Breaking News

ಹೆಗಲ ಮೇಲೆ ಹಸಿರು ರುಮಾಲ್..ಕೈಯಲ್ಲಿ ಬಾರಕೋಲ್..ಸಕಾರಕ್ಕೆ ಅನ್ನದಾತನ ಸವಾಲ್..!

ಬೆಳಗಾವಿ- ಕಳಸಾ ಬಂಡೂರಿ, ಮಹಾದಾಯಿ ರೈತರ ಸಾಲ ಮನ್ನಾ, ಕಬ್ಬಿನ ಬಾಕಿ ಬಿಲ್ ಪಾವತಿ,ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ರೈತ ಸಂಘಟಣೆಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸುತ್ತಿರುವ ಹೋರಾಟ ವರ್ಷ ಪೂರ್ಣಗೊಳಿಸಿದೆ
ಹೋಎಆಟಕ್ಕೆ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹೆಗಲ ಮೇಲೆ ಹಸಿರು ಟಾವೆಲ್ ಹಾಕಿಕೊಂಡು ಕೈಯಲ್ಲಿ ಬಾರಕೋಲ್ ಹಿಡಿದು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತ ಬಾರಕೋಲ್ ನೆಲಕ್ಕೆ ಬಡಿಯುತ್ತ ತಮ್ಮ ಆಕ್ರೋಶವನ್ನು ಹೊರ ಹಾಕಿದರು
ರೈತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಒಂದು ವರ್ಷದಿಂದ ಹರಾಟ ಮಾಡುತ್ತಿದ್ದರೂ ಕೇಂದ್ರ ಹಾರಾಜ್ಯ ಸರ್ಕಾರಗಳು ಸ್ಪಂದಿಸಿಲ್ಲ ಎರಡೂ ಸರ್ಕಾರಗಳು ರೈತ ವಿರೋಧಿಯಾಗಿವೆ ಎಂದು ರೈತರು ಆರೋಪಿಸಿ ನಗರದ ಚನ್ನಮ್ಮ ವೃತ್ತದಲ್ಲಿ ಟಾಯರ್‍ಗೆ ಬೆಂಕಿ ಹಚ್ಚಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು
ಇದರ ಜೊತೆಗೆ ವಿವಿಧ ಕಾರ್ಮಿಕ ಸಂಘಟಣೆಗಳು ಜಿಲ್ಲಾಧಕಾರಿಗಳ ಕಚೇರಿ ಎದುರು ಜಮಾಯಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು
ನಗರ ಸಾರಿಗೆ ಸಿಬ್ಬಂದಿಗಳು ಬೆಳಿಗ್ಗೆ 11ರಿಂದ ಮಧ್ಯಾಹ್ನ ಎರಡು ಘಂಟೆಯವರೆಗೆ ಸೇವೆ ಸ್ಥಗಿತಗೊಳಿಸಿ ನಗರದಲ್ಲಿ ಬೃಹತ್ತ ಪ್ರತಿಭಟನೆ ನಡೆಸಿದರು
ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ಬಸವರಾಜ ಮಳಲಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
ಈಲ್ಲಾಧಕಾರಿಗಳ ಕಚೇರಿ ಎದುರು ಸಾಲು ಸಾಲು ಪ್ರತಿಭಟನೆಗಳು ನಡೆದಿದ್ದರಿಂದ ನಗರದಲ್ಲಿ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯೆಸ್ತ ವಾಗಿತ್ತು
ಭಾರತ ಬಂದ್ ಕರೆಗೆ ನಗರದಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾದರೂ ನಗರದ ಜನತೆಗೆ ಪ್ರತಿಭಟನೆಗಳ ಬಿಸಿ ತಟ್ಟಿತು.

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.