ಬೆಳಗಾವಿ ಉತ್ತರ ಮತಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಘೋಷಿಸಿದ ಹೈಕಮಾಂಡ್!!

ಬೆಂಗಳೂರು-ಆಮ್ ಆದ್ಮಿ ಪಕ್ಷದಿಂದ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ರಾಜ್ಯ 28 ಕ್ಷೇತ್ರಗಳಿಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದೆ.

ಬೆಳಗಾವಿ ನಿಪ್ಪಾಣಿ ಮತಕ್ಷೇತ್ರದಿಂದ ರಾಜೇಶ ಅಣ್ಣಾಸಾಹೇಬ ಬಸವಣ್ಣ, ಬೆಳಗಾವಿ ಉತ್ತರ ಮತಕ್ಷೇತ್ರದಿಂದ ರಾಜಕುಮಾರ ಟೋಪಣ್ಣವರ ಹಾಗೂ ಸವದತ್ತಿ ಮತಕ್ಷೇತ್ರದಿಂದ ಬಾಪುಗೌಡ ಪಾಟೀಲ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಆಮ್ ಆದ್ಮಿ ಪಕ್ಷ ಲಿಂಗಾಯತ ಸಮಾಜದ ಯುವ ನಾಯಕ ರಾಜೀವ ಟೋಪಣ್ಣವರ ಅವರಿಗೆ ಟಿಕೆಟ್ ನೀಡಿದೆ.ಲಿಂಗಾಯತ ಸಮಾಜ ಇವರ ಬೆಂಬಲಕ್ಕೆ ನಿಲ್ಲುವ ಎಲ್ಲ ಸಾಧ್ಯತೆಗಳಿವೆ.

ಯಾವ ಪಕ್ಷ ಲಿಂಗಾಯತ ಅಭ್ಯರ್ಥಿಗೆ ಟಿಕೆಟ್ ಕೊಡುತ್ತದೆ. ಆ ಪಕ್ಷಕ್ಕೆ ನಮ್ಮ ಬೆಂಬಲ ಇದೆ.ಎಂದು ಲಿಂಗಾಯತ ಸಂಘಟನೆಗಳ ನಾಯಕರು ಘೋಷಣೆ ಮಾಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *