ಕೌಶಲ್ಯ ತರಬೇತಿ ಕೇಂದ್ರ, ರೈಲು ಮಾರ್ಗಕ್ಕೆ ಉಚಿತ ಭೂಮಿ: ಸಚಿವ ರಮೇಶ್ ಜಾರಕಿಹೊಳಿ ಸ್ವಾಗತ

 

ಬೆಳಗಾವಿ, ಮಾ. ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕಾ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆಗೆ ಬಜೆಟ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿರುವುದು ಸ್ವಾಗತಾರ್ಹ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಹಾಗೆಯೇ, ಧಾರವಾಡ ಮತ್ತು ಬೆಳಗಾವಿ ನಡುವೆ ನೂತನ ರೈಲು ಮಾರ್ಗಕ್ಕಾಗಿ ಉಚಿತ ಭೂಮಿ ಮತ್ತು ಶೇಕಡಾ 50 ರಷ್ಟು ಕಾಮಗಾರಿ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುವುದಾಗಿ ಮುಖ್ಯ ಮಂತ್ರಿಗಳು ಘೋಷಿಸಿರುವುದನ್ನು ನಾನು ಮುಕ್ತ ಕಂಠದಿಂದ ಸ್ವಾಗತಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****

Check Also

ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ

ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೋರ್ಸ್ …

Leave a Reply

Your email address will not be published. Required fields are marked *