ಅಂದು ಹಸಿರು ಶಾಲು,ಇಂದು ಕೇಸರಿ ರೂಮಾಲು,ಸತೀಶ್ ಜಾರಕಿಹೊಳಿ,ಕಮಾಲು…!!

ಬೆಳಗಾವಿ-ಹಸಿರು ಶಾಲು ಹಾಕಿಕೊಂಡು ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ ಈಗ ಕೇಸರಿ ಪೇಟಾ ಧರಸಿ ಎಲ್ಲರ ಗಮನ ಸೆಳೆದಿದ್ದಾರೆ.

ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಅತ್ಯಂತ ವ್ಯೆವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಬೈಲಹೊಂಗಲ,ಸವದತ್ತಿ ಕ್ಷೇತ್ರದಲ್ಲಿ ಸಂಚಾರ ಮಾಡಿರುವ ಸತೀಶ್ ಜಾರಕಿಹೊಳಿ ಇವತ್ತು ಬೆಳಗಾವಿ ನಗರದಲ್ಲಿ ದಿನವಿಡೀ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆತಲಿದ್ದು ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ.

ಇಂದು ಬೆಳಗಾವಿಯಲ್ಲಿ ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಚುನಾವಣಾ ಪ್ರಚಾರ ಮಾಡಲಿದ್ದು,ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ.ಬೆಳಗ್ಗೆ 10 ಗಂಟೆಯಿಂದ ಸಂಜೆ 7ರವರೆಗೆ ಸತೀಶ್ ಜಾರಕಿಹೊಳಿ‌ ಚುನಾವಣಾ ಪ್ರಚಾರ ನಡೆಸಲಿದ್ದಾರೆ.ಪಾದಯಾತ್ರೆ ಮೂಲಕ ಮತಯಾಚನೆ ಮಾಡಲಿರುವ ಸತೀಶ್ ಜಾರಕಿಹೊಳಿ‌ ಇಂದುಬೆಳಗ್ಗೆ 10ಕ್ಕೆ ಬೆಳಗಾವಿಯ ಶ್ರೀನಗರದಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ ಮಾಡುವರು,ಬಳಿಕ ಶ್ರೀನಗರದ ಸ್ಲಂ ಕಾಂಪ್ಲೆಕ್ಸ್, ವಂಟಮುರಿ ಕಾಲೋನಿ, ರುಕ್ಮಿಣಿ ನಗರದಲ್ಲಿ ಪಾದಯಾತ್ರೆ ನಡೆಸುವರು.ಮಧ್ಯಾಹ್ನ 2 ಗಂಟೆಗೆ ವಕೀಲರ ಸಂಘದ ಕಚೇರಿಗೆ ಭೇಟಿ ನೀಡಿ ಮತಯಾಚನೆ ಮಾಡಲಿದ್ದಾರೆ.

ಮಧ್ಯಾಹ್ನ 3ಕ್ಕೆ ಬೆಳಗಾವಿ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಭೆ ನಡೆಸಿ,ಸಂಜೆ 5 ರಿಂದ 7ರವರೆಗೆ ಪಾದಯಾತ್ರೆ ಮೂಲಕ ಮತಯಾಚನೆ ಮಾಡುವರು,ಅಜಮ್ ನಗರ, ಮುತ್ಯಾನಟ್ಟಿ, ಯಮನಾಪುರದಲ್ಲಿ ಸತೀಶ್ ಜಾರಕಿಹೊಳಿ ಪಾದಯಾತ್ರೆ ಮೂಲಕ ಮತಯಾಚನೆ ಮಾಡಲಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *