Breaking News
Home / Breaking News / ಪ್ಲೇ ಗ್ರೌಂಡ್ ನಲ್ಲಿ ಪಾಲಿಟಿಕ್ಸ್ ಆಟ…ಕ್ರೀಡೆಗೆ ಕಾಟ……!!

ಪ್ಲೇ ಗ್ರೌಂಡ್ ನಲ್ಲಿ ಪಾಲಿಟಿಕ್ಸ್ ಆಟ…ಕ್ರೀಡೆಗೆ ಕಾಟ……!!

ಬೆಳಗಾವಿ- ಬೆಳಗಾವಿಯ ಹೃದಯಭಾಗದಲ್ಲಿರುವ ಸರ್ದಾರ್ ಮೈದಾನ ಕೇವಲ ಕ್ರೀಡಾ ಚಟುವಟಿಕೆಗೆ ಮಾತ್ರ ಬಳಕೆ ಆಗಬೇಕು ಎಂದು ನಿಯಮ ಮಾಡಿದ ಬೆಳಗಾವಿ ಮಹಾನಗರ ಪಾಲಿಕೆ ತಾನು ಮಾಡಿದ ನಿಯಮವನ್ನು ತಾನೇ ಗಾಳಿಗೆ ತೂರುತ್ತಿದೆ.

ಬೆಳಗಾವಿಯ ಸರ್ದಾರ್ ಮೈದಾನ,ಶಿಕ್ಷಣ ಇಲಾಖೆಯ ಆಸ್ತಿ,ಈ ಮೈದಾನವವನ್ನು ಪಾಲಿಕೆಯ ವಿಶೇಷ ಅನುದಾನದಲ್ಲಿ ಒಂದು ಕೋಟಿಗೂ ಹೆಚ್ಚು ಖರ್ಚು ಮಾಡಿ,ಅಭಿವೃದ್ಧಿ ಪಡಿಸಿದೆ. ಮೈದಾನದಲ್ಲಿ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಿದೆ,ಈ ಸಂಕೀರ್ಣ ಈಗ ಕ್ರೀಡಾ ಚಟುವಟಿಕೆಗೆ ಬಳಕೆಯಾಗದೇ,ರಾಜಕೀಯ ಚಟುವಟಿಕೆಗಳ ಪಾಲಾಗಲಿದೆ.

ಸರ್ದಾರ್ ಮೈದಾನದ ಕ್ರೀಡಾ ಸಂಕೀರ್ಣದಲ್ಲಿ,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲರ ಕಚೇರಿ ಸಿದ್ಧವಾಗುತ್ತಿದೆ.ಈ ಕಚೇರಿಯನ್ನು ಮಹಾನಗರ ಪಾಲಿಕೆಯೇ ಹಣ ಖರ್ಚು ಮಾಡಿ,ಕಚೇರಿಯನ್ನು ಸಿದ್ಧಡಿಸುತ್ತಿದೆ.

ಸರ್ದಾರ್ ಮೈದಾನ ಕ್ರೀಡಾ ಚಟುವಟಿಕೆಗೆ ಮಾತ್ರ ಸೀಮೀತವಾಗಬೇಕು,ಎಂದು 2010 ರಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ನಿರ್ಧರಿಸಿತ್ತು,ಆಗಿನ ಪಾಲಿಕೆ ಆಡಳಿತಾಧಿಕಾರಿಯೂ ಆಗಿದ್ದ ಆಗಿನ ಜಿಲ್ಲಾಧಿಕಾರಿ ,ಜೆ ರವಿಶಂಕರ ಅವರು ಸರ್ದಾರ್ ಮೈದಾನ ಕೇವಲ ಕ್ರೀಡಾ ಚಟುವಟಿಕೆಗೆ ಮಾತ್ರ ಸೀಮೀತ ಎಂದು ಆದೇಶ ಮಾಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಆದರೆ ಮಹಾನಗರ ಪಾಲಿಕೆಗೆ ಶಂಕರಗೌಡ ಪಾಟೀಲರ ಕಚೇರಿ ಮಾಡಲು ಬೇರೆ ಸ್ಥಳ ಸಿಗಲಿಲ್ಲವೇ,ಎನ್ನುವದು ಕ್ರೀಡಾಭಿಮಾನಿಗಳ ಪ್ರಶ್ನೆಯಾಗಿದೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲರಿಗೆ,ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಮಾಡಿ ಕೊಡುವದಾದರೆ,ಪಾಲಿಕೆ ಅಧಿಕಾರಿಗಳು ಈ ಮೈದಾನದಲ್ಲಿ ಕ್ರೀಡಾ ಚಟುವಟಿಕೆ ಬಂದ್ ಮಾಡಿ ಇದನ್ನು ರಾಜಕೀಯ ನಾಯಕರಿಗೆ ಸಮರ್ಪಿಸಲಿ

ಇವತ್ತು ಶಂಕರಗೌಡ ಪಾಟೀಲರಿಗೆ ಸರ್ದಾರ್ ಮೈದಾನದಲ್ಲಿ ಕಚೇರಿ ಮಾಡಿಕೊಟ್ಟರೆ ,ನಾಳೆ ಇತರ ರಾಜಕೀಯ ನಾಯಕರು ಸರ್ದಾರ್ ಮೈದಾನದಲ್ಲಿ ಠಾಖಾಣಿ ಹೂಡುತ್ತಾರೆ,ಸರ್ದಾರ್ ಎಂಬ ಪ್ಲೇ ಗ್ರಾಂಡ್ ನಲ್ಲಿ ಪಾಲಿಟಿಕ್ಸ್ ಆಟ ನಡೆಯೋದರಲ್ಲಿ ಸಂಶಯವೇ ಇಲ್ಲ.

Check Also

ಹೃದಯಾಘಾತದಿಂದ ನರೇಗಾ ಕಾರ್ಮಿಕ ಸಾವು

ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಸ್ಥಳದಲ್ಲಿಯೇ ಸೋಮವಾರ ಸಾವನ್ನಪ್ಪಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತ …

Leave a Reply

Your email address will not be published. Required fields are marked *