Breaking News

ಸಮಸ್ಯೆಗೆ ಸ್ಪಂದಿಸುವ ಮೂಲಕ ,ಸಂಸದೆ ಪ್ರಿಯಾಂಕಾ ಪರ್ವ ಆರಂಭ..

ಹಂತ, ಹಂತವಾಗಿ ಜನರ ಸಮಸ್ಯೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಜನರ ಸಮಸ್ಯೆಗಳನ್ನು ಹಂತ, ಹಂತವಾಗಿ ಈಡೇರಿಸಲಾಗುವುದು ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭರವಸೆ ನೀಡಿದರು.

ಕವಟಗಿಮಠ ನಗರದ ಸ್ವ-ಗ್ರಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಜಯಗಳಿಸಿದ ಬಳಿಕ ಮೊದಲ ಬಾರಿಗೆ ನಾನು ಚಿಕ್ಕೋಡಿಯ ನಗರದ ಸ್ವ-ಗ್ರಹದಲ್ಲಿ ಜನತೆಯ ಸಮಸ್ಯೆಗಳನ್ನು ಆಲಿಸಿ, ಮನವಿಗಳನ್ನು ಸ್ವೀಕರಿಸಿದ್ದೇನೆಂದು ತಿಳಿಸಿದರು.

ಚಿಕ್ಕೋಡಿ ಕ್ಷೇತ್ರದ ವಿವಿಧಡೆಯಿಂದ ಜನರು ಇಂದು ತಮ್ಮ ಸಮಸ್ಯೆಗಳನ್ನು ನಿವಾರಿಸಲು ಮನವಿಗಳನ್ನು ಸಲ್ಲಿಸಿದ್ದಾರೆ. ಕಾರಣ ಜನತೆಯ ಸಮಸ್ಯೆಗಳನ್ನು ಹಂತ, ಹಂತವಾಗಿ ಈಡೇರಿಸುತ್ತೇನೆ. ಚಿಕ್ಕೋಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಈ ಭಾಗದ ಜನತೆಯ ಬೇಡಿಕೆ ಇದೆ. ಈ ಕುರಿತು ಎಲ್ಲಾ ಮುಖಂಡರೊಂದಿಗೆ ಚರ್ಚೆ ನಡೆಸುತ್ತೇವೆ. ಚಿಕ್ಕೋಡಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್‌ ಜಾರಕಿಹೊಳಿ ಅವರು ನಿರ್ಧರಿಸುತ್ತಾರೆಂದರು.

ಚಿಕ್ಕೋಡಿ ಭಾಗದ ಸೈನಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ. ಅದೇ ರೀತಿ ಈ ಭಾಗದ ಗಂಭೀರ ಸಮಸ್ಯೆಗಳಾದ ಕುಡಿಯುವ ನೀರಿನ ಸಮಸ್ಯೆ, ನೀರಾವರಿ ಯೋಜನೆಗಳ ಜಾರಿಗೆ ಆದ್ಯತೆ ನೀಡಲಾಗುವುದು, ಇನ್ನು ಪ್ರವಾಹ ಬಂದಗ ಆಗುವ ಸಮಸ್ಯೆಗಳ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಸಂಸದರ ಕಚೇರಿಗೆ ಭೇಟಿ: ಚಿಕ್ಕೋಡಿಯಲ್ಲಿರುವ ಸಂಸದರ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಕಚೇರಿಗೆ ಸಂಬಂಧಿಸಿದಂತೆ ಕೆಲ ಸಣ್ಣ ಪುಟ್ಟ ಕೆಲಸಳು ಇವೆ. ಮೂರ್ನಾಲ್ಕು ದಿನಗಳಲ್ಲಿ ಕಚೇರಿ ಪೂರ್ಣಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಅಲ್ಲಿಯೇ ಸಭೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಕವಟಗಿಮಠ ನಗರದ ಸ್ವ-ಗ್ರಹದಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಕ್ಷೇತ್ರದ ವಿವಿಧಡೆಯಿಂದ ಆಗಮಿಸಿ ಜನರ ಮನವಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಸತೀಶ್‌ ಶುಗರ್ಸ್‌ ನಿರ್ದೇಶಕ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಸೇರಿದಂತೆ ಹಲವು ಮುಖಂಡರಿದ್ದರು.

Check Also

ನಾನು ಗಟ್ಟಿಯಾಗಿದ್ದೇನೆ ಎಂದು ಹೊರಗಡೆ ಇದ್ದೇನೆ- ರಮೇಶ್ ಜಾರಕಿಹೊಳಿ

ಅಥಣಿ-ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್ ವಿಚಾರಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು,ದಲಿತರಿಗೆ ಒಕ್ಕಲಿಗರಿಗೆ ಬೈದರಿಯುವದು ಇನ್ನೂ ಪ್ರೂವಾಗಿಲ್ಲ.ಇದನ್ನು ಸಿಡಿ ಶಿವು …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.