Breaking News

ಕೆಪಿಸಿಸಿ ಕಚೇರಿಯಲ್ಲಿ ಫಿರೋಜ್ ಸೇಠ ,ರಮೇಶ ಜಾರಕಿಹೊಳಿ ನಡುವೆ ವಾಗ್ವಾದ ಸಭೆ ಮೊಟಕು

ಬೆಳಗಾವಿ- ಬೆಳಗಾವಿಯಲ್ಲಿ ಪಿಎಲ್ ಡಿ ಬ್ಯಾಂಕಿನ ಕಿತ್ತಾಟ ನಡೆಯುತ್ತಿದ್ದರೆ ಅತ್ತ ಕೆಪಿಸಿಸಿ ಕಚೇರಿಯಲ್ಲಿ ಲೋಕಸಭೆ ಚುನಾವಣೆಯ ಟಿಕೆಟ್ ಗಾಗಿ ಕಿತ್ತಾಟ ಶುರುವಾಗಿದೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಬೆಳಗಾವಿ ಲೋಕಸಭೆ ಚುನಾವಣೆಯ ಅಭ್ಯರ್ಥಿ ಆಯ್ಕೆಯ ಕುರಿತು ಜಿಲ್ಲಾ ನಾಯಕರ ಸಭೆಯನ್ನು ಕೆಪಿಸಿಸಿ ಕಚೇರಿಯಲ್ಲಿ ಕರೆದಿದ್ದರು ಅಭ್ಯರ್ಥಿ ಆಯ್ಕೆಯ ಕುರಿತು ನಾಯಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿರುವಾಗ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತೀಶ ಜಾರಕೊಹೊಳಿ ಇಲ್ಲದಿದ್ರೆ ವಿಧಾನ ಪರಿಷತ್ತ ಸದಸ್ಯ ವಿವೇಕರಾವ ಪಾಟೀಲರಿಗೆ ಟಿಕೆಟ್ ಕೊಡಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ

ಈ ಸಂಧರ್ಭದಲ್ಲಿ ಮಾಜಿ ಶಾಸಕ ಫಿರೋಜ್ ಸೇಠ ಮುಸ್ಲಿಂ ಸಮುದಾಯದ ನಾಯಕನಿಗೆ ಟಿಕೆಟ್ ಕೊಡಬೇಕು ಎಂದು ಒತ್ತಾಯಿಸಿದ ಕಾರಣ ಸಚಿವ ರಮೇಶ ಜಾರಕಿಹೊಳಿ ಮತ್ತು ಸೇಠ ನಡುವೆ ಏರು ಧ್ವನಿಯಲ್ಲಿ ವಾಗ್ವಾದ ನಡೆದ ಕಾರಣ ವೇಣುಗೋಪಾಲ್ ಸಭೆ ಮುಂದೂಡಿ ಇಬ್ಬರನ್ನು ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದು ಬಂದಿದ್ದು ದೃಶ್ಯ ಮಾಧ್ಯಮಗಳಲ್ಲಿ ಬ್ರೇಕಿಂಗ್ ನ್ಯುಸ್ ಪ್ರಸಾರವಾಗುತ್ತಿದೆ

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *