Breaking News
Home / Breaking News / ರಿಲೀಫ್….ರಿಲ್ಯಾಕ್ಸ್….. ಸೆಕ್ಸೆಸ್…!!!

ರಿಲೀಫ್….ರಿಲ್ಯಾಕ್ಸ್….. ಸೆಕ್ಸೆಸ್…!!!

ಬೆಳಗಾವಿ-ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿ ಬಂದಿದ್ದ ಸಿಡಿ ಪ್ರಕರಣಕ್ಕೆ ಸಂಬಂಧ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ,ಶುಕ್ರವಾರ ನ್ಯಾಯಾಲಯಕ್ಕೆ ” ಬಿ” ರಿಪೋರ್ಟ್ ಸಲ್ಲಿಸಿದ್ದಾರೆ.

ಗುರುವಾರ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೆ ಎಸ್ ಐ ಟಿ ಎಸಿಪಿ ಕವಿತಾ ಅವರು ಎಸಿಎಂಎಂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅಲ್ಲಿಗೆ ರಮೇಶ್ ಜಾರಕಿಹೊಳಿ ವಿರುದ್ದ ಕೇಳಿ ಬಂದಿದ್ದ ಲೈಗಿಂಕ ಹಗರಣದಿಂದ ಅವರು ಮುಕ್ತರಾಗಿದ್ದಾರೆ.

ಸಂತ್ರಸ್ತೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ.ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು,ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.

ಮಾಜಿ ಸಚಿವರ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು.ಆರೋಪ ಕೇಳಿ ಬರುತ್ತಿದ್ದಂತೆ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ,ಇದಾದ ಮೇಲೆ ತನ್ನ ವಿರುದ್ದ ಸಿಡಿ ಬಿಡುಗಡೆ ಮಾಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸದಾಶಿವ ಪೋಲೀಸ್ ಠಾಣೆಗೆ ದೂರು ಕೊಟ್ಟಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

Check Also

ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..

ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು …

Leave a Reply

Your email address will not be published. Required fields are marked *