Breaking News
Home / Breaking News / ವಿಧಾನ ಪರಿಷತ್ತಿನಲ್ಲಿ ರಾಣಿ ಚನ್ನಮ್ಮ….

ವಿಧಾನ ಪರಿಷತ್ತಿನಲ್ಲಿ ರಾಣಿ ಚನ್ನಮ್ಮ….

ಬೆಳಗಾವಿ- ಬೆಳಗಾವಿಯ ಸುವರ್ಣ ವಿಧಾನ ಪರಿಷತ್ತಿನ ಕಲಾಪದಲ್ಲಿ ಬೆಳಗಾವಿಯ ವಿಮಾನ ನಿಲ್ಧಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರಿಡುವ ವಿಷಯ ಪ್ರಸ್ತಾಪವಾಯಿತು

ಪರಿಷತ್ತಿನಲ್ಲಿ ಶಿವಮೊಗ್ಗ ವಿಮಾನ ನಿಲ್ಧಾಣದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ನಡೆಯುತ್ತಿರುವ ಸಂಧರ್ಭದಲ್ಲಿ ವಿಧಾನ ಪರಿಷತ್ತ ಸದಸ್ಯ ಮಹಾಂತೇಶ ಕವಟಗಿಮಠ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಚನ್ನಮ್ಮಾಜಿಯ. ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುಂತೆ ಒತ್ತಾಯಿಸಿದರು

ಇದಕ್ಕೆ ಉತ್ತರ ನೀಡಿದ ಸಿಎಂ ಕುಮಾರಸ್ವಾಮಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಚನ್ನಮ್ಮಾಜಿ ಹೆಸರಿಡುವ ವಿಚಾರವಾಗಿ ರಾಜ್ಯ ಸರ್ಕಾರ ಕೇಂದ್ರ ವಿಮಾನಯಾನ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಪ್ರಾಧಿಕಾರ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಇನ್ನೊಂದು ಬಾರಿ ಪ್ರಸ್ತಾವನೆ ಸಲ್ಲಿಸುತ್ತೇನೆ ಇದಕ್ಕೇನು ರೊಕ್ಕ ರೂಪಾಯಿ ಹತ್ತುವದಿಲ್ಲ ನಿಲ್ಧಾಣಕ್ಕೆ ಚನ್ನಮ್ಮನ ಹೆಸರಿಡಬೇಕು ಎನ್ನುವದು ನಮ್ಮ ಆಸೆ ಇದೆ ಇನ್ನೊಂದು ಬಾರಿ ಪ್ರಸ್ತಾವನೆ ಸಲ್ಲಿಸಿ ದೆಹಲಿಗೆ ಹೋದಾಗ ಖುದ್ಧಾಗಿ ಕೇಂದ್ರದ ವಿಮಾನಯಾನ ಸಚಿವರನ್ನು ಭೇಟಿಯಾಗಿ ಮನವಿ ಮಾಡಿಕೊಳ್ಳುವದಾಗಿ ಕುಮಾರಸ್ವಾಮಿ ಭರವಸೆ ನೀಡಿದರು

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *