪಿ ಪತ್ರಿಕಾಗೋಷ್ಠಿಯಲ್ಲಿ , ಕುಕ್ಕರ್ ಅವಾಜ್…ಟೆಂಗಿನಕಾಯಿ ಫೈಟ್….!!!

ಬೆಳಗಾವಿ-ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ಗ್ರಾಮೀಣದಲ್ಲಿ ಹಂಚಿಕೆಯಾದ ಕುಕ್ಕರ್ ಹಂಚಿಕೆಯಾಗುತ್ತಿರುವ ಮಿಕ್ಸರ್ ಜೊತೆಗೆ ಟೆಂಗಿನಕಾಯಿ ಪ್ರಮಾಣ ಸದ್ದು ಮಾಡಿದ್ದು ಈ ವಿಚಾರದ ಕುರಿತು ಮಾಜಿ ಶಾಸಕ ಸಂಜಯ ಪಾಟೀಲ ಮಾದ್ಯಮ ಮಿತ್ರರಜೊತೆ ವಾಗ್ವಾದ ಮಾಡಿ, ನಂತರ ಕ್ಷಮೆಯಾಚಿಸಿದ ಪ್ರಸಂಗ ನಡೆದಿದೆ. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ವಕ್ತಾರ ಎಂ.ಬಿ ಝಿರಲಿ, ಸಂಜಯ ಪಾಟೀಲ ಸಂಸದೆ ಮಂಗಲಾ ಅಂಗಡಿ,ಶಾಸಕ ಅನೀಲ ಬೆನಕೆ ಸೇರಿದಂತೆ ಹಲವಾರು ಜನ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಎಂ.ಬಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ನಿರ್ಮಿಸಿರುವ. ರಾಕ್ ಗಾರ್ಡನ್ ಅದ್ಛುತ!!

ಬೆಳಗಾವಿ-   ಸಂಗೊಳ್ಳಿ ರಾಯಣ್ಣ ಅವರ ಪ್ರಾಮಾಣಿಕತೆ, ದೇಶಪ್ರೇಮ, ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣ ಉತ್ಸವ ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಉತ್ಸವವಾಗಿ ಬೆಳೆಯಲಿದೆ ಎಂದು ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ (ಜ.12) ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2023 ರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ರಾಂತಿವೀರ …

Read More »

ಕಾಂಗ್ರೆಸ್ ನಾಯಕರಿಗೆ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಸುಣ್ಣ ಬಣ್ಣ ಹಚ್ವುವ ಯೋಗ್ಯತೆಯೂ ಇಲ್ಲ- ಟೋಪಣ್ಣವರ

ಬೆಳಗಾವಿಯ ಕಾಂಗ್ರೆಸ್ ಬಾವಿ,ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಅವರು ಏಕೈಕ ಕಾಂಗ್ರೆಸ್ ಅಧಿವೇಶನ ಮಾಡಿದ ಐತಿಹಾಸಿಕ ಸ್ಥಳ,ಈ ಸ್ಥಳದಿಂದಲೇ ಕಸಗೂಡಿಸಿ, ಮಾದ್ಯಮಗಳಿಗೆ ಬ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಆಂದೋಲನ ಎಂಬ ಪೋಜು ಕೊಟ್ಟ ಕಾಂಗ್ರೆಸ್ ನಾಯಕರು ಲಕ್ಷಾಂತರ ರೂ ಖರ್ಚು ಮಾಡಿ ಕಟೌಟ್ ಬ್ಯಾನರ್ ಹಚ್ಚಿ ಪ್ರಜಾಧ್ವನಿ ಎಂಬ ಬಸ್ ಯಾತ್ರೆ ಆರಂಭಿಸಿರುವ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಬೆಳಗಾವಿಯ ಐತಿಹಾಸಿಕ ಮಹಾತ್ಮಾ ಗಾಂಧಿ ಅವರ ಸ್ಮಾರಕಕ್ಕೆ ಸುಣ್ಣ ಬಣ್ಣ ಹಚ್ವುವ ಯೋಗ್ಯತೆ ಇಲ್ಲ,ಎಂದು …

Read More »

ಬೆಳಗಾವಿ ಗ್ರಾಮೀಣದಲ್ಲಿ,ಸಿಂಗಲ್ ಡಬಲ್,ಜೊತೆಗೆ ಟೆಂಗಿನಕಾಯಿ ಟ್ರಬಲ್…!!

ಬೆಳಗಾವಿ-ಬೆಳಗಾವಿ ಗ್ರಾಮೀಣದಲ್ಲಿ ಇಲೆಕ್ಷನ್ ಯಾವ ರೀತಿ ನಡೆಯುತ್ತದೆ,ಮತದಾರರನ್ನು ಓಲೈಸಲು ಯಾರು ಯಾವ ಗಿಫ್ಟ್ ಕೊಡಬಹುದು,ಅನ್ನೋದನ್ನು ಕಲ್ಪನೆ ಮಾಡಿಕೊಳ್ಳಲೂ ಸಾಧ್ಯವಿಲ್ಲ.ಯಾಕಂದ್ರೆ ಈ ಕ್ಷೇತ್ರದಲ್ಲಿ ಗಿಫ್ಟ್ ಕೊಡುವ ವಿಚಾರದಲ್ಲಿ ಸಿಂಗಲ್ ಡಬಲ್ ಎನ್ನುವ ಪೈಪೋಟಿ ಈಗಿನಿಂದಲೇ ಶುರುವಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಹಳದಿ ಕುಂಕುಮ ಕಾರ್ಯಕ್ರಮದ ಮೂಲಕ ಈ ಕ್ಷೇತ್ರದ ಮಹಿಳೆಯರಿಗೆ ಸೀರೆ ಹಂಚಿರುವ ಲಕ್ಷ್ಮೀ ಹೆಬ್ಬಾಳಕರ,ನಂತರ ಟಿಫೀನ್ ಬಾಕ್ಸ,ಕೊಟ್ಟ ನಂತರ,ಮಾಜಿ ಶಾಸಕ ಸಂಜಯ ಪಾಟೀಲ ತಮ್ಮ ಜನ್ಮದಿನದ ಕಾರ್ಯಕ್ರಮದಲ್ಲಿ …

Read More »

ಕಳಸಾ ಬಂಡೂರಿ ಪ್ರದೇಶದಲ್ಲಿ ಕೇಂದ್ರದ ಅಧಿಕಾರಿಗಳು ಸುತ್ತಾಡಿದ್ದು ಯಾಕೆ ಗೊತ್ತಾ ??

ಖಾನಾಪುರ: ಮಂಗಳವಾರ ತಾಲೂಕಿನ ಕಣಕುಂಬಿ ಗ್ರಾಮದ ಸುತ್ತಮುತ್ತಲಿನ ಮಲಪ್ರಭಾ ಹಾಗೂಮಹದಾಯಿ ನದಿ, ಕಳಸಾ ಹಳ್ಳ ಮತ್ತು ಅಕ್ಕಪಕ್ಕದ ಜಲಾನಯನ ಪ್ರದೇಶಕ್ಕೆ ಹಿರಿಯ ಐಎಫ್ಎಸ್ಅಧಿಕಾರಿ ಅಂಜನಕುಮಾರ್ ಭೇಟಿ ನೀಡಿ ಕಣಕುಂಬಿ ಬಳಿ ಕರ್ನಾಟಕ ನೀರಾವರಿ ನಿಗಮದಿಂದಕೈಗೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿದರು. ಕೇಂದ್ರ ಸರ್ಕಾರದ ಕೇಂದ್ರ ಪರಿಸರ ಸಚಿವಾಲಯದ ಸೂಚನೆ ಮೇರೆಗೆ ಮಲಪ್ರಭಾ ಮತ್ತು ಮಹದಾಯಿ ಜಲಾನಯನ ಪ್ರದೇಶಗಳಿಗೆ ತೆರಳಿ ವಸ್ತುಸ್ಥಿತಿ ವೀಕ್ಷಿಸಿದ ಅವರು, ಕಣಕುಂಬಿ ಸುತ್ತಮುತ್ತ ರಾಜ್ಯ ಸರ್ಕಾರದಿಂದ ಕೈಗೆತ್ತಿಕೊಂಡಿರುವ ಕಳಸಾ ಕಾಲುವೆಯ …

Read More »

ಬೆಳಗಾವಿ: ಸಂಪ್ ನಲ್ಲಿ ಬಿದ್ದು ಇಬ್ಬರು ಬಾಲಕರ ಸಾವು

ಬೆಳಗಾವಿ-ನಿರ್ಮಾಣ ಹಂತದ ಕಟ್ಟಡದಲ್ಲಿದ್ದ ಸಂಪ್‌ಗೆ ಬಿದ್ದು ಇಬ್ಬರು ಬಾಲಕರ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಗುರ್ಲಹೊಸೂರ ಕಾಲೋನಿಯಲ್ಲಿ ನಡೆದಿದೆ.ಆಟವಾಡುತ್ತ ಸಂಪ್‌ಗೆ ಬಿದ್ದಿರುವ ನಾಲ್ಕು ವರ್ಷದ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.ಸ್ಥಳಕ್ಕೆ ಸವದತ್ತಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಶ್ಲೋಕ ಗುಡಿ(4), ಚಿದಾನಂದ ಸಾಳುಂಕೆ(4) ಮೃತ ಮಕ್ಕಳು, ವಾಲ್ಮೀಕ ಭವನದ ಕಟ್ಟಡದ ನೀರು ಸಂಗ್ರಹ ಸಂಪ್ ನಲ್ಲಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಪ್ರಗತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು. …

Read More »

ಅರ್ಚನಾ ಪಾಟೀಲಗೆ “ತ್ರಿವೇಣಿ ರತ್ನ” ರಾಜ್ಯ ಪ್ರಶಸ್ತಿ

ಮೊಳಕಾಲ್ಮೂರು -ಮೊಳಕಾಲ್ಮೂರು ತಾಲ್ಲೂಕು ಚಿತ್ರದುರ್ಗ ಜಿಲ್ಲೆಯ ತನುಶ್ರೀ ಪ್ರಕಾಶನವು ಪ್ರತಿವರ್ಷದಂತೆ ಕರೆಯಲಾದ ಅರ್ಜಿಗಳಲ್ಲಿ ಇವರ ಸಾಹಿತ್ಯ ಸಾಧನಾ ಪರಿಚಯ ಪರಿಶೀಲಿಸಿ ಅಂತಿಮವಾಗಿ ನುರಿತ ತೀರ್ಪುಗಾರರು ಮತ್ತು ವಿಮರ್ಶಕರು ಆಯ್ಕೆ ಸಮಿತಿಯಲ್ಲಿ ಪ್ರತಿಷ್ಠಿತ “ತ್ರಿವೇಣಿ ರತ್ನ ಪುರಸ್ಕಾರ” ಎಂಬ ರಾಜ್ಯ ಪ್ರಶಸ್ತಿಗೆ ಹಾವೇರಿಯ ಯುವಸಾಹಿತಿ ಅರ್ಚನಾ ಎನ್ ಪಾಟೀಲರನ್ನು ಆಯ್ಕೆ ಮಾಡಲಾಗಿದೆ. ಜ.15 ರಂದು ಚಳ್ಳಕೆರೆಯಲ್ಲಿ ನಡೆಯುವ ದ್ವಿತೀಯ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತನುಶ್ರೀ ಪ್ರಕಾಶನದ …

Read More »

ಬೆಳಗಾವಿಯ ಸವದತ್ತಿ ಕ್ಷೇತ್ರದಿಂದಲೂ ಸಿದ್ಧರಾಮಯ್ಯ…??

ಬೆಳಗಾವಿ-ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ,ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕೋಲಾರ್ ಕ್ಷೇತ್ರದಿಂದ ಸ್ಪರ್ದೆ ಮಾಡುವದಾಗಿ,ಸೋಮವಾರ ಘೋಷಣೆ ಮಾಡಿದ್ದು,ಬೆಳಗಾವಿಯ ಸವದತ್ತಿ ಕ್ಷೇತ್ರದಿಂದಲೂ ಸ್ಪರ್ದೆ ಮಾಡುವ ವಿಚಾರವನ್ನು ಗೌಪ್ಯವಾಗಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸಿದ್ಧರಾಮಯ್ಯನವರು ಕೋಲಾರ್ ಮತ್ತು ಬೆಳಗಾವಿಯ ಸವದತ್ತಿ,ಈ ಎರಡೂ ಕ್ಷೇತ್ರಗಳಿಂದ ಸ್ಪರ್ದೆ ಮಾಡುವುದು ಖಚಿತ ಎನ್ನುವ ಸುದ್ದಿ ಇದೆ.ಈ ವಿಚಾರ ಬೆಳಗಾವಿಯ ಕಾಂಗ್ರೆಸ್ ನಾಯಕರಿಗೆ ಗೊತ್ತಿದೆ,ಎಂದು ಹೇಳಲಾಗುತ್ತಿದ್ದು,ಸಿದ್ಧರಾಮಯ್ಯನವರು ಕೇವಲ ಕೋಲಾರ್ ದಿಂದ ಸ್ಪರ್ದೆ ಮಾಡುವ ವಿಚಾರವನ್ನು ಮಾತ್ರ ಬಹಿರಂಗ ಪಡಿಸಿದ್ದು …

Read More »