Breaking News

ಬೆಳಗಾವಿ, ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತರ ದಾಳಿ

ಬೆಳಗಾವಿ-ಬೆಳಗಾವಿ ನಗರದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದ್ದು ಬೆಳಗಾವಿಯ ಭ್ರಷ್ಟ ಅಧಿಕಾರಿಗಳು ಇವತ್ತು ಬೆಳ್ಳಂ ಬೆಳಗ್ಗೆ ಬೆಚ್ಚಿಬಿದ್ದಿದ್ದಾರೆ.

ಬೆಳಗಾವಿ ನಗರದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಹೆಸ್ಕಾಂ ‌ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ದಾಳಿ ಮಾಡಲಾಗಿದೆ. ಸದ್ಯ ಶೇಖರ್ ಬಹುರೂಪಿ ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ

ಹೆಸರಿಗೆ ತಕ್ಕಂತೆ ದಾಳಿಗೆ ತುತ್ತಾದ ಇಂಜಿನಿಯರ್
ಶೇಖರ್ ಬಹುರೂಪಿಯಾಗಿದ್ದಾರೆ, ಅವರು 2019ರಲ್ಲಿ ಅಥಣಿಯಲ್ಲಿ ಕಾರ್ಯನಿರ್ವಹಿಸುವಾಗ ಪ್ರವಾಹದ ಸಂದರ್ಭದಲ್ಲಿ ನಡೆದ ಅವ್ಯವಹಾರ ಸಂಬಂಧ ಅಮಾನತುಗೊಂಡಿದ್ದರು.ಅಧಿಕಾರಿಗಳು ದಾಳಿ ನಡೆಸಿ ಪರಶೀಲನೆ ಮುಂದುವರೆಸಿದ್ದು ಆಕ್ರಮ ಆಸ್ತಿ,ಹಣವನ್ನು ಪತ್ತೆ ಮಾಡುವ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಅಥಣಿಯ  ಸಂಕೋನಟ್ಟಿಯ  ಮನೆಯ ಮೇಲೂ ದಾಳಿ.

ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ಇರುವ KEB ಇಂಜಿನಿಯರ್ ಶೇಖರ ಬಹುರೂಪಿ ರವರ ಮನೆಯ ಮೇಲೂ  ಲೋಕಾಯುಕ್ತ  ದಾಳಿ ನಡೆದು  ಅಲ್ಲಿಯೂ ಪರಶೀಲನೆ ಮಾಡಲಾಗುತ್ತಿದೆ.

ಲೋಕಾಯುಕ್ತ CPI ರವಿಕುಮಾರ್ ಧರ್ಮಟ್ಟಿ ಹಾಗೂ ಬಸವರಾಜ ಮತ್ತಿಕೋಪ್ಪ CPI ರವರ ನೇತೃತ್ವದ ತಂಡವು ಸದರಿ ಇಂಜಿನಿಯರ್ ಮನೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ .

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.