ಸತೀಶ ಜಾರಕಿಹೊಳಿಗೆ ಕೈ ತಪ್ಪಿದ ಸಚಿವ ಸ್ಥಾನ ಬೆಂಬಲಿಗರ ಅಸಮಾಧಾನ…!!!

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸತೀಶ ಬೆಂಬಲಿಗರಿಗೆ ಅಸಮಾಧಾನ

ಬೆಳಗಾವಿ:
ಸಚಿವ ಸ್ಥಾನ ಕೈ ತಪ್ಪಿದಕ್ಕೆ ಆಕ್ರೋಶಗೊಂಡ ಸತೀನ ಶ ಜಾರಕಿಹೊಳಿ ಬೆಂಬಲಿಗರು ಇಂದು ಕ್ಲಬ್ ರಸ್ತೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ದಾಂದಲೆ ನಡೆಸಿದರು.
ಸತೀಶ ಜಾರಕಿಹೊಳಿ ಸಂಸ್ಥಾಪಕ ಅಧ್ಯಕ್ಷರಾಗಿರುವ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮುಗಿಸಿ ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿದರು.

ಕಾಂಗ್ರೆಸ್ ಕಚೇರಿ ಎದುರು ಇಟ್ಟಿದ್ದ ಹೂವಿನ ಕುಂಡ ಹಾಗೂ ರಾಷ್ಟ್ರೀಯ, ರಾಜ್ಯ ನಾಯಕರು ಇದ್ದ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕಚೇರಿ ಒಳಗೆ ನುಗ್ಗಲು‌ ಯತ್ನಿಸಿದರು. ಆದರೆ ಕಚೇರಿ ಬೀಗ ಹಾಕಿದ ಕಾರಣ ಎಲ್ಲರೂ ಮರಳಿ ಹೊರ ಬಂದರು.

ಕಾಂಗ್ರೆಸ್ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಸತೀಶ ಜಾರಕಿಹೊಳಿ ಬೆಂಬಲಿಗರು ಕಚೇರಿಯ ದ್ವಾರ ಬಾಗಿಲಲ್ಲಿ ಹಾಕಿದ ಬ್ಯಾನರ್ ಹರಿದು ಹಾಕಿ ಕಾಂಗ್ರೆಸ್ ನಾಯಕರ ವಿರುದ್ಧ ಪಕ್ಷದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *