Breaking News

ರಿಲೀಫ್….ರಿಲ್ಯಾಕ್ಸ್….. ಸೆಕ್ಸೆಸ್…!!!

ಬೆಳಗಾವಿ-ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿದ್ದ ಸಿಡಿ ಪ್ರಕರಣಕ್ಕೆ ಸಂಬಂಧ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ,ಶುಕ್ರವಾರ ನ್ಯಾಯಾಲಯಕ್ಕೆ ” ಬಿ” ರಿಪೋರ್ಟ್ ಸಲ್ಲಿಸಿದ್ದಾರೆ.

ಗುರುವಾರ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೆ ಎಸ್ ಐ ಟಿ ಎಸಿಪಿ ಕವಿತಾ ಅವರು ಎಸಿಎಂಎಂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅಲ್ಲಿಗೆ ರಮೇಶ್ ಜಾರಕಿಹೊಳಿ ವಿರುದ್ದ ಕೇಳಿ ಬಂದಿದ್ದ ಲೈಗಿಂಕ ಹಗರಣದಿಂದ ಅವರು ಮುಕ್ತರಾಗಿದ್ದಾರೆ.

ಸಂತ್ರಸ್ತೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ.ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು,ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾಜಿ ಸಚಿವರ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು.ಆರೋಪ ಕೇಳಿ ಬರುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ,ಇದಾದ ಮೇಲೆ ತನ್ನ ವಿರುದ್ದ ಸಿಡಿ ಬಿಡುಗಡೆ ಮಾಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸದಾಶಿವ ಪೋಲೀಸ್ ಠಾಣೆಗೆ ದೂರು ಕೊಟ್ಟಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *