Breaking News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಸಮರ ಸಾರಿದ ಅಭಿಮಾನಿಗಳು

ರಳಗಾವಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಪೀರನವಾಡಿ ಗ್ರಾಮದಲ್ಲಿ ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ರಾಯಣ್ಣನ ಸಾವಿರಾರು ಅಭಿಮಾನಿಗಳು ಬೆಳಗಾವಿಯಲ್ಲಿ ಸಮರ ಸಾರಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ರಸ್ತೆಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹೊರಡಿಸಿರುವ ಸಾವಿರಾರು ಅಭಿಮಾನಿಗಳು,ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ.

ಪೀರನವಾಡಿಯಲ್ಲಿ,ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು,ಇಲ್ಲವಾದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ಅಭಿಮಾನಿಗಳಿಗೆ ಅನುಮತಿ ನೀಡಬೇಕೆಂದು ಸಾವಿರಾರು ಅಭಿಮಾನಿಗಳು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಲಿದ್ದಾರೆ

ಇಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಹಾಲುಮತ ಸಮಾಜ,ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಭಾಗವಹಿಸಿದ್ದು ಮೂರ್ತಿ ಪ್ರತಿಷ್ಠಾಪನೆಗೆ ಬೆಳಗಾವಿಯಲ್ಲಿ ರಾಯಣ್ಣನ ಅಭಿಮಾನಿಗಳು ಹೋರಾಟದ ಕಿಡಿ ಹೊತ್ತಿಸಿದ್ದಾರೆ .

ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಬೆಂಗಳೂರಿನಲ್ಲೂ ವಿವಿಧ ಸಂಘಟನೆಗಳು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ನಿರ್ದರಿಸಿದ್ದು ಪೀರನವಾಡಿಯ ಮೂರ್ತಿ ವಿವಾದ ಈಗ ರಾಜ್ಯವ್ಯಾಪಿಯಾಗಿದೆ.

Check Also

ಬೆಳಗಾವಿ ಜಿಲ್ಲೆಯ ರೇಲ್ವೆ ಸಮಸ್ಯೆಗಳ ಪರಿಹಾರಕ್ಕೆ ಹುಬ್ಬಳ್ಳಿಯಲ್ಲಿ ಮೀಟಿಂಗ್

ಬೆಳಗಾವಿ – ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಜಗದೀಶ ಶೆಟ್ಟರ, ಇವರು ಇಂದು …

Leave a Reply

Your email address will not be published. Required fields are marked *