ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರ ಕಾರ್ಯಶೈಲಿ ಬದಲಾಗಬೇಕು- ಸತೀಶ್ ಜಾರಕಿಹೊಳಿ

ಬೆಳಗಾವಿ-ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸಲು ಪಕ್ಷ ಹಲವಾರು ಯೋಜನೆಗಳನ್ನು ರೂಪಿಸಿದೆ,ಪಕ್ಷದ ಪದಾಧಿಕಾರಿಗಳು ಕ್ರೀಯಾಶೀಲವಾಗಬೇಕು,ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರುಗಳ ಕಾರ್ಯಶೈಲಿ ಬದಲಾಗಬೇಕು ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಪಕ್ಷದ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಕೆಪಿಸಿಸಿ ಕಾರ್ಯಾದ್ಯಕ್ಷರಾಗಿ ಪದಗ್ರಹಣ ಮಾಡಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಅವರನ್ನು ನೂರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಅದ್ಧೂರಿ ಯಾಗಿ ಸ್ವಾಗತಿಸಿ ಸತ್ಕರಿಸಿದರು.ಕಾರ್ಯಕರ್ತರಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷವನ್ನು ಕೇಡರ್ ಬೇಸ್ಡ ಪಾರ್ಟಿಯನ್ನಾಗಿ ಮಾಡುವ ಕೆಲಸ ಮುಂದಿನ ತಿಂಗಳಿನಿಂದ ಆರಂಭವಾಗಲಿದೆ.ಜಿಲ್ಲಾ ಮಟ್ಟದಲ್ಲಿ,ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರಿಗೆ ತರಬೇತಿ ನೀಡುತ್ತೇವೆ. ಬಿಜೆಪಿಯವರು ಹಲವಾರು ಬಾರಿ ಸುಳ್ಳು ಹೇಳಿಕೆ ಕೊಡುತ್ತಾರೆ,ಅದಕ್ಕೆ ಕೌಂಟರ್ ಮಾಡಲು ಕಾರ್ಯಕರ್ತರಿಗೆ ತರಬೇತಿ ಕೊಡುತ್ತೇವೆ ಎಂದರು

ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರುಗಳು ಆಗೊಮ್ಮೆ ಈಗೊಮ್ಮೆ ಬಂದು ಹೋದ್ರೆ ನಡೆಯೋದಿಲ್ಲ,ಅವರು ಫುಲ್ ಟೈಮ್ ಪಕ್ಷದ ಸಂಘಟನೆಗಾಗಿ ದುಡಿಯಬೇಕು,ಜಿಲ್ಲಾದ್ಯಕ್ಷರ ಕಾರ್ಯಶೈಲಿ ಬದಲಾಗಬೇಕು ಎಂದು ಸತೀಶ್ ಜಾರಕಿಹೊಳಿ ಕಿವಿಮಾತು ಹೇಳಿದರು.

ಪಕ್ಷಕ್ಕಾಗಿ ಯಾರು ದುಡಿಯುತ್ತಿದ್ದಾರೆ ಎನ್ನುವದನ್ನು ಪಕ್ಷ ಇನ್ನುಮುಂದೆ ಸೂಕ್ಷ್ಮ ವಾಗಿ ಗಮನಿಸುತ್ತದೆ,ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಹೆಚ್ಚಿನ ಸ್ಥಾನಮಾನ ನೀಡುವ ಕೆಲಸವನ್ನು ಪಕ್ಷ ಮಾಡುತ್ತದೆ.ಎಂದು ಸತೀಶ್ ಜಾರಕಿಹೊಳಿ ಹೇಳಿದರು.

Check Also

ಬೈಕ್ ಮೇಲೆ ಹೋಗುವಾಗ ಹಣಕಾಸಿನ ಜಗಳ ಕೊಲೆಯಲ್ಲಿ ಅಂತ್ಯ

ಯಮಕನಮರ್ಡಿ- ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಅಂಕಲಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ …

Leave a Reply

Your email address will not be published. Required fields are marked *