ಮಠಾಧೀಶರ ಹೋರಾಟದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ನಾಳೆ ಬೆಳಗಾವಿಗೆ

ಬೆಳಗಾವಿ- ಉತ್ತರ ಕರ್ನಾಟಕ ಪ್ರದೇಶಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ನಾಳೆ ಉತ್ತರ ಕರ್ನಾಟಕದ ಮಠಾಧೀಶರು ಬೆಳಗಾವಿಯ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲಿದ್ದು ಪ್ರತಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ

ಉತ್ತರ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಉತ್ತರ ಕರ್ನಾಟಕ ವಿಕಾಸ ವೇದಿಕೆ ಪ್ರತಿಭಟನೆಯನ್ನು ಆಯೋಜಿಸಿದ್ದು ಸುವರ್ಣ ವಿಧಾನ ಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವ ಜೊತೆಗೆ ತಾರತಮ್ಯ ನಿವಾರಣೆಗೆ ಮಠಾಧೀಶರು ಒತ್ತಾಯ ಮಾಡಲಿದ್ದಾರೆ
ಮಠಾಧೀಶರ ಹೋರಾಟದಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದು ಈ ವಿಷಯವನ್ನು ಬೆಂಗಳೂರಿನಲ್ಲಿ ಮಾದ್ಯಮಗಳ ಎದುರು ಸ್ಪಷ್ಟಪಡಿಸಿದ್ದಾರೆ

ಯಡಿಯೂರಪ್ಪ ನವರು ಬೆಳಗಾವಿಯ ಸುವರ್ಣಸೌಧದ ಎದುರು ನಡೆಯಲಿರುವ ಹೋರಾಟಕ್ಕೆ ಧುಮುಕಿರುವದರಿಂದ ಹೋರಾಟ ಹೊಸ ಸ್ವರೂಪ ಪಡೆದುಕೊಳ್ಳಲಿದೆ

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *