Breaking News

LOCAL NEWS

16ರಂದು ರವಿವಾರ ಪೇಟೆ ಸಂಪೂರ್ಣ ಬಂದ್

ಆಹಾರ ಧಾನ್ಯಗಳಿಗೆ ಶೇ.5 GST ವಿಧಿಸಿರುವ ಕೇಂದ್ರ ಸರಕಾರದ ನಡೆಗೆ ಆಕ್ರೋಶ ಬೆಳಗಾವಿ: ಆಹಾರ ಧಾನ್ಯ ಹಾಗೂ ಬೇಳೆಕಾಳುಗಳ ಮೇಲೆ ಕೇಂದ್ರ ಸರಕಾರ ಶೇ.5ರಷ್ಟು ಸೇವಾ ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಿರುವುದನ್ನು ಖಂಡಿಸಿ ನಗರದ ರವಿವಾರಪೇಟೆಯ ಎಲ್ಲ ವರ್ತಕರು ಜು.16ರಂದು ಒಂದು ದಿನ ಸಂಪೂರ್ಣ ವ್ಯಾಪಾರ-ವಹಿವಾಟು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ‌‌ ಈಚೆಗೆ ಕೇಂದ್ರ ಸರಕಾರ ಆಹಾರ ಧಾನ್ಯಗಳು ಹಾಗೂ ಬೇಳೆಕಾಳು ವಹಿವಾಟು ಮೇಲೆ ತೆರಿಗೆ …

Read More »

ಬೆಳಗಾವಿಯ, ಹಿಡಕಲ್ ಡ್ಯಾಂನಲ್ಲಿ ಲ್ಯಾಂಡ್ ಆಗಲಿದೆ, ವಾಟರ್ ಏರೋಡ್ರಮ್ …

ಹಿಡಕಲ್ ಡ್ಯಾಂನಲ್ಲಿ ಲ್ಯಾಂಡ್ ಆಗಲಿದೆ, ವಾಟರ್ ಏರೋಡ್ರಮ್ … ಬೆಳಗಾವಿ -ಬೆಳಗಾವಿಯ ಹಿಡಕಲ್ ಡ್ಯಾಂ ಪ್ರದೇಶದಲ್ಲಿ ಬೃಂದಾವನ ಮಾದರಿಯ ಉದ್ಯಾನವನ ನಿರ್ಮಿಸುವ ಯೋಜನೆ ರೂಪಿಸಿದ ಬೆನ್ನಲ್ಲಿಯೇ, ಈಗ ಮತ್ತೊಂದು ಹೊಸ ಯೋಜನೆ ಹಿಡಕಲ್ ಡ್ಯಾಂ ಗೆ ಬರಲಿದೆ. ಬೆಳಗಾವಿಯ ಹಿಡಕಲ್ ಡ್ಯಾಂ, ರಾಜ್ಯದ ಕಾಳಿ ನದಿ,ಕೆ.ಆರ್.ಎಸ್ ಡ್ಯಾಂ ಸೇರಿದಂತೆ ರಾಜ್ಯದ 9 ಕಡೆ,ಪ್ರಮುಖ ಜಲಾಶಯ ಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸುವದಕ್ಕಾಗಿ ವಾಟರ್ ಏರೋಡ್ರಮ್ ಸೌಲಭ್ಯ ಕಲ್ಪಿಸುವುದಾಗಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಏರೋಡ್ರಮ …

Read More »

ಬೆಳಗಾವಿ ಡಿಸಿ ನಡೆ, ಖಾನಾಪೂರದ ಪಾರವಾಡ ಕಡೆ,…!!

ಜು.16 ರಂದು “ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನಡೆ ಖಾನಾಪುರ ತಾಲ್ಲೂಕಿನ ಪಾರವಾಡ ಹಳ್ಳಿಯ ಕಡೆ” ಬೆಳಗಾವಿ, ಜುಲೈ 14(ಕರ್ನಾಟಕ ವಾರ್ತೆ): “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶನಿವಾರ(ಜುಲೈ.16) ಖಾನಾಪುರ ತಾಲ್ಲೂಕಿನ ಪಾರವಾಡ ಗ್ರಾಮಕ್ಕೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ. ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ದಿಸೆಯಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ಒಂದು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಅದೇ …

Read More »

