ಜಿಲ್ಲಾ ಕಾಂಗ್ರೆಸ್ ಸಮೀತಿ ವಿಸರ್ಜಿಸಲು ಶಂಕರ ಮುನವಳ್ಳಿ ಆಗ್ರಹ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಿರ್ನಾಮ. ಶಾಸಕರಿಂದ ಪಕ್ಷ ಅಧೋಗತಿಗೆ ಹೋಗಿದೆ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಆರೋಪಿಸಿದ್ದಾರೆ.

ಬಿಜಿನೆಸ್ ಗ್ರುಪ್ ಕೈಯಲ್ಲಿ ಕಾಂಗ್ರೆಸ್ ಸಿಕ್ಕಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೇಜವಾಬ್ದಾರಿ ಹೇಳಿಕೆ. ನೀಡುತ್ತಿರುವುದು ಸರಿಯಲ್ಲ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕು. ನಮ್ಮ ಪಕ್ಷದ ನಾಯಕರಿಂದ ಕಾರ್ಯಕರ್ತರಿಗೆ ಭಯ ಭೀತಿ ಉಂಟಾಗುತ್ತಿದೆ. ಕೂಡಲೇ ಜಿಲ್ಲಾ ಕಾಂಗ್ರೆಸ್ ಕಮೀಟಿ ವಿಸರ್ಜನೆಗೆ ಆಗ್ರಹಿಸಿದರು.

ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚುನಾವಣೆ ಸಂಬಂಧ ಪ್ರತಿಭಟನೆ ವೇಳೆ ಕೊಲೆ ಯಾಗುವ ಸಾಧ್ಯತೆಗಳು ಇದ್ದವು. ಪೋಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಶಾಸಕರನ್ನು ಕಾಲು ಕಸಕ್ಕೆ ಹೋಲಿಕೆ ಮಾಡಿರುವುದು ಖಂಡನೀಯ. ಈ ಬೆಳವಣಿಗೆ ನೋವುಂಟು ಮಾಡಿದೆ ಎಂದರು. ಗುಂಡಾ ಗರ್ಧಿ ಸಚಿವರು, ಶಾಸಕರನ್ನು ಹದ್ದಿಬಸ್ತಿನಲ್ಲಿ ಇಡಲು ಆಗ್ರಹಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಸುದ್ದಿಗೋಷ್ಠಿಯ ವೇಳೆ ಮಾಜಿ ಶಾಸಕ ಫಿರೋಜ್ ಸೇಠ್ ಕುರ್ಚಿ ಗಾಗಿ ಕಿತ್ತಾಡಿ ಪಕ್ಷದ ಮಾನ ಹರಾಜು ಹಾಕಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಅವರು ಆಗ್ರಹಿಸಿದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *