Breaking News
Home / Breaking News / ಸಾಹುಕಾರ್ ರಮೇಶ್ ಜಾರಕಿಹೋಳಿ ಅವರನ್ನು ಹೊಗಳಿದ ಸ್ವಾಮೀಜಿ

ಸಾಹುಕಾರ್ ರಮೇಶ್ ಜಾರಕಿಹೋಳಿ ಅವರನ್ನು ಹೊಗಳಿದ ಸ್ವಾಮೀಜಿ

ಬೆಳಗಾವಿ- ಪಂಚಮಸಾಲಿ ಸಮುದಾಯವನ್ನ ಪ್ರವರ್ಗ 2ಎ ಗೆ ಸೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಧರಣಿ ನಡೆಯುತ್ತಿದೆ.

ಪಂಚಮಸಾಲಿ ಸಮಾಜದ ನೂರಾರು ಜನ ಮುಖಂಡರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಈ ಸಂಧರ್ಭದಲ್ಲಿ ಮಾತನಾಡಿದ  ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಅವರನ್ನು ಹೊಗಳಿದ್ದಾರೆ. ರಮೇಶ ಜಾರಕಿಹೊಳಿ ಅವರು ಕಿಂಗ್ ಆಗುವ ಅವಕಾಶವಿತ್ತು, ಆದರೆ ಕಿಂಗ್ ಆಗದೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಕಿಂಗ್ ಮೇಕರ್ ಆಗಿದ್ದಾರೆ ಎಂದು ಸಾಹುಕಾರ್ ರಮೇಶ್ ಜಾರಕಿಹೊಳಿ ಅವರನ್ನು ಹೊಗಳಿದರು.ಇದು ನಮ್ಮೆಲ್ಲರಿಗೂ ಅಷ್ಟೇ ಅಲ್ಲ ಸ್ವತಃ ಯಡಿಯೂರಪ್ಪ ಅವರಿಗೂ ತಿಳಿದ ವಿಷಯ‌ ಎಂದರು ಜಗದ್ಗುರು ಬಸವ ಮೃತ್ಯುಂಜಯ ಸ್ವಾಮೀಜಿಗಳು.

ಪಂಚಮಸಾಲಿ ಸಮುದಾಯದ ಧರಣಿ ಸ್ಥಳಕ್ಕೆ ಸಚಿವ ರಮೇಶ್ ಜಾರಕಿಹೋಳಿ ಭೇಟಿ ನೀಡಿದ್ರು, ಈ ಸಂಧರ್ಭದಲ್ಲಿ ಮಾತನಾಡಿದ ರಮೇಶ್ ಜಾರಕಿಹೋಳಿ
ಪಂಚಮಸಾಲಿ ಸಮುದಾಯದ ಜೊತೆ ನಾವು ಇದ್ದೇವೆ
ನಿಮ್ಮ ಸಮುದಾಯದ ಬೇಡಿಕೆಯನ್ನು ಸಿಎಂ ಗಮನಕ್ಕೆ ತರುತ್ತೇನೆಚುನಾವಣೆ ನೀತಿ ಸಂಹಿತೆ ಇರುವುದರಿಂದ ಯಾವುದೇ ಭರವಸೆ ನೀಡುವುದಿಲ್ಲ ನಿಮ್ಮ ಸಮುದಾಯದ ಪರ ನಿಲ್ಲುತ್ತೇನೆ ಎಂದು ಭರವಸೆ ನೀಡಿದ್ರು

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *