Breaking News
Home / Breaking News / ರಮೇಶ್ ಸಾಹುಕಾರ್ ಮನೆ ಈಗ ಸೂಪರ್ ಪಾವರ್ ಸೆಂಟರ್….!!!

ರಮೇಶ್ ಸಾಹುಕಾರ್ ಮನೆ ಈಗ ಸೂಪರ್ ಪಾವರ್ ಸೆಂಟರ್….!!!

ಬೆಳಗಾವಿ- ಬೆಂಗಳೂರಿನ ಸದಾಶಿವನಗರ ದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿ ಪರಿವರ್ತನೆ ಆಗಿದೆ.

ಇತ್ತೀಚಿನ ರಾಜಕೀಯ ಬೆಳವಣಿಗೆ,ಸದಾಶಿವ ನಗರದ ರಮೇಶ್ ಸಾಹುಕಾರ್ ಮನೆಯಲ್ಲಿ ನಡೆಯುತ್ತಿರುವ ಮೀಟೀಂಗ್ ಗಳು,ಅವರ ಮನೆಗೆ ಗಣ್ಯರ ಭೇಟಿ,ರಮೇಶ್ ಜಾರಕಿಹೊಳಿ ಅವರ ಪದೇ,ಪದೇ ದೆಹಲಿಗೆ ಭೇಟಿ ಈ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿದರೆ ಸಾಹುಕಾರ್ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿದೆ ಅನ್ನೋದಕ್ಕೆ ಸಾಕ್ಷ್ಯ ಒದಗಿಸುತ್ತವೆ.

ಇತ್ತೀಚಿಗಷ್ಟೇ ನಿರಾಣಿ,ರೇಣುಕಾಚಾರ್ಯ,ಸೇರಿದಂತೆ ಬಿಜೆಪಿಯ ಅನೇಕ ಜನ ಶಾಸಕರು ಘಟಾನುಘಟಿಗಳು ರಮೇಶ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದ ಬೆನ್ನಲ್ಲಿಯೇ ,ಲಿಂಗಾಯತ ಸಮುದಾಯದ ಪವರ್ ಫುಲ್ ಲೀಡರ್,ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ,ಹಾಗೂ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಅವರು ಇಂದು ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಕುರಿತು ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ರಾಜ್ಯಸಭಾ ಸದಸ್ಯ, ಕೆ ಎಲ್ ಇ ಸಂಸ್ಥೆಯ ಕಾರ್ಯಾದ್ಯಕ್ಷ ಡಾ. ಪ್ರಭಾಕರ ಕೋರೆ ಅವರೂ ಬಿಜೆಪಿಯ ಆಕಾಂಕ್ಷಿಯಾಗಿದ್ದಾರೆ,ಅವರೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ‌.ಎಂದು ಹೇಳಲಾಗಿದ್ದು,ಪ್ರಭಾಕರ ಕೋರೆ ಅವರು ಬಿಜೆಪಿ ಟಿಕೆಟ್ ತಮಗೆ ನೀಡುವಂತೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ,ಅಮೀತ ಶಾ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ವಿಷಯಕ್ಕೆ ಸಮಂಧಿಸಿದಂತೆ ಪ್ರಭಾಕರ ಕೋರೆ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ್ ಜಾರಕಿಹೊಳಿ ಅವರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *