Breaking News

ಹೊಲದಲ್ಲಿ ಕೊರೆದ ಕೊಳವೆ ಬಾವಿಗೆ, ನೀರು ಬರಲಿಲ್ಲ ಅಂತಾ ಅದೇ ಕೊಳವೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ರೈತ…

ಬೆಳಗಾವಿ-ರಾಯಬಾಗ ತಾಲ್ಲೂಕಿನ
ಸುಲ್ತಾನಪುರ್ ಗ್ರಾಮದಲ್ಲಿ ತನ್ನ ಹೊಲದಲ್ಲಿ ಕೊಳವೆ ಬಾವಿ ಕೊರೆದ ರೈತನೊಬ್ಬ ಕೊಳವೇ ಬಾಯಿಯಲ್ಲಿ ನೀರು ಬರಲಿಲ್ಲ ಅಂತಾ ಮನನೊಂದು ಅದೇ ಕೊಳವೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸ್ಥಳಕ್ಕೆ ರಾಯಬಾಗ ತಹಶಿಲ್ದಾರ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ
ಲಕ್ಕಪ್ಪ ದೊಡ್ಡಮನಿ ಎಂಬಾ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶವ ಹೊರ ತೆಗೆಯಲು
ಜೆಸಿಬಿಯಿಂದ ಕೊಳವೆ ಬಾವಿ ಪಕ್ಕದಲ್ಲಿ ಗುಂಡಿ ಅಗೆದು ಶವ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಲಿದೆ.

ಎರಡು‌ ದಿನಗಳ ಹಿಂದೆ ರೈತ ಕೊರೆಸಿದ್ದ ಕೊಳವೆ ಬಾವಿಗೆ ನೀರು ಬರಲಿಲ್ಲ ಎಂಬ ಕಾರಣಕ್ಕೆ ಅದೇ ಕೊಳವೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ರೈತ ಲಕ್ಕಪ್ಪನ ಶವವನ್ನು ಹೊರ ತೆಗೆಯಲು ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ.

ಸುಲ್ತಾನಪುರ್ ದಲ್ಲಿ ಕೊಳವೆ ಬಾವಿಗೆ ಬಿದ್ದ 38 ವರ್ಷದ ಲಕ್ಕಪ್ಪ ದೊಡಮನಿ ಆತ್ಮಹತ್ಯೆ ಕುರಿತು
ಬೆಳಗಾವಿ ಜಿಲ್ಲೆಯ
ಹಾರೋಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *