ಮೇ 22 ರಿಂದ ಕರ್ನಾಟಕದಲ್ಲಿ ರೈಲು ಸಂಚಾರ ಆರಂಭ- ಸುರೇಶ ಅಂಗಡಿ

ಬೆಳಗಾವಿ- ಮೇ 22 ರಿಂದ ಕರ್ನಾಟಕದ ಒಳಗೆ, ಪ್ರಾಯೋಗಿಕವಾಗಿ 2 ವಿಶೇಷ ರೈಲುಗಳ ಸಂಚಾರ ಆರಂಭಿಸುವದಾಗಿ ರೆಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬೆಳಗಾವಿಯಲ್ಲಿ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಮೇ 22ರಿಂದ ಬೆಂಗಳೂರಿನಿಂದ ಬೆಳಿಗ್ಗೆ 8 ಗಂಟೆಗೆ ಹೊರಡಿ ಬೆಳಗಾವಿಗೆ ಸಂಜೆ 6-30 ಗಂಟೆಗೆ ತಲುಪಲಿದೆ ಬೆಂಗಳೂರು ಮೈಸೂರ ಟ್ರೈನು ಬೆಳಿಗ್ಗೆ 9-20 ಹೊರಡಿ ಮದ್ಯಾಹ್ನ 12-45 ಕ್ಕೆ ಮೈಸೂರ ತಲುಪಲಿದೆ.

ಸಿಎಂ ಬಿ.ಎಸ್‌.ಯಡಿಯೂರಪ್ಪ ಮನವಿ ಮೇರೆಗೆ ರಾಜ್ಯದ ಒಳಗೆ ಪ್ರಾಯೋಗಿಕವಾಗಿ ಎರಡು ವಿಶೇಷ ರೈಲುಗಳ ಸಂಚಾರ ಆರಂಭಿಸಲಿದ್ದು ಪ್ರಯಾಣಿಕರು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್ಕಿಂಗ್ ಮಾಡಬೇಕು. ಟಿಕೆಟ್ ಕನ್ಫರ್ಮ್ ಆದ ಮೇಲೆಯೇ ರೇಲ್ವೆ ನಿಲ್ದಾಣಕ್ಕೆ ಬರಬೇಕು.ಸಾಮಾಜಿಕ ಅಂತರ ಕಾಯ್ದುಕೊಂಡು ಮುಂಜಾಗ್ರತಾ ಕ್ರಮ ಅನುಸರಿಸುವಂತೆ ಪ್ರಯಾಣಿಕರಲ್ಲಿ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮನವಿ ಮಾಡಿದ್ದಾರೆ‌.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *