ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ: ಗುರುವಾರ ಸಭೆ ನಿಗದಿ

ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ: ಗುರುವಾರ ಸಭೆ ನಿಗದಿ
————————————————————-
ಸಮಾಜದ ಮುಖಂಡರ ಜತೆ ಚರ್ಚಿಸಿ ನಿರ್ಧಾರ- ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ,-ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ಹಾಲುಮತ ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯನ್ನು ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸಂಜೆ ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆಯನ್ನು ಅವರು ನಡೆಸಿದರು.

ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಬೇಕು ಎಂಬ ಬೇಡಿಕೆಯ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿಯನ್ನು ಸಚಿವರು‌ ಪಡೆದುಕೊಂಡರು.

ಗುರುವಾರ(ಆ.27) ಸಭೆ:

ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಹಾಲುಮತ(ಕುರುಬ) ಸಮಾಜದ ಮುಖಂಡರು ಹಾಗೂ ಸಂಘಟನೆಗಳ ಪದಾಧಿಕಾರಿಗಳ ಸಭೆಯನ್ನು ಗುರುವಾರ(ಆ.26) ಬೆಳಿಗ್ಗೆ11 ಗಂಟೆಗೆ ಕರೆಯಲಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಸಮಾಜದ ಮುಖಂಡರ ಜತೆ ಕೂಲಂಕುಷವಾಗಿ ಚರ್ಚೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತರಾದ ಟಿ.ತ್ಯಾಗರಾಜನ್ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
***

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *