ಅಥಣಿಯಿಂದ ಲಕ್ಷ್ಮಣ. ಸವದಿಗೆ ಕಾಂಗ್ರೆಸ್ ಟಿಕೆಟ್- ಸಿದ್ರಾಮಯ್ಯ

ಬೆಳಗಾವಿ
ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಿರಿಯ ನಾಯಕರಾಗಿದ್ದು, ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸವದಿ ಅವರು ಯಾವುದೇ ಷರತ್ತಿಲ್ಲದೇ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ, ಅಥಣಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಹೇಳಿದ್ದಾರೆ. ಸವದಿ ಬಳಿ ನಾವು ಬೇರೆ ಯಾರ ಸಂಪರ್ಕಕ್ಕೆ ಬಂದಿಲ್ಲ ಎಂದರು.

ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರದಲ್ಲಿ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ. ಅಥಣಿಯಲ್ಲಿ ಬಂಡಾಯದ ಪ್ರಶ್ನೆಯೇ ಇಲ್ಲ. ಟಿಕೆಟ್ ಆಕಾಂಕ್ಷಿತರೆಲ್ಲರನ್ನೂ ಮನವೊಲಿಕೆ ಮಾಡಲಾಗುವುದು.. ವೈಯಕ್ತಿಕವಾಗಿ ಅವರೆಲ್ಲರೂ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದರು.

ಕಾಂಗ್ರೆಸ್ ಮೂರನೇ ಹಂತದ ಅಭ್ಯರ್ಥಿಗಳ ಅಂತಿಮ ಪಟ್ಟಿ ನಾಳೆ ಇಲ್ಲವೇ ನಾಡಿದ್ದು ಪ್ರಕಟವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಶುರುವಾಗಿದೆ. ಈ ರಾಜ್ಯದ ಜನತೆಗೆ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ. ಜನ ಬಿಜೆಪಿಯನ್ನು ತಿರಸ್ಕರಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *