Breaking News

LOCAL NEWS

ಮುಂದೆ ಕಾಲ ಇದೆ ನಾವು ಇರ್ತಿವಿ ನೀವು ಇರ್ತಿರಿ….!!

ಬೆಳಗಾವಿ-ಈಗ ಬೆಳಗಾವಿಯಲ್ಲಿ ಫ್ಲಾಯಿಂಗ್ ಸೀಝನ್ ನಡೆಯುತ್ತಿದೆ. ಈ ಸೀಝನ್ ದಲ್ಲಿ ಯಾವ ಹಕ್ಕಿ ವಲಸೆ ಬರುತ್ತಿದೆ ಯಾವುದು ವಲಸೆ ಹೋಗುತ್ತಿದೆ ಎಂದು ಗುರುತಿಸುವದು ಬಹು ಕಷ್ಟ ಯಾಕಂದ್ರೆ ಇಲ್ಲಿ ಎಲ್ಲ ಹಕ್ಕಿಗಳ ಧ್ವನಿ ಒಂದೇ ಸ್ವರದಲ್ಲಿ ಕೇಳಿಸುತ್ತಿದೆ ಸ್ವರದಲ್ಲಿ ಅಪಸ್ವರ ಕೇಳಿದಾಗ ಮಾತ್ರ ಜನರಿಗೆ ಸತ್ಯ ಗೋತ್ತಾಗತೈತಿ…… ಇಂದು ಸೋಮವಾರ ಬಸವಣ್ಣನ ವಾರ,ಹೀಗಾಗಿ ಬೆಳಗಾವಿಯಲ್ಲಿ ರಾಜಕೀಯ ನಾಯಕರ ಕೂಡಲ ಸಂಗಮ ಗೋಚರವಾಯಿತು.ಸೋಮವಾರ ಬೆಳಗಾವಿ ಡಿಸಿಸಿ ಬ್ಯಾಂಕ್ ಮೀಟೀಂಗ್ ಇತ್ತು ಮೀಟೀಂಗ್ …

Read More »

ಬೆಳಗಾವಿಯಲ್ಲಿ ಗ್ಯಾಸ್ ಲಿಕೇಜ್ ಮನೆಗೆ ಬೆಂಕಿ ನಾಲ್ಕು ಜನರಿಗೆ ಗಾಯ..

ಬೆಳಗಾವಿ- ಬೆಳಗಾವಿಯ ಬಸವನಗಲ್ಲಿಯ ಮನೆಯೊಂದರಲ್ಲಿ ಸಿಲೆಂಡರ್ ಗ್ಯಾಸ್ ಸೋರಿಕೆ ಯಾಗಿ ಮನೆಗೆ ಬೆಂಕಿ ತಗಲಿ ನಾಲ್ಕು ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ನಗರದ ಬಸವನಗಲ್ಲಿಯ ಮೋಹನ್ ಗೋಪಾಲಕೃಷ್ಣ ಭಟ್ ಎಂಬುವರ ಮನೆಯಲ್ಲಿ ಇಂದು ಸಂಜೆ ಸಿಲೆಂಡರ್ ಗ್ಯಾಸ್ ಸೋರಿಕೆಯಾಗಿ ಗ್ಯಾಸ್ ಮನೆಯ ತುಂಬೆಲ್ಲಾ ಹರಡಿ ಮನೆಗೆ ಬೆಂಕಿ ತಗಲಿದೆ. ಈ ಘಟನೆಯಲ್ಲಿ ಮನೆಯಲ್ಲಿದ್ದ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದು ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಖಡೇಬಝಾರ್ …

Read More »

ಶೆಟ್ಟರ್ BJP ಗೆ ಮರಳಿದ ಬಳಿಕ, ಸವದಿ ಸಾಹುಕಾರ್ ಹೇಳಿದ್ದೇನು ಗೊತ್ತಾ…???

ಬೆಳಗಾವಿ-ಜಗದೀಶ್ ಶೆಟ್ಟರ್ ಅವರು ಅನಿರೀಕ್ಷಿತವಾಗಿ ಬಿಜೆಪಿಗೆ ಹೋಗಿದ್ದಾರೆ ಇದರಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬಿರೋದಿಲ್ಲ.ನನಗೂ ಹಿರಿಯ ಬಿಜೆಪಿ ನಾಯಕರು ಸಂಪರ್ಕ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನನಗೂ ಬಿಜೆಪಿಗೆ ಬರುವಂತೆ ದೊಡ್ಡ ನಾಯಕರು ಒತ್ತಡ ಹೇರುತ್ತಿದ್ದಾರೆ.ಹಿರಿಯ ನಾಯಕರು ಸಂಪರ್ಕದಲ್ಲಿದ್ದಾರೆ.ಹಲವಾರು ವರ್ಷಗಳ ಕಾಲ ನಾನು ಬಿಜೆಪಿಯಲ್ಲಿದ್ದೆ ಅಲ್ಲಿಯೂ ನನ್ನ ಸ್ನೇಹಿತರಿದ್ದಾರೆ.ಸಹಜವಾಗಿ ಸಂಪರ್ಕ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ. ಸಾರ್ವಜನಿಕವಾಗಿ ನಾನು ಏನೂ ಹೇಳುವದಿಲ್ಲ, …

Read More »

ಲೋಕಸಭಾ ಚುನಾವಣೆಯಲ್ಲಿ, ಅಂಜಲಿ ನಿಂಬಾಳ್ಕರ್ ಸ್ಪರ್ದೆ ಖಚಿತ….!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಖಾನಾಪೂರ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಂಜಲಿ ನಿಂಬಾಳ್ಕರ್ ಅವರು ಪರಾಭವಗೊಂಡರೂ ಸಹ ಕ್ಷೇತ್ರದಲ್ಲಿ ಸಕ್ರೀಯವಾಗಿ ಜನಸೇವೆ ಮಾಡುತ್ತಿದ್ದು ಅವರ ಕ್ರೀಯಾಶೀಲತೆ ಮತ್ತು ಪಕ್ಷ ನಿಷ್ಠೆಯನ್ನು ಗಮನಿಸಿ ಕಾಂಗ್ರೆಸ್ ಹೈಕಮಾಂಡ್ ಅಂಜಲಿ ನಿಂಬಾಳ್ಕರ್ ಅವರನ್ನು ಕೆನರಾ …

Read More »

ಒಬ್ಬರಿಗೆ ಬಸ್ಸು ಇನ್ನೊಬ್ಬರಿಗೆ ಹಣಕಾಸು,ಕಾರ್ಯಕರ್ತರಿಗೆ ಲಾಸು…!!

      ಬೆಳಗಾವಿ- ಸರ್ಕಾರ ಕೊನೆಗೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬೆಳಗಾವಿ ಜಿಲ್ಲೆಯ ಇಬ್ವರು ಶಾಸಕರಿಗೆ ಮಹತ್ವದ ನಿಗಮ ಮಂಡಳಿಗಳು ಸಿಕ್ಕಿವೆ. ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ KSRTC ನಿಗಮ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಹಣಕಾಸು ನಿಗಮ ನೀಡಲಾಗಿದ್ದು ಮೊದಲ ಪಟ್ಟಿಯಲ್ಲಿ ಕೇವಲ ಶಾಸಕರಿಗೆ ಮಾತ್ರ ನಿಗಮಗಳನ್ನು ನೀಡಲಾಗಿದ್ದು ಕಾಂಗ್ರೆಸ್ ಸರ್ಕಾರ ಮೊದಲ ಪಟ್ಟಿಯಲ್ಲಿ ಕಾರ್ಯಕರ್ತರಿಗೆ ಪಕ್ಷವನ್ನು …

Read More »

ಗೋಮೌಂಸ ಸಾಗಿಸುತ್ತಿದ್ದ ಲಾರಿ ಪೋಲೀಸರ ವಶಕ್ಕೆ..

ಬೆಳಗಾವಿಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಯ ಮೇಲೆ ಪೊಲೀಸರ ದಾಳಿ ನಡೆಸಿ,ಸುಮಾರು 7 ಟನ್ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಕೊಂಡಸಕೊಪ್ಪ ಗ್ರಾಮದ ಬಳಿ ಪೊಲೀಸರ ದಾಳಿ ನಡೆಸಿದ್ದು ಬೆಳಗಾವಿಯಿಂದ ಧಾರವಾಡಕ್ಕೆ ಸಾಗಿಸಲಾಗುತ್ತಿದ್ದ ಗೋಮಾಂಸ ಈಗ ಪೋಲೀಸರ ವಶದಲ್ಲಿದೆ. ಸುಮಾರು ೫,೬೦,೦೦೦ ಸಾವಿರ ಬೆಲೆಯ ಗೋಮಾಂಸ ಇದಾಗಿದೆ.ಮೊಹಮ್ಮದ್ ಗೌಸ್ ನಜೀರ್ ಶೇಖ ಹಾಗೂ ಕರೆಪ್ಪ ಕೋಳಿ ಎಂಬಾತರು ಬಂಧಿತ ಆರೋಪಿಗಳಾಗಿದ್ದಾರೆ.ಲಾರಿ ಸಮೇತ ಗೋಮಾಂಸ ವಶಕ್ಕೆ ಪಡೆದು ಪೊಲೀಸರಿಂದ ಸ್ವಯಂ ಪ್ರೇರಿತ ದೂರು …

Read More »

ಬೆಳಗಾವಿ ಪಾಲಿಟೀಕ್ಸ್ ದಲ್ಲಿ, ಜೈ ..‌‌ಜಗದೀಶ….ಹರೇ…..!!!!

ಬೆಳಗಾವಿ- ರಾಜಕಾರಣ ನಿಂತ ನೀರು ಅಲ್ಲ.ಇಲ್ಲಿ ಗುಣಾಕಾರ ಭಾಗಾಕಾರದ ಲೆಕ್ಕ ನಡೆಯೋದಿಲ್ಲ.ಇಲ್ಲಿ ಏನಿದ್ರೂ ಜಾಕ್ ಪಾಟ್ ಆಟ ಅನ್ನೋದು ಮತ್ತೊಮ್ಮೆ ಸಾಭೀತಾಗಿದೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ಸು ಬಂದಿರುವ ಹಿಂದೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶ್ರಮ ವರ್ಕೌಟ್ ಆಗಿದೆ ಜಾರಕಿಹೊಳಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದಿದ್ದಾರೆ.ರಮೇಶ್ ಜಾರಕಿಹೊಳಿ ಆಡಿದ ಆಟ ಬೆಳಗಾವಿ ಜಿಲ್ಲೆಯ ರಾಜಕಾರಣದ ಚಿತ್ರಣವನ್ನು ಬದಲಿಸಿದೆ. ಬೆಳಗಾವಿ ಜಿಲ್ಲೆಗೂ ಜಗದೀಶ್ ಶೆಟ್ಟರ್ ಅವರಿಗೂ ಅಂಡರ್ ಕರೆಂಟ್ …

Read More »

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಸೊಸೆ ಶೃದ್ಧಾ ಹೇಳಿದ್ದೇನು ಗೊತ್ತಾ..??

ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಆಗಿರೋದು ತುಂಬಾ ಖುಷಿಯಾಗಿದೆ ಎಂದು ಹೇಳಿದ ಶ್ರದ್ಧಾ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬಕ್ಕೆ ಅಷ್ಟೆಯಲ್ಲ ಇಡೀ ಬಿಜೆಪಿ ಕಾರ್ಯಕರ್ತರಿಗೆ ಖುಷಿ ತಂದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇದು ಸಂತೋಷದ ಸಂದರ್ಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ತಾವು ಸ್ಪರ್ಧಿಸುತ್ತಿರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಯಿಸಿದ ಶೃದ್ಧಾ ಶೆಟ್ಟರ್, ನನ್ನ ಸ್ಪರ್ಧೆ ಬಗ್ಗೆ …

Read More »

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಗುಡ್ ಬೈ…..!!

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ವಾಪಾಸಾಗಿದ್ದಾರೆ. ನವದೆಹಲಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಯ ಆಪರೇಷನ್ ಸಕ್ಸಸ್ ಆಗಿದೆ. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ …

Read More »

ಮಾರಿಹಾಳ ಗ್ರಾಪಂ ಉಪಾಧ್ಯಕ್ಷರಾಗಿ ಅಸೀಪ್ ಮುಲ್ಲಾ ಅವಿರೋಧ ಆಯ್ಕೆ….

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಮಾರಿಹಾಳ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಯುವ ಮುಖಂಡ ಅಸೀಪ್ ಮುಲ್ಲಾ ಅವರು ಇಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿದ್ದ ತೌಸೀಪ ಫನೀಬಂದ್ ಅವರ ಆಕಸ್ಮಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ಅಸೀಪ್ ಮುಲ್ಲಾ ಅವರು ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಸೀಪ್ ಮುಲ್ಲಾ ಅವರುTAPCMS DIRECTOR ನಿರ್ದೇಶಕರು,PLD BANK DIRECTOR ನಿರ್ದೇಶಕರಾಗಿ PKPS SOCIETY CHARAMAN ಅಧ್ಯಕ್ಷರಾಗಿ,ಎಪಿಎಂಸಿಯ ಮಾಜಿ ಸದಸ್ಯರಾಗಿ …

Read More »

ಸ್ಕೂಟಿಯಲ್ಲಿ ಇಟ್ಟಿದ್ದ 1ಲಕ್ಷ 40 ಸಾವಿರ ರೂ ದೋಚಿದ ಕಳ್ಳ….

ಬೆಳಗಾವಿ-ಸ್ಕೂಟಿಯಲ್ಲಿ ಇಟ್ಟಿರುವ 1ಲಕ್ಷ 40 ಸಾವಿರ ಹಣವನ್ನ ಖದೀಮರು ಕದ್ದು ಪರಾರಿಯಾಗಿದ್ದಾರೆ.ಬೆಳಗಾವಿ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಎಪಿಎಂಸಿ ರಾಜದೀಪ ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ ಬೈಕನಲ್ಲಿನ ಹಣ ಎಗರಸಿದ ಕಳ್ಳ ಪರಾರಿಯಾಗಿದ್ದಾನೆ.ರಾಜದೀಪ ಅಂಗಡಿ ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳನ ಕರಾಮತ್ತು ಸೆರೆಯಾಗಿದೆ. ತರಕಾರಿ ವ್ಯಾಪಾರಸ್ಥರಾದ ರಾಜು ಡಿಕೊಸ್ಟರ್ ಎಂಬುವವರಿಗೆ ಸೇರಿದ ಹಣ ಕಳ್ಳತನವಾಗಿದೆ. ಲಸ್ಥಳಕ್ಕೆ ಎಪಿಎಂಸಿ ಪೋಲಿಸ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Read More »

ಶ್ರೀರಾಮನಿಗೆ, ಶಬರಿ ಭೇಟಿಯಾದ ಸ್ಥಳ ಬೆಳಗಾವಿ ಜಿಲ್ಲೆಯಲ್ಲಿ….!

  22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರದ ಉದ್ಘಾಟನೆ ನಡೆಯಲಿದೆ.ಎಲ್ಲರಿಗೂ ಅಯೋಧ್ಯೆಗೆ ಹೋಗಲು ಸಾಧ್ಯವಾಗುವದಿಲ್ಲ.ಆದ್ರೆ ಶ್ರೀರಾಮನಿಗಾಗಿ ತಪಸ್ಸು ಮಾಡಿ,ಶ್ರೀರಾಮನನ್ನು ಶಬರಿ ಭೇಟಿ ಮಾಡಿದ ಸ್ಥಳ ಬೆಳಗಾವಿ ಜಿಲ್ಲೆಯಲ್ಲಿದೆ.22 ರಂದು ಈ ಸ್ಥಳಕ್ಕೆ ಹೋಗಬಹುದಾಗಿದೆ.ಯಾಕಂದ್ರೆ ಶಬರಿಯ ಮಂದಿರವೂ ಇಲ್ಲಿದೆ. ಬೆಳಗಾವಿ-ಇದೇ ತಿಂಗಳು 22ರಂದುಅಯೋಧ್ಯಯಲ್ಲಿ ಶ್ರೀರಾಮ ಭವ್ಯ ದೇಗುಲ ಲೋಕಾರ್ಪಣೆಗೊಳ್ಳಲಿದೆ. ಈ ಕ್ಷಣಕ್ಕಾಗಿ ಈಗ ಇಡೀ ದೇಶವೇ ಕಾತುರದಿಂದ ಕಾದು ನೋಡುತ್ತಿದೆ. ಹೌದು ಗಡಿ ಜಿಲ್ಲೆ ಬೆಳಗಾವಿಗು ಶ್ರೀರಾಮನಿಗೆ ನಂಟಿದೆ. ರಾಮನ ಕಾರಣದಿಂದಲೇ …

Read More »

ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ಜಾರಿ:

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, -: ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಪ್ರಧಾನಮಂತ್ರಿಗಳ 15 ಹೊಸ ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿನಾಕಾರಣ ನೆಪವೊಡ್ಡದೆ ನಿಗದಿತ ಅವಧಿಯೊಳಗೆ ಗುರಿ ಸಾಧಿಸಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಕೌಶಲ್ಯ ಹಾಗೂ ಇತರೆ ಉದ್ಯೋಗಗಳಿಗೆ ತರಬೇತಿ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ …

Read More »

ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ- ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸಂಜೆ ನಗರದ ಬ್ಯಾಳಿ ಕಾಟಾ ಹತ್ತಿರ ಇರುವ ಎನ್ಎಸ್ಎಫ್ ಕಛೇರಿಯಲ್ಲಿ ಜರುಗಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಸಮೀಕ್ಷೆಗಳು ಕೂಡ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು …

Read More »

ಕೊಲೆಸ್ಟ್ರಾಲ್ ಕಂಟ್ರೋಲ್ ಮಾಡಲು ಬಂದಿದೆ ಹೊಸ ಇಂಜೆಕ್ಷನ್…

[ಬೆಳಗಾವಿ: ಅತ್ಯಧಿಕ ಕೊಲೆಸ್ಟಾçಲ್, ರಕ್ತದೊತ್ತಡ ಸೇರಿದಂತೆ ದೀರ್ಘಕಾಲದ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಅಳವಡಿಸಿಕೊಂಡಿರುವ ‘ದಿನನಿತ್ಯದ ಮಾತ್ರೆ’ ಸೇವನೆಯ ಚಿಕಿತ್ಸೆಗೆ ಭವಿಷ್ಯದಲ್ಲಿ ಸ್ಥಗಿತಗೊಳ್ಳುವ ಸಂದರ್ಭ ಬಂದೊದಗಲಿದೆ. ಕೊಲೆಸ್ಟಾçಲ, ಅಧಿಕ ರಕ್ತದೊತ್ತಡ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಅಭಿವೃದ್ಧಿಪಡಿಸಲಾಗಿರುವ ಔಷಧವು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಲಬ್ಯವಿದೆ. ಡಿಸಿಜಿಐ, ಯುಎಸ್ ಎಫ್‌ಡಿಎ, ಸಿಇ ಹಾಗೂ ಇಎಂಎ ಅನುಮೋದಿತ ಭಾರತದಲ್ಲಿ ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, …

Read More »