Breaking News

ರಾಜಧಾನಿ ರಾಜಕೀಯ, ದೆಹಲಿಯಲ್ಲಿ ಸಾಹುಕಾರ್ ಸಂತೋಷ….!!

ಬೆಳಗಾವಿ- ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕರಾದ ಬಿ.ಎಲ್ ಸಂತೋಷ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿಮಾಡಿ ಸಮಾಲೋಚನೆ ನಡೆಸಿದರು.

ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಮಾನ್ಯ ಶ್ರೀ ಬಿ ಎಲ್ ಸಂತೋಷ್ ಜಿ ಅವರಿಗೆ ವಿವರಿಸಿದರು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ, ಆದ್ರೆ ಬಿ ಎಲ್ ಸಂತೋಷ್ ಮತ್ತು ಸಾಹುಕಾರ್ ರಮೇಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿದ್ದು ,ಹಲವಾರು ಚರ್ಚೆಗಳಿಗೆ ಎಡೆಮಾಡಿ ಕೊಟ್ಟಿದೆ,ಅವರ ಭೇಟಿ,ರಾಜ್ಯ ರಾಜಕಾರಣದ ದಿಕ್ಸೂಚಿ ಬದಲಿಸಲಿದೆ,ಎಂದು ವಿಶ್ಲೇಷಿಸಲಾಗುತ್ತಿದೆ.

ಆದ್ರೆ ಸಂತೋಷ ಅವರನ್ನು ಭೇಟಿಯಾಗಿ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲಾಗಿದೆ ಎಂದು ರಮೇಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *