Breaking News

ಶಿವಮಯವಾದ ಬೆಳಗಾವಿ,ಶಿವ…ಶಿವ..ಶಿವ ಎನ್ನುತ್ತಿರುವ ಶುಭ ಶುಕ್ರವಾರ.

*ಶಿವಮಯವಾದ ಬೆಳಗಾವಿ,ಕಪಿಲೇಶ್ವರ ಮಂದಿರಕ್ಕೆ ಭಕ್ತಸಾಗರ,ವಿಶೇಷ ಪೂಜೆ*

ಬೆಳಗಾವಿ- ಇಂದು ಶಿವರಾತ್ರಿ ಕುಂದಾನಗರಿ ಬೆಳಗಾವಿಯಲ್ಲಿ ಎಲ್ಲಿ ನೋಡಿದಲ್ಲಿ ಶಿವನಾಮ ಸ್ಮರಣೆ,ಶಿವಾಲಯಗಳಲ್ಲಿ ವಿಶೇಷ ಪೂಜೆ ಮದ್ಯರಾತ್ರಿ ಹನ್ನೆರಡು ಗಂಟೆಯಿಂದಲೇ ಕಪಿಲೇಶ್ವರ್ ಮಂದಿರಕ್ಕೆ ಹರಿದು ಬರುತ್ತಿರುವ ಭಕ್ತರ ದಂಡು ಶುಕ್ರವಾರ ಬೆಳಿಗ್ಗೆಯಿಂದಲೇ ಶಿವಮಯವಾದ ಬೆಳಗಾವಿ

ಕುಂದಾನಗರಿ ಬೆಳಗಾವಿಯಲ್ಲಿ ಶ್ರದ್ಧಾ, ಭಕ್ತಿಯಿಂದ ಮಹಾಶಿವರಾತ್ರಿ ಅಚರಿಸಲಾಗುತ್ತಿದೆ ಇಂದು
ಬೆಳಗ್ಗೆಯಿಂದಲೇ ಕಪಿಲೇಶ್ವರ ದೇವಸ್ಥಾನಕ್ಕೆಭಕ್ತರ ದಂಡು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದೆ

ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಪುರಾತನ ಕಾಲದ ಕಪಿಲೇಶ್ವರ ದೇವಸ್ಥಾನದಲ್ಲಿ
ಶಿವಲಿಂಗಕ್ಕೆ ವಿಶೇಷ ಪೂಜೆ, ಅಭಿಷೇಕ ಮಾಡಲಾಗುತ್ತಿದೆ.ಸಾಲುಗಟ್ಟಿ ದರ್ಶನ ಪಡೆಯುತ್ತಿರುವ ಸಾವಿರಾರು ಭಕ್ತರು ಬಿಲ್ವಪತ್ರೆ, ತೆಂಗಿನಕಾಯಿ, ಹೂವು, ಕರ್ಪೂರ ಹಿಡಿದು ಸಾಲುಗಟ್ಟಿ ನಿಂತು ಭಕ್ತರು ಪೂಜೆ ಸಲ್ಲಿಸುತ್ತಿದ್ದಾರೆ

ಮಧ್ಯರಾತ್ರಿ 12 ಗಂಟೆಯಿಂದಲೇ ಶಿವಲಿಂಗಕ್ಕೆ ವಿಶೇಷ ಪೂಜೆ ಮಾಡಲಾಗುತ್ತಿದೆ. ಮಹಾಶಿವರಾತ್ರಿ ಹಿನ್ನೆಲೆ ಕಪಿಲೇಶ್ವರ ದೇವಸ್ಥಾನದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ
ಕಪಿಲೇಶ್ವರ ದೇವಸ್ಥಾನದಲ್ಲಿ ಶಿವಲಿಂಗನಿಗೆ ರುದ್ರಾಭಿಷೇಕ ಸಲ್ಲಿಸಿದ ಕೇಂದ್ರ ಸಚಿವ ಸುರೇಶ್ ಅಂಗಡಿ ಪತ್ನಿ ಜೊತೆ ಆಗಮಿಸಿ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಕಪಿಲೇಶ್ವರ ಮಂದಿರಕ್ಕೆ ಭಕ್ತರ ಪ್ರವಾಹವೇ ಹರಿದು ಬರುತ್ತಿದ್ದಾರೆ ಶಿವಭಕ್ತರು ಭಕ್ತಿಯ ಭಂಡಾರದಲ್ಲಿ ಮುಳುಗಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *