ಬೆಳಗಾವಿ-ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಸಾರಿಗೆ ಬಸ್ಗೆ ಬೆಂಕಿಗಾಹುತಿಯಾದ ಘಟನೆ,ಪಕ್ಕದ ಮಹಾರಾಷ್ಟ್ರದಲ್ಲಿ ನಡೆದಿದೆ. ಔರಂಗಾಬಾದ್ – ಹುಬ್ಬಳ್ಳಿ ಮಾರ್ಗದ ಕರ್ನಾಟಕ ಸಾರಿಗೆ ಬಸ್ಗೆ ಬೆಂಕಿ ಹಂಚಿರುವ ದುಷ್ಕರ್ಮಿಗಳು,ಮಹಾರಾಷ್ಟ್ರದ ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಗೆ ಬೆಂಕಿ ಹಚ್ಚಿದ್ದಾರೆ.ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ವಡಿಗೋದ್ರಿ ಗ್ರಾಮದ ಹದ್ದಿಯಲ್ಲಿ ಈ ಘಟನೆ ನಡೆದಿದೆ. ಮರಾಠಾ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು,ಶಿಕ್ಷಣ ಮತ್ತು ಉದ್ಯೋಗದಲ್ಲಿ …
Read More »ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ
ಬೆಳಗಾವಿ- ಕಳೆದ ವರ್ಷ ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ…
ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ…
ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು
ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ…
ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…
ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮ…
ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ
ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿ…
9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂ…
ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..
ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿ…
ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..
ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯ…
ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು
ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾ…
ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!
ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾ…
LOCAL NEWS
ಬೆಳಗಾವಿ: ಕಾಂಗ್ರೆಸ್ ಟಿಕೆಟ್ ಗಾಗಿ ಕಾಣದ ” ಕೈ”ಗಳ ಕಸರತ್ತು..!!
ಬೆಳಗಾವಿ- ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ತೀವ್ರ ಕಸರತ್ತು ನಡೆಯುತ್ತಿದೆ.ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡಲು ಕಾಂಗ್ರೆಸ್ ಟಿಕೆಟ್ ಗಾಗಿ ಇಬ್ಬರು ನಾಯಕರು ಪ್ರಯತ್ನ ಮಾಡುತ್ತಿರುವ ವಿಚಾರ ಈಗ ಬೆಳಗಾವಿ ಜಿಲ್ಲೆಯಲ್ಲಿ ಚರ್ಚೆಗೆ ಅಸ್ತ್ರವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಯುವ ನಾಯಕ ಕಿರಣ ಸಾಧುನವರ,ಮೃನಾಲ ಹೆಬ್ಬಾಳಕರ,ಅವರ ಹೆಸರು ಕೇಳಿ ಬರುತ್ತಿರುವ ಬೆನ್ನಲ್ಲಿಯೇ ಈಗ ಎರಡು ಹೊಸ ಮುಖಗಳು ಎಂಟ್ರಿಯಾಗಿವೆ.ವಿಧಾನ ಪರಿಷತ್ತ ಸದಸ್ಯ ನಾಗರಾಜ್ …
Read More »ಬಸ್ಸುಗಳಲ್ಲಿ ಯುಪಿಐ ಮೂಲಕ ಟಿಕೆಟ್……!!
ಹುಬ್ಬಳ್ಳಿ: ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಲು ಹಾಗೂ ನಗದು ರಹಿತ ವ್ಯವಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ. ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ರವರ ಮಾರ್ಗದರ್ಶನದಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಪ್ರಯಾಣದ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ನಗರದ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿ ಹಿರಿಯ ಅಧಿಕಾರಿಗಳು …
Read More »ಯುವಕನ ಮರ್ಡರ್ ಪೋಲೀಸರಿಗೆ ಆರೋಪಿಗಳ ಸುಳಿವು.
ಬೆಳಗಾವಿ–ಇತ್ತೀಚಿಗೆ ಬೆಳಗಾವಿ ನಗರದ ಶಿವಬಸವ ನಗರದ ಸ್ಪಂದನ ಆಸ್ಪತ್ರೆ ಬಳಿ ಮೂವರು ಜನ ಯುವಕರು ಬೈಕ್ ಮೇಲೆ ಬಂದು ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಹಂತಕರ ಬಗ್ಗೆ ಪೋಲೀಸರಿಗೆ ಸುಳಿವು ಸಿಕ್ಕಿದೆ ಎಂದು ತಿಳಿದು ಬಂದಿದೆ. ಬೆಳಗಾವಿಯ ನಾಗರಾಜ್ ಗಾಡಿವಡ್ಡರ್ ಎಂಬ ಯುವಕಕನ್ನು ಮೊನ್ನೆ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಮಾಳಮಾರುತಿ ಠಾಣೆಯ ಪೋಲೀಸರು ತ್ವರಿತಗತಿಯ ವಿಚಾರಣೆ ಮಾಡಿ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ …
Read More »ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ,ಮಗ,ಇಬ್ಬರ ದಾರುಣ ಸಾವು…
ಬೆಳಗಾವಿ-ಬೆಳಗಾವಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ದಾರುಣವಾಗಿ ಸಾವನ್ನೊಪ್ಪಿದ ಘಟನೆ,ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ಪ್ರಭು ಹುಂಬಿ(69) ಮಂಜುನಾಥ ಹುಂಬಿ(29) ಮೃತ ದುರ್ದೈವಿಗಳಾಗಿದ್ದಾರೆ.ಮನೆ ಮುಂದಿರುವ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಇಬ್ಬರು ಸಾವನ್ನೊಪ್ಪಿದ್ದಾರೆ.ಹೆಸ್ಕಾಂ ನಿರ್ಲಕ್ಷ್ಯ ದಿಂದಾಗಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.ಮನೆಯ ಮುಂದಿನ ಕಸ ತೆಗೆಯುವಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಿಸಿದ್ದ ತಂದೆ ಪ್ರಭು ಹುಂಬಿಯನ್ನು ಬಿಡಿಸಲು ಹೋಗಿ ಮಗ …
Read More »ಹಿಂಡಲಗಾ ಜೈಲಿಗೆ ಪೋಲೀಸ್ ಆಯುಕ್ತರ ಧಿಡೀರ್ ಭೇಟಿ….!!
ಬೆಳಗಾವಿ- ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗಾಂಜಾ,ಸಿಗರೆಟ್, ಮೋಬೈಲ್ ಬಳಕೆ,ಜೈಲಿನಿಂದಲೇ ಧಮಕಿ ಕೊಡುವ ಆಕ್ರಮ ಚಟುವಟಿಕೆಗಳ ಕುರಿತು ಮಾದ್ಯಮಗಳಲ್ಲಿ ವರದಿ ಪ್ರಸಾರವಾದ ಹಿನ್ನಲೆಯಲ್ಲಿ ಬೆಳಗಾವಿ ನಗರ ಪೋಲೀಸ್ ಆಯುಕ್ತರು ಜೈಲಿಗೆ ಧಿಡೀರ್ ಭೇಟಿ ನೀಡಿದ್ದಾರೆ. ನಗರ ಪೋಲೀಸ್ ಆಯುಕ್ತರಾದ ಸಿದ್ರಾಮಪ್ಪ ಅವರು ಇಂದು ಹಿಂಡಲಗಾ ಜೈಲಿಗೆ surprise visit ಮಾಡಿದ್ದು ಜೈಲಿನಲ್ಲಿ ನಡೆಯುತ್ತಿದೆ ಎನ್ನಲಾದ ಆಕ್ರಮ ಚಟುವಟಿಕೆಗಳ ಕುರಿತು ಪರಶೀಲನೆ ನಡೆಸುತ್ತಿದ್ದಾರೆ.ಜೈಲಿನಲ್ಲಿ ಪರಶೀಲನೆ ಕಾರ್ಯಾಚರಣೆ ಮುಂದುವರೆದಿದೆ. ಹಿಂಡಲಗಾ ಜೈಲಿನಿಂದಲೇ ಕೇಂದ್ರ ಸಚಿವ …
Read More »ಆರೋಪಿಗಳ ಬಂಧನಕ್ಕೆ ಕುಟುಂಬಸ್ಥರ ಬಿಗಿಪಟ್ಟು…
ಬೆಳಗಾವಿ- ನಿನ್ನೆ ರಾತ್ರಿ ಬೆಳಗಾವಿ ಮಹಾನಗರದ ಶಿವಬಸವ ನಗರ ಬಡಾವಣೆಯಲ್ಲಿ ಸ್ಪಂದನ ಆಸ್ಪತ್ರೆ ಬಳಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಮೃತ ಯುವಕನ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ನಿನ್ನೆ ರಾತ್ರಿ ಹತ್ಯೆಯಾದ ಬೆಳಗಾವಿಯ ನಿವಾಸಿ ನಾಗರಾಜ್ ಗಾಡಿವಡ್ಡರ್ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ತರಲಾಗಿದ್ದು,ಆರೋಪಿಗಳನ್ನು ಬಂಧಿಸುವವರೆಗೂ ಅಂತ್ಯಸಂಸ್ಕಾರ ಮಾಡೋದಿಲ್ಲ ಎಂದು ಯುವಕನ ಸಂಬಂಧಿಗಳು ಪಟ್ಟು ಹಿಡಿದಿದ್ದು ಪೋಲೀಸರು ಮನವರಿಕೆ ಮಾಡುತ್ತಿದ್ದಾರೆ.ಈಗ ಮರಣೋತ್ತರ ಪರೀಕ್ಷೆ ಮುಗಿದಿದ್ದು …
Read More »ಕಲ್ಲಿನಿಂದ ಜಜ್ಜಿ ,ಬೆಳಗಾವಿಯಲ್ಲಿ ಯುವಕನ ಮರ್ಡರ್….
ಬೆಳಗಾವಿ- ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವ ನಗರದ ಸ್ಪಂದನ ಆಸ್ಪತ್ರೆ ಬಳಿ ನಡೆದಿದೆ. ಹಂತಕರು ಯುವಕನ ಮೇಲೆ ದಾಳಿ ನಡೆಸಿ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆಯ ಪೋಲೀಸರು ದೌಡಾಯಿಸಿದ್ದಾರೆ. ಹತ್ಯೆಯಾದ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ.ಸ್ಥಳಕ್ಕೆ ದೌಡಾಯಿಸಿದ ಪೋಲೀಸರು ಘಟನೆ ನಡೆದ ಸ್ಥಳವನ್ನು ನಾಕಾಬಂದಿ ಮಾಡಿ ತನಿಖೆ ಶುರು ಮಾಡಿದ್ದಾರೆ.ಹತ್ಯೆಯಾದ ಯುವಕ 25 ವರ್ಷದ ನಾಗರಾಜ್ ಗಾಡಿವಡ್ಡರ್ …
Read More »ಬೆಳಗಾವಿ ಸಬ್ ರಜಿಸ್ಟರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ…!!
ಬೆಳಗಾವಿ-ಬೆಳಗಾವಿ ದಕ್ಷಿಣ ವಿಭಾಗದ ಸಬ್ ರಿಜಿಸ್ಟರ್ ಕಚೇರಿಗೆ ಸರ್ಪೈಸ್ ಭೇಟಿ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು ಕಚೇರಿಯ ಕಾರ್ಯ ಚಟುವಟಿಕೆಗಳನ್ನು ಪರಶೀಲನೆ ಮಾಡಿದ್ದಾರೆ. ಬೆಳಗಾವಿಯ ದಕ್ಷಿಣ ಕ್ಷೇತ್ರದಲ್ಲಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಯ ಆಡಳಿತ ಮತ್ತು ಕಾರ್ಯವೈಖರಿಯ ಬಗ್ಗೆ,ಸಾರ್ವಜನಿಜರಿಂದ ಅನೇಕ ದೂರುಗಳು ಬಂದ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಚೇರಿಗೆ ಧಿಡೀರ್ ಭೇಟಿ ನೋಡಿ ಸಬ್ ರಜಿಸ್ಟರ್ ಅಧಿಕಾರಿಗಳ ನೀರೀಳಿಸಿದ್ದಾರೆ. ಲೋಕಾಯುಕ್ತ ಬೆಳಗಾವಿ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಸರ್ಪೈಸ್ ಭೇಟಿ ನೀಡಿರುವ …
Read More »ಗೃಹಲಕ್ಷ್ಮೀ ಬೆಳಗಾವಿ ಜಿಲ್ಲೆಯ ಮಹಿಳೆಯರಿಗೆ 195.63 ಕೋಟಿ ಮೊದಲ ಕಂತಿನ ಗೀಫ್ಟ್…!
ಬೆಳಗಾವಿ,-ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯನ್ನು ಅಗಸ್ಟ್ 30 ರಂದು ಮೈಸೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಮಾನ್ಯ ಉಪಮುಖ್ಯಮಂತ್ರಿಗಳು, ಇಲಾಖಾ ಸಚಿವರು ಹಾಗೂ ಸಚಿವರು ಲೋಕಾರ್ಪಣೆಗೊಳಿಸಲಿದ್ದಾರೆ. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ Two Way Interaction ಮಾಡಲು ಬೆಳಗಾವಿ ತಾಲೂಕು ಹಿರೇಬಾಗೆವಾಡಿಯ ಶಿವಾಲಯ ಕಲ್ಯಾಣ ಮಂಟಪ ಹಾಗೂ ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಬುಧವಾರ (ಆ.30) ಬೆಳಿಗ್ಗೆ 11. 30 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿರುತ್ತದೆ. ಸದರಿ ಕಾರ್ಯಕ್ರಮಕ್ಕೆ ಎಲ್ಲಾ …
Read More »ಮದುವೆ ಊಟ ಸೇವಿಸಿದ ನೂರಕ್ಕೂ ಹೆಚ್ಚು ಜನ ಅಸ್ವಸ್ಥ
ಬೆಳಗಾವಿ- ಮದುವೆ ಕಾರ್ಯಕ್ರಮದಲ್ಲಿ ಬಿರ್ಯಾನಿನೋ ಇನ್ನೊಂದೋ ಮೌಂಸಾಹಾರಿ ಊಟ ಸೇವಿಸಿದ ನೂರಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ಚಿಕ್ಕೋಡಿ ಪಕ್ಕದ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಮದುವೆಯಲ್ಲಿ ಮೌಂಸಾಹಾರಿ ಊಟ ಸೇವಿಸಿದವವರು ಮಾತ್ರ ಅಸ್ವಸ್ಥರಾಗಿದ್ದು ಶಾಖಾಹಾರಿ ಊಟ ಸೇವಿಸಿದವರು ಸೇಫ್ ಆಗಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮೀರಜ್ ಮೂಲದ ಬೀಗರು ಸಂಬಂಧಿಗಳು ಅಸ್ವಸ್ಥರಾಗಿದ್ದು ಸ್ಥಳಕ್ಕೆ ಪೋಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ಮದುವೆ ಊಟ ಸೇವಿಸಿದ ನೂರಕ್ಕೂ ಹೆಚ್ಚು ಜನ ಅಸ್ವಸ್ಥ …
Read More »ಸವದತ್ತಿ ಯಲ್ಲಮ್ಮನ ಕ್ಷೇತ್ರಕ್ಕೆ ಅಭಿವೃದ್ಧಿಯ ಭಾಗ್ಯ…..!!!
ಬೆಳಗಾವಿ – ರಾಜ್ಯದಲ್ಲಿಯೇ ಅತೀ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಸವದತ್ತಿ ಯಲ್ಲಮ್ಮನ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಚಿಂತನೆ ನಡೆಸಿದ್ದು ಅಗಸ್ಟ್ 31 ರಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ತಂಡ ಯಲ್ಲಮ್ಮನ ಗುಡ್ಡಕ್ಕೆ ಭೇಟಿ ನೀಡಲಿದೆ. ಪ್ರವಾಸೋದ್ಯಮ ಇಲಾಖೆಯ ಸಚಿವ ಹೆಚ್ ಕೆ ಪಾಟೀಲ ಅವರು ಸವದತ್ತಿ ಯಲ್ಲಮ್ಮನ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಅವರ ವಿಶೇಷ ಮನವಿ ಮತ್ತು ಒತ್ತಾಯದ ಮೇರೆಗೆ ಸಚಿವರು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಅಗಸ್ಟ್ …
Read More »ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ
ಗೋಕಾಕ* : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ …
Read More »ಸಂಬಂಧ ಅಂತ್ಯವಾಯಿತು ಸಂಸ್ಕಾರ ಸಮಾಧಿ ಆಯಿತು….!!
ಬೆಳಗಾವಿ- ಬಹುಶ ಭೂಮಿಯ ಮೇಲಿನ ಕರುಣೆ ದಯೆ,ಸಂಬಂಧಳ ಜೊತೆ ಸಂಸ್ಕಾರವೂ ಸಮಾಧಿಯಾದಂತೆ ಕಾಣುತ್ತಿದೆ.ಮಕ್ಕಳಿಗೆ ಹೆತ್ತವರ ಮೇಲೆಯೇ ಕರುಣೆ ಬರುತ್ತಿಲ್ಲ.ಮಕ್ಕಳು ಜೀವಂತ ಇದ್ದಾಗಲೂ ಅವರ ಕಣ್ಮುಂದೆ ಹೆತ್ತವರು ಬೀದಿ ಹೆಣವಾಗುವ ಘಟನೆಗಳು ನಡೆಯುತ್ತಿವೆ.ಇಂತಹ ಘಟನೆ ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿರುವದು ದುರ್ದೈವ. ಇಂದಿನ ಯುವ ಪೀಳಿಗೆ ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗಿರುವುದು ಭಾರತೀಯ ಸಂಸ್ಕೃತಿಯ ಆಧಾರಸ್ತಂಭವಾದ ಕುಟುಂಬ ವ್ಯವಸ್ಥೆಯ ಬುಡವನ್ನೇ ಅಲ್ಲಾಡಿಸುತ್ತಿದೆ. ತಂದೆ-ತಾಯಿ ಸಾಕ್ಷಾತ್ ದೇವರೆಂದು ನಡೆದುಕೊಳ್ಳುತ್ತಿದ್ದ ಮಕ್ಕಳಿಗೆ ಈಗ ವೃದ್ಧ …
Read More »ಕುಂದಾನಗರಿಯಲ್ಲಿ ಪ್ರತ್ಯಕ್ಷವಾದ ನರಿ…!!
ಬೆಳಗಾವಿ- ಇವತ್ತು ಸೋಮವಾರ ಬೆಳಗಾವಿಯ ಶಾಸ್ತ್ರಿ ನಗರದ ಹುಲಬತ್ತೆ ಕಾಲೋನಿಯಲ್ಲಿ ನರಿ ಕಾಣಿಸಿಕೊಂಡಾಗ ಇದು ವಿಚಿತ್ರ ನಾಯಿಯೋ ನರಿಯೋ ಎಂದು ಜನ ಗಾಬರಿಯಾಗಿದ್ದರು. ನರಿ ಬಂದಿದೆ ನರಿ,ಎನ್ನುವ ಸುದ್ಧಿ ಹರಡುತ್ತಿದ್ದಂತೆ ಶ್ರೀರಾಮ ಸೇನೆ ಹಿಂದೂಸ್ತಾನ,ಹಾಗೂ ಫೇಸ್ ಬುಕ್ ಫ್ರೆಂಡ್ಸ್ ಸರ್ಕಲ್ ಕಾರ್ಯಕರ್ತರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಕೊನೆಗೂ ನರಿಯನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. Fox was spotted in Hulbatty Colony surrrounding area near …
Read More »