ಕೇವಲ 200 ₹ ದಲ್ಲಿ ಹಿಡಕಲ್ ಡ್ಯಾಂ,ಗೋಕಾಕ ಪಾಲ್ಸ್ , ಗೊಡಚಿನಮಲ್ಕಿ ದರ್ಶನ……!!!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಪಕ್ಕದ ಮಹಾರಾಷ್ಟ್ರದಲ್ಲಿ ಭಯಂಕರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ನದಿಗಳು ಉಕ್ಕಿ ಹರಿದು ಜಿಲ್ಲೆಯ ಜಲಪಾತಗಳು ಧುಮುಕುತ್ತಿವೆ. ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್, ಹಿಡಕಲ್ ಡ್ಯಾಂ,ಮತ್ತು ಗೊಡಚಿನಮಲ್ಕಿ ಜಲಪಾತಗಳ ದರ್ಶನ ಮಾಡಲು ಬೆಳಗಾವಿ ಸಾರಿಗೆ ಸಂಸ್ಥೆ ಅತ್ಯಂತ ಕಡಿಮೆ ದರದಲ್ಲಿ ಟೂರ್ ಪ್ಯಾಕೇಜ್ ಘೋಷಣೆ ಮಾಡಿದ್ದು, ವಿಶೇಷವಾದ ಬಸ್ ಸೌಲಭ್ಯ ಕಲ್ಪಿಸಿದೆ. ಕೇವಲ 200 ₹ ದರದಲ್ಲಿ ಹಿಡಕಲ್ ಡ್ಯಾಂ, …

Read More »

ಈ ಸಾಧನ ಸಂಶೋಧನೆ ಮಾಡಿದ ಮಹಾತ್ಮನಿಗೆ ಸಲಾಂ…!!

ಎತ್ತುಗಳ ಭಾರ ಇಳಿಸುವ ಸಾಧನ ಸಂಶೋಧನೆಯ ಮೂಲ ಇಲ್ಲಿದೆ!ಮಹಾರಾಷ್ಟ್ರದ ಈ ಸಂಶೋಧಕರಿಗೆ ಪ್ರಶಂಸೆಯ ಅಭಿನಂದನೆಗಳ ಮಹಾಪೂರ! ಕಳೆದ ಕೆಲವು ದಿನಗಳಿಂದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಚಕ್ಕಡಿಗಳಲ್ಲಿ ತುಂಬಲಾಗುವ ಮಿತಿಮೀರಿದ ಭಾರವನ್ನು ಎಳೆಯುವ ಎರಡು ಎತ್ತುಗಳ ಭಾರವನ್ನು ಕಡಿಮೆ ಮಾಡಬಹುದಾದ ಚಕ್ರವೊಂದನ್ನು ನೊಗದ ಮುಂಭಾಗಕ್ಕೆ ಜೋಡಿಸಲಾಗಿದೆ. ಇದರಿಂದ ಎತ್ತುಗಳ ಮೇಲಿನ ಭಾರ ಕಡಿಮೆಯಾಗುತ್ತದೆ.ಈ ಸಾಧನವನ್ನು ಸಂಶೋಧಿಸಿದ್ದು ಮಹಾರಾಷ್ಟ್ರದ ಇಸ್ಲಾಮಪುರದಲ್ಲಿ.ಮಹಾರಾಷ್ಟ್ರದಲ್ಲಿ ಸುಮಾರು 200 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಿಗೆ ಕಬ್ಬು ಪೂರೈಸುವ ರೈತರು ಚಕ್ಕಡಿಯ …

Read More »

ಮೂರು, ಜನರ ಜೀವ ಉಳಿಸಿ ಸಾರ್ಥಕತೆ ಮೆರೆದ ಮಹಿಳೆ…!!

ಬೆಳಗಾವಿ-ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹತ್ತಿರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಎತ್ತಿನಗುಡ್ಡ ಗ್ರಾಮದ ೪೮ ವರ್ಷದ ಕಮಲವ್ವ ಕೆಲಗೇರಿ ಅವರು ತಮ್ಮ ಅಂಗಾಂಗಳನ್ನು ದಾನ ಮಾಡಿ ಮೂವರ ಜೀವ ಉಳಿಸಿ ಸಮಾಜಕ್ಕೆ ಪ್ರೇರಣಾದಾಯಿಯಾಗಿದ್ದಾರೆ. ಕಿಡ್ನಿಯನ್ನು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ …

Read More »

ಬೆಳಗಾವಿ ಜಿಲ್ಲೆಯಲ್ಲಿ, ಭಯಂಕರ ಮಳೆ,ಎಲ್ಲಿ ಏನಾಗಿದೆ,ಇಲ್ಲಿದೆ ಡಿಟೇಲ್ಸ್…

ಬೆಳಗಾವಿ ನಗರದ ಕೇಶವ ನಗರ ಹಾಗೂ ಅಣ್ಣಪೂರ್ಣ ನಗರದಲ್ಲಿ ಮನೆಗಳಿಗೆ ನುಗ್ಗಿದ ನೀರು   ಕಣಬರ್ಗಿಯಲ್ಲಿ  ರಸ್ತೆಯ ಮೇಲಿನ ದೃಶ್ಯ   ಮನೆಗಳಿಗೆ ನುಗ್ಗಿದ ನೀರು ಜನ ಹೈರಾಣು… ಬೆಳಗಾವಿ ಮಹಾನಗರದ ವಡಗಾವಿ ಪ್ರದೇಶದಲ್ಲಿರುವ ಅಣ್ಣಪೂರ್ಣೇಶ್ವರಿ ನಗರ,ಹಾಗು ಕೇಶವ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ಜನ ಪರದಾಡುತ್ತಿದ್ದಾರೆ. ಸ್ಥಳೀಯ ನಗರ ಸೇವಕರು ನಾಲೆಯನ್ನು ಸ್ವಚ್ಛ ಗೊಳಿಸಿ ಬಡವಾಣೆಗಳಿಗೆ ನುಗ್ಗಿದ ನೀರನ್ನು ತಡರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದು ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. …

Read More »

ಝಿರೋ ಟ್ರಾಫಿಕ್ ನಲ್ಲಿ ಧಾರವಾಡದಿಂದ ಬೆಳಗಾವಿಗೆ ಬರುತ್ತಿದೆ ಕಿಡ್ನಿ….

ಬೆಳಗಾವಿ- 15 ರ ಯುವತಿಯ ಹೃದಯವನ್ನು ಧಾರವಾಡದ ಎಸ್ ಡಿ ಎಂ ಹಾಸ್ಪಿಟಲ್‌ ನಿಂದ ಬೆಳಗಾವಿಯ ಕೆ.ಎಲ್ ಇ ಆಸ್ಪತ್ರೆಗೆ ಗ್ರೀನ್ ಕಾರಿಡಾರ್ ಮೂಲಕ ತಂದು ಮುಸ್ಲೀಂ ಯುವಕನಿಗೆ ಈ ಹೃದಯ ಕಸಿ ಮಾಡಿದ ಬೆನ್ನಲ್ಲಿಯೇ ಈಗ ಮತ್ತೊಂದು ಅಂಗಾಗ ಬೆಳಗಾವಿಗೆ ಬರುತ್ತಿದೆ. ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಿಂದ ಕಿಡ್ನಿಯನ್ನು ಅಂಬ್ಯುಲೆನ್ಸ್ ಮೂಲಕ ಝಿರೋ ಟ್ರಾಫಿಕ್ ಮೂಲಕ ಬೆಳಗಾವಿಗೆ ತರಲಾಗುತ್ತಿದೆ.ಇನ್ನು ಕೆಲವೇ ಕ್ಷಣಗಳಲ್ಲಿ ಈ ಅಂಬ್ಯುಲೆನ್ಸ್ ಬೆಳಗಾವಿಗೆ ತಲುಪಲಿದೆ. …

Read More »

ದೂದ್ ಸಾಗರ್ ಫಾಲ್ಸ್, ನೋಡಲು ಹೊರಡಲಿದೆ ವಿಶೇಷ ರೈಲು…!!!

ವಾಸ್ಕೋ ಡಿಗಾಮಾ ರೈಲು ಬೆಳಗಾವಿ-ಕರ್ನಾಟಕ ಗೋವಾ ರಾಜ್ಯಗಳ ಸಂಪರ್ಕದ ಕೊಂಡಿಯಂತಿರುವ  ರಮಣೀಯ ದೂದ್ ಸಾಗರ ಜಲಪಾತದ ಸೌಂಧರ್ಯ ನೋಡಲು ಹುಬ್ಬಳ್ಳಿಯಿಂದ -ವಾಸ್ಕೋವರೆಗೆ ವಿಶೇಷ ರೈಲು ಬಿಡಲು ನೈರುತ್ಯ ರೇಲ್ವೆ ವಲಯ ನಿರ್ಧರಿಸಿದೆ. ಜುಲೈ 16 ರಿಂದ ಹುಬ್ಬಳ್ಳಿಯಿಂದ ವಾಸ್ಕೋವರೆಗೆ ಸಂಚರಿಸಲಿರುವ ಈ ವಿಶೇಷ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರು ರೈಲಿನಲ್ಲಿ ಕುಳಿತುಕೊಂಡು ನಿಸರ್ಗದ ಸೌಂಧರ್ಯ ಸವಿಯುವ ವಿಶೇಷವಾದ ವ್ಯವಸ್ಥೆ ಈ ರೈಲಿನಲ್ಲಿದೆ. ಪಶ್ಚಿಮ ಘಟ್ಟ ಹಾಗೂ ದೂದ್ ಸಾಗರ್ ಜಲಪಾತಗಳ ಮೂಲಕ …

Read More »

ಕೃಷ್ಣಾ ನದಿ ತೀರದಲ್ಲಿ ರೌಂಡ್ಸ್ ಹಾಕಿದ, ಬೆಳಗಾವಿ ಜಿಲ್ಲಾಡಳಿತ… !

ಬೆಳಗಾವಿ- ಮಹಾರಾಷ್ಟ್ರ ಕೊಂಕಣ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ನದಿಗಳು ಉಕ್ಕಿ ಹರಿತುತ್ತಿವೆ‌. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ,ಜಿಪಂ ಸಿಇಓ ದರ್ಶನ್ ಸೇರಿದಂತೆ ಇಡೀ ಬೆಳಗಾವಿ ಜಿಲ್ಲಾಡಳಿತ ಇಂದು ಬೆಳಗ್ಗೆ ಕೃಷ್ಣಾ ನದಿತೀರದಲ್ಲಿ ಸಂಚರಿಸಿ ಪರಿಸ್ಥಿತಿಯ ಅವಲೋಕನ ಮಾಡಿತು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವಿಭಾಗದಲ್ಲಿ ತುಂಬಿ ಹರಿಯುತ್ತಿರುವ ದೂದಗಂಗಾ, ವೇದಗಂಗಾ ಹಾಗೂ ಕೃಷ್ಣಾ ನದಿಗಳು ಅಪಾಯದ ಮಟ್ಟ …

Read More »

ಬೈಲಹೊಂಗಲದಲ್ಲಿ, ಚಿತ್ರನಟನ ಮೇಲೆ ಗುಂಡಿನ ದಾಳಿ…..!!

ಬೈಲಹೊಂಗಲ- ಚಿತ್ರನಟ, ಉದ್ಯಮಿ,ಯುವ ನಾಯಕ, ಶಿವರಂಜನ್ ಬೋಳಣ್ಣವರ ಮೇಲೆ ಗುಂಡಿನ ದಾಳಿಗೆ ವಿಫಲ ಯತ್ನ ನಡೆದಿದೆ. *ಅದೃಷ್ಟವಶಾತ್ ಮಿಸ್ ಫೈರ್ ಆಗಿ ಶಿವರಂಜನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಘಟನೆ ನಡೆದಿದೆ.ಶಿವರಂಜನ್ ಬೋಳಣ್ಣವರ್ ಮನೆ ಎದುರು ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ.ಮೂರರಿಂದ ನಾಲ್ಕು ಸುತ್ತು ಗುಂಡಿನ ದಾಳಿ ನಡೆಸಿದ ಮಾಹಿತಿ ಇದೆ. ಬೈಲಹೊಂಗಲದ ಹಳೆಯ ಹನುಮಂತ ದೇವರ ದೇವಸ್ಥಾನ ಬಳಿ ಇರುವ ಶಿವರಂಜನ್ ಮನೆ ಇದ್ದು …

Read More »

12 ಕೋಟಿ ಬಿಡುಗಡೆ ಮಾಡಿಸಿದ ಸಚಿವರು…

ಬೆಂಗಳೂರು- ಕಳೆದ ಐದು ತಿಂಗಳಿಂದ ಬಿಡುಗಡೆಯಾಗದ ದೇವದಾಸಿಯರ ಮಾಶಾಸನವನ್ನು ಬಿಡುಗಡೆ ಮಾಡಿಸುವಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ್ ಅವರು ಯಶಸ್ವಿಯಾಗಿದ್ದಾರೆ. ಮುಖ್ಯಕಾರ್ಯದರ್ಶಿ ಗಳೊಂದಿಗೆ ಚರ್ಚಿಸಿ ಅವರಿಗೆ ಟಿಪ್ಪಣಿ ಕಳಿಸಿ ದೇವದಾಸಿಯರ ಮಾಶಾಸನ ಬಿಡುಗಡೆಯಾಗದ ವಿಷಯವನ್ನು ನಿನ್ನೆ ಸಚಿವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದರು. ದೇವದಾಸಿಯರ ಜೀವನೋಪಾಯಕ್ಕಾಗಿ ನೀಡಲಾಗುವ ವಿಳಂಬ ಮಾಡಿ ಪಾವತಿ ಮಾಡುವುದರ ಬಗ್ಗೆ ನಿನ್ನೆ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿದ್ದರು. 12 ಕೋಟಿ ರೂಪಾಯಿಗಳನ್ನು ದೇವದಾಸಿಯರ ಮಾಶಾಸನಕ್ಕಾಗಿ ಸರ್ಕಾರ ಮಹಿಳಾ …

Read More »

ಬೆಳಗಾವಿ ಜಿಲ್ಲೆಯ ಮೂವರಲ್ಲಿ ಒಬ್ಬರ, ನಾಮನಿರ್ದೇಶನ ರದ್ದು…

ಬೆಳಗಾವಿ-ರಾಜ್ಯದಲ್ಲಿರುವ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರು ಕೂಡಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿಗಳು ಆದೇಶ ನೀಡಿದ ಬೆನ್ನಲ್ಲಿಯೇ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆಪ್ತ ಸಹಾಯಕರು,ರಾಜ್ಯದ ಹಲವಾರು ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ನಾಮನಿರ್ದೇಶನವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂವರು ನಾಯಕರು ನಿಗಮ ಮಂಡಳಿಗಳ ಅಧ್ಯಕ್ಷರಾಗಿದ್ದರು.ಮೂವರಲ್ಲಿ ಒಬ್ಬರ ನಾಮನಿರ್ದೇಶನ ರದ್ದಾಗಿದ್ದು ಶಾಸಕ ಮಹೇಶ್ ಕುಮಟೊಳ್ಳಿ ಅವರೊಬ್ಬರೇ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಕಾಡಾ ನಿಗಮದ ಅಧ್ಯಕ್ಷ ಬೈಲಹೊಂಗಲದ ಮಾಜಿ ಶಾಸಕ ಡಾ. …

Read More »

ಬೆಳಗಾವಿ ಜಿಲ್ಲಾಆಸ್ಪತ್ರೆಯ ಸುಧಾರಕನ ವರ್ಗಾವಣೆ….!!

ಬೆಳಗಾವಿ -ಬೆಳಗಾವಿ ಜಿಲ್ಲಾ ಆಸ್ಪತ್ರೆ ಅಂದ್ರೆ,ಅದು ಸರ್ಕಾರಿ ದವಾಖಾನೆ ಅಲ್ಲ.ಅದೊಂದು ಸರ್ಕಾರಿ ಕಸಾಯಿಖಾನೆ ಎನ್ನುವಷ್ಟರ ಮಟ್ಟಿಗೆ, ಹದಗೆಟ್ಟು ಹೋಗಿದ್ದ ಬೆಳಗಾವಿ ಜಿಲ್ಲಾ ಆಸ್ಪತ್ರೆಯನ್ನು ಸುಧಾರಿಸಿ,ಇಲ್ಲಿಯ ವ್ಯವಸ್ಥೆಯನ್ನೇ ಬದಲಾಯಿಸಿ ಬಡರೋಗಿಗಳ ಸೇವೆ ಮಾಡಿದ,ಬೆಳಗಾವಿ ಪ್ರಾದೇಶೀಕ ಆಯುಕ್ತ ಅಮಲನ್ ಆದಿತ್ಯ ಬಿಸ್ವಾಸ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೋವೀಡ್ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಮಾದ್ಯಮಗಳು ಸರಣಿ ಲೇಖನಗಳನ್ನು ಪ್ರಕಟಿಸಿ ಸರ್ಕಾರದ ಗಮನ ಸೆಳೆದಿದ್ದರು,ಮಾದ್ಯಮಗಳ ವರದಿಗೆ ಸ್ಪಂದಿಸಿದ …

Read More »

ನಾಲ್ಕು ಜನರ ಜೀವ ಉಳಿಸಿದ,ಯುವತಿಯ ಪಾಲಕರಿಗೆ ಸಲಾಂ…

ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 15 ವರ್ಷದ ಬಾಲಕಿ ತನ್ನ ಅಂಗಾಂಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ ಸಮಾಜಕ್ಕೆ ಮಾದರಿಯಾಗಿದ್ದಾಳೆ. ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಲು ಗ್ರೀನ ಕಾರಿಡಾರ ಮೂಲಕ ಧಾರವಾಡದಿಂದ ರಸ್ತೆ ಮೂಲಕ ತೆಗೆದುಕೊಂಡು ಬರಲಾಯಿತು. ಒಂದು ಕಿಡ್ನಿಯನ್ನು ಎಸಡಿಎಂ ಆಸ್ಪತ್ರೆ …

Read More »