ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಸಮರ ಸಾರಿದ ಅಭಿಮಾನಿಗಳು

ರಳಗಾವಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪೀರನವಾಡಿ ಗ್ರಾಮದಲ್ಲಿ ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ರಾಯಣ್ಣನ ಸಾವಿರಾರು ಅಭಿಮಾನಿಗಳು ಬೆಳಗಾವಿಯಲ್ಲಿ ಸಮರ ಸಾರಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ರಸ್ತೆಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹೊರಡಿಸಿರುವ ಸಾವಿರಾರು ಅಭಿಮಾನಿಗಳು,ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ.

ಪೀರನವಾಡಿಯಲ್ಲಿ,ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು,ಇಲ್ಲವಾದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅಭಿಮಾನಿಗಳಿಗೆ ಅನುಮತಿ ನೀಡಬೇಕೆಂದು ಸಾವಿರಾರು ಅಭಿಮಾನಿಗಳು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲಿದ್ದಾರೆ

ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಹಾಲುಮತ ಸಮಾಜ,ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಭಾಗವಹಿಸಿದ್ದು ಮೂರ್ತಿ ಪ್ರತಿಷ್ಠಾಪನೆಗೆ ಬೆಳಗಾವಿಯಲ್ಲಿ ರಾಯಣ್ಣನ ಅಭಿಮಾನಿಗಳು ಹೋರಾಟದ ಕಿಡಿ ಹೊತ್ತಿಸಿದ್ದಾರೆ .

ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಬೆಂಗಳೂರಿನಲ್ಲೂ ವಿವಿಧ ಸಂಘಟನೆಗಳು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ನಿರ್ದರಿಸಿದ್ದು ಪೀರನವಾಡಿಯ ಮೂರ್ತಿ ವಿವಾದ ಈಗ ರಾಜ್ಯವ್ಯಾಪಿಯಾಗಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *