Breaking News

ಸಾಹುಕಾರ್ ರಮೇಶ್ ಜಾರಕಿಹೋಳಿ ಅವರನ್ನು ಹೊಗಳಿದ ಸ್ವಾಮೀಜಿ

ಬೆಳಗಾವಿ- ಪಂಚಮಸಾಲಿ ಸಮುದಾಯವನ್ನ ಪ್ರವರ್ಗ 2ಎ ಗೆ ಸೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಧರಣಿ ನಡೆಯುತ್ತಿದೆ.

ಪಂಚಮಸಾಲಿ ಸಮಾಜದ ನೂರಾರು ಜನ ಮುಖಂಡರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಈ ಸಂಧರ್ಭದಲ್ಲಿ ಮಾತನಾಡಿದ  ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಅವರನ್ನು ಹೊಗಳಿದ್ದಾರೆ. ರಮೇಶ ಜಾರಕಿಹೊಳಿ ಅವರು ಕಿಂಗ್ ಆಗುವ ಅವಕಾಶವಿತ್ತು, ಆದರೆ ಕಿಂಗ್ ಆಗದೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಕಿಂಗ್ ಮೇಕರ್ ಆಗಿದ್ದಾರೆ ಎಂದು ಸಾಹುಕಾರ್ ರಮೇಶ್ ಜಾರಕಿಹೊಳಿ ಅವರನ್ನು ಹೊಗಳಿದರು.ಇದು ನಮ್ಮೆಲ್ಲರಿಗೂ ಅಷ್ಟೇ ಅಲ್ಲ ಸ್ವತಃ ಯಡಿಯೂರಪ್ಪ ಅವರಿಗೂ ತಿಳಿದ ವಿಷಯ‌ ಎಂದರು ಜಗದ್ಗುರು ಬಸವ ಮೃತ್ಯುಂಜಯ ಸ್ವಾಮೀಜಿಗಳು.

ಪಂಚಮಸಾಲಿ ಸಮುದಾಯದ ಧರಣಿ ಸ್ಥಳಕ್ಕೆ ಸಚಿವ ರಮೇಶ್ ಜಾರಕಿಹೋಳಿ ಭೇಟಿ ನೀಡಿದ್ರು, ಈ ಸಂಧರ್ಭದಲ್ಲಿ ಮಾತನಾಡಿದ ರಮೇಶ್ ಜಾರಕಿಹೋಳಿ
ಪಂಚಮಸಾಲಿ ಸಮುದಾಯದ ಜೊತೆ ನಾವು ಇದ್ದೇವೆ
ನಿಮ್ಮ ಸಮುದಾಯದ ಬೇಡಿಕೆಯನ್ನು ಸಿಎಂ ಗಮನಕ್ಕೆ ತರುತ್ತೇನೆಚುನಾವಣೆ ನೀತಿ ಸಂಹಿತೆ ಇರುವುದರಿಂದ ಯಾವುದೇ ಭರವಸೆ ನೀಡುವುದಿಲ್ಲ ನಿಮ್ಮ ಸಮುದಾಯದ ಪರ ನಿಲ್ಲುತ್ತೇನೆ ಎಂದು ಭರವಸೆ ನೀಡಿದ್ರು

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.