Breaking News

LOCAL NEWS

ದೆಹಲಿಯಲ್ಲಿ ಸಂಧಾನ ಸಭೆ, ಬೆಳಗಾವಿಯಲ್ಲಿ ಪುಂಡಾಟಿಕೆ…!!

ಬೆಳಗಾವಿ-ಅಧಿವೇಶನಕ್ಕೂ ಮುನ್ನವೇ ಬೆಳಗಾವಿಯಲ್ಲಿ ಮತ್ತೆ ಬಾಲ ಬಿಚ್ಚಿದ ಮರಾಠಿ ಭಾಷಿಕ ಪುಂಡರು,ಅಧಿವೇಶನಕ್ಕೆ ಬರುತ್ತಿದ್ದ ವಾಹನ ಮೇಲೆ ಕಲ್ಲು ತೂರಿ ಗೂಂಡಾವರ್ತನೆ ಪ್ರದರ್ಶಿಸಿದ್ದಾರೆ. ನಿನ್ನೆ ರಾತ್ರಿ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರ ನೇತ್ರತ್ವದಲ್ಲಿ ಕರ್ನಾಟಕ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಂಧಾನ ಸಭೆ ನಡೆದ ಬೆನ್ನಲ್ಲಿಯೇ,ನಿನ್ನೆ ರಾತ್ರಿ ಬೆಳಗಾವಿ ಹೊರವಲಯದ ಸುವರ್ಣಸೌಧದ ಎದುರೇ ಈ ಘಟನೆ ನಡೆದಿದೆ ಬೆಂಗಳೂರಿನಿಂದ ಬೆಳಗಾವಿಗೆ ಚಳಿಗಾಲ ಅಧಿವೇಶನಕ್ಕೆ ಬರುತ್ತಿದ್ದ ವಾಹನ. ಕರ್ನಾಟಕ ರಾಜ್ಯ ಕೃಷಿ …

Read More »

ಬೆಳಗಾವಿ ಗಡಿವಿವಾದ ಅಮೀತ್ ಶಾ ಹೇಳಿದ್ದೇನು ಗೊತ್ತಾ..??

ಗಡಿವಿವಾದ ಕುರಿತು ದಿಲ್ಲಿಯಲ್ಲಿ ಗೃಹಸಚಿವ ಆಮಿತ ಶಹಾ ಸಮ್ಮುಖದಲ್ಲಿ ಕರ್ನಾಟಕ ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಏಕನಾಥ ಶಿಂಧೆ ಅವರ ಮಧ್ಯೆ ನಡೆದ ಮಾತುಕತೆಯು ಇಂದು ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯಿತು. ಸಭೆಯ ನಿರ್ಣಯಗಳನ್ನು ಶಹಾ ಅವರೇ ನಂತರ ಮಾಧ್ಯಮಗಳಿಗೆ ತಿಳಿಸಿದರು.ಮಹತ್ವದ ಅಂಶಗಳು: 1) ಸರ್ವೋನ್ನತ ನ್ಯಾಯಾಲಯದ ಮುಂದಿರುವ ಗಡಿವಿವಾದ ಪ್ರಕರಣದ ತೀರ್ಪು ಬರುವವರೆಗೂ ಉಭಯ ರಾಜ್ಯಗಳು ಪರಸ್ಪರರ ಪ್ರದೇಶಗಳನ್ನು ಕೇಳುವಂತಿಲ್ಲ. 2)ಉಭಯ ರಾಜ್ಯಗಳ …

Read More »

ರಾಜ್ಯಸಭೆಯಲ್ಲಿ ಈರಣ್ಣಾ ಕಡಾಡಿ ಪ್ರಸ್ತಾಪಿಸಿದ ಬೇಡಿಕೆ ಏನು ಗೊತ್ತಾ ??

ಬೆಳಗಾವಿ-ಮುಂಬೈ ಮತ್ತು ಹೈದರಾಬಾದ್ ನಡುವೆ ದೈನಂದಿನ ರೈಲು ಸೇವೆ ಪ್ರಾರಂಭಕ್ಕೆ ಸಂಸದ ಈರಣ್ಣ ಕಡಾಡಿ ಒತ್ತಾಯ ಬೆಳಗಾವಿ: ಬೆಳಗಾವಿಯಿಂದ ಹೈದರಾಬಾದ್ ಮತ್ತು ಮುಂಬೈ ನಗರಗಳಿಗೆ ದೈನಂದಿನ ರೈಲು ಸೇವೆಯನ್ನು ಪ್ರಾರಂಭಿಸಬೇಕೆAದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು. ಮಂಗಳವಾರ (ಡಿ-13) ರಂದು ರಾಜ್ಯಸಭಾ ಸಂಸತ್ತಿನ ಚಳಿಗಾಲ ಅಧಿವೇಶನದ ವಿಶೇಷ ಉಲ್ಲೇಖದ ಮೂಲಕ ವಿಷಯ ಪ್ರಸ್ತಾಪಿಸಿದ ಸಂಸದ ಈರಣ್ಣ ಕಡಾಡಿ ಅವರು, ಬೆಳಗಾವಿ ಐತಿಹಾಸಿಕ, ಕೈಗಾರಿಕಾ …

Read More »

ಇಂದು ಸಂಜೆ ದೆಹಲಿಯಲ್ಲಿ ಬೆಳಗಾವಿ ಗಡಿವಿವಾದ…!!

ಬೆಳಗಾವಿ- ಹಲವಾರು ದಶಕಗಳ ನಂತರ ಬೆಳಗಾವಿ ಗಡಿವಿವಾದ ದೇಶದ ರಾಜಧಾನಿಗೆ ತಲುಪಿದ್ದು, ಕೇಂದ್ರ ಗೃಹ ಸಚಿವರ ಸಮ್ಮುಖದಲ್ಲಿ ಇಂದು ಸಂಜೆ ವಿವಾದ ಚರ್ಚೆಗೆ ಬರಲಿದೆ. ಕೇಂದ್ರ ಗೃಹ ಸಚಿವರಾದ ಅಮೀತ ಶಾ ಅವರು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಬೆಳಗಾವಿ ಗಡಿವಿವಾದದ ಕುರಿತು ಚರ್ಚೆ ಮಾಡಲು ದೆಹಲಿಗೆ ಅಹ್ವಾನಿಸಿದ್ದು ಇಂದು ಸಂಜೆ ದೇಶದ ರಾಜಧಾನಿ ದೆಹಲಿಯಲ್ಲಿ ತ್ರೀಮೂರ್ತಿಗಳ ಮತ್ವದ ಸಭೆ ನಡೆಯಲಿದೆ. …

Read More »

ಬೆಳಗಾವಿಯಲ್ಲಿ ಶರದ್ ಪವಾರ ಸಹೋದರನ ಪುತ್ರ ಪ್ರತ್ಯಕ್ಷ….!!

ಬೆಳಗಾವಿ-ಶರದ್ ಪವಾರ ಅವರ ಸಹೋದರನ ಪುತ್ರ ಎನ್ಸಿಪಿ ಶಾಸಕ ಇಂದು ಗಪ್ ಚುಪ್ ಬೆಳಗಾವಿಗೆ ಭೇಟಿ ನೀಡಿ ಬೆಳಗಾವಿಯ ಎಂಇಎಸ್ ನಾಯಕ ದೀಪಕ ದಳವಿಗೆ ಭೇಟಿ ಮಾಡಿರುವ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ‌. ಗಡಿವಿವಾದ ಬಗ್ಗೆ ಮಹಾರಾಷ್ಟ್ರ ನಾಯಕರು ಹುಲಿಯಂತೆ ಮಾತನಾಡಿ, ನರಿಯಂತೆ ವರ್ತನೆ ಮಾಡುತ್ತಿದ್ದಾರೆ‌ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಬೆಳಗಾವಿ ಗಪ್‌ಚುಪ್‌ ಭೇಟಿಗೆ ಅಶೋಕ ಚಂದರಗಿ ಕಿಡಿಕಾರಿದ್ದಾರೆ.ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ …

Read More »

ಮಹಾದಾಯಿ ಯೋಜನೆಗೆ ಶೀಘ್ರದಲ್ಲೇ ಮಂಜೂರಾತಿ…

ನವದೆಹಲಿ. ಡಿ.13 : ರಾಜ್ಯದ ಜಲ ಸಂಪನ್ಮೂಲ ಸಚಿವ ಶ್ರೀ ಗೋವಿಂದ ಕಾರಜೋಳ್ ರವರು ಇಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತರ ವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ರು.. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು ಕೇಂದ್ರ ಜಲ ಶಕ್ತಿ ಸಚಿವ  ಗಜೇಂದ್ರ ಸಿಂಗ್ ಶೇಖವತ್ ಅವರ …

Read More »

ಕಾಂತಾರಾ 2 ಚಿತ್ರ ಮಾಡುವ ಬಗ್ಗೆ ದೈವ ಹೇಳಿದ್ದೇನು ಗೊತ್ತಾ..??

ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಪಡೆದು ಕಾಂತಾರಾ 2 ಮಾಡಿ… ಕಾಂತಾರ 2 ಸಿನಿಮಾ ಮಾಡಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳುವಂತೆ ದೈವ ನುಡಿದಿರುವುದಾಗಿ ದೈವ ನರ್ತಕ ಉಮೇಶ್ ಪಂಬದ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ತಿಂಗಳ ಮೊದಲು ರಿಷಬ್ ಶೆಟ್ಟಿ ಹರಕೆ ನೇಮ ಕೊಡುವುದಾಗಿ ಹೇಳಿ ವೀಳ್ಯ ಕೊಟ್ಟಿದ್ದರು. ಮೊನ್ನೆ ರಿಷಬ್ ಮತ್ತು ಅವರ ತಂಡ ಬಂದು ದೈವದ ಹರಕೆ ಕೊಟ್ಟರು. ಚೆಂದದಿಂದ ದೈವ ಹರಕೆ ಸ್ವೀಕರಿಸಿ ಅವರಿಗೆ …

Read More »

ಬೆಳಗಾವಿಯ ಅಧಿವೇಶನದಲ್ಲಿ, ವಸತಿ,ಊಟ ಉಪಹಾರ,ಅಚ್ಚುಕಟ್ಟಾಗಿ ಇರಬೇಕು- ಕಾಗೇರಿ

ಬೆಳಗಾವಿ, +ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಮಂಡಳದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ(ಡಿ.12) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಸತಿ, ಊಟ, ಸಾರಿಗೆ …

Read More »

ಇಪ್ಪತ್ತೈದು ಸಾವಿರ ಜನ ತರ್ತೀನಿ, ಒಂದು ಕೋಟಿ ಕೊಡ್ತೀನಿ ಅಂದ್ರು ಯತ್ನಾಳ ಗೌಡ್ರು..!!

ಬೆಳಗಾವಿ-ಗುಜರಾತನ ಪಟೇಲ್ ಸಮುದಾಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಡಿ.22ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಮುಂದೆ ನಮ್ಮ 25 ಲಕ್ಷ ಪಂಚಮಸಾಲಿಗರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡೋಣ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಂದು ಕರೆ ನೀಡಿದರು. ಮೀಸಲಾತಿ ಕೊಟ್ಟರೆ ಸನ್ಮಾನ ಕೊಡದಿದ್ದರೆ ಡಿ.22ರಂದು ಸುವರ್ಣವಿಧಾನಸೌಧ ಎದುರಿಗೆ ವಿರಾಟ ಪಂಚಶಕ್ತಿ ಸಮಾವೇಶದ ಅಂಗವಾಗಿ ಸೋಮವಾರ ನಗರದ ಗಾಂಧಿ ಭವನದಲ್ಲಿ ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪಂಚಮಸಾಲಿ …

Read More »

ಸೋಮವಾರ ಬೆಳಗಾವಿಗೆ ವಿಧಾನಸಭೆಯ ಸ್ಪೀಕರ್ ಕಾಗೇರಿ…

ಬೆಳಗಾವಿ- ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಳೆ ಸೋಮವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸುವ ಅವರು 11-00 ಗಂಟೆಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚಳಿಗಾಲ ಅಧಿವೇಶನದ ಸಿದ್ಧತೆಗಳನ್ನು ಪರಶೀಲನೆ ಮಾಡಲಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿ ಗೋಷ್ಠಿ ನಡೆಸಿ ಚಳಿಗಾಲದ ಅಧಿವೇಶನದಲ್ಲಿ ನಡೆಯಲಿರುವ ಕಲಾಪಗಳ ಕುರಿತು ಮಾಹಿತಿ ನೀಡಲಿದ್ದಾರೆ.

Read More »

ಜಿಟಿ ಜಿಟಿ ಮಳೆ ಬೆಳಗಾವಿಯಲ್ಲೂ, ಸೈಕ್ಲೋನ್ ಎಫೆಕ್ಟ್,!!

ಬೆಳಗಾವಿ -ಮ್ಯಾಂಡೌಸ್ ಸೈಕ್ಲೋನ್ ಎಫೆಕ್ಟ್ ಬೆಳಗಾವಿಯಲ್ಲೂ ಆಗಿದೆ,ಬೆಳಗ್ಗೆಯಿಂದ ಬೆಳಗಾವಿ ನಗರದಲ್ಲಿ ಮೋಡಕವಿದ ವಾತಾವರಣವಿತ್ತು ಸಂಜೆ ಹೊತ್ತಿಗೆ ಜಿಟಿ ಜಿಟಿ ಮಳೆ ಸುರಿದಿದೆ. ಬೆಳಗಾವಿ ನಗರದಲ್ಲಿ ಸಂಜೆ ಹೊತ್ತಿಗೆ ಸುರಿದ ಜಿಟಿ,ಜಿಟಿ ಮಳೆಗೆ ಬೆಳಗಾವಿಯ ಜನ ತತ್ತರಿಸಿ ಹೋಗಿದ್ದಾರೆ.ಶೀಥಗಾಳಿ,ಸುರಿದ ಮಳೆಯಿಂದಾಗಿ ಬೆಳಗಾವಿಯಲ್ಲಿ ಸಿಕ್ಕಾಪಟ್ಟೆ ಥಂಡಿ ಇತ್ತು,ಬೀದಿ ವ್ಯಾಪಾರಿಗಳು ತಳ್ಳುವ ಗಾಡಿಯ ರಸ್ತೆ ಬದಿಯ ವ್ಯಾಪಾರಿಗಳು ಆಕಸ್ಮಿಕವಾಗಿ ಸುರಿದ ಮಳೆಯಿಂದಾಗಿ ಪರದಾಡುವಂತಾಯಿತು. ಬೆಳಗಾವಿ ನಗರದ ಎಲ್ಲೆಡೆ ರಸ್ತೆ ಕಾಮಗಾರಿಗಳು ನಡೆಯುತ್ತಿವೆ.ಜಿಟಿ ಜಿಟಿ ಮಳೆಯಿಂದಾಗಿ …

Read More »

ಮಹಾರಾಷ್ಟ್ರದ ನಾಗಪೂರದಲ್ಲಿ ಬೆಳಗಾವಿ ಗ್ರಾಮೀಣದ ನಾಗೇಶ್…!!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಮುಖಂಡ,ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮುನ್ನೋಳಕರ ಕಾಲಿಗೆ ಚಕ್ರ ಕಟ್ಟಕೊಂಡು ಓಡಾಡುತ್ತಿದ್ದಾರೆ.ಬಿಜೆಪಿ ಟಿಕೆಟ್ ಗಾಗಿ ಬೆಳಗಾವಿಯಿಂದ ಬೆಂಗಳೂರು, ಬೆಂಗಳೂರಿನಿಂದ ದೆಹಲಿ, ದೆಹಲಿಯಿಂದ ನಾಗಪೂರದವರೆಗೆ ಪ್ರಯಾಣ ಮಾಡಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ರಾಜ್ಯ ಬಿಜೆಪಿ ಅಧ್ತಕ್ಷ ನಳೀನಕುಮಾರ್ ಕಟೀಲ್,ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು …

Read More »

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರ ಮುಖಕ್ಕೆ ಕಪ್ಪು ಮಸಿ ಎರಚಿದ್ರು…!!

ಬೆಳಗಾವಿ-ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಮಸಿ ಬಳಿದ ಘಟನೆ ಇಂದು ಮಹಾರಾಷ್ಟ್ರದ ಪೂನೆಯಯಲ್ಲಿ ನಡೆದಿದೆ. ಚಂದ್ರಕಾಂತ ಪಾಟೀಲ ಅವರು ಮಹಾಪುರುಷರ ಕುರಿತು ಹಗುರವಾಗಿ ಮಾತನಾಡಿದ್ದನ್ನು ಖಂಡಿಸಿ, ಕಾರ್ಯಕರ್ತನೊಬ್ಬ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಕಪ್ಪು ಮಸಿ ಎರೆಚಿ ಪರಾರಿಯಾಗುತ್ತಿದ್ದಾಗ ಪೋಲೀಸ್ರು ಆತನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರು ಬೆಳಗಾವಿ ಗಡಿವಿವಾದದ ಕುರಿತು ಬೆಳಗಾವಿಗೆ ಭೇಟಿ ನೀಡಲು ನಿರ್ಧರಿಸಿದ್ದರು. …

Read More »

ಬೆಳಗಾವಿಯ ಎಂಇಎಸ್ ಪುಂಡಾಟಿಕೆ ಮಹಾರಾಷ್ಟ್ರದ ಕೊಲ್ಹಾಪೂರಕ್ಕೆ ಶಿಪ್ಟ್…!!

ಬೆಳಗಾವಿ- ಬೆಳಗಾವಿಯ ಸುವರ್ಣವಿಧಾನಸೌಧ ದಲ್ಲಿ ಡಿಸೆಂಬರ್ 19 ರಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶ ನಡೆಯುತ್ತಿದ್ದು, ಇದನ್ನು ಸಹಿಸಲಾಗದ ನಾಡದ್ರೋಹಿ ಎಂಇಎಸ್ ನಾಯಕರು ಈಗ ತಮ್ಮ ಹೋರಾಟ,ಚೀರಾಟವನ್ನು ಮಹಾರಾಷ್ಟ್ರದ ಕೊಲ್ಹಾಪೂರಕ್ಕೆ ಶಿಪ್ಟ್ ಮಾಡಿದ್ದಾರೆ. ಇಂದು ಕೊಲ್ಹಾಪೂರದಲ್ಲಿ ಬೆಳಗಾವಿಯ ಗಡಿವಿವಾದ ಸೇರಿದಂತೆ ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡು, ಶಿವಸೇನೆಯ ಠಾಕ್ರೆಬಣ, ಶರದ್ ಪವಾರ ಅವರ ರಾಷ್ಟ್ರವಾದಿ ಕಾಂಗ್ರೆಸ್ ಮತ್ತು ಮಹಾರಾಷ್ಟ್ರದ ಕಾಂಗ್ರೆಸ್ ಸೇರಿಕೊಂಡು ಅಸ್ತಿತ್ವಕ್ಕೆ ತಂದಿದ್ದ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ವತಿಯಿಂದ ಬೃಹತ್ತ್ …

Read More »

ವ್ಯಾಪಾರಿಯನ್ನು ಕಿಡ್ನ್ಯಾಪ್ ಮಾಡಿ, ಸುಲಿಗೆ ಮಾಡಿದ್ದ ಏಳು ಜನ ಅರೆಸ್ಟ್….

ವ್ಯಾಪಾರಿಯನ್ನು ಕಿಡ್ನ್ಯಾಪ್ ಮಾಡಿ ಸುಲಿಗೆ ಮಾಡಿದ ಏಳು ಜನ ಅರೆಸ್ಟ್…. ಬೆಳಗಾವಿ – ಕಳೆದ ವಾರ ಬೆಳಗಾವಿ ಜಿಲ್ಲೆಯ ಮುರುಗೋಡ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವ್ಯಾಪಾರಿಯನ್ನು ಕಿಡ್ನ್ಯಾಪ್ ಮಾಡಿ ಸುಲಿಗೆ ಮಾಡಿದ ಏಳು ಜನ ಆರೋಪಿಗಳನ್ನು ಮುರುಗೋಡ ಪೋಲೀಸ್ರು ಅರೆಸ್ಟ್. ಮಾಡಿದ್ದಾರೆ. ಏಳು ಜನ ಸುಲಿಗೆಕೋರರು ಕೂಡಿಕೊಂಡು ವ್ಯಾಪಾರಿಯೊಬ್ಬನನ್ನು ಅಪಹರಿಸಿ,ಆತನಿಗೆ ಬೆದರಿಸಿ ಒಂದು ಲಕ್ಷ ರೂ ಸುಲಿಗೆ ಮಾಡಿದ್ದಾರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದ ಮುರುಗೋಡ ಠಾಣೆಯ ಪೋಲೀಸ್ರು ಏಳು …

Read More »